ಭರವಸೆಯ ಬೆಳಕುಸರಳ ಇಂಗ್ಲೀಷ್ ಕಲಿಕೆಗೆ ಪೂರಕ ಚಟುವಟಿಕೆ ಆಧಾರಿತ ಪುಸ್ತಕ ಕೊಡುಗೆ ನೀಡಿದ...

ಸರಳ ಇಂಗ್ಲೀಷ್ ಕಲಿಕೆಗೆ ಪೂರಕ ಚಟುವಟಿಕೆ ಆಧಾರಿತ ಪುಸ್ತಕ ಕೊಡುಗೆ ನೀಡಿದ ಗೌತಮ್ ಶೆಟ್ಟಿ

-

- Advertisment -spot_img
ಕೊರವಡಿ  ಅಂಗನವಾಡಿ ಕೇಂದ್ರಕ್ಕೆ ಉಚಿತ ಪುಸ್ತಕ ವಿತರಣೆ
ಕುಂದಾಪುರ:  ಇಲ್ಲಿಗೆ ಸಮೀಪದ ಕೊರವಡಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ  ದಿನಾಂಕ 12 ಜುಲೈ, 2023ರಂದು ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ನ ಛೇರ್ಮನ್ ಹಾಗೂ ಉಡುಪಿ ಜಿಲ್ಲಾ ಟೆನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾದ  ಶ್ರೀಯುತ ಗೌತಮ್ ಶೆಟ್ಟಿ ಮೂಲಕ ಸರಳ ಇಂಗ್ಲಿಷ್ ಕಲಿಕೆಗೆ ಪೂರಕವಾಗಿರುವ ಚಟುವಟಿಕೆ ಆಧಾರಿತ ಪುಸ್ತಕಗಳನ್ನುಉಚಿತವಾಗಿ ವಿತರಿಸಲಾಯಿತು.
”ಪ್ರತಿಯೊಬ್ಬರ ಜೀವನದಲ್ಲಿ ಶಿಕ್ಷಣವು ವಿಶೇಷ ಪ್ರಾಮುಖ್ಯತೆಯನ್ನು ಹೊಂದಿದೆ. ಶಿಕ್ಷಿತ ಮಗು ರಾಷ್ಟ್ರವನ್ನು ನಿರ್ಮಿಸುತ್ತದೆ” ಎಂಬ ಚಿಂತನೆಯನ್ನು ದಾನಿಗಳಾದ ಗೌತಮ್ ಶೆಟ್ಟಿಯವರು  ಹೊಂದಿದ್ದು ಅವರ ಬೆಂಬಲದೊಂದಿಗೆ ಮಕ್ಕಳ ಶಿಕ್ಷಣದ ಅಭಿವೃದ್ಧಿಗಾಗಿ  ಶಾಲಾ ಮಕ್ಕಳಿಗೆ ಉಪಯೋಗವಾಗುವ ಪುಸ್ತಕಗಳನ್ನು ಅವರು ಪ್ರಾಯೋಜಿಸಿದ್ದಾರೆ. ಇದು ಗೌತಮ್ ಶೆಟ್ಟಿಯವರ ಒಂದು ಸೂಕ್ಷ್ಮ ಯೋಜನೆ. ಬಡ ಶಾಲಾ ಮಕ್ಕಳು ಈ ಶಾಲಾ ಶಿಕ್ಷಣ ಪುಸ್ತಕಗಳಿಂದ ಪ್ರಯೋಜನ ಪಡೆಯಲಿದ್ದಾರೆ.
ಬಡ ವಂಚಿತ ಮಕ್ಕಳಿಗೆ ಅವರ ಅಧ್ಯಯನದ ಸಮಯದಲ್ಲಿ ಯಾವುದೇ ರೀತಿಯ ಅನಾನುಕೂಲತೆ ಉಂಟಾಗದಂತೆ ಶಿಕ್ಷಣದ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಯೋಜನೆಯ ಮೂಲಕ, ಶಿಕ್ಷಣದ ಅಭಿವೃದ್ಧಿಗೆ ಸ್ವಲ್ಪ ಪ್ರಯತ್ನ ಮಾಡಿದರೆ ವಂಚಿತ ಬಡ ಮಕ್ಕಳ ಭವಿಷ್ಯ ಬದಲಾಗಲಿದೆ ಮತ್ತು ಅನಕ್ಷರತೆ ನಿವಾರಣೆಯಾಗುತ್ತದೆ ಎನ್ನುವುದು ಗೌತಮ್ ಶೆಟ್ಟಿಯವರ ಚಿಂತನೆ.
ಈ ಕಾರ್ಯಕ್ರಮಕ್ಕೆ ಶಾಲಾ ಸಿಬ್ಬಂದಿ, ಪೋಷಕರು ಹಾಗೂ ಮಕ್ಕಳಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಈ  ಸಂಧರ್ಭ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವಾಸುದೇವ್ ಹತ್ವಾರ್ ಅಧ್ಯಕ್ಷತೆ ವಹಿಸಿದ್ದರು,  ಮುಖ್ಯ ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕಿ ಶ್ರೀಮತಿ ಪ್ರಭಾವತಿ ಶೆಟ್ಟಿ, ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಸರೋಜಾ, ಅಂಗನವಾಡಿ ಹಿತೈಷಿ ದಿನೇಶ್, ಮುಖ್ಯ ಶಿಕ್ಷಕಿ ಮಾಲತಿ ಶೆಟ್ಟಿ,ದಿನೇಶ್ ಮೊಗವೀರ ಉಪಸ್ಥಿತರಿದ್ದರು. ಸಹಶಿಕ್ಷಕಿ ನೇತ್ರಾ ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಶಾಂತಿ ಡಿಸೋಜಾ, ಶ್ರೀಮತಿ ಶೋಭಾ ಪೂಜಾರ್ತಿ, ಅತಿಥಿ ಶಿಕ್ಷಕಿ ಸುದೀಪ, ಗೌರವ ಶಿಕ್ಷಕಿಯರಾದ ಜ್ಯೋತಿ, ಪ್ರಮೀಳಾ, ಕಾವ್ಯ, ಅಂಗನವಾಡಿ ಸಹಾಯಕಿ ಪದ್ಮಾವತಿ ಸಹಕರಿಸಿದರು.  ಅಂಗನವಾಡಿ ಶಿಕ್ಷಕಿ ಶ್ರೀಮತಿ ಶೋಭಾ ವಂದನಾರ್ಪಣೆಗೈದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

