ಕ್ರಿಕೆಟ್ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ 2 ನೇ ಆವೃತ್ತಿಯ ರಶ್ಮಿ ಶೆಟ್ಟಿ...

ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ 2 ನೇ ಆವೃತ್ತಿಯ ರಶ್ಮಿ ಶೆಟ್ಟಿ ಸ್ಮಾರಕ ಅಖಿಲ ಭಾರತ ಫಿಡೆ ರೇಟೆಡ್ ರ್‍ಯಾಪಿಡ್ ಚೆಸ್ ಪಂದ್ಯಾವಳಿ

-

- Advertisment -spot_img
ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ,ಗೌತಮ್ ಶೆಟ್ಟಿ ಯವರ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಅಕ್ಟೋಬರ್   15 ಮತ್ತು 16 ರಂದು 2 ನೇ ಆವೃತ್ತಿಯ ರಶ್ಮಿ ಶೆಟ್ಟಿ ಸ್ಮಾರಕ ಅಖಿಲ ಭಾರತ ಫಿಡೆ ರೇಟೆಡ್ ಚೆಸ್ ಪಂದ್ಯಾವಳಿ ಕುಂದಾಪುರದ ನಾರಾಯಣಗುರು ಎ.ಸಿ ಹಾಲ್ ನಲ್ಲಿ ಜರುಗಲಿದೆ.
15 ಶನಿವಾರ ಬೆಳಿಗ್ಗೆ 9.30 ಗೆ ಸರಿಯಾಗಿ ನಡೆಯಲಿರುವ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಗಳಾಗಿ ಶ್ರೀಕಾಂತ್ ಡಿ.ವೈ.ಎಸ್‌.ಪಿ ಕುಂದಾಪುರ,ವೀಣಾ ಭಾಸ್ಕರ್ ಮೆಂಡನ್ ಕುಂದಾಪುರ ಪುರಸಭೆ ಅಧ್ಯಕ್ಷೆ,ರಂಜನ್ ರಮೇಶ್ ನಗರಕಟ್ಟೆ ಸಿ.ಇ.ಓ ಡಿಜಿಫ್ಲಿಕ್ ಇನ್ಷುರೆನ್ಸ್ ಮತ್ತು ರಂಜನ್ ನಗರಕಟ್ಟೆ ಸಕ್ಸಸ್ ಅಕಾಡೆಮಿ ಸಂಸ್ಥಾಪಕರು,ಸತೀಶ್ ಆಚಾರ್ಯ ಅಂತರಾಷ್ಟ್ರೀಯ ಕಾರ್ಟೂನಿಸ್ಟ್,ವಿಜಯ್.ಎಸ್.ಪೂಜಾರಿ ಕುಂದಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು,ರಾಜೇಶ್ ಕಾವೇರಿ ಬಿ.ಜೆ‌.ಪಿ ಮುಖಂಡರು ಮತ್ತು ಅಮಿತ್ ಕುಮಾರ್ ಶೆಟ್ಟಿ ಉಡುಪಿ ಚೆಸ್ ಅಸೋಸಿಯೇಷನ್ ಅಧ್ಯಕ್ಷರು ಭಾಗವಹಿಸಲಿದ್ದಾರೆ.
ಆದಿತ್ಯವಾರ 16 ರಂದು ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ,ಗೋಪಿ ಕೃಷ್ಣ ವೃತ್ತ ನಿರೀಕ್ಷಕರು ಕುಂದಾಪುರ, ರಂಜನ್ ರಮೇಶ್ ನಗರಕಟ್ಟೆ ಸಿ.ಇ.ಓ ಡಿಜಿಫ್ಲಿಕ್ ಇನ್ಶುರೆನ್ಸ್ ಮತ್ತು ರಂಜನ್ ನಗರಕಟ್ಟೆ ಸಕ್ಸಸ್ ಅಕಾಡೆಮಿ ಸಂಸ್ಥಾಪಕರು,ಅಶೋಕ್ ಬೀಜಾಡಿ ಅಧ್ಯಕ್ಷರು ನಾರಾಯಣಗುರು ಸಂಘ ಕುಂದಾಪುರ, ಮೋಹನದಾಸ್ ಶೆಣೈ ಮಾಜಿ ಅಧ್ಯಕ್ಷರು ಪುರಸಭೆ ಕುಂದಾಪುರ,ಗಣೇಶ್ ಕಾಮತ್ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಪ್ರೋತ್ಸಾಹಕರು,ವಿಜಯ್ ಹೆಗ್ಡೆ ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಗೌರವಾಧ್ಯಕ್ಷರು,ಕೆ.ಸಿ ರಾಜೇಶ್ ಉಡುಪಿ ಜಿಲ್ಲಾ ಹೋಮ್ ಗಾರ್ಡ್ ನ 2 ನೇ ಕಮಾಂಡರ್ ಮತ್ತು ಕಿಶೋರ್ ಕಲಾಕ್ಷೇತ್ರ ಕುಂದಾಪುರ ಇವರು ಭಾಗವಹಿಸಲಿದ್ದಾರೆ.
ಈಗಾಗಲೇ ಎರಡು ದಿನಗಳ ಕಾಲ ನಡೆಯಲಿರುವ ಚೆಸ್ ಪಂದ್ಯಾವಳಿಯಲ್ಲಿ ದೇಶದ ನಾನಾ ಭಾಗಗಳಿಂದ 305 ಕ್ಕೂ ಹೆಚ್ಚಿನ ಖ್ಯಾತನಾಮ‌ ಆಟಗಾರರು ನೋಂದಣಿ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು.
ಅಂತರಾಷ್ಟ್ರೀಯ ಮಾಸ್ಟರ್ ಗಳಾದ ಶರಣ್ ರಾವ್ ಮಂಗಳೂರು, ರತ್ನಾಕರ್ ಕೇರಳ,ಚಕ್ರವರ್ತಿ ರೆಡ್ಡಿ ತೆಲಂಗಾಣ,ಶ್ರೀನಾಥ್ ರಾವ್ ಛತ್ತೀಸ್ಗಢ, ಮಹಿಳಾ ಅಂತರಾಷ್ಟ್ರೀಯ ಆಟಗಾರ್ತಿ ಕರ್ನಾಟಕದ ಇಶಾ ಶರ್ಮಾ ಸಹಿತ 125 ಅಂತರಾಷ್ಟ್ರೀಯ ಫಿಡೆರೇಟೆಡ್ ಆಟಗಾರರು ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ
ಹಾಗೂ ಪ್ರಮುಖ ತೀರ್ಪುಗಾರರಾಗಿ ಚೀಫ್ ಅರ್ಬಿಟರ್ ವಸಂತ್ ಬಿ.ಹೆಚ್ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾದ ಗೌತಮ್ ಶೆಟ್ಟಿ ತಿಳಿಸಿದ್ದಾರೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

