ಕ್ರಿಕೆಟ್ಯು.ಎ.ಇ-ಹೊನ್ನಾಳ ಪ್ರೀಮಿಯರ್ ಲೀಗ್-2021(ಸೀಸನ್ 4)ಜನವರಿ 1 ರಂದು.

ಯು.ಎ.ಇ-ಹೊನ್ನಾಳ ಪ್ರೀಮಿಯರ್ ಲೀಗ್-2021(ಸೀಸನ್ 4)ಜನವರಿ 1 ರಂದು.

-

- Advertisment -spot_img

ಹೊನ್ನಾಳ ಉರ್ದು ಸ್ಕೂಲ್ ಹಳೆವಿದ್ಯಾರ್ಥಿಗಳ ಅಸೋಸಿಯೇಷನ್ ಯು.ಎ.ಇ ಇವರ ಆಶ್ರಯದಲ್ಲಿ ಜನವರಿ 1 ರಂದು ಅಬುಹೈಲ್ ಮೆಟ್ರೋ ಸ್ಟೇಷನ್ ಸಮೀಪದ ಗೋಲ್ಟರಿ ಕ್ರಿಕೆಟ್ ಅಕಾಡೆಮಿಯಲ್ಲಿ ಹೊನ್ನಾಳ ಪ್ರೀಮಿಯರ್ ಲೀಗ್-2021 ಸೀಸನ್ 4 ಪಂದ್ಯಾವಳಿ ಆಯೋಜಿಸಲಾಗಿದೆ.

ಈ ಪಂದ್ಯಾವಳಿಯ ಪ್ರಥಮ ಪ್ರಶಸ್ತಿ ವಿಜೇತ ತಂಡ 888 ದಿರ್ಹಮ್,ದ್ವಿತೀಯ ಸ್ಥಾನಿ 666 ದಿರ್ಹಮ್ ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದಾರೆ.
ಪಂದ್ಯಾಟದ ನಿಯಮಗಳು ಈ ಕೆಳಗಿನಂತಿದೆ.
1)ಕೇವಲ 5 ಸ್ಪಾನ್ಸರ್ಸ್ ಗಳ 5 ತಂಡಗಳಿಗೆ ಅವಕಾಶವಿರುತ್ತದೆ.
2)ಲೀಗ್ ಮಾದರಿಯಲ್ಲಿ ಪಂದ್ಯಾಟ ನಡೆಯಲಿದೆ.
3)5 ಓವರ್ ಗಳ ಪಂದ್ಯವಾಗಿದ್ದು,ಹವಾಮಾನ ಅನುಕೂಲದ ಪ್ರಕಾರ ಸಮಯ ಹಾಗೂ ಓವರ್ ನಿರ್ಧರಿತವಾಗಿರುತ್ತದೆ.
4)ನಿರ್ಣಾಯಕರ ತೀರ್ಮಾನವೇ ಅಂತಿಮವಾಗಿದ್ದು,ಥರ್ಡ್ ಅಂಪಾಯರ್ ಸೌಲಭ್ಯ ಇರುವುದಿಲ್ಲ.
5)ಒಬ್ಬ ಹಿರಿಯ ಆಟಗಾರರನ್ನು ಆರಂಭಿಕ ಆಟಗಾರರಾಗಿ ಕಣಕ್ಕಿಳಿಸತಕ್ಕದ್ದು.
6)8 ಜನ ಆಟಗಾರ ಫೀಲ್ಡಿಂಗ್ ಹಾಗೂ 9 ಜನ ಆಟಗಾರರು ಬ್ಯಾಟಿಂಗ್ ಮಾಡಬಹುದಾಗಿದೆ.
7)ಎಲ್ಲಾ ತಂಡದ 9 ಆಟಗಾರರು ಪಂದ್ಯಗಳಲ್ಲೂ ಆಡತಕ್ಕದ್ದು.ಬದಲಿ ಆಟಗಾರರು ರೊಟೇಶನ್ ಆಧಾರದಲ್ಲಿ ಆಡಬಹುದಾಗಿದೆ.
8)ಎಲ್ಲಾ ತಂಡದ ಆಟಗಾರರು ಯಾವ ಸಮಯದಲ್ಲೂ ತಯಾರಿರತಕ್ಕದ್ದು.
9)ಪಂದ್ಯ ಟೈ ಆದಲ್ಲಿ ಸೂಪರ್ ಓವರ್ ನಡೆಸಲಾಗುವುದು ಹಾಗೂ 3 ಬ್ಯಾಟ್ಸ್‌ಮನ್ ಅವಕಾಶವಿರುತ್ತದೆ.
10)ಪ್ರತಿ ಸ್ಪಾನ್ಸರ್ಸ್ ಶುಲ್ಕ- 300 ದಿರ್ಹಮ್
11)ಭಾಗವಹಿಸುವ ಪ್ರತಿಯೊಬ್ಬ ಆಟಗಾರರ ಶುಲ್ಕ 25 ದಿರ್ಹಮ್
12)ಹೆಚ್ಚಿನ ಮಾಹಿತಿಗಾಗಿ ರೆಹಮತ್,ಫಿರೋಜ್ ಹಾಗೂ ಜಾಕಿರ್ ರವರನ್ನು ಸಂಪರ್ಕಿಸಬಹುದು.
13)ಪ್ರವೇಶ ಶುಲ್ಕವನ್ನು ರೆಹಮತ್ ಹಾಗೂ ಫಿರೋಜ್ ರವರ ಬಳಿ ನೀಡಿ ಸಹಕರಿಸಬೇಕಾಗಿ ವಿನಂತಿ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

