ಸಂಪಾದಕರ ಮಾತುಕ್ರೀಡಾ ಲೋಕದ ಕಣ್ಮಣಿ- ಟೊರ್ಪೆಡೋಸ್ ಗೌತಮ್ ಶೆಟ್ಟಿ

ಕ್ರೀಡಾ ಲೋಕದ ಕಣ್ಮಣಿ- ಟೊರ್ಪೆಡೋಸ್ ಗೌತಮ್ ಶೆಟ್ಟಿ

-

- Advertisment -spot_img

 

ಪ್ರಯತ್ನದಲ್ಲಿ ಸೋಲಾದರೆ ಪರವಾಗಿಲ್ಲ, ಆದರೆ ಪ್ರಯತ್ನ ಮಾಡದೆ ಇರುವುದು ಜೀವನದ ದೊಡ್ಡ ಸೋಲು.
ಕ್ರೀಡಾಲೋಕದಲ್ಲಿ ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಪ್ರಚಲಿತವಿರುವ ಸಂಸ್ಥೆ,ಪ್ರತಿಷ್ಟಿತ ಹಳೆಯಂಗಡಿಯ ಕ್ರೀಡಾ ತರಬೇತಿ ಸಂಸ್ಥೆ “ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್” ನ ರೂವಾರಿ ಗೌತಮ್ ಶೆಟ್ಟಿಯವರು,ಕ್ರೀಡಾ ಕ್ಷೇತ್ರದ ಸೇವೆಗಾಗಿ “ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ”, ಬಂಟರ ಪ್ರಮುಖ ವಾಹಿನಿ “ಬಂಟರ ಮಿತ್ರ” ಪತ್ರಿಕೆಯಲ್ಲಿ 10 ಸಂಚಿಕೆಗಳಲ್ಲಿ ಪ್ರಕಟವಾದ 500 ಮಿಕ್ಕಿ ಸಾಧಕರಲ್ಲಿ, ಓದುಗರ ಹಾಗೂ ಸಂಪಾದಕೀಯ ಮಂಡಳಿಯ ಆಯ್ಕೆಯಾಗಿ 2019 ರ ಸಾಲಿನ “ಬಂಟ ರತ್ನ” ಪ್ರಶಸ್ತಿ ಹಾಗೂ ಸಮಾಜರತ್ನ ಪ್ರಶಸ್ತಿ ಪುರಸ್ಕೃತರು.

ಮಾವಿನ ಮರದ ಎಲೆಗಳೆಲ್ಲ ಮಾವಿನ ಎಲೆಗಳೆ, ಆದರೆ ಲಕ್ಷ ಲಕ್ಷ ಎಲೆಗಳಲ್ಲಿ ಯಾವ ಎಲೆಯು ಕೂಡ ಒಂದರಂತಿಲ್ಲ. ಪ್ರತಿಯೊಬ್ಬ ವ್ಯಕ್ತಿಯೂ ಕೂಡಾ ಅವರದೆ ಆದ ಕ್ಷೇತ್ರದಲ್ಲಿ ಮೆರೆದು ಸಾಧನೆ ಮಾಡಿರುತ್ತಾರೆ. ಜೀವನ ಅನ್ನುವ ಮೂರು ದಿನದ ಬಾಳುವೆಯಲ್ಲಿ ಅದೆಷ್ಟೋ ಸಾಧನೆಯ ಹೆಗ್ಗುರುತನ್ನು ಮೂಡಿಸುತ್ತ ಮನ್ನಣೆಯನ್ನು ಪಡೆಯುತ್ತಾ ದಾರಿಯ ಬಗ್ಗೆ ಯೋಚಿಸದೆ ಸತತ ಪ್ರಯತ್ನ, ನಿರಂತರ ಕಾರ್ಯಶೀಲತೆಯಿಂದ ಬದುಕುತ್ತಾರೆ. ಅಂಥವರ ಸಾಲಿಗೆ ಸೇರುವ ಒಬ್ಬ ಸಾಧಕ ಗೌತಮ್ ಶೆಟ್ಟಿ.

