Categories
ಅಥ್ಲೆಟಿಕ್ಸ್

ಕರ್ನಾಟಕ ಕ್ರೀಡಾಲೋಕದಲ್ಲೇ ಐತಿಹಾಸಿಕ ಕ್ರೀಡಾಕೂಟ- ಟೊರ್ಪೆಡೋಸ್ ಸ್ಪೋರ್ಟ್ಸ್ ಫೆಸ್ಟಿವಲ್-2021

ಕ್ರೀಡಾ ಲೋಕದಲ್ಲಿ ತೂಫಾನಿ ಮೈಲುಗಲ್ಲನ್ನು ಸ್ಥಾಪಿಸಿದ,ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ಹಳೆಯಂಗಡಿ(ರಿ)ಇದರ ಸಂಸ್ಥಾಪಕರು,ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು,ಸಮಾಜರತ್ನ ಗೌತಮ್ ಶೆಟ್ಟಿ ಯವರ ಸಾರಥ್ಯದಲ್ಲಿ ಮೇ 1 ರಿಂದ 10 ದಿನಗಳ ಕಾಲ ಹೊನಲು ಬೆಳಕಿನ ಅದ್ಧೂರಿಯ ಕ್ರೀಡಾಜಾತ್ರೆ “ಟೊರ್ಪೆಡೋಸ್ ಸ್ಪೋರ್ಟ್ಸ್ ಫೆಸ್ಟಿವಲ್-2021” ಹಮ್ಮಿಕೊಳ್ಳಲಾಗಿದೆ.
ಉಡುಪಿ-ಮಂಗಳೂರು ಉಭಯ ಜಿಲ್ಲೆಗಳ 4 ವಿವಿಧ ಸ್ಥಳಗಳಲ್ಲಿ ನಡೆಯುವ ಈ ಕ್ರೀಡಾ ಜಾತ್ರೆಯಲ್ಲಿ ಲೆದರ್ ಬಾಲ್,ಟೆನ್ನಿಸ್ಬಾಲ್,ಬಾಕ್ಸ್ ಕ್ರಿಕೆಟ್,ಫುಟ್ಬಾಲ್, ಷಟಲ್ ಬ್ಯಾಡ್ಮಿಂಟನ್, ಟೇಬಲ್ ಟೆನ್ನಿಸ್,ಚೆಸ್ ಪಂದ್ಯಾಟಗಳು ನಡೆಯಲಿದ್ದು,ಗ್ರಾಮೀಣ ಮಟ್ಟದಿಂದ ಅಂತರಾಷ್ಟ್ರೀಯ ಮಟ್ಟವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷರಾದ ಶ್ರೀ ಗೌತಮ್ ಶೆಟ್ಟಿ ಕುಂದಾಪುರ ಸ್ಪೋರ್ಟ್ಸ್ ಕನ್ನಡಕ್ಕೆ ತಿಳಿಸಿದ್ದಾರೆ.

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

3 + eight =