ಸ್ಪೋರ್ಟ್ಸ್ಕುಂದಾಪುರ-ಟೊರ್ಪೆಡೋಸ್ ಅಖಿಲ ಭಾರತ ಚೆಸ್:‌ ಮುತ್ತಯ್ಯಗೆ ಚಾಂಪಿಯನ್‌ ಪಟ್ಟ

ಕುಂದಾಪುರ-ಟೊರ್ಪೆಡೋಸ್ ಅಖಿಲ ಭಾರತ ಚೆಸ್:‌ ಮುತ್ತಯ್ಯಗೆ ಚಾಂಪಿಯನ್‌ ಪಟ್ಟ

-

- Advertisment -spot_img
 ಟಾರ್ಪೆಡೊಸ್‌ ಸ್ಪೋರ್ಟ್ಸ್‌ ಕ್ಲಬ್‌ ಆಶ್ರಯದಲ್ಲಿ ನಡೆದ ಟಾರ್ಪೆಡೊಸ್‌ ರಶ್ಮೀ ಶೆಟ್ಟಿ ಸ್ಮಾರಕ ಅಖಿಲ ಭಾರತ ಫಿಡೆ ರೇಟಿಂಗ್‌ ಚೆಸ್ ಚಾಂಪಿಯನ್‌ಷಿಪ್‌ನಲ್ಲಿ ತಮಿಳುನಾಡಿನ ಐಎಂ ಮುತ್ತಯ್ಯ ಎಎಲ್‌ ಅವರು ಅಗ್ರ ಸ್ಥಾನದೊಂದಿಗೆ ಚಾಂಪಿಯನ್‌ ಪಟ್ಟ ಗೆದ್ದುಕೊಂಡರೆ, ಕರ್ನಾಟಕ ವಿವಿಧ ವಿಭಾಗಗಳಲ್ಲಿ ಮೇಲುಗೈ ಸಾಧಿಸಿ ಸಮಗ್ರ ಚಾಂಪಿಯನ್‌ ಪಟ್ಟ ತನ್ನದಾಗಿಸಿಕೊಂಡಿತು.
ಕುಂದಾಪುರದ ಹರಿಪ್ರಸಾದ್‌ ಹೊಟೇಲಿನ ಆತಿಥ್ಯ ಸಭಾಂಗಣದಲ್ಲಿ ಎರಡು ದಿನಗಳ ಕಾಲ ನಡೆದ ಚಾಂಪಿಯನ್ಷಿಪ್‌ನಲ್ಲಿ ತಮಿಳುನಾಡಿನ ಚಾಂಪಿಯನ್‌ ಆಟಗಾರ, ಎಲೋ ರೇಟಿಂಗ್‌ನಲ್ಲಿನ 2177 ಅಂಕಗಳನ್ನು ಹೊಂದಿರುವ ಮುತ್ತಯ್ಯ ಒಂಬತ್ತು ಸುತ್ತಿನ ಪಂದ್ಯದಲ್ಲಿ 8.5 ಅಂಕಗಳನ್ನು ಗಳಿಸಿ ಅಗ್ರ ಸ್ಥಾನಿಯಾದರು, ಆಕರ್ಷಕ ಟ್ರೋಫಿಯೊಂದಿಗೆ 30,000 ರೂ, ನಗದು ಬಹುಮಾನ ಪಡೆದರು.
2363 ಎಲೋ ರೇಟಿಂಗ್‌ ಅಂಕಗಳನ್ನು ಹೊಂದಿರುವ ಕರ್ನಾಟಕದ ಐಎಂ ಮಂಗಳೂರಿನ ವಿಯಾನಿ ಅಂಥೋನಿಯೋ ಡಿʼಕುನ್ಹಾ 8 ಅಂಕಗಳನ್ನು ಗಳಿಸಿ ರನ್ನರ್‌ಅಪ್‌ ಗೌರವಕ್ಕೆ ಪಾತ್ರರಾದರು. ಎರಡನೇ ಸ್ಥಾನ ಪಡೆದ ವಿಯಾನಿ 20,000 ರೂ.ಗಳೊಂದಿಗೆ ಆಕರ್ಷಕ ಟ್ರೋಫಿ ಗಳಿಸಿದರು.
ತಮಿಳುನಾಡಿನ ಐಎಂ ಹರಿಕೃಷ್ಣ ಎ.ರಾ. 7.5 ಅಂಕಗಳನ್ನು ಗಳಿಸಿ ಆಕರ್ಷಕ ಟ್ರೋಫಿಯೊಂದಿಗೆ 10,000 ರೂ, ನಗದು ಬಹುಮಾನ ಮತ್ತು ಟ್ರೋಫಿ ಗೆದ್ದರು. ಐಎಂ ರೈಲ್ವೇಸ್‌ನ ರತ್ನಾಕರ್‌ ಕೆ. 7.5 ಅಂಕಗಳನ್ನು ಗಳಿಸಿ ನಾಲ್ಕನೇ ಸ್ಥಾನದೊಂದಿಗೆ 8,000 ರೂ, ನಗದು ಬಹುಮಾನ ಮತ್ತು ಆಕರ್ಷಕ ಟ್ರೋಫಿ ತಮ್ಮದಾಗಿಸಿಕೊಂಡರು. 7.5 ಅಂಕ ಗಳಿಸಿದ ತಮಿಳುನಾಡಿನ ಗೋಕುಲಕೃಷ್ಣ ಎಸ್. 7,000 ರೂ. ನಗದು ಬಹುಮಾನ ಗಳಿಸಿದರು.
ನಗದು ಬಹುಮಾನ ಮತ್ತು ಟ್ರೋಫಿ ಗಳಿಸಿದ ಅಗ್ರ ಆಟಗಾರರು