ಬಾಲ್ಯದಿಂದಲೇ ಕ್ರೀಡೆಯಲ್ಲಿ ಬಹಳಷ್ಟು ಆಸಕ್ತಿ ಹೊಂದಿದ್ದ ಗೌತಮ್ ಶೆಟ್ಟಿ,ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಸಂದರ್ಭದಲ್ಲಿ ಕ್ರಿಕೆಟ್,ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್, ಬಾಲ್ ಬ್ಯಾಡ್ಮಿಂಟನ್ ,ವಾಲಿಬಾಲ್,ಕಬಡ್ಡಿ,ಲಾನ್ ಟೆನ್ನಿಸ್ ಮುಂತಾದ ಕ್ರೀಡೆಗಳಲ್ಲಿ ತೊಡಗಿಸಿಕೊಂಡು ಬಹಳಷ್ಟು ಪ್ರಶಸ್ತಿಗಳನ್ನು ಜಯಿಸಿದ್ದರು.

ಬಾಹ್ಯ ಬದಲಾವಣೆಗಿಂತ ಅಂತರಂಗದ ಬದಲಾವಣೆ ಜೀವನದಲ್ಲಿ ಮುಖ್ಯ ಅನ್ನುವ ಧ್ಯೇಯಕ್ಕೆ ಬದ್ಧರಾಗಿ
80 ರ ದಶಕದಲ್ಲಿ ಹಿರಿಯರಾದ ದಿನೇಶ್ ಮುನ್ನಾ ನೇತೃತ್ವದಲ್ಲಿ ಸ್ಥಾಪನೆಯಾದ” ಟೊರ್ಪೆಡೋಸ್ ಕ್ರಿಕೆಟ್ ಕ್ಲಬ್”ನಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು.ತಾವು ಭಾಗವಹಿಸಿದ ಪ್ರಥಮ ಪಂದ್ಯಾಕೂಟದಲ್ಲೇ ಪ್ರಶಸ್ತಿ ಬಾಚಿದ ಟೊರ್ಪೆಡೋಸ್ ಸಂಸ್ಥೆ ಹಿರಿಯ ಕ್ರಿಕೆಟಿಗರ ನೇತ್ರತ್ವದಲ್ಲಿ ರಾಜ್ಯದ ಶ್ರೇಷ್ಠ ತಂಡವಾಗಿ ರಾಜ್ಯಾದ್ಯಂತ ಗುರುತಿಸಿಕೊಂಡಿತ್ತು.ಹಿರಿಯರು ತೆರೆಮರೆಗೆ ಸರಿದಂತೆ ತಂಡವನ್ನು ಮುನ್ನಡೆಸುವ ನಾಯಕನ ಜವಾಬ್ದಾರಿ ಗೌತಮ್ ಶೆಟ್ಟಿಯವರ ಪಾಲಿಗೆ ಬಂದಂದಿನಿಂದ ಹಿಂತಿರುಗಿ ನೋಡಿಯೇ ಇಲ್ಲ.

ನಾಯಕನಾಗಿ ಜವಾಬ್ದಾರಿಯುತ ಆಟವಾಡಿ, ಕರ್ನಾಟಕ ರಾಜ್ಯದ ಗಮನ ಸೆಳೆದು 100 ಕ್ಕೂ ಮಿಕ್ಕಿ ರಾಜ್ಯ, ರಾಷ್ಟ್ರಮಟ್ಟದ ಪ್ರಶಸ್ತಿಗಳನ್ನು ಜಯಿಸಿ ತನ್ನ ತಂಡವನ್ನು ರಾಜ್ಯದ ಅಗ್ರಗಣ್ಯ ಸಾಲಿಗೆ ಕೊಂಡೊಯ್ದಿದ್ದರು.90 ರ ದಶಕದಲ್ಲಿ ಹೆಚ್ಚಾಗಿ ನಡೆಯುತ್ತಿದ್ದ ಡಬಲ್ ವಿಕೆಟ್ ಪಂದ್ಯಾಟದಲ್ಲೂ ಟೆನ್ನಿಸ್ ಬಾಲ್ ನ ತೆಂಡುಲ್ಕರ್ ಹರಿಪ್ರಸನ್ನ(ಪುಟ್ಟ)ಜೊತೆಯಾಗಿ ಭಾಗವಹಿಸಿದ ಎಲ್ಲಾ ಟೂರ್ನಿಗಳಲ್ಲೂ ಪ್ರಶಸ್ತಿ ಜಯಿಸಿ,ಶ್ರೇಷ್ಠ ಆರಂಭಿಕ ಜೋಡಿ ಗೌರವಕ್ಕೂ ಪಾತ್ರರಾಗಿದ್ದರು.

