7.1 C
London
Tuesday, April 23, 2024
Homeಸ್ಪೋರ್ಟ್ಸ್ಟೊರ್ಪೆಡೋಸ್ ಸ್ಪೋರ್ಟ್ಸ್ ಕಾರ್ನಿವಲ್ -2021 ಮುಂದೂಡಿಕೆ

ಟೊರ್ಪೆಡೋಸ್ ಸ್ಪೋರ್ಟ್ಸ್ ಕಾರ್ನಿವಲ್ -2021 ಮುಂದೂಡಿಕೆ

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ದೇಶದಲ್ಲಿ ಕೊರೋನಾ ಮಹಾಮಾರಿ ಮತ್ತೆ ಉಲ್ಬಣಗೊಂಡಿರುವ ಹಿನ್ನೆಲೆಯಲ್ಲಿ ಮತ್ತು ರಾಜ್ಯ ಸರಕಾರದ ಕೊವಿಡ್-19 ಮಾರ್ಗಸೂಚಿಗಳನ್ನು ಪಾಲಿಸುವ ಉದ್ದೇಶದಿಂದ ಟಾರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ (ರಿ) ಆಯೋಜಿಸಲು ಉದ್ದೇಶಿಸಿರುವ ಅತ್ಯಂತ ಪ್ರತಿಷ್ಠಿತ “ಟೊರ್ಪೆಡೋಸ್ ಸ್ಪೋರ್ಟ್ಸ್ ಕಾರ್ನಿವಲ್ -2021” ಮುಂದೂಡಲ್ಪಟ್ಟಿದೆ ಎಂದು ಕ್ಲಬ್ ನ ಪ್ರಕಟಣೆ ತಿಳಿಸಿದೆ.
ಮೇ 1 ರಿಂದ 10ರ ವರೆಗೆ ಮಂಗಳೂರು, ಸುರತ್ಕಲ್ ಮತ್ತು ಕುಂದಾಪುರದ ವಿವಿಧ ಸ್ಥಳಗಳಲ್ಲಿ “ಟೊರ್ಪೆಡೋಸ್ ಸ್ಪೋರ್ಟ್ಸ್ ಕಾರ್ನಿವಲ್-2021” ನಡೆಸಲು ತೀರ್ಮಾನಿಸಲಾಗಿತ್ತು. ಈಗಾಗಲೇ ದೇಶದ ವಿವಿಧ ಭಾಗಗಳಿಂದ ಸಾವಿರಕ್ಕೂ ಹೆಚ್ಚು ಸ್ಪರ್ಧಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದರು.  ಕ್ರೀಡಾ ಹಬ್ಬಕ್ಕೆ ಅಗತ್ಯ ಇರುವ ಎಲ್ಲಾ ಸೌಕರ್ಯಗಳನ್ನೂ ಸಜ್ಜುಗೊಳಿಸಲಾಗಿತ್ತು. ಆದರೆ ಕೊರೋನಾ ಮಹಾಮಾರಿ ಮತ್ತೆ ದೇಶಾದ್ಯಂತ ಉಲ್ಬಣಿಸಿದೆ. ಕ್ರೀಡಾಪಟುಗಳ ಆರೋಗ್ಯದ ಬಗ್ಗೆ ಕಾಳಜಿ ಮತ್ತು ಸರಕಾರದ ಕೊರೋನಾ ಮಾರ್ಗಸೂಚಿಗಳನ್ನು ಪಾಲಿಸಬೇಕಾಗಿರುವುದರಿಂದ ಕ್ರೀಡಾಹಬ್ಬವನ್ನು ಮುಂದೂಡಲಾಗಿದೆ. ಆದರೆ ಯಾರೂ ನಿರಾಸೆಗೊಳ್ಳುವ ಅಗತ್ಯವಿಲ್ಲ, ಏಕೆಂದರೆ ಅಕ್ಟೋಬರ್ 9ರಿಂದ 16ರ ವರೆಗೆ ಈ ಹಿಂದೆ ಸೂಚಿಸಿದ ಸ್ಥಳಗಳಲ್ಲೇ ಟಾರ್ಪೆಡೋಸ್ ಸ್ಪೋರ್ಟ್ಸ್ ಕಾರ್ನಿವಲ್-2021 ಎಂದಿನಂತೆ ನಡೆಯಲಿದೆ ಎಂದು ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ (ರಿ.) ಇದರ ಅಧ್ಯಕ್ಷ ಗೌತಮ್ ಶೆಟ್ಟಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದುವರೆಗೂ ಉತ್ತಮ ರೀತಿಯಲ್ಲಿ ಸಹಕರಿಸಿದ ಎಲ್ಲ ಕ್ರೀಡಾಅಭಿಮಾನಿಗಳು, ಕ್ರೀಡಾಪಟುಗಳಿಗೂ ಮತ್ತು ಪ್ರಾಯೋಜಕರಿಗೂ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ (ರಿ).ಆಭಾರಿಯಾಗಿರುತ್ತದೆ. ಮುಂದೆಯೂ ನಿಮ್ಮ ಪ್ರೋತ್ಸಾಹ ಇದೇ ರೀತಿ ಇರಲಿ. ಅಕ್ಟೋಬರ್ ನಲ್ಲಿ ಕ್ರೀಡಾ ಹಬ್ಬಕ್ಕೆ ಸಜ್ಜಾಗೋಣ, ಅಲ್ಲಿಯವರೆಗೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ಕೋವಿಡ್ ನಿಯಮ ಪಾಲಿಸಿ ಕ್ರೀಡಾಸ್ಫೂರ್ತಿ ಕಾಯ್ದುಕೊಳ್ಳಿ ಎಂದು ಗೌತಮ್  ಶೆಟ್ಟಿ ತಿಳಿಸಿದ್ದಾರೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

1 × four =