ಸ್ಪೋರ್ಟ್ಸ್ಕುಂದಾಪುರ-ಟೊರ್ಪೆಡೋಸ್ ಅಖಿಲ ಭಾರತ ಚೆಸ್:‌ ಮುತ್ತಯ್ಯಗೆ ಚಾಂಪಿಯನ್‌ ಪಟ್ಟ

ಕುಂದಾಪುರ-ಟೊರ್ಪೆಡೋಸ್ ಅಖಿಲ ಭಾರತ ಚೆಸ್:‌ ಮುತ್ತಯ್ಯಗೆ ಚಾಂಪಿಯನ್‌ ಪಟ್ಟ

-

- Advertisment -spot_img
 ಟಾರ್ಪೆಡೊಸ್‌ ಸ್ಪೋರ್ಟ್ಸ್‌ ಕ್ಲಬ್‌ ಆಶ್ರಯದಲ್ಲಿ ನಡೆದ ಟಾರ್ಪೆಡೊಸ್‌ ರಶ್ಮೀ ಶೆಟ್ಟಿ ಸ್ಮಾರಕ ಅಖಿಲ ಭಾರತ ಫಿಡೆ ರೇಟಿಂಗ್‌ ಚೆಸ್ ಚಾಂಪಿಯನ್‌ಷಿಪ್‌ನಲ್ಲಿ ತಮಿಳುನಾಡಿನ ಐಎಂ ಮುತ್ತಯ್ಯ ಎಎಲ್‌ ಅವರು ಅಗ್ರ ಸ್ಥಾನದೊಂದಿಗೆ ಚಾಂಪಿಯನ್‌ ಪಟ್ಟ ಗೆದ್ದುಕೊಂಡರೆ, ಕರ್ನಾಟಕ ವಿವಿಧ ವಿಭಾಗಗಳಲ್ಲಿ ಮೇಲುಗೈ ಸಾಧಿಸಿ ಸಮಗ್ರ ಚಾಂಪಿಯನ್‌ ಪಟ್ಟ ತನ್ನದಾಗಿಸಿಕೊಂಡಿತು.
ಕುಂದಾಪುರದ ಹರಿಪ್ರಸಾದ್‌ ಹೊಟೇಲಿನ ಆತಿಥ್ಯ ಸಭಾಂಗಣದಲ್ಲಿ ಎರಡು ದಿನಗಳ ಕಾಲ ನಡೆದ ಚಾಂಪಿಯನ್ಷಿಪ್‌ನಲ್ಲಿ ತಮಿಳುನಾಡಿನ ಚಾಂಪಿಯನ್‌ ಆಟಗಾರ, ಎಲೋ ರೇಟಿಂಗ್‌ನಲ್ಲಿನ 2177 ಅಂಕಗಳನ್ನು ಹೊಂದಿರುವ ಮುತ್ತಯ್ಯ ಒಂಬತ್ತು ಸುತ್ತಿನ ಪಂದ್ಯದಲ್ಲಿ 8.5 ಅಂಕಗಳನ್ನು ಗಳಿಸಿ ಅಗ್ರ ಸ್ಥಾನಿಯಾದರು, ಆಕರ್ಷಕ ಟ್ರೋಫಿಯೊಂದಿಗೆ 30,000 ರೂ, ನಗದು ಬಹುಮಾನ ಪಡೆದರು.
2363 ಎಲೋ ರೇಟಿಂಗ್‌ ಅಂಕಗಳನ್ನು ಹೊಂದಿರುವ ಕರ್ನಾಟಕದ ಐಎಂ ಮಂಗಳೂರಿನ ವಿಯಾನಿ ಅಂಥೋನಿಯೋ ಡಿʼಕುನ್ಹಾ 8 ಅಂಕಗಳನ್ನು ಗಳಿಸಿ ರನ್ನರ್‌ಅಪ್‌ ಗೌರವಕ್ಕೆ ಪಾತ್ರರಾದರು. ಎರಡನೇ ಸ್ಥಾನ ಪಡೆದ ವಿಯಾನಿ 20,000 ರೂ.ಗಳೊಂದಿಗೆ ಆಕರ್ಷಕ ಟ್ರೋಫಿ ಗಳಿಸಿದರು.
ತಮಿಳುನಾಡಿನ ಐಎಂ ಹರಿಕೃಷ್ಣ ಎ.ರಾ. 7.5 ಅಂಕಗಳನ್ನು ಗಳಿಸಿ ಆಕರ್ಷಕ ಟ್ರೋಫಿಯೊಂದಿಗೆ 10,000 ರೂ, ನಗದು ಬಹುಮಾನ ಮತ್ತು ಟ್ರೋಫಿ ಗೆದ್ದರು. ಐಎಂ ರೈಲ್ವೇಸ್‌ನ ರತ್ನಾಕರ್‌ ಕೆ. 7.5 ಅಂಕಗಳನ್ನು ಗಳಿಸಿ ನಾಲ್ಕನೇ ಸ್ಥಾನದೊಂದಿಗೆ 8,000 ರೂ, ನಗದು ಬಹುಮಾನ ಮತ್ತು ಆಕರ್ಷಕ ಟ್ರೋಫಿ ತಮ್ಮದಾಗಿಸಿಕೊಂಡರು. 7.5 ಅಂಕ ಗಳಿಸಿದ ತಮಿಳುನಾಡಿನ ಗೋಕುಲಕೃಷ್ಣ ಎಸ್. 7,000 ರೂ. ನಗದು ಬಹುಮಾನ ಗಳಿಸಿದರು.
ನಗದು ಬಹುಮಾನ ಮತ್ತು ಟ್ರೋಫಿ ಗಳಿಸಿದ ಅಗ್ರ ಆಟಗಾರರು
