9 C
London
Thursday, March 28, 2024
Homeಕ್ರಿಕೆಟ್ಕಲ್ಯಾಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಉಡುಪಿಯ ವೀಕ್ಷಕ ವಿವರಣೆಕಾರ ಪ್ರಶಾಂತ್.ಕೆ‌.ಎಸ್ ಅಂಬಲಪಾಡಿ ಆಯ್ಕೆ

ಕಲ್ಯಾಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಉಡುಪಿಯ ವೀಕ್ಷಕ ವಿವರಣೆಕಾರ ಪ್ರಶಾಂತ್.ಕೆ‌.ಎಸ್ ಅಂಬಲಪಾಡಿ ಆಯ್ಕೆ

Date:

Related stories

ಕರ್ನಾಟಕದ ಮೊದಲ ರಣಜಿ ಟ್ರೋಫಿ ಗೆಲುವಿಗೆ 50 ವರ್ಷ..

50 ವರ್ಷಗಳ ಹಿಂದೆ ಚರಿತ್ರೆ ಸೃಷ್ಠಿಸಿದ್ದ ಎರಾಪಳ್ಳಿ ಪ್ರಸನ್ನ & ಟೀಮ್..! 1958ರಿಂದ...

ಫ್ರೆಂಡ್ಸ್ ಕಪ್-ಸೋತ ತಂಡಗಳಿಗೂ ಇಲ್ಲಿದೆ ಆಶಾದಾಯಕ ಅಂಶ-ಆರಂಭದಲ್ಲಿ ಪಂದ್ಯ ಸೋತರೂ ಪ್ರಶಸ್ತಿ ಗೆಲ್ಲುವ ಅವಕಾಶ…!!!

ಬೆಂಗಳೂರು-ಫ್ರೆಂಡ್ಸ್ ಕಪ್ 2ನೇ ಆವೃತ್ತಿಯ ಕ್ರಿಕೆಟ್​ ​ಹಬ್ಬಕ್ಕೆ ಕ್ಷಣಗಣನೆ ಶುರುವಾಗಿದೆ. ಪೀಣ್ಯ...

ರಾಜ್ಯದ ಅತ್ಯಂತ ಜನಪ್ರಿಯ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಫ್ರೆಂಡ್ಸ್ ಕಪ್ 2024 ಗೆ ಫಿಧಾ ಆಗಲಿದೆ ಕ್ರಿಕೆಟ್ ಲೋಕ

ಟೆನಿಸ್ ಬಾಲ್ ಕ್ರಿಕೆಟ್ ಕರ್ನಾಟಕದಲ್ಲಿ ಅತ್ಯಂತ ಜನಪ್ರಿಯ ಕ್ರೀಡೆಗಳಲ್ಲಿ ಒಂದಾಗಿದೆ, ಮತ್ತು ...

ಮಂಗಳೂರು: ಪದುವ ಶಿಕ್ಷಣ ಸಂಸ್ಥೆ ಮತ್ತು ಜುಗಲ್ ಸ್ಪೋರ್ಟ್ಸ್ ಕ್ಲಬ್ (ರಿ) ನ ಲೆದರ್ ಬಾಲ್ ಕ್ರಿಕೆಟ್ ಕೋಚಿಂಗ್ ಕ್ಯಾಂಪ್

