10 C
London
Tuesday, April 23, 2024
Homeಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಕ್ರೀಡೆ ಯುವಕರಲ್ಲಿ ಜೀವ ಕಳೆಯನ್ನು ತುಂಬುತ್ತದೆ" -ಗೌತಮ್ ಶೆಟ್ಟಿ

ಕ್ರೀಡೆ ಯುವಕರಲ್ಲಿ ಜೀವ ಕಳೆಯನ್ನು ತುಂಬುತ್ತದೆ” -ಗೌತಮ್ ಶೆಟ್ಟಿ

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಬೈಂದೂರು-“ಕ್ರೀಡೆ ಯುವ ಜನತೆಯನ್ನು ಒಗ್ಗೂಡಿಸಿ ಉತ್ಸಾಹ ಮೂಡಿಸಿ ಜೀವಕಳೆಯನ್ನು ತುಂಬುತ್ತದೆ.
ಕ್ರೀಡಾಪಟುಗಳು ಸೋತಾಗ ಕುಗ್ಗದೆ,ಗೆದ್ದಾಗ ಹಿಗ್ಗದೆ ಸಮಭಾವದಿಂದ ಬದುಕನ್ನು ರೂಪಿಸಿಕೊಂಡರೆ ಯಶಸ್ಸು ಖಂಡಿತ” ಎಂದು ಬೈಂದೂರು ಸೇನೇಶ್ವರ ಕಲಾ ಮತ್ತು ಕ್ರೀಡಾ ಸಂಘ ಇವರು ಆಯೋಜಿಸಿದ ಕ್ರಿಕೆಟ್ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಉಡುಪಿ ಜಿಲ್ಲಾ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಗೌತಮ್ ಶೆಟ್ಟಿ ಟೊರ್ಪೆಡೋಸ್ ಹೇಳಿದರು.
ಎರಡು ದಿನಗಳ‌ ಕಾಲ ಬೈಂದೂರಿನ ಗಾಂಧಿ ಮೈದಾನದಲ್ಲಿ ನಡೆದ ಕ್ರಿಕೆಟ್ ಪಂದ್ಯಾಟದ ಫೈನಲ್ ನಲ್ಲಿ ಗೌರೀಶ್ ಹಾಗೂ ಅರುಣ್ ನೇತೃತ್ವದ ಅನ್ವಿ ಪ್ರಯಾಣ್ 11 ತಂಡ ಶಂಕರನಾರಾಯಣ ತಂಡವನ್ನು ಸೋಲಿಸಿ ಪ್ರಥಮ‌ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.
ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿ.ಎಂ.ಸುಕುಮಾರ್ ಶೆಟ್ಟಿ ಬೈಂದೂರು,ಬೈಂದೂರು ಬಿ.ಜೆ.ಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಸಮಾಜಸೇವಕರು ಉದ್ಯಮಿಗಳಾದ ಡಾ.ಗೋವಿಂದ ಬಾಬು ಪೂಜಾರಿ,ಮಾಜಿ ಶಾಸಕರಾದ ಗೋಪಾಲ್ ಪೂಜಾರಿ ಬೈಂದೂರು,ಜಿಲ್ಲಾ ಪಂಚಾಯತ್ ಸದಸ್ಯರಾದ ರಾಜು ಪೂಜಾರಿ,ಅಂತರಾಷ್ಟ್ರೀಯ ಕ್ರಿಕೆಟ್ ಪಟು ಪ್ರಥ್ವೀರಾಜ್ ಶೆಟ್ಟಿ ಹುಂಚನಿ,ದಿನೇಶ್ ಗಾಣಿಗ ವಿಕ್ರಮ್ ಬೈಂದೂರು,ಸೇನೇಶ್ವರ ಕಲಾ ಮತ್ತು ಕ್ರೀಡಾರಂಗದ ಅಧ್ಯಕ್ಷ ರಾಮಕೃಷ್ಣ ದೇವಾಡಿಗ ಮತ್ತು ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

12 − 3 =