ಕ್ರಿಕೆಟ್ಕಲ್ಯಾಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಉಡುಪಿಯ ವೀಕ್ಷಕ ವಿವರಣೆಕಾರ ಪ್ರಶಾಂತ್.ಕೆ‌.ಎಸ್ ಅಂಬಲಪಾಡಿ...

ಕಲ್ಯಾಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಉಡುಪಿಯ ವೀಕ್ಷಕ ವಿವರಣೆಕಾರ ಪ್ರಶಾಂತ್.ಕೆ‌.ಎಸ್ ಅಂಬಲಪಾಡಿ ಆಯ್ಕೆ

-

- Advertisment -spot_img
ಕ್ರೀಡಾ ನಿರೂಪಕರಾಗಿ ,ಟೆನಿಸ್ ಬಾಲ್ ಕ್ರಿಕೆಟ್ ಕ್ಷೇತ್ರದಲ್ಲಿ ಅನುಪಮ ಸೇವೆ ಸಲ್ಲಿಸಿದ್ದಕ್ಕಾಗಿ ಉಡುಪಿಯ ಪ್ರಶಾಂತ್.ಕೆ.ಎಸ್. ಅಂಬಲಪಾಡಿ ಇವರಿಗೆ ರಾಯಚೂರಿನ “ಕಲಾ ಸಂಕುಲ ಸಂಸ್ಥೆ” ವತಿಯಿಂದ ಕೊಡಲ್ಪಡುವ ಪ್ರತಿಷ್ಟಿತ “ಕಲ್ಯಾಣ ಕರ್ನಾಟಕ ರಾಜ್ಯೋತ್ಸವ” ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ‌.ದಿನಾಂಕ 28/11/2020 ರಂದು ರಾಯಚೂರು ನಗರದಲ್ಲಿ ನಡೆಯಲಿರುವ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.
ಉಡುಪಿ ಅಂಬಲಪಾಡಿಯ ಪ್ರಶಾಂತ್.ಕೆ‌‌.ಎಸ್ ಇವರು
ಪೊಡವಿಗೊಡೆಯ ಶ್ರೀ ಕೃಷ್ಣ ನ ನಾಡಾದ ಉಡುಪಿ ಜಿಲ್ಲೆಯ ಅಂಬಲಪಾಡಿಯಲ್ಲಿ ಜನಿಸಿರುವ ಇವರು ಬ್ಯಾಂಕ್ ಆಫ್ ಇಂಡಿಯಾ ರಾಷ್ಟ್ರೀಕೃತ ಬ್ಯಾಂಕೊಂದರಲ್ಲಿ ಉದ್ಯೋಗಿಯಾಗಿದ್ದುಕೊಂಡು,
ರಾಷ್ಟ್ರ,ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾಟಗಳ ವೀಕ್ಷಕ ವಿವರಣೆ ಜೊತೆ ನಾಟಕ,ಯಕ್ಷಗಾನ ಹಾಗೂ ನೃತ್ಯ ರಂಗದಲ್ಲಿ ಹಾಗೂ ಸಮಾಜಮುಖಿ ಕಾರ್ಯಗಳಲ್ಲಿ ತನ್ನನ್ನು ತೊಡಗಿಸಿಕೊಂಡವರು.
2000 ನೇ ರಾಜ್ಯದ ಪ್ರತಿಷ್ಟಿತ ತಂಡ “ಪಡುಬಿದ್ರಿ ಫ್ರೆಂಡ್ಸ್”
ಸಂಘಟಿಸಿದ್ದ ರಾಜ್ಯಮಟ್ಟದ ಪಂದ್ಯಾಟದಿಂದ ವೀಕ್ಷಕ ವಿವರಣೆಯ ಇವರ ಪಯಣ ಇಂದು ರಾಜ್ಯದ ಅತಿ ಹೆಚ್ಚಿನ ಜಿಲ್ಲೆಗಳಲ್ಲಿ ಸಹಸ್ರಾರು ಕ್ರೀಡಾ ಪ್ರೇಮಿಗಳನ್ನು ತಲುಪಿ “ವಾಯ್ಸ್ ಆಫ್ ಕರ್ನಾಟಕ”ಎಂದೇ ಪ್ರಖ್ಯಾತರಾಗಿದ್ದಾರೆ‌.ಸುಮಾರು 600 ಕ್ಕೂ ಮಿಕ್ಕಿದ ಪಂದ್ಯಾಕೂಟಗಳಲ್ಲಿ ವೀಕ್ಷಕ ವಿವರಣೆ ನೀಡಿದ ಕೀರ್ತಿ ಇವರದ್ದು.ಪ್ರಸ್ತುತ ರಾಜ್ಯದ ಬಹು ಬೇಡಿಕೆಯ ವೀಕ್ಷಕ ವಿವರಣೆಕಾರರಲ್ಲಿ ಪ್ರಶಾಂತ್ ಗುರುತಿಸಿಕೊಳ್ಳುತ್ತಾರೆ.
ಇದಲ್ಲದೆ ನಾಟಕ ಕಲಾವಿದರಾಗಿ,ಸುಮಾರು 75 ಕ್ಕೂ ಹೆಚ್ಚಿನ ನಾಟಕದಲ್ಲಿ ಭಾಗವಹಿಸಿದ್ದು ಜೊತೆಗೆ ಯಕ್ಷಗಾನ ರಂಗದಲ್ಲೂ ನೈಪುಣ್ಯತೆಯನ್ನು ಸಾಧಿಸಿದವರು.