ಮಂಗಳೂರು: : ಪದುವ ಎಜುಕೇಷನಲ್ ಇನ್ಸ್ಟಿಟ್ಯೂಷನ್ಸ್  ವತಿಯಿಂದ  ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್...
spot_imgspot_img
ಕ್ರೀಡಾ ನಿರೂಪಕರಾಗಿ ,ಟೆನಿಸ್ ಬಾಲ್ ಕ್ರಿಕೆಟ್ ಕ್ಷೇತ್ರದಲ್ಲಿ ಅನುಪಮ ಸೇವೆ ಸಲ್ಲಿಸಿದ್ದಕ್ಕಾಗಿ ಉಡುಪಿಯ ಪ್ರಶಾಂತ್.ಕೆ.ಎಸ್. ಅಂಬಲಪಾಡಿ ಇವರಿಗೆ ರಾಯಚೂರಿನ “ಕಲಾ ಸಂಕುಲ ಸಂಸ್ಥೆ” ವತಿಯಿಂದ ಕೊಡಲ್ಪಡುವ ಪ್ರತಿಷ್ಟಿತ “ಕಲ್ಯಾಣ ಕರ್ನಾಟಕ ರಾಜ್ಯೋತ್ಸವ” ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ‌.ದಿನಾಂಕ 28/11/2020 ರಂದು ರಾಯಚೂರು ನಗರದಲ್ಲಿ ನಡೆಯಲಿರುವ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.
ಉಡುಪಿ ಅಂಬಲಪಾಡಿಯ ಪ್ರಶಾಂತ್.ಕೆ‌‌.ಎಸ್ ಇವರು
ಪೊಡವಿಗೊಡೆಯ ಶ್ರೀ ಕೃಷ್ಣ ನ ನಾಡಾದ ಉಡುಪಿ ಜಿಲ್ಲೆಯ ಅಂಬಲಪಾಡಿಯಲ್ಲಿ ಜನಿಸಿರುವ ಇವರು ಬ್ಯಾಂಕ್ ಆಫ್ ಇಂಡಿಯಾ ರಾಷ್ಟ್ರೀಕೃತ ಬ್ಯಾಂಕೊಂದರಲ್ಲಿ ಉದ್ಯೋಗಿಯಾಗಿದ್ದುಕೊಂಡು,
ರಾಷ್ಟ್ರ,ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾಟಗಳ ವೀಕ್ಷಕ ವಿವರಣೆ ಜೊತೆ ನಾಟಕ,ಯಕ್ಷಗಾನ ಹಾಗೂ ನೃತ್ಯ ರಂಗದಲ್ಲಿ ಹಾಗೂ ಸಮಾಜಮುಖಿ ಕಾರ್ಯಗಳಲ್ಲಿ ತನ್ನನ್ನು ತೊಡಗಿಸಿಕೊಂಡವರು.
2000 ನೇ ರಾಜ್ಯದ ಪ್ರತಿಷ್ಟಿತ ತಂಡ “ಪಡುಬಿದ್ರಿ ಫ್ರೆಂಡ್ಸ್”
ಸಂಘಟಿಸಿದ್ದ ರಾಜ್ಯಮಟ್ಟದ ಪಂದ್ಯಾಟದಿಂದ ವೀಕ್ಷಕ ವಿವರಣೆಯ ಇವರ ಪಯಣ ಇಂದು ರಾಜ್ಯದ ಅತಿ ಹೆಚ್ಚಿನ ಜಿಲ್ಲೆಗಳಲ್ಲಿ ಸಹಸ್ರಾರು ಕ್ರೀಡಾ ಪ್ರೇಮಿಗಳನ್ನು ತಲುಪಿ “ವಾಯ್ಸ್ ಆಫ್ ಕರ್ನಾಟಕ”ಎಂದೇ ಪ್ರಖ್ಯಾತರಾಗಿದ್ದಾರೆ‌.ಸುಮಾರು 600 ಕ್ಕೂ ಮಿಕ್ಕಿದ ಪಂದ್ಯಾಕೂಟಗಳಲ್ಲಿ ವೀಕ್ಷಕ ವಿವರಣೆ ನೀಡಿದ ಕೀರ್ತಿ ಇವರದ್ದು.ಪ್ರಸ್ತುತ ರಾಜ್ಯದ ಬಹು ಬೇಡಿಕೆಯ ವೀಕ್ಷಕ ವಿವರಣೆಕಾರರಲ್ಲಿ ಪ್ರಶಾಂತ್ ಗುರುತಿಸಿಕೊಳ್ಳುತ್ತಾರೆ.
ಇದಲ್ಲದೆ ನಾಟಕ ಕಲಾವಿದರಾಗಿ,ಸುಮಾರು 75 ಕ್ಕೂ ಹೆಚ್ಚಿನ ನಾಟಕದಲ್ಲಿ ಭಾಗವಹಿಸಿದ್ದು ಜೊತೆಗೆ ಯಕ್ಷಗಾನ ರಂಗದಲ್ಲೂ ನೈಪುಣ್ಯತೆಯನ್ನು ಸಾಧಿಸಿದವರು.
ಕಾಲಿಗೆ ಗೆಜ್ಜೆ ಕಟ್ಟಿ ಯಕ್ಷಗಾನದ ತಾಳ ಮೇಳಕ್ಕೆ ತನ್ನ ಪ್ರತಿಭೆಯನ್ನು ಓರೆ ಹಚ್ಚಿರುವ ಶ್ರೀ ಲಕ್ಷ್ಮೀ ಜನಾರ್ಧನ ಯಕ್ಷಗಾನ ಕಲಾಮಂಡಳಿಯಂತಹ ಹವ್ಯಾಸಿ ಸಂಘಗಳ ಜೊತೆಗೆ ಹಲವಾರು ಸಂಘ ಸಂಸ್ಥೆಗಳಲ್ಲಿ ಗೆಜ್ಜೆ ಕಟ್ಟಿದವರು.ಜೊತೆಗೆ ನಾಟ್ಯ ರಂಗದಲ್ಲೂ ತಮ್ಮನ್ನು ತೊಡಗಿಸಿಕೊಂಡಿರುತ್ತಾರೆ.
