Categories
ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್

ಟಿ.ಸಿ.ಎ ಉಡುಪಿ ಜಿಲ್ಲಾಮಟ್ಟದ ಕ್ರಿಕೆಟ್ ಪಂದ್ಯಾಟ-ಚೇತನಾ ಉಡುಪಿ ಮತ್ತು ಕಲಾಕಿರಣ ಕೊರಂಗ್ರಪಾಡಿ ಫೈನಲ್ ಎಂಟ್ರಿ

ಕುಂದಾಪುರ-ಇಲ್ಲಿನ ಗಾಂಧಿಮೈದಾನದಲ್ಲಿ ನಡೆಯುತ್ತಿರುವ ಉಡುಪಿ ಜಿಲ್ಲಾಮಟ್ಟದ ಕ್ರಿಕೆಟ್ ಪಂದ್ಯಾಟ ನವೆಂಬರ್ 19 ಶನಿವಾರ ಬೆಳಿಗ್ಗೆ ಉದ್ಘಾಟನೆಗೊಂಡಿತು.
ತಾಲೂಕು ಮಟ್ಟದಲ್ಲಿ ಜಯಗಳಿಸಿದ ಎರಡು ತಂಡಗಳ ಸಹಿತ ಒಟ್ಟು 14 ತಂಡಗಳು ಪಂದ್ಯಾಟದಲ್ಲಿ ಭಾಗವಹಿಸಿದ್ದು ಸುಮಾರು 200 ಕ್ಕೂ ಹೆಚ್ಚಿನ ಆಟಗಾರರು ಭಾಗವಹಿಸಿದರು.ಲೀಗ್ ಹಂತದ ರೋಚಕ ಹೋರಾಟದ ಬಳಿಕ ಸೆಮಿಫೈನಲ್ ನಲ್ಲಿ ಚೇತನಾ ಉಡುಪಿ ಟೊರ್ಪೆಡೋಸ್ ಕುಂದಾಪುರ ತಂಡವನ್ನು ಹಾಗೂ ಕಲಾಕಿರಣ ಕೊರಂಗ್ರಪಾಡಿ ತಂಡ ಇಲೆವೆನ್ಸ್ ಬೆಳ್ಮಣ್ ತಂಡವನ್ನು ಸೋಲಿಸಿ ಫೈನಲ್ ಪ್ರವೇಶ ಪಡೆದರು.
ಫೈನಲ್ ಪಂದ್ಯ ರವಿವಾರ ಮಧ್ಯಾಹ್ನ 3 ಗಂಟೆಗೆ ಸರಿಯಾಗಿ ಪ್ರಾರಂಭವಾಗಲಿದೆ ಎಂದು ಟಿ.ಸಿ.ಎ
ಅಧ್ಯಕ್ಷರಾದ ಗೌತಮ್ ಶೆಟ್ಟಿ ಕುಂದಾಪುರ ತಿಳಿಸಿದ್ದಾರೆ…

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

four × 3 =