ಕ್ರಿಕೆಟ್ತುಮಕೂರು-ಯುವರತ್ನ ಅಪ್ಪು ಸ್ಮರಣಾರ್ಥ-ತುಮಕೂರು ಚಾಂಪಿಯನ್ಸ್ ಲೀಗ್

ತುಮಕೂರು-ಯುವರತ್ನ ಅಪ್ಪು ಸ್ಮರಣಾರ್ಥ-ತುಮಕೂರು ಚಾಂಪಿಯನ್ಸ್ ಲೀಗ್

-

- Advertisment -spot_img
ಮೂರು ದಶಕಗಳ ಹಿರಿಯ ಸಂಸ್ಥೆ ರಾಕ್ ಯೂತ್ ಕ್ಲಬ್ ತುಮಕೂರು ಇವರ ವತಿಯಿಂದ,ರಾಕ್ ರಾಜು,ರಾಕ್ ರವಿ,ಅಜ್ಜು,ಮುಜ್ಜು ಇವರೆಲ್ಲರ ಸಾರಥ್ಯದಲ್ಲಿ ಮೂರನೇ ಬಾರಿಗೆ ತುಮಕೂರು ಚಾಂಪಿಯನ್ಸ್ ಲೀಗ್-ಟಿ‌‌.ಸಿ.ಎಲ್-3 ಪಂದ್ಯಾವಳಿ ಆಯೋಜಿಸಲಾಗಿದೆ.
ಡಿಸೆಂಬರ್ 11 ಮತ್ತು 12 ಎರಡು ದಿನಗಳ ಕಾಲ ತುಮಕೂರಿನ ಸರಕಾರಿ ಹೈಸ್ಕೂಲ್ ಫೀಲ್ಡ್ ಮೈದಾನದಲ್ಲಿ,ಹೊಸದಾಗಿ ನಿರ್ಮಾಣಗೊಂಡ ಸಿಮೆಂಟ್ ಪಿಚ್ ನಲ್ಲಿ ಯಶಸ್ವಿ ಮೂರನೇ ಬಾರಿಗೆ ಲೀಗ್ ಕಮ್ ನಾಕೌಟ್ ಮಾದರಿಯ ತುಮಕೂರು ಚಾಂಪಿಯನ್ಸ್ ಲೀಗ್ ಈ ಪಂದ್ಯಾವಳಿ ಅಗಲಿದ ಚಿತ್ರನಟ,ಯುವರತ್ನ ಅಪ್ಪು ಸ್ಮರಣಾರ್ಥವಾಗಿ ಆಯೋಜಿಸಲಾಗಿದೆ.
ಪ್ರಥಮ ಪ್ರಶಸ್ತಿ ರೂಪದಲ್ಲಿ 1 ಲಕ್ಷ ನಗದು,ದ್ವಿತೀಯ ಪ್ರಶಸ್ತಿ 50 ಸಹಸ್ರ ನಗದಿನ ಸಹಿತ ಆಕರ್ಷಕ ಪಾರಿತೋಷಕಗಳನ್ನು ನೀಡಲಾಗುತ್ತಿದೆ.ರಾಜ್ಯದ ಪ್ರತಿಷ್ಠಿತ ತಂಡಗಳ ಪ್ರಸಿದ್ಧ ಆಟಗಾರರು ಐಕಾನ್ ರೂಪದಲ್ಲಿ 8 ತಂಡಗಳನ್ನು ಪ್ರತಿನಿಧಿಸಲಿದ್ದು,ಇತ್ತೀಚೆಗಷ್ಟೇ ನಡೆದ ಆಕ್ಷನ್ ಪ್ರಕ್ರಿಯೆಯಲ್ಲಿ 8 ತಂಡಗಳನ್ನಾಗಿ ವಿಭಾಗಿಸಲಾಗಿದ್ದು ತಂಡಗಳ ವಿವರ ಈ ಕೆಳಗಿನಂತಿದೆ.
1) ಕರ್ನಾಟಕ ರಾಕ್ಸ್
2) ಬೆಳಗುಂಬಾ ರಾಕ್ಸ್
3) ಚಕ್ರವರ್ತಿ
4)ಎಲ್.ಎಲ್.ಸಿ.ಸಿ‌
5)ಭಾರತ್ 11
6)ಆರ್.ಆರ್‌.ಫ್ರೆಂಡ್ಸ್ ಹೆಗ್ಗೆರೆ
7)ಶ್ರೀ ತುಮಕೂರು
8)ನಮೋ ಭಾರತ್
ವೀಕ್ಷಕ ವಿವರಣೆಕಾರರಾಗಿ ಶಿವನಾರಾಯಣ್ ಐತಾಳ್ ಕೋಟ ಹಾಗೂ ರಾಘು ಮಟಪಾಡಿ ಭಾಗವಹಿಸಲಿದ್ದು,
ಪಂದ್ಯಾವಳಿಯ ನೇರ ಪ್ರಸಾರವನ್ನು S.R.B ಯೂ ಟ್ಯೂಬ್ ಚಾನೆಲ್ ನಲ್ಲಿ ಬಿತ್ತರಗೊಳ್ಳಲಿದೆ.ಸ್ಪೋರ್ಟ್ಸ್ ಕನ್ನಡ ಮೀಡಿಯಾ ಪಾರ್ಟ್ನರ್ ರೂಪದಲ್ಲಿ ಕಾರ್ಯ ನಿರ್ವಹಿಸಲಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

