Categories
ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್

ಉಡುಪಿ-ವಿಶೇಷ ಚೇತನರಿಗೆ ಸಹಾಯ ಹಸ್ತದ ಸದುದ್ದೇಶ ಸಲುವಾಗಿ ರುದ್ರ ಟ್ರೋಫಿ 2022

ರುದ್ರ ಫ್ರೆಂಡ್ಸ್ ಉಡುಪಿ ಇವರ ವತಿಯಿಂದ ಅಂಗವಿಕಲತೆ ನ್ಯೂನತೆಯಿಂದ ಬಳಲುತ್ತಿರುವ ಬಡಕುಟುಂಬದವರಿಗೆ ವೀಲ್ ಚೇರ್ ಕೊಡುಗೆ ಮತ್ತು ಸಮಾಜ ಸೇವೆಯಲ್ಲಿ ತೊಡಗಿರುವ  ಸಂಸ್ಥೆಗಳಿಗೆ ಗೌರವ ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನದ ಸದುದ್ದೇಶದ ಸಲುವಾಗಿ ಪ್ರಥಮ ಬಾರಿಗೆ 90 ಗಜಗಳ ವಲಯ ಮಟ್ಟದ  ಕ್ರಿಕೆಟ್ ಪಂದ್ಯಾಟ ರುದ್ರ ಟ್ರೋಫಿ
-2022  ಆಯೋಜಿಸಲಾಗಿದೆ.
ಏಪ್ರಿಲ್ ದಿನಾಂಕ 2 ಮತ್ತು 3 ರಂದು ಉಡುಪಿಯ
ದೊಡ್ಡಣ್ಣಗುಡ್ಡೆ ಮೈದಾನದಲ್ಲಿ ಆಯೋಜಿಸಲಾದ ಈ ಪಂದ್ಯಾಟದಲ್ಲಿ ಪ್ರಥಮ ಪ್ರಶಸ್ತಿ ಜಯಿಸುವ ತಂಡ 40 ಸಹಸ್ರ ನಗದು,ದ್ವಿತೀಯ ಸ್ಥಾನಿ 20 ಸಹಸ್ರ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದಾರೆ.
ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಬೆಂಗಳೂರಿನ ಉದ್ಯಮಿ ಗಣೇಶ್ ಗುಜ್ರಾನ್ ಪಡುಬಿದ್ರಿ ಇವರು ಈರ್ವರು ವಿಶೇಷ ಚೇತನರಿಗೆ ವೀಲ್ ಚೇರ್ ನೀಡುವುದರ ಮೂಲಕ ಅವರ ಬಾಳಿಗೆ ಬೆಳಕಾಗಲಿದ್ದಾರೆ.
ಪಂದ್ಯಾಟದ ನೇರ ಪ್ರಸಾರ ಯೂಟ್ಯೂಬ್ ಚಾನೆಲ್ ಮೂಲಕ ಬಿತ್ತರಗೊಳ್ಳಲಿದೆ.ಹೆಚ್ಚಿನ ಮಾಹಿತಿಗಾಗಿ 8431564819 ಮತ್ತು 8740 220048 ಈ ನಂಬರ್ ಗಳನ್ನು‌ ಸಂಪರ್ಕಿಸಬಹುದು.

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

five × four =