Categories
ಕ್ರಿಕೆಟ್

ಉಡುಪಿ-ದಿ.ಮಾಧವ ಆಚಾರ್ಯರ ಸ್ಮರಣಾರ್ಥ ಗುಂಡಿಬೈಲ್ ಪ್ರೀಮಿಯರ್ ಲೀಗ್-ಗುರುಶ್ರೀ ಟ್ರೋಫಿ-2021

ಉಡುಪಿ ಪರಿಸರದ ಪ್ರತಿಭಾವಂತ ಕ್ರೀಡಾಪಟು ಹಾಗೂ ಕ್ರೀಡಾ ಪ್ರೋತ್ಸಾಹಕರಾಗಿದ್ದ ದಿ‌.ಮಾಧವ ಆಚಾರ್ಯರವರ ಸ್ಮರಣಾರ್ಥ ಮಾರ್ಚ್ 7 ರಂದು,ಗುಂಡಿಬೈಲು ಶಾಲಾ ಮೈದಾನದಲ್ಲಿ ಗುಂಡಿಬೈಲ್ ಪ್ರೀಮಿಯರ್ ಲೀಗ್(G.P.L) ಗುರುಶ್ರೀ ಟ್ರೋಫಿ-2021 ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ.
ಒಟ್ಟು 6 ತಂಡಗಳು ಭಾಗವಹಿಸಲಿದ್ದು,ರಾಜ್ಯ,
ರಾಷ್ಟ್ರಮಟ್ಟದಲ್ಲಿ ಮಿಂಚಿದ ಉಡುಪಿ ಜಿಲ್ಲೆಯ 18 ಮಂದಿ ಪ್ರಸಿದ್ಧಆಟಗಾರರು,ಒಂದೊಂದು ತಂಡದಲ್ಲಿ ಐಕಾನ್ ಆಟಗಾರರ ರೂಪದಲ್ಲಿ ಮೂವರು ಆಟಗಾರರು ಭಾಗವಹಿಸಲಿದ್ದಾರೆ.
ಪಂದ್ಯಾಕೂಟದ ಪ್ರಥಮ ಪ್ರಶಸ್ತಿ ವಿಜೇತ ತಂಡ 50 ಸಾವಿರ ನಗದು,ದ್ವಿತೀಯ ಸ್ಥಾನಿ 30 ಸಾವಿರ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಹಾಗೂ ವೈಯಕ್ತಿಕ ಶ್ರೇಷ್ಟ ನಿರ್ವಹಣೆ ನೀಡಿದ ಆಟಗಾರರಿಗೆ ವಿಶೇಷ ಬಹುಮಾನಗಳನ್ನು ನೀಡಿ ಗೌರವಿಸಲಾಗುತ್ತಿದೆ…

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

one × two =