one × 4 =

Latest news

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್ ಭಾರತೀಯ ಕ್ರಿಕೆಟ್‌ನ ಅತ್ಯುತ್ತಮ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಯುವರಾಜ್ ಸಿಂಗ್, ದೊಡ್ಡ ವೇದಿಕೆಗಳಲ್ಲಿ ತಂಡಕ್ಕೆ ಜಯ ತಂದುಕೊಡುವ ಶಕ್ತಿಶಾಲಿ ಪ್ರದರ್ಶನಗಳಿಂದ...

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು ಯಲಹಂಕ ತಾಲ್ಲೂಕಿನ ಕುದುರೆಗೆರೆ ಪ್ರದೇಶದಲ್ಲಿ ಕೆ.ಎಂ.ಶ್ರೀನಿವಾಸ್ ರವರ ಸ್ಮರಣಾರ್ಥ ಹಾಗೂ ಕೆ.ಎಂ. ಸುಬ್ರಮಣಿ ರವರ...

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಸ್ಥೆ, ಕೋಟ ಸಾಲಿಗ್ರಾಮದ ಆಯೋಜನೆಯಲ್ಲಿ ನಡೆಯುವ ಪ್ರತಿಷ್ಠಿತ ಶಿವ ಬಿಗ್...

ಕೆಚ್ಚಿನ.. ಕಿಚ್ಚಿನ ಯುವರಾಜನ ಕಥೆ..!

ಕೆಚ್ಚಿನ.. ಕಿಚ್ಚಿನ ಯುವರಾಜನ ಕಥೆ..! ಪಂಜಾಬ್’ನ ಲೂಧಿಯಾನದ ಕೆನೆಚ್ ಎಂಬ ಹಳ್ಳಿ. ಅಲ್ಲೊಬ್ಬರು ಒಂದೊಮ್ಮೆ ಭಾರತ ಪರ ಆಡಿದ್ದ ಮಾಜಿ ಕ್ರಿಕೆಟಿಗ.. ಅವರಿಗೊಬ್ಬ ಮಗ.. ತನ್ನ ಕ್ರಿಕೆಟ್...
- Advertisement -spot_imgspot_img

ಅರಬ್ಬರ ನಾಡಿನಲ್ಲಿ ಕುಂದಗನ್ನಡಿಗರ ಸಮಾಗಮ

ಅರಬ್ಬರ ನಾಡಿನಲ್ಲಿ ಕುಂದಗನ್ನಡಿಗರ ಸಮಾಗಮ ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ಯುಎಇ ನಲ್ಲಿ ನೆಲೆಸಿರುವ ಕುಂದಗನ್ನಡಿಗರಿಗಾಗಿ ವಿಹಾರ ಕೂಟ ಮತ್ತು ಗ್ರಾಮೀಣ ಆಟೋಟ ಸ್ಪರ್ದೆಗಳು...

ಕಂದಾಯೋತ್ಸವ 2025 : ಕಂದಾಯ ಇಲಾಖೆಯ ಸಾಂಸ್ಕೃತಿಕ – ಕ್ರೀಡಾ ಸಂಭ್ರಮ

ಕಂದಾಯೋತ್ಸವ 2025 : ಕಂದಾಯ ಇಲಾಖೆಯ ಸಾಂಸ್ಕೃತಿಕ – ಕ್ರೀಡಾ ಸಂಭ್ರಮ ಶಿವಮೊಗ್ಗ ಜಿಲ್ಲೆಯ ಕಂದಾಯ ಇಲಾಖೆಯ ವತಿಯಿಂದ **ಕಂದಾಯೋತ್ಸವ – 2025** ನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ....

Must read

- Advertisement -spot_imgspot_img

You might also likeRELATED
Recommended to you