ಮಣಿಕಂಠನ್‌ ಎಸ್.ಎಸ್.( ತಮಿಳುನಾಡು, ರೂ. 6,000), ಬಾಲಕಿಶನ್‌ (ಕರ್ನಾಟಕ, ರೂ. 5,000), ಸಂಯುಕ್ತ ಸಿ,ಎಂ.ಎನ್‌, (ತಮಿಳುನಾಡು, ರೂ.4,000), ರಾಮನಾಥನ್‌ ಬಾಲಸುಬ್ರಹ್ಮಣ್ಯಂ (ತಮಿಳುನಾಡು, ರೂ. 3,500), ವಿರಾಜ್‌ ಪ್ರಭಾಕರ್‌ ಶೆಟ್ಟಿ (ಕರ್ನಾಟಕ, ರೂ. 3,000), ಮಂದಾರ ಮೋಹನ್‌ ಸಾನೆ (ಮಹಾರಾಷ್ಟ್ರ, ರೂ. 2,500), ಶ್ಯಾಮ್‌ ನಿಖಿಲ್‌ ಪಿ (ಐಸಿಎಫ್‌, ರೂ. 2,500), ರಾಮಚಂದ್ರ ಭಟ್‌ (ಕರ್ನಾಟಕ, ರೂ. 2,500). ಹೇಮಂತ್‌ ರಾಮ್‌ (ತಮಿಳುನಾಡು  ರೂ. 2,500). ಶ್ರಮಾ ಆರ್.‌ ಪ್ರೀತಮ್‌ (ಕರ್ನಾಟಕ, ರೂ, 2,500), ಸೆಂಥಿಲ್‌ ಮಾರನ್‌ (ತಮಿಳುನಾಡು, ರೂ. 2,500), ಕುಮಾರ್‌ ತೇಜ (ಕರ್ನಾಟಕ, ರೂ. 2,000). ಅರವಿಂದ್‌ ಬಿ,ಆರ್.‌ (ಕರ್ನಾಟಕ, ರೂ, 2,000). ನಿಗಾಶ್‌ ಜಿ (ತಮಿಳುನಾಡು, ರೂ. 2,000), ರಾಘವೇಂದ್ರ ಜಿ. (ಕರ್ನಾಟಕ ರೂ. 2,000), ಅಭಿನವ್‌ ಭಟ್‌ (ಕರ್ನಾಟಕ ರೂ. 1,500). ಹರಿಹರನ್‌ ಸುಬ್ರಮಣಿ (ಕರ್ನಾಟಕ, ರೂ. 1,500), ವೇದಾಂತ್‌ ನಾಗರಕಟ್ಟೆ (ಮಹಾರಾಷ್ಟ್ರ, ರೂ. 1,500). ಭರತ್‌ ಎಂ, (ಕರ್ನಾಟಕ, ರೂ. 1,500). ತೇಜಸ್‌ ಎಂ. ಶೆಣೈ (ಕರ್ನಾಟಕ, ರೂ.1,500).
ಸಮಾರೋಪ ಸಮಾರಂಭ
ಸಂಜೆ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಚೆಸ್‌ ಅಸೋಸಿಯೇಷನ್‌ನ ಗೌರವಾಧ್ಯಕ್ಷ ಡಾ. ರಾಜಗೋಪಾಲ್‌ ಶೆಣೈ ವಹಿಸಿದ್ದರು. ಕುಳಾಯಿ ಫೌಂಡೇಷನ್‌ನ ಪ್ರತಿಭಾ ಕುಳಾಯಿ, ದಕ್ಷಿಣ ಕನ್ನಡ ಜಿಲ್ಲಾ ಚೆಸ್‌ ಅಸೋಸಿಯೇಷನ್‌ನ ಅಧ್ಯಕ್ಷ ರಮೇಶ್‌ ಕೋಟೆ, ಉದ್ಯಮಿ ರಂಜನ್‌ ನಾಗರಕಟ್ಟೆ, ಟಾರ್ಪೆಡೊಸ್‌ ಸ್ಪೋರ್ಟ್ಸ್‌ ಕ್ಲಬ್‌ನ ಅಧ್ಯಕ್ಷ ಗೌತಮ್‌ ಶೆಟ್ಟಿ ವಿಜೇತರಿಗೆ ಬಹುಮಾನ ವಿತರಿಸಿದರು,
ತೀರ್ಪಗಾರರಾಗಿ ಅಂತಾರಾಷ್ಟ್ರೀಯ ತೀರ್ಪುಗಾರ ವಸಂತ್‌ ಬಿಎಚ್‌, ಸಾಕ್ಷಾತ್‌ ಯು,ಕೆ, ಬಾಬು ಪೂಜಾರಿ, ಸೌಂದರ್ಯ ಯು.ಕೆ, ಸಹಕರಿಸಿದರು. ಉಡುಪಿ ಜಿಲ್ಲಾ ಚೆಸ್‌ ಅಸೋಸಿಯೇಷನ್‌ನ ಉಪಾಧ್ಯಕ್ಷ ಉಮಾನಾಥ್‌ ಮತ್ತು ನಯನ್‌ ಕುಮಾರ್‌ ಕಾರ್ಕಳ ಸಹಕರಿಸಿದರು.
ಪ್ರಿಯಾಂಕ ಪಾಟೀಲ್‌ ಕಾರ್ಮಕ್ರಮ ನಿರೂಪಿದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

