ಕ್ರಿಕೆಟ್ಚಕ್ರವರ್ತಿ ಗೆಳೆಯರ ಬಳಗ ತುಮಕೂರು-ಸರಕಾರಿ ನೌಕರರು ಹಾಗೂ ಸೇವಾರಂಗದ ವಿಶಿಷ್ಟ ಟೆನ್ನಿಸ್...

ಚಕ್ರವರ್ತಿ ಗೆಳೆಯರ ಬಳಗ ತುಮಕೂರು-ಸರಕಾರಿ ನೌಕರರು ಹಾಗೂ ಸೇವಾರಂಗದ ವಿಶಿಷ್ಟ ಟೆನ್ನಿಸ್ ಕ್ರಿಕೆಟ್ ಪಂದ್ಯಾಕೂಟ

-

- Advertisment -spot_img

ಕಳೆದ 20 ವರ್ಷಗಳಿಂದ ಶ್ರೀ ಪ್ರಕಾಶ್ ಟಿ.ಸಿ ತುಮಕೂರು ನೇತೃತ್ವದಲ್ಲಿ ಟೆನ್ನಿಸ್ ಕ್ರಿಕೆಟ್ ನಲ್ಲಿ ಪಾದರಸದಂತಹ ಚಟುವಟಿಕೆಗಳನ್ನು ನಡೆಸಿಕೊಂಡು ಬಂದಿರುವ ಸಂಸ್ಥೆ “ಚಕ್ರವರ್ತಿ ಗೆಳೆಯರ ಬಳಗ” ತುಮಕೂರು. ಹಲವಾರುಪಂದ್ಯಾಕೂಟಗಳನ್ನು ಜಯಿಸಿ, ರಾಜ್ಯ, ರಾಷ್ಟ್ರೀಯ ಮಟ್ಟದ ವಿವಿಧ ಕ್ರೀಡಾಕೂಟಗಳು, ರಕ್ತದಾನ ಶಿಬಿರ ಹೀಗೆ ಸಾಮಾಜಿಕ ಕಾರ್ಯಕ್ರಮಗಳನ್ನು ಸಂಘಟಿಸಿ ರಾಜ್ಯಾದ್ಯಂತ ತನ್ನ ಛಾಪನ್ನು ಮೂಡಿಸಿದೆ.

20 ನೇ ವಾರ್ಷಿಕೋತ್ಸವದ ಸವಿನೆನಪಿಗಾಗಿ ಕರ್ನಾಟಕ ರಾಜ್ಯ ಟೆನ್ನಿಸ್ ಕ್ರಿಕೆಟ್ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಸಮಾಜದ ಎಲ್ಲಾ ಸರಕಾರಿ ನೌಕರರು ಹಾಗೂ ಸೇವಾರಂಗದವರನ್ನು ಒಗ್ಗೂಡಿಸಿ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಕೂಟ ವನ್ನು ದಿನಾಂಕ 29ರಂದು ತುಮಕೂರಿ‌ನ ಸರಕಾರಿ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಸಂಘಟಿಸಲಿದೆ.

ಗಡಿನಾಡ(ಪಾವಗಡ)ಶಿಕ್ಷಕರ ತಂಡ, ಜಿಲಾಧಿಕಾರಿಗಳ ತಂಡ, ಪತ್ರಕರ್ತರ ತಂಡ, ಬೆಸ್ಕಾಂ(ಕೆ.ಇ.ಬಿ)ತಂಡ, ವೈದ್ಯರ ತಂಡ,ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳ ತಂಡ,ತುಮಕೂರು ಹಾಲು ಒಕ್ಕೂಟ ತಂಡ,ಶಿಕ್ಷಣ ಇಲಾಖೆ ತಂಡ,ವಕೀಲರ ತಂಡ,ತುಮಕೂರು ಮಹಾನಗರ ಪಾಲಿಕೆ ತಂಡ ಹೀಗೆ 10 ಸಂಸ್ಥೆಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದು ಪ್ರತಿಷ್ಟಿತ ಪ್ರಶಸ್ತಿಗಾಗಿ ಸೆಣಸಾಡಲಿದೆ.

ಸಮಾರೋಪ ಸಮಾರಂಭದಲ್ಲಿ ತುಮಕೂರಿನ M.L.A  ಜ್ಯೋತಿ ಗಣೇಶ್,ಕೆ.ಪಿ‌.ಸಿ‌.ಸಿ ಸದಸ್ಯರಾದ ಕೃಷ್ಣಮೂರ್ತಿ ಪಿ.ಎನ್,ತುಮಕೂರಿನ ಜಿಲ್ಲಾಧಿಕಾರಿ,ಹಿರಿಯ ಪೋಲಿಸ್ ವರಿಷ್ಠರು ಭಾಗವಹಿಸಲಿದ್ದಾರೆ. ಹಾಗೂ ಹಲವು ವರ್ಷಗಳಿಂದ ತಂಡದಲ್ಲಿ ಸೇವೆ ಸಲ್ಲಿಸಿದ ಹಿರಿಯ ಆಟಗಾರರ ಸನ್ಮಾನ‌ ಕಾರ್ಯಕ್ರಮ ನಡೆಯಲಿದೆ.

