8.7 C
London
Tuesday, April 16, 2024
Homeಕ್ರಿಕೆಟ್ಉಡುಪಿಯಲ್ಲಿ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಛೇರ್ಮನ್ ಗೌತಮ್ ಶೆಟ್ಟಿಯವರಿಗೆ ಸನ್ಮಾನ

ಉಡುಪಿಯಲ್ಲಿ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಛೇರ್ಮನ್ ಗೌತಮ್ ಶೆಟ್ಟಿಯವರಿಗೆ ಸನ್ಮಾನ

Date:

Related stories

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...

RCB ಯನ್ನು ಸುಟ್ಟು ಹಾಕಿದ ಮಯಾಂಕ್ ಯಾದವ್ ಅವರ ವೇಗ

RCB ವಿರುದ್ಧ 3/14 ರ ಅದ್ಭುತ ಬೌಲಿಂಗ್ ಅಂಕಿಅಂಶಗಳಿಗಾಗಿ  ಮಯಾಂಕ್ ಯಾದವ್...
spot_imgspot_img
ಉಡುಪಿ-ಕೊಡಂಕೂರು ಕೋಟಿಯಾನ್ ವಾಲಿಬಾಲ್ ಅಕಾಡೆಮಿ ಇವರ ಪ್ರಾಯೋಜಕತ್ವದಲ್ಲಿ ಹಾಗೂ ನಾಗರಿಕ ಹಿತರಕ್ಷಣಾ ವೇದಿಕೆ(ರಿ)ಕೊಡಂಕೂರು ಇವರ ಸಹಕಾರದೊಂದಿಗೆ ನಡೆದ ಮುಕ್ತ ಪುರುಷರ ಹಾಗೂ ಮಹಿಳೆಯರ 3 ಜನ ಆಟಗಾರರ ವಾಲಿಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾದ ಗೌತಮ್ ಶೆಟ್ಟಿ ಇವರನ್ನು ಸನ್ಮಾನಿಸಲಾಯಿತು.
ಸನ್ಮಾನ‌ ಸ್ವೀಕರಿಸಿ ಮಾತನಾಡಿದ ಗೌತಮ್ ಶೆಟ್ಟಿಯವರು
“ಕ್ರೀಡೆಯಲ್ಲಿ ನಿರಂತರವಾಗಿ ತೊಡಗಿಸಿಗೊಳ್ಳುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ,ಸೋಲು ಗೆಲುವನ್ನು  ಸಮಾನವಾಗಿ ಸ್ವೀಕರಿಸಲು ಬದ್ಧರಾಗುತ್ತೇವೆ ಹಾಗೂ ಜೀವನ ಕೌಶಲ್ಯ ವೃದ್ಧಿಯಾಗುತ್ತದೆ.” ಎಂದರು.
ಶ್ರೀ ಶಿರಡಿ ಸಾಯಿಬಾಬಾ ಮಂದಿರದ ಆಡಳಿತ ಮೊಕ್ತೇಸರ ಶ್ರೀ‌.ಕೆ.ದಿವಾಕರ ಶೆಟ್ಟಿ ಪಂದ್ಯಾಟವನ್ನು ಉದ್ಘಾಟಿಸಿದರು.ಕೊಡಂಕೂರು ನಾಗರಿಕ
ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ರಘುನಾಥ್ ಮಾಬಿಯಾನ್ ಸಭೆಯ ಅಧ್ಯಕ್ಷತೆಯನ್ನು ವಹಿಸಿದರು.ಮುಖ್ಯ ಅತಿಥಿಗಳಾಗಿ ಕಾರ್ಕಳ ಯಂಗ್ ಸ್ಟಾರ್ ವಾಲಿಬಾಲ್ ಕ್ಲಬ್ ಅಧ್ಯಕ್ಷ ಪ್ರವೀಣ್.ಕೆ.ಕೋಟ್ಯಾನ್,ರಾಷ್ಟ್ರ ಮಟ್ಟದ ಆಟಗಾರ ಸುಮನ್ ಕುಮಾರ್,ರಾಜ್ಯ ಮಟ್ಟದ ಆಟಗಾರ ರಾಜೇಶ್ ಹೆಗ್ಡೆ,ಮಲ್ಟಿ ನ್ಯಾಷನಲ್ ಕಂಪೆನಿ ಸೀನಿಯರ್ ಮೆನೇಜರ್ ಮಿನೊಟಿ ಆಗ್ನೇಸ್ ಬ್ಲಾಜೋ,ಕೊಡಂಕೂರು ನಾಗರಿಕ ಹಿತರಕ್ಷಣಾ ವೇದಿಕೆ ಮಾಜಿ ಅಧ್ಯಕ್ಷರಾದ ಅಶೋಕ್ ಪೂಜಾರಿ ಕೊಡಂಕೂರು,ಭಾಸ್ಕರ್.ಸಿ.ಕೋಟ್ಯಾನ್ ಮತ್ತು ಹಳೆ ವಿದ್ಯಾರ್ಥಿಗಳು,ಆಟಗಾರರು ಉಪಸ್ಥಿತರಿದ್ದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

two × three =