ಸ್ಪೋರ್ಟ್ಸ್ಟೊರ್ಪೆಡೋಸ್ ಸ್ಪೋರ್ಟ್ಸ್ ಕಾರ್ನಿವಲ್-ರಾಷ್ಟ್ರ ಮಟ್ಟದಲ್ಲಿ ಮಿಂಚಿದ ಶಟ್ಲರ್ಸ್ ಗಳ ನಡುವಿನ ಬ್ಯಾಡ್ಮಿಂಟನ್...

ಟೊರ್ಪೆಡೋಸ್ ಸ್ಪೋರ್ಟ್ಸ್ ಕಾರ್ನಿವಲ್-ರಾಷ್ಟ್ರ ಮಟ್ಟದಲ್ಲಿ ಮಿಂಚಿದ ಶಟ್ಲರ್ಸ್ ಗಳ ನಡುವಿನ ಬ್ಯಾಡ್ಮಿಂಟನ್ ಮಹಾ ಸಂಗ್ರಾಮ

-

- Advertisment -spot_img
ಕ್ರೀಡಾ ಕ್ಷೇತ್ರದಲ್ಲಿ ಯುವ ಕ್ರೀಡಾಪಟುಗಳಿಗೆ ಉತ್ತೇಜನವನ್ನು ನೀಡುತ್ತಾ ಹಲವಾರು ಕ್ರೀಡಾ ಚಟುವಟಿಕೆಗಳನ್ನು ನಿರಂತರವಾಗಿ ಆಯೋಜಿಸುತ್ತಾ ಹೊಸ ಮೈಲಿಗಲ್ಲನ್ನು ಸೃಷ್ಟಿಸುತ್ತಿರುವ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಇದೀಗ ಅಧ್ಯಕ್ಷರಾಗಿರುವ ಗೌತಮ್ ಶೆಟ್ಟಿ ಸಾರಥ್ಯದಲ್ಲಿ ನಡೆಯಲಿರುವ ಬ್ಯಾಡ್ಮಿಂಟನ್ ಪಂದ್ಯಾಟವನ್ನು 2021 ನೇ ನವೆಂಬರ್ 13 ಹಾಗೂ 14 ರಂದು ಮಂಗಳೂರಿನ ಯು.ಎಸ್.ಮಲ್ಯ ಒಳಾಂಗಣ ಸ್ಟೇಡಿಯಂನಲ್ಲಿ ಆಯೋಜಿಸಿದೆ.
     ಈ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ವಿಜೇತರಿಗೆ 2 ಲಕ್ಷ ನಗದು ಬಹುಮಾನ ಹಾಗೂ ದ್ವಿತೀಯ ಸ್ಥಾನ ವಿಜೇತರಿಗೆ ಒಂದು ಲಕ್ಷ ನಗದು ಬಹುಮಾನ ದೊರೆಯಲಿದೆ.

ಸ್ಪರ್ಧೆಯ ನಿಯಮಗಳು:-

  • ✓. ಲೀಗ್ ಕಮ್ ನಾಕೌಟ್
  • ✓. ಪಂದ್ಯಾಟಕ್ಕೆ ಜೆರ್ಸಿಯನ್ನು ನೀಡಲಾಗುತ್ತದೆ.
  • ✓. ಆಹಾರ ಹಾಗೂ ವಸತಿ ವ್ಯವಸ್ಥೆಯಿದೆ.
  • ✓. ಪ್ರತಿ ಹಂತದಲ್ಲೂ ನಗದು ಬಹುಮಾನವಿದೆ.
  • ✓. ಪ್ರತಿ ಪಂದ್ಯಾಟದ ವಿಜೇತರಿಗೆ ನಗದು ಬಹುಮಾನ ನೀಡಲಾಗುವುದು.