ಕಾಲಿಗೆ ಗೆಜ್ಜೆ ಕಟ್ಟಿ ಯಕ್ಷಗಾನದ ತಾಳ ಮೇಳಕ್ಕೆ ತನ್ನ ಪ್ರತಿಭೆಯನ್ನು ಓರೆ ಹಚ್ಚಿರುವ ಶ್ರೀ ಲಕ್ಷ್ಮೀ ಜನಾರ್ಧನ ಯಕ್ಷಗಾನ ಕಲಾಮಂಡಳಿಯಂತಹ ಹವ್ಯಾಸಿ ಸಂಘಗಳ ಜೊತೆಗೆ ಹಲವಾರು ಸಂಘ ಸಂಸ್ಥೆಗಳಲ್ಲಿ ಗೆಜ್ಜೆ ಕಟ್ಟಿದವರು.ಜೊತೆಗೆ ನಾಟ್ಯ ರಂಗದಲ್ಲೂ ತಮ್ಮನ್ನು ತೊಡಗಿಸಿಕೊಂಡಿರುತ್ತಾರೆ.
ಇವರ ಸಾಧನೆಯನ್ನು ಗುರುತಿಸಿ 2012_13 ನೇ ಸಾಲಿನಲ್ಲಿ ವಿಶ್ವ ಕ್ರೀಡಾಂಗಣ ಮತ್ತು ಸ್ಪೋರ್ಟ್ಸ್ ಫೌಂಡೇಶನ್ ಬೆಂಗಳೂರು ಇವರು ಜಂಟಿಯಾಗಿ ಕೊಡಮಾಡಿದ “ಕ್ರೀಡಾರತ್ನ” ಪ್ರಶಸ್ತಿಯನ್ನು ಬೆಂಗಳೂರಿನ ಟೌನ್ ಹಾಲ್ ನಲ್ಲಿ ಅನಿವಾಸಿ ಕನ್ನಡಿಗ ಅಬುಧಾಬಿಯ
ಉದ್ಯಮಿ ಡಾ.ಬಿ.ಆರ್.ಶೆಟ್ಟಿಯವರ ಮುಖಾಂತರ ಪಡೆದಿರುವುದು ಅವರ ಪ್ರತಿಭೆಗೆ ಹಿಡಿದ ಕೈಗನ್ನಡಿ.
ಇತ್ತೀಚೆಗಷ್ಟೇ ಅಂಬಲಪಾಡಿಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆ ಕಾರ್ಯಕ್ರಮದಲ್ಲಿ ಹುಟ್ಟೂರ ಸನ್ಮಾನಕ್ಕೂ ಪಾತ್ರರಾಗಿದ್ದರು.
ಅಂಬಲಪಾಡಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಿದಲ್ಲದೇ,ಹಲವಾರು ಸಂಘ ಸಂಸ್ಥೆಗಳಲ್ಲಿ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುತ್ತಾರೆ.
ಈ ವರೆಗೆ 18 ಬಾರಿ ರಕ್ತದಾನ ನೀಡಿದ್ದಾರೆ.ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುತ್ತಾ ಬ್ಯಾಂಕ್ ನಲ್ಲಿ ಉದ್ಯೋಗ ಕೊಡಿಸಿದ್ದಾರೆ.ಇವರು ಸುಮಾರು 500 ಕ್ಕೂ ಮಿಕ್ಕಿರುವ ನೆನಪಿನ ಕಾಣಿಕೆಗಳು,ಸ್ಮರಣಿಕೆಗಳು,ಹಾರ ತುರಾಯಿಗಳು ಮನೆಯಲ್ಲಿ ಎಲ್ಲರನ್ನು ಆಕರ್ಷಿಸದಿರದು.
ಇತಿಹಾಸ ಸೃಷ್ಟಿಸಿದ್ದ ಧಾರಾವಾಹಿ “ಗುಡ್ಡದ ಭೂತ” ದಲ್ಲಿ ಪ್ರಕಾಶ್ ರೈ  ಅವರ ಜೊತೆಗೆ ಕಿರುಪಾತ್ರದಲ್ಲಿ ನಟಿಸಿರುವುದು ಹಾಗೂ ರಕ್ತದಾನದಂತಹ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿ ಕೊಂಡಿದ್ದು ,ಇತ್ತೀಚೆಗೆ ಉಡುಪಿಯ ಸ್ಥಳೀಯ
ಟಿ.ವಿ ಚಾನೆಲ್ ಪ್ರೈಮ್ ಟಿ.ವಿ ಯ ಮನದ ಮಾತು ಕಾರ್ಯ ಕ್ರಮದಲ್ಲಿ ಸಂದರ್ಶಿಸಿರುವದು ಇವರ ಬಹುಮುಖ ಪ್ರತಿಭೆಗೆ ಸಂದ ಗೌರವ…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