ಇವರ ಸಾಧನೆಯನ್ನು ಗುರುತಿಸಿ 2012_13 ನೇ ಸಾಲಿನಲ್ಲಿ ವಿಶ್ವ ಕ್ರೀಡಾಂಗಣ ಮತ್ತು ಸ್ಪೋರ್ಟ್ಸ್ ಫೌಂಡೇಶನ್ ಬೆಂಗಳೂರು ಇವರು ಜಂಟಿಯಾಗಿ ಕೊಡಮಾಡಿದ “ಕ್ರೀಡಾರತ್ನ” ಪ್ರಶಸ್ತಿಯನ್ನು ಬೆಂಗಳೂರಿನ ಟೌನ್ ಹಾಲ್ ನಲ್ಲಿ ಅನಿವಾಸಿ ಕನ್ನಡಿಗ ಅಬುಧಾಬಿಯ
ಉದ್ಯಮಿ ಡಾ.ಬಿ.ಆರ್.ಶೆಟ್ಟಿಯವರ ಮುಖಾಂತರ ಪಡೆದಿರುವುದು ಅವರ ಪ್ರತಿಭೆಗೆ ಹಿಡಿದ ಕೈಗನ್ನಡಿ.
ಇತ್ತೀಚೆಗಷ್ಟೇ ಅಂಬಲಪಾಡಿಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ ಕಾರ್ಯಕ್ರಮದಲ್ಲಿ ಹುಟ್ಟೂರ ಸನ್ಮಾನಕ್ಕೂ ಪಾತ್ರರಾಗಿದ್ದರು.
ಅಂಬಲಪಾಡಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಿದಲ್ಲದೇ,ಹಲವಾರು ಸಂಘ ಸಂಸ್ಥೆಗಳಲ್ಲಿ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುತ್ತಾರೆ.
ಈ ವರೆಗೆ 18 ಬಾರಿ ರಕ್ತದಾನ ನೀಡಿದ್ದಾರೆ.ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುತ್ತಾ ಬ್ಯಾಂಕ್ ನಲ್ಲಿ ಉದ್ಯೋಗ ಕೊಡಿಸಿದ್ದಾರೆ.ಇವರು ಸುಮಾರು 500 ಕ್ಕೂ ಮಿಕ್ಕಿರುವ ನೆನಪಿನ ಕಾಣಿಕೆಗಳು,ಸ್ಮರಣಿಕೆಗಳು,ಹಾರ ತುರಾಯಿಗಳು ಮನೆಯಲ್ಲಿ ಎಲ್ಲರನ್ನು ಆಕರ್ಷಿಸದಿರದು.
ಇತಿಹಾಸ ಸೃಷ್ಟಿಸಿದ್ದ ಧಾರಾವಾಹಿ “ಗುಡ್ಡದ ಭೂತ” ದಲ್ಲಿ ಪ್ರಕಾಶ್ ರೈ  ಅವರ ಜೊತೆಗೆ ಕಿರುಪಾತ್ರದಲ್ಲಿ ನಟಿಸಿರುವುದು ಹಾಗೂ ರಕ್ತದಾನದಂತಹ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿ ಕೊಂಡಿದ್ದು ,ಇತ್ತೀಚೆಗೆ ಉಡುಪಿಯ ಸ್ಥಳೀಯ
ಟಿ.ವಿ ಚಾನೆಲ್ ಪ್ರೈಮ್ ಟಿ.ವಿ ಯ ಮನದ ಮಾತು ಕಾರ್ಯ ಕ್ರಮದಲ್ಲಿ ಸಂದರ್ಶಿಸಿರುವದು ಇವರ ಬಹುಮುಖ ಪ್ರತಿಭೆಗೆ ಸಂದ ಗೌರವ…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Subscribe

- Never miss a story with notifications

- Gain full access to our premium content

- Browse free from up to 5 devices at once

Latest stories

LEAVE A REPLY

Please enter your comment!
Please enter your name here

two × 3 =