13 − one =

Latest news

ಭಾರತ ವಿಶ್ವ ಚಾಂಪಿಯನ್: ಟಿ20 ವಿಶ್ವಕಪ್ ಮತ್ತೆ ಭಾರತಕ್ಕೇ!

  ಭಾರತ ವಿಶ್ವ ಚಾಂಪಿಯನ್: ಟಿ20 ವಿಶ್ವಕಪ್ ಮತ್ತೆ ಭಾರತಕ್ಕೇ! ಟೀಮ್ ಇಂಡಿಯಾ ಇತಿಹಾಸ ಸೃಷ್ಟಿಸಿದೆ. ಹಾಲಿ ಚಾಂಪಿಯನ್ ಆಗಿ ಟಿ20 ವಿಶ್ವಕಪ್ ಉಳಿಸಿಕೊಳ್ಳುವುದರ ಜೊತೆಗೆ, ತವರು ನೆಲದಲ್ಲಿ...

ಭಾರತಕ್ಕೆ ಮೂರನೇ ಟಿ20 ವಿಶ್ವಕಪ್ ಕಿರೀಟ – ಐತಿಹಾಸಿಕ ಸಾಧನೆ

ಭಾರತಕ್ಕೆ ಮೂರನೇ ಟಿ20 ವಿಶ್ವಕಪ್ ಕಿರೀಟ – ಐತಿಹಾಸಿಕ ಸಾಧನೆ ಕ್ರಿಕೆಟ್ ಲೋಕದಲ್ಲಿ ಮತ್ತೊಮ್ಮೆ ಇತಿಹಾಸ ನಿರ್ಮಿಸಿದ Team India ತಂಡವು ಟಿ20 ವಿಶ್ವಕಪ್‌ನಲ್ಲಿ ತನ್ನ ಪ್ರಭಾವವನ್ನು...