ಈ ಬ್ಯಾಡ್ಮಿಂಟನ್ ಸ್ಪರ್ಧೆ ಬೇರೆ ಬೇರೆ ವಿಭಾಗಗಳಲ್ಲಿ ನಡೆಯಲಿದ್ದು 11 ರಿಂದ 19 ವರ್ಷ ವಯೋಮಿತಿಯ ಬಾಲಕರು, 19ರಿಂದ 30 ವರ್ಷದವರ ಪುರುಷರು, 30ರಿಂದ 40 ವರ್ಷ ವಯೋಮಿತಿಯ ಪುರುಷರು ,ನಲವತ್ತರಿಂದ ಐವತ್ತು ವರ್ಷ ವಯೋಮಿತಿಯ ಪುರುಷರು ,50 ವರ್ಷ ಮೇಲ್ಪಟ್ಟ ಪುರುಷರು ಹಾಗೂ ಮಹಿಳೆಯರ ವಿಭಾಗದಲ್ಲಿ ಮಿಶ್ರ ಡಬಲ್ಸ್ ಹಾಗೂ 85 ವರ್ಷ ಮೇಲ್ಪಟ್ಟ ಜಂಬಲ್ಡ್ ಡಬಲ್ಸ್ ಹೇಗೆ ಒಟ್ಟು 9 ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ.
        ಸ್ಪರ್ಧೆಯಲ್ಲಿ ಭಾಗವಹಿಸಲು ಒಟ್ಟು 12 ತಂಡಗಳಿದ್ದು ಪ್ರತಿ ತಂಡದಲ್ಲಿ 18 ಜನ ಆಟಗಾರರಿದ್ದು ಅದರಲ್ಲಿ ನಾಲ್ಕು ಮಹಿಳಾ ಆಟಗಾರರಿರುತ್ತಾರೆ‌. ರಾಜ್ಯ,ರಾಷ್ಟ್ರ ಮಟ್ಟದ ಆಟಗಾರರು ಸೇರಿದಂತೆ ಒಟ್ಟು 250 ಕ್ಕಿಂತಲೂ ಹೆಚ್ಚು ಸ್ಪರ್ಧಿಗಳು ಭಾಗವಹಿಸುತ್ತಿರುವುದು ಸ್ಪರ್ಧೆಗೆ ಇನ್ನಷ್ಟು ಮೆರುಗು ತಂದುಕೊಡಲಿದೆ.
 ಭಾಗವಹಿಸುವ ತಂಡಗಳು ಹಾಗೂ ತಂಡದ ಮಾಲೀಕರ ಹೆಸರು:-

