ಕ್ರಿಕೆಟ್ಕ್ರೀಡಾ ಕ್ಷೇತ್ರದ ಸೇವೆಗಾಗಿ ಹುಟ್ಟೂರು ಸನ್ಮಾನ ಪಡೆದ ಟೊರ್ಪೆಡೋಸ್ ಗೌತಮ್ ಶೆಟ್ಟಿ

ಕ್ರೀಡಾ ಕ್ಷೇತ್ರದ ಸೇವೆಗಾಗಿ ಹುಟ್ಟೂರು ಸನ್ಮಾನ ಪಡೆದ ಟೊರ್ಪೆಡೋಸ್ ಗೌತಮ್ ಶೆಟ್ಟಿ

-

- Advertisment -spot_img

 

ಟೆನ್ನಿಸ್ ಕ್ರಿಕೆಟ್ ನಲ್ಲಿ ತೂಫಾನಿ ಮೈಲಿಗಲ್ಲನ್ನು ಸ್ಥಾಪಿಸಿದ ಕುಂದಾಪುರದ ಬಲಿಷ್ಠ ತಂಡ ಟೊರ್ಪೆಡೋಸ್ ತಂಡದಲ್ಲಿ ಕ್ರಿಕೆಟ್ ಜೀವನ‌ ಪ್ರಾರಂಭಿಸಿ,ಕ್ರಿಕೆಟ್ ಜೊತೆಗೆ ಕ್ರೀಡೆಯ ಎಲ್ಲಾ ಪ್ರಾಕಾರಗಳಲ್ಲೂ ಸೈ ಅನ್ನಿಸಿಕೊಂಡು,ಶಾಲಾ ಕಾಲೇಜು ದಿನಗಳಲ್ಲಿ ದಿನಗಳಲ್ಲಿ ತಾನೆದುರಿಸಿದ ಅಗತ್ಯ ಪೂರೈಕೆಗಳ ಕೊರತೆಗಳನ್ನು ಯುವ ಕ್ರೀಡಾಪಟುಗಳು ಅನುಭವಿಸಬಾರದೆಂಬ ಸದುದ್ದೇಶದಿಂದ ಮಂಗಳೂರಿನ ಹಳೆಯಂಗಡಿಯಲ್ಲಿ ಸ್ಥಾಪಿಸಿದ “ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್” ಸಹಸ್ರಾರು ಕ್ರೀಡಾಪಟುಗಳ ಭವಿಷ್ಯ ರೂಪಿಸಿದೆ.ಅಶಕ್ತ, ಬಡ ವಿದ್ಯಾರ್ಥಿಗಳ ಜೀವನ ರೂಪಿಸಿದೆ.

ಈ ಎಲ್ಲಾ ಸಾಧನೆಗಳಿಗಾಗಿ ಸಂಸ್ಥಾಪಕಾಧ್ಯಕ್ಷ ಗೌತಮ್ ಶೆಟ್ಟಿಯವರಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ,ಸಮಾಜ ರತ್ನ ಗೌರವ,ಬಂಟರತ್ನ ಪ್ರಶಸ್ತಿ ಹಾಗೂ 500 ಕ್ಕೂ ಮಿಕ್ಕಿದ ಸಂಘ ಸಂಸ್ಥೆಗಳಿಂದ ಗೌರವ ಸನ್ಮಾನಕ್ಕೆ ಪಾತ್ರರಾಗಿದ್ದಾರೆ.

ಕುಂದಾಪುರದ ಕ್ರೀಡಾ ಲೋಕದ ಕಣ್ಮಣಿ ಗೌತಮ್ ಶೆಟ್ಟಿಯವರ ಈ ಎಲ್ಲಾ ಸಾಧನೆಯನ್ನು ಪರಿಗಣಿಸಿ,
ಹುಟ್ಟೂರು ಕುಂದಾಪುರದ ಪುರಸಭಾ ವ್ಯಾಪ್ತಿಯ ಶ್ರೀ ಮೈಲಾರೇಶ್ವರ ದೇವಸ್ಥಾನ ಬಳಿಯ ಬಯಲು ರಂಗ ಮಂಟಪದಲ್ಲಿ,ಶಿವರಾತ್ರಿ ಹಬ್ಬದ ಸುಸಂದರ್ಭದಲ್ಲಿ,
ಮೈಲಾರೇಶ್ವರ ಯುವಕ ಮಂಡಲದ 43 ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಗೌತಮ್ ಶೆಟ್ಟಿಯವರನ್ನು ಸನ್ಮಾನಿಸಲಾಯಿತು.

ವಿಶೇಷವಾಗಿ ಚಿಕ್ಕನ್ ಸಾಲ್ ರಸ್ತೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ. ಕೆ.ಸಾವಿತ್ರಿ,ರಾಷ್ಟ್ರೀಯ ಮಟ್ಟದ ಅಭಾಕಸ್ ಸ್ಪರ್ಧೆಯ ಚಾಂಪಿಯನ್ ಕುಮಾರಿ ಸಾನ್ವಿ‌.ಕೆ.ಪಿ ಹಾಗೂ 5 ನೇ ಸ್ಥಾನಿ ಕುಮಾರ್ ಪ್ರಣವ್ ಕೆ.ಆರ್ ನ್ನು ಗುರುತಿಸಿ ಗೌರವಿಸಲಾಯಿತು.

ಈ ಸಂದರ್ಭ ಕುಂದೇಶ್ವರ ದೇವಸ್ಥಾನದ ಮಾಜಿ ಮೊಕ್ತೇಸರರು ಕೆ.ಆರ್.ಉಮೇಶ್ ರಾವ್,ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕರು ಡಾ|ಭರತ್ ಶೆಟ್ಟಿ‌.ವೈ, ಉದ್ಯಮಿ ಸಂತೋಷ್ ಬಳ್ಕೂರು,ಸಚೀತ್ ಪೈ,
ಪ್ರಮೋದ್.ಕೆ‌.ಆರ್,ಶ್ರೀಮತಿ ಸುಮತಿ ಪ್ರಕಾಶ್,ರಾಜೇಶ್ ನಾಯ್ಕ್ ಹಾಗೂ ಕೋ.ಶಿವಾನಂದ ಕಾರಂತ್ ಉಪಸ್ಥಿತರಿದ್ದರು…

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

twelve + 20 =

Latest news

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ

  ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ Maharaja Trophy: ಜೂನ್‌ 20 ರಿಂದ ಟೂರ್ನಿ ಆರಂಭ, ಬೆಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ಪಂದ್ಯ ಆಯೋಜನೆ ಐದನೇ ಆವೃತ್ತಿಯ...
- Advertisement -spot_imgspot_img

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ಉಡುಪಿ ಜಿಲ್ಲೆಯ ಮಲ್ಪೆಯ...

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ ಕಾಮಧೇನು‌ ಗೋಶಾಲೆ ಮಹಾಸಂಘ ಟ್ರಸ್ಟ್(ರಿ)ನಂಚಾರು ಇಲ್ಲಿರುವ ಗೋವುಗಳಿಗಾಗಿ 12 ನೇ...

Must read

- Advertisement -spot_imgspot_img

You might also likeRELATED
Recommended to you