15 + 1 =

Latest news

ಅಕ್ಷಯ ಟಿ 20 ಕಪ್-2026 ಪಂದ್ಯಾಟಕ್ಕೆ ಅದ್ಧೂರಿ ಚಾಲನೆ

  ಅಕ್ಷಯ ಟಿ 20 ಕಪ್-2026 ಪಂದ್ಯಾಟಕ್ಕೆ ಅದ್ಧೂರಿ ಚಾಲನೆ ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ ವತಿಯಿಂದ, ಉಡುಪಿ ಕ್ರಿಕೆಟ್ ಅಸೋಸಿಯೇಷನ್ ಉಡುಪಿ ಹಾಗೂ ಸನ್‌ರೈಸ್ ಕ್ರಿಕೆಟ್ ಅಕಾಡೆಮಿ...

ಉಡುಪಿ ಜಿಲ್ಲಾಮಟ್ಟದ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಟೂರ್ನಿ – 2026

ಉಡುಪಿ ಜಿಲ್ಲಾಮಟ್ಟದ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಟೂರ್ನಿ – 2026 ಉಡುಪಿ: ಅಕ್ಷಯ ಕ್ರಿಕೆಟ್ ಅಕಾಡೆಮಿ, ಉಡುಪಿ ಮತ್ತು ಸನ್‌ರೈಸ್ ಕ್ರಿಕೆಟ್ ಅಕಾಡೆಮಿ, ರಂಗನಪಾಲ್ಕೆ ಇವರ...

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್ ಕುಂದಾಪುರ-ಇಲ್ಲಿನ ಫ್ರೆಂಡ್ಸ್ ಕೆದೂರು ಮೊತ್ತ ಮೊದಲ ಬಾರಿಗೆ ಆಯೋಜಿಸಿದ 60 ಗಜಗಳ ಮುಕ್ತ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಫ್ರೆಂಡ್ಶಿಫ್ ಟ್ರೋಫಿ-2026...

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026 ಕಂದಾಯ ಇಲಾಖೆ ಕರ್ನಾಟಕ ರಾಜ್ಯ ಗ್ರಾಮ...
- Advertisement -spot_imgspot_img

ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS ಕಪ್ 2026

ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS CUP 2026 CHIVAS ಎಫ್‌ಸಿ ವತಿಯಿಂದ ಅಂಡರ್-21 ಫ್ಲಡ್‌ಲೈಟ್ ಟರ್ಫ್ ಲೀಗ್ ಟೂರ್ನಮೆಂಟ್ “CHIVAS ಕಪ್ 2026”...

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5 ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ (ರಿ.) ಹಾಗೂ ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್...

Must read

- Advertisement -spot_imgspot_img

You might also likeRELATED
Recommended to you