1)ದೀಪಕ್ ಪುಟ್ಟರಾಜ್-ಫೆದರ್ ಫೈಟರ್ಸ್

2)ಸದಾನಂದ ನಾವಡ-ಗ್ಯಾಲಕ್ಸಿ ಸರ್ವರ್ಸ್

3)ಸಂದೀಪ್ ಶೆಟ್ಟಿ-ಸುರತ್ಕಲ್ ವಾರಿಯರ್ಸ್

4)ಅನುರಂಜನ್ ರಾವ್-ಕೋಸ್ಟಲ್ ಪವರ್ ಷಟ್ಲರ್ಸ್

5)ಜಹೀರ್ ಝಕ್ರಿಯ-ಝಾರಾ ರಾಯಲ್ಸ್

6)ವಿಜಯ್ ಹೆಗ್ಡೆ-ಸವ್ಯಸಾಚಿ ಅಟ್ಯಾಕರ್ಸ್

7)ಗಣೇಶ್ ಕಾಮತ್-ಸ್ಪೋರ್ಟ್ಸ್ ಡೆನ್ ಸ್ಮ್ಯಾಶರ್ಸ್

8)ಝಕ್ರಿಯ ಬಜ್ಪೆ-ಝಾರಾ ಚಾಲೆಂಜರ್ಸ್

9)ಪ್ರತಿಭಾ ಕುಳಾಯಿ-ಕುಳಾಯಿ ಸ್ಮ್ಯಾಶರ್ಸ್

10)ಡಾ.ಸಂದೀಪ್-ಕುಂದಾಪುರ ಫೂಟ್ ವರ್ಕರ್ಸ್

11)ದೇವೇಂದ್ರ ಶೆಟ್ಟಿ-ಮಂಗಳೂರು ಸ್ಟ್ರೋಕರ್ಸ್

12)ಗೌತಮ್ ಶೆಟ್ಟಿ-ಟೊರ್ಪೆಡೋಸ್ ಟೈಟನ್ಸ್

  •ರಾಜ್ಯದ ರಾಂಕ್ ಪಟ್ಟಿಯಲ್ಲಿರುವ ದೀಪಕ್ ವೆಟರನ್ಸ್, ಎಸ್ ಕೆ ಬಿ ನಾಯ್ಡುರವರು ಸದಾನಂದ ನಾವಡ ಮಾಲೀಕತ್ವದ ಗ್ಯಾಲಕ್ಸಿ ಸರ್ವರ್ಸ್ ತಂಡವನ್ನು ಪ್ರತಿನಿಧಿಸಲಿದ್ದಾರೆ.
•ದರ್ಶನ್. ಎಸ್, ದೀಪಕ್ ಪುಟ್ಟರಾಜ್ ಹಾಗೂ ಶಾಲಿನಿ ಶೆಟ್ಟಿಯವರು ದೀಪಕ್ ಪುಟ್ಟರಾಜ್ ಮಾಲಕತ್ವದ ಫೆದರ್ ಫೈಟರ್ಸ್ ತಂಡವನ್ನು ಪ್ರತಿನಿಧಿಸಲಿದ್ದಾರೆ.
•ಕೇರಳದ ರಾಜ್ಯಮಟ್ಟದ ಆಟಗಾರರಾಗಿರುವ ರಾಯಿ ಪಿ.ಜೆಯವರು ಡಾ.ಸಂದೀಪ್ ನಾಯಕತ್ವದ ಫೂಟ್ ವರ್ಕರ್ಸ್ ತಂಡವನ್ನು ಪ್ರತಿನಿಧಿಸಲಿದ್ದಾರೆ.
• ರಾಜ್ಯದ ರ್ಯಾಂಕ್ ಪಟ್ಟಿಯಲ್ಲಿರುವ ಸಂಕೇತ್.ಎಸ್ ಹಾಗೂ ವಿಘ್ನೇಶ್ ಭಟ್ ರವರು ಸಂದೀಪ್ ಶೆಟ್ಟಿ ಮಾಲಕತ್ವದ ಸುರತ್ಕಲ್ ವಾರಿಯರ್ಸ್ ತಂಡವನ್ನು ಪ್ರತಿನಿಧಿಸಲಿದ್ದಾರೆ.
•ರಾಜ್ಯ ಮಟ್ಟದಲ್ಲಿ ವಿಜೇತರಾಗಿರುವ ಕಿರಣ್ ಕುಮಾರ್ ರವರು ಜಹೀರ್ ಝಕ್ರೀಯಾ ಮಾಲಕತ್ವದ ಝರಾ ರಾಯಲ್ಸ್ ತಂಡವನ್ನು ಪ್ರತಿನಿಧಿಸಲಿದ್ದಾರೆ.
•ರಾಜ್ಯ ಮಟ್ಟದಲ್ಲಿ ವಿಜೇತರಾಗಿರುವ ಶಮಂತ್ ರಾವ್,ಆತ್ರೀಯಾ.ಎಸ್ ಪ್ರಭು.ಎನ್.ರೇಣುಕಾ ಪ್ರಸಾದ್ ರವರು ಟೋರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರಾಗಿರುವ ಗೌತಮ್ ಶೆಟ್ಟಿ ಮಾಲಕತ್ವದ ಟೋರ್ಪೆಡೋಸ್ ಟೈಟಾನ್ಸ್ ತಂಡವನ್ನು ಪ್ರತಿನಿಧಿಸಲಿದ್ದಾರೆ.