fifteen + 11 =

Latest news

ಉಬರ್ ಚಾಲಕನಿಂದ ವಿಶ್ವಕಪ್ ಕನಸಿನವರೆಗೆ: ಜಸ್ಪ್ರೀತ್ ಸಿಂಗ್ ಕಥೆ

ಉಬರ್ ಚಾಲಕನಿಂದ ವಿಶ್ವಕಪ್ ಕನಸಿನವರೆಗೆ: ಜಸ್ಪ್ರೀತ್ ಸಿಂಗ್ ಕಥೆ ಪಂಜಾಬ್‌ನ ಸಣ್ಣ ಪಟ್ಟಣದಿಂದ ಆರಂಭವಾದ ಯುವ ಕ್ರಿಕೆಟಿಗ ಜಸ್ಪ್ರೀತ್ ಸಿಂಗ್ ಅವರ ಜೀವನಯಾನ ಇಂದು ಸಾವಿರಾರು ಯುವ...

ಕೊಲ್ನಾಡ್ ನಲ್ಲಿ LK ಕ್ರಿಕೆಟ್ ಪ್ರೀಮಿಯರ್ ಲೀಗ್ – ಸೀಸನ್ 2

ಕೊಲ್ನಾಡ್ ನಲ್ಲಿ LK ಕ್ರಿಕೆಟ್ ಪ್ರೀಮಿಯರ್ ಲೀಗ್  2026– ಸೀಸನ್ 2 ಕೊಲ್ನಾಡ್ ಮೈದಾನದಲ್ಲಿ ಫೆಬ್ರವರಿ 14 ಮತ್ತು 15ರಂದು LK ಕ್ರಿಕೆಟ್ ಪ್ರೀಮಿಯರ್ ಲೀಗ್ –...

