15.8 C
London
Saturday, May 18, 2024
Homeಕ್ರಿಕೆಟ್ವಿಜಯ್ ಹಜಾರೆ ಟ್ರೋಫಿಗಾಗಿ  ಕರ್ನಾಟಕ ಹಾಗೂ ತಮಿಳುನಾಡು ನಡುವೆ ನಾಳೆ ಫೈನಲ್ ಹಣಾಹಣಿ

ವಿಜಯ್ ಹಜಾರೆ ಟ್ರೋಫಿಗಾಗಿ  ಕರ್ನಾಟಕ ಹಾಗೂ ತಮಿಳುನಾಡು ನಡುವೆ ನಾಳೆ ಫೈನಲ್ ಹಣಾಹಣಿ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img

ಪ್ರತಿಷ್ಟಿತ ವಿಜಯ್ ಹಜಾರೆ ಟ್ರೋಫಿಗಾಗಿ ಶುಕ್ರವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕರ್ನಾಟಕ ಹಾಗೂ ತಮಿಳುನಾಡಿನ ನಡುವೆ ಕುತೂಹಲಕಾರಿ ಫೈನಲ್ ನಡೆಯಲಿದೆ.

ನಿನ್ನೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಸೆಮಿಫೈನಲ್ ಪಂದ್ಯಾಟದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಛತ್ತೀಸ್ ಗಡ ತಂಡ 49.4 ಓವರ್ ಗಳಲ್ಲಿ 223 ರನ್ ಗಳಿಗೆ ಆಲೌಟ್ ಆಗಿತ್ತು.ಬಿಗು ದಾಳಿ ಸಂಘಟಿಸಿದ ಕೌಶಿಕ್ 46 ರನ್ ಗಳಿಗೆ 4 ವಿಕೆಟ್ ಉರುಳಿಸಿದರು.
ಚೇಸಿಂಗ್ ವೇಳೆ ಉದಯೋನ್ಮುಖ ಪ್ರತಿಭೆ ದೇವದತ್ತ್ ಪಡಿಕಲ್ ರವರ 92 ,ಕೆ.ಎಲ್.ರಾಹುಲ್ ಅಜೇಯ 88 ಹಾಗೂ ಮಾಯಾಂಕ್ ಅಜೇಯ 47 ರನ್ ಗಳ ನೆರವಿನಿಂದ ಕೇವಲ 40 ಓವರ್ ಗಳಲ್ಲಿ ಗುರಿ ತಲುಪಿ ಫೈನಲ್ ಪ್ರವೇಶಿದ್ದರು.

ಯಲಹಂಕದ ಜಸ್ಟ್ ಕ್ರಿಕೆಟ್ ಅಂಗಣದಲ್ಲಿ ನಡೆದ ದ್ವಿತೀಯ ಸೆಮಿಫೈನಲ್ ನಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ್ದ ಗುಜರಾತ್ ತಂಡ 40 ಓವರ್ ಗಳಲ್ಲಿ 177 ರನ್ ಗಳಿಸಿತ್ತು. ಗುರಿಯನ್ನು ಬೆನ್ನತ್ತಿದ ತಮಿಳುನಾಡು ತಂಡ ದಿನೇಶ್ ಕಾರ್ತಿಕ್ 47 ರನ್ ನೆರವಿನಿಂದ 39 ಓವರ್ ಗಳಲ್ಲಿ ಗುರಿಯನ್ನು ತಲುಪಿ ಫೈನಲ್ ಪ್ರವೇಶಿಸಿತ್ತು.

ಟೂರ್ನಿಯುದ್ದಕ್ಕೂ ಅತ್ಯುತ್ತಮ ಪ್ರದರ್ಶನ ನೀಡುತ್ತಾ ಬಂದಿರುವ ಕರ್ನಾಟಕ‌ ತಂಡ ಪ್ರಶಸ್ತಿ ಗೆಲ್ಲುವ ಹಾಟ್ ಫೇವರಿಟ್ ತಂಡವೆನಿಸಿಕೊಂಡಿದೆ.ಅದೃಷ್ಟ ಯಾರ ಪಾಲಿಗೋ ಕಾದು ನೋಡೋಣ.

ಆರ್‌.ಕೆ.ಆಚಾರ್ಯ ಕೋಟ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

twenty − 15 =