• ರಾಜ್ಯ ಮಟ್ಟದಲ್ಲಿ ವಿಜೇತರಾಗಿರುವ  ಉಮೇಶ್ ರಾಜ್ ಹಾಗೂ ಪರಿಮಳ್ ಪ್ರತಿಭಾ ಕುಳಾಯಿ ಮಾಲಕತ್ವದ ಕುಳಾಯಿ ಸ್ಮ್ಯಾಶರ್ಸ್ ತಂಡವನ್ನು ಪ್ರತನಿಧಿಸಲಿದ್ದಾರೆ.
•ರಾಜ್ಯ ಮಟ್ಟದ ಆಟಗಾರರಾಗಿರುವ ಅಭಿಷೇಕ್ ಗೌಡ ಮತ್ತು ಚಿರಾಗ್ ಗೌಡರವರು ವಿಜಯ್ ಹೆಗ್ಡೆ ಮಾಲಕತ್ವದ ಸವ್ಯಸಾಚಿ ಅಟ್ಯಾಕರ್ಸ್ ತಂಡವನ್ನು ಪ್ರತಿನಿಧಿಸಲಿದ್ದಾರೆ.
•ರಾಜ್ಯ ರ್ಯಾಂಕಿಂಗ್ ಪಟ್ಟಿಯಲ್ಲಿರುವ ವಿನಯ್.ಡಿ.ಆರ್ ,ಸಂಕೇತ್ ವೈದ್ಯ ಮತ್ತು ಸಂಜಯ್ ಆರ್.ಎಂ ರವರು ಝಕ್ರೀಯಾ ಬಜ್ಪೆ ಮಾಲಕತ್ವದ ಝರಾ ಚಾಲೆಂಜರ್ಸ್ ತಂಡವನ್ನು ಪ್ರತಿನಿಧಿಸಲಿದ್ದಾರೆ.
•ರಾಜ್ಯ ಮಟ್ಟದಲ್ಲಿ ವಿಜೇತರಾಗಿರುವ ಸಚಿನ್ ಜೈಸನ್,ರಿಯಾಝ್ ಕೊಪ್ಪರವರು ದೇವೇಂದ್ರ ಶೆಟ್ಟಿ ಮಾಲಕತ್ವದ ಮಂಗಳೂರು ಸ್ಟ್ರೋಕರ್ಸ್ ತಂಡವನ್ನು ಪ್ರತಿನಿಧಿಸಲಿದ್ದಾರೆ.
•ಮಿಕ್ಸ್ ಡ್ ಡಬಲ್ಸ್ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ ವಿಜೇತರಾಗಿರುವ ಅಬಿ ಅಮುಧಾನ್ ಹಾಗೂ ಅಂಜಲಿ ದಿಲಿಶ್ ಹಾಗೂ ಮಂಗಳೂರಿನ ಅತ್ಯುನ್ನತ ಆಟಗಾರರಾಗಿರುವ ರಾಯೀಝ್.ಪಿ.ಸಿ ಮತ್ತು ಮಹೇಶ್ ಪ್ರಭು ರವರು ಗಣೇಶ್ ಕಾಮತ್ ನಾಯಕತ್ವದ ಸ್ಪೋರ್ಟ್ಸ್ ಡೆನ್ ಸ್ಮ್ಯಾಷರ್ಸ್ ತಂಡವನ್ನು ಪ್ರತಿನಿಧಿಸಲಿದ್ದಾರೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

six + fourteen =

Latest news

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ – ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ

  ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ - ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತ...

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...
- Advertisement -spot_imgspot_img

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

Must read

- Advertisement -spot_imgspot_img

You might also likeRELATED
Recommended to you