NIPM ಕ್ರಿಕೆಟ್ ಎಕ್ಸ್‌ಪ್ಲೋಶನ್ ಕಾರ್ಪೊರೇಟ್ ಟೂರ್ನಮೆಂಟ್ 2026: NMPA ಚಾಂಪಿಯನ್

NIPM ಕ್ರಿಕೆಟ್ ಎಕ್ಸ್‌ಪ್ಲೋಶನ್ ಕಾರ್ಪೊರೇಟ್ ಟೂರ್ನಮೆಂಟ್ 2026: NMPA ಚಾಂಪಿಯನ್ **New Mangalore Port Authority (ಎನ್‌ಎಂಪಿಎ)** ತಂಡವು **NIPM Cricket Explosion Corporate Cricket Tournament...

ಮಂಗಳೂರಿನಲ್ಲಿ ಕಾರ್ಪೊರೇಟ್ ಕ್ರಿಕೆಟ್ ಹಬ್ಬಕ್ಕೆ ಚಾಲನೆ; NIPM ಮಂಗಳೂರು ಚಾಪ್ಟರ್‌ನಿಂದ “ಕ್ರಿಕೆಟ್ ಎಕ್ಸ್‌ಪ್ಲೋಷನ್” ಟೂರ್ನಿ

ಮಂಗಳೂರಿನಲ್ಲಿ ಕಾರ್ಪೊರೇಟ್ ಕ್ರಿಕೆಟ್ ಹಬ್ಬಕ್ಕೆ ಚಾಲನೆ NIPM ಮಂಗಳೂರು ಚಾಪ್ಟರ್‌ನಿಂದ “ಕ್ರಿಕೆಟ್ ಎಕ್ಸ್‌ಪ್ಲೋಷನ್” ಟೂರ್ನಿ ಮಂಗಳೂರು: ಮಾನವ ಸಂಪನ್ಮೂಲ ಕ್ಷೇತ್ರದ ಪ್ರಮುಖ ಸಂಘಟನೆಯಾದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಪರ್ಸನಲ್ ಮ್ಯಾನೇಜ್‌ಮೆಂಟ್ (NIPM)...
- Advertisement -spot_imgspot_img

ಸಾಲಿಗ್ರಾಮದಲ್ಲಿ “ವಿಶ್ವ ವೃಷ್ಠಿ ಟ್ರೋಫಿ 2026” ಕ್ರಿಕೆಟ್ ಪಂದ್ಯಾಟ – ಮಾರ್ಚ್ 14 ಮತ್ತು 15 ರಂದು ಭರ್ಜರಿ ಆಯೋಜನೆ

ಸಾಲಿಗ್ರಾಮದಲ್ಲಿ “ ವಿಶ್ವ ವೃಷ್ಠಿ ಟ್ರೋಫಿ 2026” ಕ್ರಿಕೆಟ್ ಪಂದ್ಯಾಟ – ಮಾರ್ಚ್ 14 ಮತ್ತು 15 ರಂದು ಭರ್ಜರಿ ಆಯೋಜನೆ ಕ್ರೀಡಾಭಿಮಾನಿಗಳಿಗೆ ರೋಮಾಂಚನ ಮೂಡಿಸುವ ಕ್ರಿಕೆಟ್...

ಅಮ್ಗೆಲೆ ಅಭರಣ GPL ಉತ್ಸವ 2026 – ದಶಕದ ಸಂಭ್ರಮಕ್ಕೆ ಸಜ್ಜಾದ ಕ್ರೀಡಾ ಮಹೋತ್ಸವ

ಅಮ್ಗೆಲೆ ಅಭರಣ GPL ಉತ್ಸವ 2026 – ದಶಕದ ಸಂಭ್ರಮಕ್ಕೆ ಸಜ್ಜಾದ ಕ್ರೀಡಾ ಮಹೋತ್ಸವ ಕ್ರೀಡೆ, ಸಂಸ್ಕೃತಿ ಮತ್ತು ಸಮುದಾಯ ಒಗ್ಗಟ್ಟನ್ನು ಒಂದೇ ವೇದಿಕೆಯಲ್ಲಿ ಆಚರಿಸುವ ಮಹತ್ವದ...

Must read

- Advertisement -spot_imgspot_img

You might also likeRELATED
Recommended to you