5 C
London
Wednesday, April 24, 2024
Homeಕ್ರಿಕೆಟ್ಕ್ರೀಡಾ ಕ್ಷೇತ್ರದ ಸೇವೆಗಾಗಿ ಹುಟ್ಟೂರು ಸನ್ಮಾನ ಪಡೆದ ಟೊರ್ಪೆಡೋಸ್ ಗೌತಮ್ ಶೆಟ್ಟಿ

ಕ್ರೀಡಾ ಕ್ಷೇತ್ರದ ಸೇವೆಗಾಗಿ ಹುಟ್ಟೂರು ಸನ್ಮಾನ ಪಡೆದ ಟೊರ್ಪೆಡೋಸ್ ಗೌತಮ್ ಶೆಟ್ಟಿ

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img

 

ಟೆನ್ನಿಸ್ ಕ್ರಿಕೆಟ್ ನಲ್ಲಿ ತೂಫಾನಿ ಮೈಲಿಗಲ್ಲನ್ನು ಸ್ಥಾಪಿಸಿದ ಕುಂದಾಪುರದ ಬಲಿಷ್ಠ ತಂಡ ಟೊರ್ಪೆಡೋಸ್ ತಂಡದಲ್ಲಿ ಕ್ರಿಕೆಟ್ ಜೀವನ‌ ಪ್ರಾರಂಭಿಸಿ,ಕ್ರಿಕೆಟ್ ಜೊತೆಗೆ ಕ್ರೀಡೆಯ ಎಲ್ಲಾ ಪ್ರಾಕಾರಗಳಲ್ಲೂ ಸೈ ಅನ್ನಿಸಿಕೊಂಡು,ಶಾಲಾ ಕಾಲೇಜು ದಿನಗಳಲ್ಲಿ ದಿನಗಳಲ್ಲಿ ತಾನೆದುರಿಸಿದ ಅಗತ್ಯ ಪೂರೈಕೆಗಳ ಕೊರತೆಗಳನ್ನು ಯುವ ಕ್ರೀಡಾಪಟುಗಳು ಅನುಭವಿಸಬಾರದೆಂಬ ಸದುದ್ದೇಶದಿಂದ ಮಂಗಳೂರಿನ ಹಳೆಯಂಗಡಿಯಲ್ಲಿ ಸ್ಥಾಪಿಸಿದ “ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್” ಸಹಸ್ರಾರು ಕ್ರೀಡಾಪಟುಗಳ ಭವಿಷ್ಯ ರೂಪಿಸಿದೆ.ಅಶಕ್ತ, ಬಡ ವಿದ್ಯಾರ್ಥಿಗಳ ಜೀವನ ರೂಪಿಸಿದೆ.

ಈ ಎಲ್ಲಾ ಸಾಧನೆಗಳಿಗಾಗಿ ಸಂಸ್ಥಾಪಕಾಧ್ಯಕ್ಷ ಗೌತಮ್ ಶೆಟ್ಟಿಯವರಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ,ಸಮಾಜ ರತ್ನ ಗೌರವ,ಬಂಟರತ್ನ ಪ್ರಶಸ್ತಿ ಹಾಗೂ 500 ಕ್ಕೂ ಮಿಕ್ಕಿದ ಸಂಘ ಸಂಸ್ಥೆಗಳಿಂದ ಗೌರವ ಸನ್ಮಾನಕ್ಕೆ ಪಾತ್ರರಾಗಿದ್ದಾರೆ.

ಕುಂದಾಪುರದ ಕ್ರೀಡಾ ಲೋಕದ ಕಣ್ಮಣಿ ಗೌತಮ್ ಶೆಟ್ಟಿಯವರ ಈ ಎಲ್ಲಾ ಸಾಧನೆಯನ್ನು ಪರಿಗಣಿಸಿ,
ಹುಟ್ಟೂರು ಕುಂದಾಪುರದ ಪುರಸಭಾ ವ್ಯಾಪ್ತಿಯ ಶ್ರೀ ಮೈಲಾರೇಶ್ವರ ದೇವಸ್ಥಾನ ಬಳಿಯ ಬಯಲು ರಂಗ ಮಂಟಪದಲ್ಲಿ,ಶಿವರಾತ್ರಿ ಹಬ್ಬದ ಸುಸಂದರ್ಭದಲ್ಲಿ,
ಮೈಲಾರೇಶ್ವರ ಯುವಕ ಮಂಡಲದ 43 ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಗೌತಮ್ ಶೆಟ್ಟಿಯವರನ್ನು ಸನ್ಮಾನಿಸಲಾಯಿತು.

ವಿಶೇಷವಾಗಿ ಚಿಕ್ಕನ್ ಸಾಲ್ ರಸ್ತೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ. ಕೆ.ಸಾವಿತ್ರಿ,ರಾಷ್ಟ್ರೀಯ ಮಟ್ಟದ ಅಭಾಕಸ್ ಸ್ಪರ್ಧೆಯ ಚಾಂಪಿಯನ್ ಕುಮಾರಿ ಸಾನ್ವಿ‌.ಕೆ.ಪಿ ಹಾಗೂ 5 ನೇ ಸ್ಥಾನಿ ಕುಮಾರ್ ಪ್ರಣವ್ ಕೆ.ಆರ್ ನ್ನು ಗುರುತಿಸಿ ಗೌರವಿಸಲಾಯಿತು.

ಈ ಸಂದರ್ಭ ಕುಂದೇಶ್ವರ ದೇವಸ್ಥಾನದ ಮಾಜಿ ಮೊಕ್ತೇಸರರು ಕೆ.ಆರ್.ಉಮೇಶ್ ರಾವ್,ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕರು ಡಾ|ಭರತ್ ಶೆಟ್ಟಿ‌.ವೈ, ಉದ್ಯಮಿ ಸಂತೋಷ್ ಬಳ್ಕೂರು,ಸಚೀತ್ ಪೈ,
ಪ್ರಮೋದ್.ಕೆ‌.ಆರ್,ಶ್ರೀಮತಿ ಸುಮತಿ ಪ್ರಕಾಶ್,ರಾಜೇಶ್ ನಾಯ್ಕ್ ಹಾಗೂ ಕೋ.ಶಿವಾನಂದ ಕಾರಂತ್ ಉಪಸ್ಥಿತರಿದ್ದರು…

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

12 + 7 =