2 × one =

Latest news

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್ ಭಾರತೀಯ ಕ್ರಿಕೆಟ್‌ನ ಅತ್ಯುತ್ತಮ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಯುವರಾಜ್ ಸಿಂಗ್, ದೊಡ್ಡ ವೇದಿಕೆಗಳಲ್ಲಿ ತಂಡಕ್ಕೆ ಜಯ ತಂದುಕೊಡುವ ಶಕ್ತಿಶಾಲಿ ಪ್ರದರ್ಶನಗಳಿಂದ...

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು ಯಲಹಂಕ ತಾಲ್ಲೂಕಿನ ಕುದುರೆಗೆರೆ ಪ್ರದೇಶದಲ್ಲಿ ಕೆ.ಎಂ.ಶ್ರೀನಿವಾಸ್ ರವರ ಸ್ಮರಣಾರ್ಥ ಹಾಗೂ ಕೆ.ಎಂ. ಸುಬ್ರಮಣಿ ರವರ...

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಸ್ಥೆ, ಕೋಟ ಸಾಲಿಗ್ರಾಮದ ಆಯೋಜನೆಯಲ್ಲಿ ನಡೆಯುವ ಪ್ರತಿಷ್ಠಿತ ಶಿವ ಬಿಗ್...

ಕೆಚ್ಚಿನ.. ಕಿಚ್ಚಿನ ಯುವರಾಜನ ಕಥೆ..!

ಕೆಚ್ಚಿನ.. ಕಿಚ್ಚಿನ ಯುವರಾಜನ ಕಥೆ..! ಪಂಜಾಬ್’ನ ಲೂಧಿಯಾನದ ಕೆನೆಚ್ ಎಂಬ ಹಳ್ಳಿ. ಅಲ್ಲೊಬ್ಬರು ಒಂದೊಮ್ಮೆ ಭಾರತ ಪರ ಆಡಿದ್ದ ಮಾಜಿ ಕ್ರಿಕೆಟಿಗ.. ಅವರಿಗೊಬ್ಬ ಮಗ.. ತನ್ನ ಕ್ರಿಕೆಟ್...
- Advertisement -spot_imgspot_img

ಅರಬ್ಬರ ನಾಡಿನಲ್ಲಿ ಕುಂದಗನ್ನಡಿಗರ ಸಮಾಗಮ

ಅರಬ್ಬರ ನಾಡಿನಲ್ಲಿ ಕುಂದಗನ್ನಡಿಗರ ಸಮಾಗಮ ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ಯುಎಇ ನಲ್ಲಿ ನೆಲೆಸಿರುವ ಕುಂದಗನ್ನಡಿಗರಿಗಾಗಿ ವಿಹಾರ ಕೂಟ ಮತ್ತು ಗ್ರಾಮೀಣ ಆಟೋಟ ಸ್ಪರ್ದೆಗಳು...

ಕಂದಾಯೋತ್ಸವ 2025 : ಕಂದಾಯ ಇಲಾಖೆಯ ಸಾಂಸ್ಕೃತಿಕ – ಕ್ರೀಡಾ ಸಂಭ್ರಮ

ಕಂದಾಯೋತ್ಸವ 2025 : ಕಂದಾಯ ಇಲಾಖೆಯ ಸಾಂಸ್ಕೃತಿಕ – ಕ್ರೀಡಾ ಸಂಭ್ರಮ ಶಿವಮೊಗ್ಗ ಜಿಲ್ಲೆಯ ಕಂದಾಯ ಇಲಾಖೆಯ ವತಿಯಿಂದ **ಕಂದಾಯೋತ್ಸವ – 2025** ನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ....

Must read

- Advertisement -spot_imgspot_img

You might also likeRELATED
Recommended to you