ಮುಂಬೈ ನೆಲದಲ್ಲಿ ಕರ್ನಾಟಕದ ಐತಿಹಾಸಿಕ ವಿಜಯ

ಮುಂಬೈ ನೆಲದಲ್ಲಿ ಕರ್ನಾಟಕದ ಐತಿಹಾಸಿಕ ವಿಜಯ ರಣಜಿ ಟ್ರೋಫಿ ಕ್ರಿಕೆಟ್ ಎಂದರೆ ಮುಂಬೈಗೆ ಪ್ರತಿಷ್ಠೆಯ ಪ್ರಶ್ನೆ. 42 ಬಾರಿ ಚಾಂಪಿಯನ್ ಆಗಿರುವ ತಂಡದ ಎದುರು ಅವರದ್ದೇ ಮೈದಾನದಲ್ಲಿ...

ಟಿ20 ವಿಶ್ವಕಪ್‌ಗೆ ಭಾರತಕ್ಕೆ ಭರ್ಜರಿ ಆರಂಭ: ಅಮೆರಿಕ ವಿರುದ್ಧ 29 ರನ್ ಜಯ

ಟಿ20 ವಿಶ್ವಕಪ್‌ಗೆ ಭಾರತಕ್ಕೆ ಭರ್ಜರಿ ಆರಂಭ: ಅಮೆರಿಕ ವಿರುದ್ಧ 29 ರನ್ ಜಯ 2026ರ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ತನ್ನ ಗೆಲುವಿನ ಅಭಿಯಾನವನ್ನು ಭರ್ಜರಿಯಾಗಿ ಆರಂಭಿಸಿದೆ....
- Advertisement -spot_imgspot_img

ಕರಾವಳಿ ಸ್ಪೋರ್ಟ್ಸ್ ಕ್ಲಬ್, ಕುಮಟಾ ಆಯೋಜನೆಯ MIDMAC ಟ್ರೋಫಿ ಸೀಸನ್–2 ಫೈನಲ್‌ನಲ್ಲಿ ಭಟ್ಕಲ್ ಫ್ರೆಂಡ್ಸ್ ಭರ್ಜರಿ ಜಯ; ನಿಹಾಲ್ XI ಮೇಲೆ 50 ರನ್‌ಗಳ ಗೆಲುವು

ಕರಾವಳಿ ಸ್ಪೋರ್ಟ್ಸ್ ಕ್ಲಬ್, ಕುಮಟಾ ಆಯೋಜನೆಯ MIDMAC ಟ್ರೋಫಿ ಸೀಸನ್–2 ಫೈನಲ್‌ನಲ್ಲಿ ಭಟ್ಕಲ್ ಫ್ರೆಂಡ್ಸ್ ಭರ್ಜರಿ ಜಯ; ನಿಹಾಲ್ XI ಮೇಲೆ 50 ರನ್‌ಗಳ ಗೆಲುವು ಕರಾವಳಿ...

ಕರಾವಳಿ ಸ್ಪೋರ್ಟ್ಸ್ ಕ್ಲಬ್ ಕುಮಟಾ ಅರ್ಪಿಸುವ MIDMAC TROPHY SEASON-2 ಸೆಮಿಫೈನಲ್ ಪಂದ್ಯಗಳಲ್ಲಿ ಭಟ್ಕಲ್ ಫ್ರೆಂಡ್ಸ್ ಹಾಗೂ ನಿಹಾಲ್ XI ಗೆ ಜಯ

ಕರಾವಳಿ ಸ್ಪೋರ್ಟ್ಸ್ ಕ್ಲಬ್ ಕುಮಟಾ ಅರ್ಪಿಸುವ MIDMAC TROPHY SEASON-2 ಸೆಮಿಫೈನಲ್ ಪಂದ್ಯಗಳಲ್ಲಿ ಭಟ್ಕಲ್ ಫ್ರೆಂಡ್ಸ್ ಹಾಗೂ ನಿಹಾಲ್ XI ಗೆ ಜಯ (Sports Kannada Live...

Must read

- Advertisement -spot_imgspot_img

You might also likeRELATED
Recommended to you