ಭರವಸೆಯ ಬೆಳಕುಉಡುಪಿ-ಸಮಾಜ ಸೇವೆಯೊಂದಿಗೆ ಮಾನವೀಯತೆಯನ್ನು ಬೆಳಗಿಸಿದ ನಾಗಾರ್ಜುನ.ಡಿ.ಪೂಜಾರಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಉಡುಪಿ-ಸಮಾಜ ಸೇವೆಯೊಂದಿಗೆ ಮಾನವೀಯತೆಯನ್ನು ಬೆಳಗಿಸಿದ ನಾಗಾರ್ಜುನ.ಡಿ.ಪೂಜಾರಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

-

- Advertisment -spot_img
ಕೊರೋನಾ ಸಂದರ್ಭದಲ್ಲಿ 400 ಕ್ಕೂ ಹೆಚ್ಚಿನ ಕೊರೋನಾ ಸೋಂಕಿತ  ಶವಗಳ ಸಂಸ್ಕಾರಕಾರ್ಯವನ್ನು ವಿಧಿ ವಿಧಾನ ಪ್ರಕಾರ ನಡೆಸಿದ ಉಡುಪಿಯ ಕ್ರೀಡಾಪಟು ನಾಗಾರ್ಜುನ.ಡಿ.ಪೂಜಾರಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಶ್ರೀ.ದಿನೇಶ್ ಪೂಜಾರಿ ಮತ್ತು ಶ್ರೀಮತಿ‌ ಜಯಾ.ಡಿ.ಪೂಜಾರಿಯವರ ಪುತ್ರನಾದ ನಾಗಾರ್ಜುನ್
ಉಡುಪಿ ನಗರಸಭೆಯಲ್ಲಿ ಐದೂವರೆ ವರ್ಷಗಳಿಂದ ಸ್ಯಾನಿಟರಿ ಸೂಪರ್ವೈಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಜಗತ್ತಿನ ಜನ ಜೀವನವನ್ನೆಲ್ಲಾ ತಲ್ಲಣಗೊಳಿಸಿದ ಕೊರೋನಾ ವೈರಸ್ ಸೋಂಕಿಗೆ ಉಡುಪಿಯಲ್ಲಿ ಬಲಿಯಾದ ಸುಮಾರು 400 ಕ್ಕೂ ಹೆಚ್ಚಿನ ಜನರ ಶವಸಂಸ್ಕಾರವನ್ನು ವಿಧಿ ವಿಧಾನ ಪ್ರಕಾರ ನಡೆಸಿ,ಆ ಕುಟುಂಬದವರಿಗೆ ಚಿತಾಭಸ್ಮವನ್ನು ಒಪ್ಪಿಸುವ ತನಕ ಅಸಾಧಾರಣ
ಕಾರ್ಯವೆಸಗಿದ್ದಾರೆ.”ಕಾಯಕವೇ ಕೈಲಾಸ”ಎಂಬ ನುಡಿಯನ್ನು ಧ್ಯೇಯವಾಗಿರಿಸಿಕೊಂಡು ಸಮಾಜಸೇವೆಯಿಂದ ಜೀವನಸಾರ್ಥಕ್ಯವನ್ನು ಹೊಂದಿದ ನಾಗಾರ್ಜುನ ಕ್ರೀಡಾಲೋಕದಲ್ಲಿಯೂ ಅತ್ಯುತ್ತಮ ಆಟಗಾರನಾಗಿ ಗುರುಶ್ರೀ ಗುಂಡಿಬೈಲು,ವಿಷ್ಣುಮೂರ್ತಿ ದೊಡ್ಡಣ್ಣಗುಡ್ಡೆ,ಸ್ಯಾಟರ್ಡೇ ಪ್ಯಾಂಥರ್ಸ್ ಇಂದ್ರಾಳಿ,ಲೋಕಲ್ ಬಾಯ್ಸ್ ಉಡುಪಿ,ಎ.ಕೆ.ಸ್ಪೋರ್ಟ್ಸ್ ಉಡುಪಿ,ಬಿ.ಬಿ.ಸಿ ಅಗ್ರಹಾರ,ಸೈಮಂಡ್ಸ್ ಕಡಿಯಾಳಿ,ರಿಯಲ್ ಫೈಟರ್ಸ್ ಮೊದಲಾದ ತಂಡಗಳ ಪರವಾಗಿ ಆಡಿ ಬಹಳಷ್ಟು ಪಂದ್ಯಗಳನ್ನು ಗೆಲ್ಲಿಸಿ ಕೊಟ್ಟ ಕೀರ್ತಿಗೆ ಭಾಜನರಾಗಿದ್ದಾರೆ. ಸುಮಾರು 350 ಕ್ಕೂ ಅಧಿಕ ಪಂದ್ಯಶ್ರೇಷ್ಟ,170 ಹೆಚ್ಚಿನ ಉತ್ತಮ‌ ದಾಂಡಿಗ ಮತ್ತು ಉತ್ತಮ ಬೌಲರ್ ಹಾಗೂ 45 ಸರಣಿ ಶ್ರೇಷ್ಠ ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡಿದ್ದಾರೆ.
ಉಡುಪಿ ಜಿ.ಶಂಕರ್ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯರಿಗೆ ಉಚಿತವಾಗಿಯೇ ಕೋಚಿಂಗ್ ನೀಡುತ್ತಿದ್ದಾರೆ.ಇವರ ಸಮಾಜಸೇವೆಯನ್ನು ಮನಗಂಡ ಅನೇಕ‌ ಸಂಘಸಂಸ್ಥೆಗಳು ಗುರುತಿಸಿ ಗೌರವಿಸಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

eighteen − 16 =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you