ಆತ್ಮ ವಿಶ್ವಾಸ, ಜೀವನ ಆದರ್ಶ, ನಿರ್ದಿಷ್ಟ ಗುರಿ ಇವೆಲ್ಲವನ್ನೂ ಜೀವನದಲ್ಲಿ ಅಳವಡಿಸಿಕೊಂಡು ಇಂದು ಹುಟ್ಟು ಹಬ್ಬದ ಸಂಭ್ರಮ ದಲ್ಲಿರುವ ಗೌತಮ್ ಶೆಟ್ಟಿ ಇವರಿಗೆ,

ಗೌ ರವದ ಬದುಕಿದು ನಿಮದಾಗಲೆಂದು
ತ ರತಮವ ಮರೆತಿರುವ ಜೀವಿತವು ನಿಮದೆಂದು
ಮ ಕ್ಕಳಂದದಿ ಕಲೆತು ಬೆಳಗಿದಿರಿ ನೀವಿಂದು
ಪ್ರ ತಿಭಾಳ ನಂದನವನದಲ್ಲಿ ನಿಂದು
ಪ್ರ ಶಸ್ತಿ ಯು ಪುತ್ರಿಯ ಹಾಗೆ ಬಂದು
ಪ್ರ ಥಮ ಕಿರಣದ ಹಾಗೆ ಬಾಳು ಪ್ರ ವಹಿಸಲಿ ಎಂದೆಂದೂ….

ಅಭಿವಾದನಗಳೊಂದಿಗೆ
ಕೋಟ ರಾಮಕೃಷ್ಣ ಆಚಾರ್ಯ
ಸಂಪಾದಕರು: www.sportskannada.com

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

nineteen − ten =

Latest news

24D Spin : L’ultime Manuel Complet du Gaming de Pari qui Révolutionne l’Expérience des Gamers

Table des matières Nos Mécanismes Essentiels de Ce Game Stratégie Idéale pour Maximiser Vos Gains Étude Complète des Versions Ce Qui Te Différencie...

24D Spin: Dit Ultieme Casino Spelervaring Voor Authentieke Overwinnaars

Overzicht Spelprincipe en Werking Doordachte Voordelen Terugbetalingspercentages en RTP Bonusfuncties plus Speciale Kenmerken Meest gestelde Vragen Spelprincipe en Mechanica Het spel verenigt de spanning van conventionele...

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026 ಮಂಗಳೂರು: ಜಿಎಸ್‌ಬಿ ಸಮುದಾಯದ ಕ್ರಿಕೆಟ್ ಪ್ರತಿಭೆಗಳಿಗೆ ವೇದಿಕೆಯಾಗಿರುವ ಪ್ರತಿಷ್ಠಿತ **ಪ್ಯಾಂಥರ್ಸ್ ಸೂಪರ್...

ಟೀಕೆಗೆ ಬ್ಯಾಟ್‌ನಲ್ಲೇ ಉತ್ತರ: ಫೈನಲ್‌ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ

ಟೀಕೆಗೆ ಬ್ಯಾಟ್‌ನಲ್ಲೇ ಉತ್ತರ: ಫೈನಲ್‌ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ ಕೇವಲ 29 ಎಸೆತಗಳಲ್ಲಿ 96 ರನ್: ವೈಭವ್ ಸೂರ್ಯವಂಶಿಯ ಸ್ಫೋಟಕ ಪ್ರತಿಭೆಗೆ ಕ್ರಿಕೆಟ್ ಲೋಕ ಫಿದಾ 15 ವರ್ಷದ...
- Advertisement -spot_imgspot_img

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 2026

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 2026 ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ಮೇರಾ ಯುವ ಭಾರತ್, ಉಡುಪಿ...

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

Must read

- Advertisement -spot_imgspot_img

You might also likeRELATED
Recommended to you