ಮಣಿಕಂಠನ್‌ ಎಸ್.ಎಸ್.( ತಮಿಳುನಾಡು, ರೂ. 6,000), ಬಾಲಕಿಶನ್‌ (ಕರ್ನಾಟಕ, ರೂ. 5,000), ಸಂಯುಕ್ತ ಸಿ,ಎಂ.ಎನ್‌, (ತಮಿಳುನಾಡು, ರೂ.4,000), ರಾಮನಾಥನ್‌ ಬಾಲಸುಬ್ರಹ್ಮಣ್ಯಂ (ತಮಿಳುನಾಡು, ರೂ. 3,500), ವಿರಾಜ್‌ ಪ್ರಭಾಕರ್‌ ಶೆಟ್ಟಿ (ಕರ್ನಾಟಕ, ರೂ. 3,000), ಮಂದಾರ ಮೋಹನ್‌ ಸಾನೆ (ಮಹಾರಾಷ್ಟ್ರ, ರೂ. 2,500), ಶ್ಯಾಮ್‌ ನಿಖಿಲ್‌ ಪಿ (ಐಸಿಎಫ್‌, ರೂ. 2,500), ರಾಮಚಂದ್ರ ಭಟ್‌ (ಕರ್ನಾಟಕ, ರೂ. 2,500). ಹೇಮಂತ್‌ ರಾಮ್‌ (ತಮಿಳುನಾಡು  ರೂ. 2,500). ಶ್ರಮಾ ಆರ್.‌ ಪ್ರೀತಮ್‌ (ಕರ್ನಾಟಕ, ರೂ, 2,500), ಸೆಂಥಿಲ್‌ ಮಾರನ್‌ (ತಮಿಳುನಾಡು, ರೂ. 2,500), ಕುಮಾರ್‌ ತೇಜ (ಕರ್ನಾಟಕ, ರೂ. 2,000). ಅರವಿಂದ್‌ ಬಿ,ಆರ್.‌ (ಕರ್ನಾಟಕ, ರೂ, 2,000). ನಿಗಾಶ್‌ ಜಿ (ತಮಿಳುನಾಡು, ರೂ. 2,000), ರಾಘವೇಂದ್ರ ಜಿ. (ಕರ್ನಾಟಕ ರೂ. 2,000), ಅಭಿನವ್‌ ಭಟ್‌ (ಕರ್ನಾಟಕ ರೂ. 1,500). ಹರಿಹರನ್‌ ಸುಬ್ರಮಣಿ (ಕರ್ನಾಟಕ, ರೂ. 1,500), ವೇದಾಂತ್‌ ನಾಗರಕಟ್ಟೆ (ಮಹಾರಾಷ್ಟ್ರ, ರೂ. 1,500). ಭರತ್‌ ಎಂ, (ಕರ್ನಾಟಕ, ರೂ. 1,500). ತೇಜಸ್‌ ಎಂ. ಶೆಣೈ (ಕರ್ನಾಟಕ, ರೂ.1,500).
ಸಮಾರೋಪ ಸಮಾರಂಭ
ಸಂಜೆ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಚೆಸ್‌ ಅಸೋಸಿಯೇಷನ್‌ನ ಗೌರವಾಧ್ಯಕ್ಷ ಡಾ. ರಾಜಗೋಪಾಲ್‌ ಶೆಣೈ ವಹಿಸಿದ್ದರು. ಕುಳಾಯಿ ಫೌಂಡೇಷನ್‌ನ ಪ್ರತಿಭಾ ಕುಳಾಯಿ, ದಕ್ಷಿಣ ಕನ್ನಡ ಜಿಲ್ಲಾ ಚೆಸ್‌ ಅಸೋಸಿಯೇಷನ್‌ನ ಅಧ್ಯಕ್ಷ ರಮೇಶ್‌ ಕೋಟೆ, ಉದ್ಯಮಿ ರಂಜನ್‌ ನಾಗರಕಟ್ಟೆ, ಟಾರ್ಪೆಡೊಸ್‌ ಸ್ಪೋರ್ಟ್ಸ್‌ ಕ್ಲಬ್‌ನ ಅಧ್ಯಕ್ಷ ಗೌತಮ್‌ ಶೆಟ್ಟಿ ವಿಜೇತರಿಗೆ ಬಹುಮಾನ ವಿತರಿಸಿದರು,
ತೀರ್ಪಗಾರರಾಗಿ ಅಂತಾರಾಷ್ಟ್ರೀಯ ತೀರ್ಪುಗಾರ ವಸಂತ್‌ ಬಿಎಚ್‌, ಸಾಕ್ಷಾತ್‌ ಯು,ಕೆ, ಬಾಬು ಪೂಜಾರಿ, ಸೌಂದರ್ಯ ಯು.ಕೆ, ಸಹಕರಿಸಿದರು. ಉಡುಪಿ ಜಿಲ್ಲಾ ಚೆಸ್‌ ಅಸೋಸಿಯೇಷನ್‌ನ ಉಪಾಧ್ಯಕ್ಷ ಉಮಾನಾಥ್‌ ಮತ್ತು ನಯನ್‌ ಕುಮಾರ್‌ ಕಾರ್ಕಳ ಸಹಕರಿಸಿದರು.
ಪ್ರಿಯಾಂಕ ಪಾಟೀಲ್‌ ಕಾರ್ಮಕ್ರಮ ನಿರೂಪಿದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