ಈ ಪಂದ್ಯಾಕೂಟದ ನೇರ ಪ್ರಸಾರವನ್ನು ಗಿರೀಶ್ ರಾವ್ ನೇತೃತ್ವದಲ್ಲಿ ಕ್ರಿಕ್ ಸೇ ಯೂ ಟ್ಯೂಬ್ ಚಾನೆಲ್ ನಲ್ಲಿ ಪ್ರಸಾರವಾಗಲಿದೆಯೆಂದು ನಿನ್ನೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಂಸ್ಥಾಪಕಾಧ್ಯಕ್ಷ ಪ್ರಕಾಶ್ ಟಿ.ಸಿ. ತಿಳಿಸಿದರು.

ಈ ಸಂದರ್ಭ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ನರಸಿಂಹರಾಜು, ಕೆ.ಶ್ರೀಧರ್, ಧನಿಯ ಕುಮಾರ್,ಚೇತನ್,ಮಂಜು ಹಾಗೂ ಭಾಗವಹಿಸುವ 10 ತಂಡಗಳ ಕಪ್ತಾನರು ಹಾಗೂ ಚಕ್ರವರ್ತಿ ಗೆಳೆಯರ ಬಳಗದ ಸದಸ್ಯರು ಉಪಸ್ಥಿತರಿದ್ದರು.

-ಆರ್.ಕೆ‌.ಆಚಾರ್ಯ ಕೋಟ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

nineteen − 2 =

Latest news

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್ ಭಾರತೀಯ ಕ್ರಿಕೆಟ್‌ನ ಅತ್ಯುತ್ತಮ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಯುವರಾಜ್ ಸಿಂಗ್, ದೊಡ್ಡ ವೇದಿಕೆಗಳಲ್ಲಿ ತಂಡಕ್ಕೆ ಜಯ ತಂದುಕೊಡುವ ಶಕ್ತಿಶಾಲಿ ಪ್ರದರ್ಶನಗಳಿಂದ...

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು ಯಲಹಂಕ ತಾಲ್ಲೂಕಿನ ಕುದುರೆಗೆರೆ ಪ್ರದೇಶದಲ್ಲಿ ಕೆ.ಎಂ.ಶ್ರೀನಿವಾಸ್ ರವರ ಸ್ಮರಣಾರ್ಥ ಹಾಗೂ ಕೆ.ಎಂ. ಸುಬ್ರಮಣಿ ರವರ...

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಸ್ಥೆ, ಕೋಟ ಸಾಲಿಗ್ರಾಮದ ಆಯೋಜನೆಯಲ್ಲಿ ನಡೆಯುವ ಪ್ರತಿಷ್ಠಿತ ಶಿವ ಬಿಗ್...

ಕೆಚ್ಚಿನ.. ಕಿಚ್ಚಿನ ಯುವರಾಜನ ಕಥೆ..!

ಕೆಚ್ಚಿನ.. ಕಿಚ್ಚಿನ ಯುವರಾಜನ ಕಥೆ..! ಪಂಜಾಬ್’ನ ಲೂಧಿಯಾನದ ಕೆನೆಚ್ ಎಂಬ ಹಳ್ಳಿ. ಅಲ್ಲೊಬ್ಬರು ಒಂದೊಮ್ಮೆ ಭಾರತ ಪರ ಆಡಿದ್ದ ಮಾಜಿ ಕ್ರಿಕೆಟಿಗ.. ಅವರಿಗೊಬ್ಬ ಮಗ.. ತನ್ನ ಕ್ರಿಕೆಟ್...
- Advertisement -spot_imgspot_img

ಅರಬ್ಬರ ನಾಡಿನಲ್ಲಿ ಕುಂದಗನ್ನಡಿಗರ ಸಮಾಗಮ

ಅರಬ್ಬರ ನಾಡಿನಲ್ಲಿ ಕುಂದಗನ್ನಡಿಗರ ಸಮಾಗಮ ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ಯುಎಇ ನಲ್ಲಿ ನೆಲೆಸಿರುವ ಕುಂದಗನ್ನಡಿಗರಿಗಾಗಿ ವಿಹಾರ ಕೂಟ ಮತ್ತು ಗ್ರಾಮೀಣ ಆಟೋಟ ಸ್ಪರ್ದೆಗಳು...

ಕಂದಾಯೋತ್ಸವ 2025 : ಕಂದಾಯ ಇಲಾಖೆಯ ಸಾಂಸ್ಕೃತಿಕ – ಕ್ರೀಡಾ ಸಂಭ್ರಮ

ಕಂದಾಯೋತ್ಸವ 2025 : ಕಂದಾಯ ಇಲಾಖೆಯ ಸಾಂಸ್ಕೃತಿಕ – ಕ್ರೀಡಾ ಸಂಭ್ರಮ ಶಿವಮೊಗ್ಗ ಜಿಲ್ಲೆಯ ಕಂದಾಯ ಇಲಾಖೆಯ ವತಿಯಿಂದ **ಕಂದಾಯೋತ್ಸವ – 2025** ನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ....

Must read

- Advertisement -spot_imgspot_img

You might also likeRELATED
Recommended to you