16 − fifteen =

Latest news

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್ ಭಾರತೀಯ ಕ್ರಿಕೆಟ್‌ನ ಅತ್ಯುತ್ತಮ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಯುವರಾಜ್ ಸಿಂಗ್, ದೊಡ್ಡ ವೇದಿಕೆಗಳಲ್ಲಿ ತಂಡಕ್ಕೆ ಜಯ ತಂದುಕೊಡುವ ಶಕ್ತಿಶಾಲಿ ಪ್ರದರ್ಶನಗಳಿಂದ...

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು ಯಲಹಂಕ ತಾಲ್ಲೂಕಿನ ಕುದುರೆಗೆರೆ ಪ್ರದೇಶದಲ್ಲಿ ಕೆ.ಎಂ.ಶ್ರೀನಿವಾಸ್ ರವರ ಸ್ಮರಣಾರ್ಥ ಹಾಗೂ ಕೆ.ಎಂ. ಸುಬ್ರಮಣಿ ರವರ...

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಸ್ಥೆ, ಕೋಟ ಸಾಲಿಗ್ರಾಮದ ಆಯೋಜನೆಯಲ್ಲಿ ನಡೆಯುವ ಪ್ರತಿಷ್ಠಿತ ಶಿವ ಬಿಗ್...

ಕೆಚ್ಚಿನ.. ಕಿಚ್ಚಿನ ಯುವರಾಜನ ಕಥೆ..!

ಕೆಚ್ಚಿನ.. ಕಿಚ್ಚಿನ ಯುವರಾಜನ ಕಥೆ..! ಪಂಜಾಬ್’ನ ಲೂಧಿಯಾನದ ಕೆನೆಚ್ ಎಂಬ ಹಳ್ಳಿ. ಅಲ್ಲೊಬ್ಬರು ಒಂದೊಮ್ಮೆ ಭಾರತ ಪರ ಆಡಿದ್ದ ಮಾಜಿ ಕ್ರಿಕೆಟಿಗ.. ಅವರಿಗೊಬ್ಬ ಮಗ.. ತನ್ನ ಕ್ರಿಕೆಟ್...
- Advertisement -spot_imgspot_img

ಅರಬ್ಬರ ನಾಡಿನಲ್ಲಿ ಕುಂದಗನ್ನಡಿಗರ ಸಮಾಗಮ

ಅರಬ್ಬರ ನಾಡಿನಲ್ಲಿ ಕುಂದಗನ್ನಡಿಗರ ಸಮಾಗಮ ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ಯುಎಇ ನಲ್ಲಿ ನೆಲೆಸಿರುವ ಕುಂದಗನ್ನಡಿಗರಿಗಾಗಿ ವಿಹಾರ ಕೂಟ ಮತ್ತು ಗ್ರಾಮೀಣ ಆಟೋಟ ಸ್ಪರ್ದೆಗಳು...

ಕಂದಾಯೋತ್ಸವ 2025 : ಕಂದಾಯ ಇಲಾಖೆಯ ಸಾಂಸ್ಕೃತಿಕ – ಕ್ರೀಡಾ ಸಂಭ್ರಮ

ಕಂದಾಯೋತ್ಸವ 2025 : ಕಂದಾಯ ಇಲಾಖೆಯ ಸಾಂಸ್ಕೃತಿಕ – ಕ್ರೀಡಾ ಸಂಭ್ರಮ ಶಿವಮೊಗ್ಗ ಜಿಲ್ಲೆಯ ಕಂದಾಯ ಇಲಾಖೆಯ ವತಿಯಿಂದ **ಕಂದಾಯೋತ್ಸವ – 2025** ನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ....

Must read

- Advertisement -spot_imgspot_img

You might also likeRELATED
Recommended to you