8 − two =

Latest news

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್ ಭಾರತೀಯ ಕ್ರಿಕೆಟ್‌ನ ಅತ್ಯುತ್ತಮ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಯುವರಾಜ್ ಸಿಂಗ್, ದೊಡ್ಡ ವೇದಿಕೆಗಳಲ್ಲಿ ತಂಡಕ್ಕೆ ಜಯ ತಂದುಕೊಡುವ ಶಕ್ತಿಶಾಲಿ ಪ್ರದರ್ಶನಗಳಿಂದ...

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು ಯಲಹಂಕ ತಾಲ್ಲೂಕಿನ ಕುದುರೆಗೆರೆ ಪ್ರದೇಶದಲ್ಲಿ ಕೆ.ಎಂ.ಶ್ರೀನಿವಾಸ್ ರವರ ಸ್ಮರಣಾರ್ಥ ಹಾಗೂ ಕೆ.ಎಂ. ಸುಬ್ರಮಣಿ ರವರ...

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಸ್ಥೆ, ಕೋಟ ಸಾಲಿಗ್ರಾಮದ ಆಯೋಜನೆಯಲ್ಲಿ ನಡೆಯುವ ಪ್ರತಿಷ್ಠಿತ ಶಿವ ಬಿಗ್...

ಕೆಚ್ಚಿನ.. ಕಿಚ್ಚಿನ ಯುವರಾಜನ ಕಥೆ..!

ಕೆಚ್ಚಿನ.. ಕಿಚ್ಚಿನ ಯುವರಾಜನ ಕಥೆ..! ಪಂಜಾಬ್’ನ ಲೂಧಿಯಾನದ ಕೆನೆಚ್ ಎಂಬ ಹಳ್ಳಿ. ಅಲ್ಲೊಬ್ಬರು ಒಂದೊಮ್ಮೆ ಭಾರತ ಪರ ಆಡಿದ್ದ ಮಾಜಿ ಕ್ರಿಕೆಟಿಗ.. ಅವರಿಗೊಬ್ಬ ಮಗ.. ತನ್ನ ಕ್ರಿಕೆಟ್...
- Advertisement -spot_imgspot_img

ಅರಬ್ಬರ ನಾಡಿನಲ್ಲಿ ಕುಂದಗನ್ನಡಿಗರ ಸಮಾಗಮ

ಅರಬ್ಬರ ನಾಡಿನಲ್ಲಿ ಕುಂದಗನ್ನಡಿಗರ ಸಮಾಗಮ ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ಯುಎಇ ನಲ್ಲಿ ನೆಲೆಸಿರುವ ಕುಂದಗನ್ನಡಿಗರಿಗಾಗಿ ವಿಹಾರ ಕೂಟ ಮತ್ತು ಗ್ರಾಮೀಣ ಆಟೋಟ ಸ್ಪರ್ದೆಗಳು...

ಕಂದಾಯೋತ್ಸವ 2025 : ಕಂದಾಯ ಇಲಾಖೆಯ ಸಾಂಸ್ಕೃತಿಕ – ಕ್ರೀಡಾ ಸಂಭ್ರಮ

ಕಂದಾಯೋತ್ಸವ 2025 : ಕಂದಾಯ ಇಲಾಖೆಯ ಸಾಂಸ್ಕೃತಿಕ – ಕ್ರೀಡಾ ಸಂಭ್ರಮ ಶಿವಮೊಗ್ಗ ಜಿಲ್ಲೆಯ ಕಂದಾಯ ಇಲಾಖೆಯ ವತಿಯಿಂದ **ಕಂದಾಯೋತ್ಸವ – 2025** ನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ....

Must read

- Advertisement -spot_imgspot_img

You might also likeRELATED
Recommended to you