SportsKannada | ಸ್ಪೋರ್ಟ್ಸ್ ಕನ್ನಡ

ಉಡುಪಿ-ಸಾಗರ್ ಚಾಂಪಿಯನ್ಸ್ ಟ್ರೋಫಿ-2021 ಮಾರ್ಚ್ 13 ಮತ್ತು 14 ರಂದು.

ಸಾಗರ್ ಸ್ಪೋರ್ಟ್ಸ್ ಕ್ಲಬ್(ರಿ)
ಕುಕ್ಕಿಕಟ್ಟೆ ಇವರ ಆಶ್ರಯದಲ್ಲಿ,ರಂಜಿತ್ ಶೆಟ್ಟಿ ಅಂಬಲಪಾಡಿ ಇವರ ಗೌರವ ಉಪಸ್ಥಿಯಲ್ಲಿ,ಎ.ಕೆ.ಸ್ಪೋರ್ಟ್ಸ್ ನ ಮಾಜಿ ಆಟಗಾರ ಸಾಗರ್ ವಿಶ್ವ ಹಾಗೂ ಸಾಗರ್ ಪ್ರವೀಣ್ ಇವರ ಸಾರಥ್ಯದಲ್ಲಿ ಮಾರ್ಚ್ 13 ಮತ್ತು 14 ರಂದು ಉಡುಪಿಯ ಬೀಡಿನಗುಡ್ಡೆ ಮೈದಾನದಲ್ಲಿ “ಸಾಗರ್ ಚಾಂಪಿಯನ್ಸ್ ಟ್ರೋಫಿ-2021” ಪಂದ್ಯಾವಳಿ ಆಯೋಜಿಸಲಾಗಿದೆ.
ರಾಜ್ಯ ಮಟ್ಟದಲ್ಲಿ ಉಡುಪಿ,ದ.ಕ ಜಿಲ್ಲೆಯ ತಂಡಗಳ ಗಣನೀಯ ಇಳಿಕೆಯ ಪ್ರಮಾಣ ಮನಗಂಡು, ಉಡುಪಿ,ಕುಂದಾಪುರ,ಮಂಗಳೂರು ಪರಿಸರದ ಸ್ಥಳೀಯ ಆಟಗಾರರನ್ನು ರಾಜ್ಯ,ರಾಷ್ಟ್ರಮಟ್ಟಕ್ಕೆ ಪರಿಚಯಿಸುವ ಸಲುವಾಗಿ,ಸಾಗರ್ ಸ್ಪೋರ್ಟ್ಸ್ ಕ್ಲಬ್(ರಿ)ವಿಶಿಷ್ಟ,ವಿನೂತನ ಪ್ರಯತ್ನಕ್ಕೆ ಕೈ ಹಾಕಿದೆ.
ದ.ಕ ಮತ್ತು ಉಡುಪಿ ಜಿಲ್ಲೆಯ ಆಟಗಾರರಿಗೆ ಸೀಮಿತವಾಗಿರುವ
ಈ ಪಂದ್ಯಾಟದಲ್ಲಿ ಹೊರಹೊಮ್ಮಿದ ಯುವ ಪ್ರತಿಭೆಗಳನ್ನು ಒಗ್ಗೂಡಿಸುವ ಘನ ಉದ್ದೇಶ ಈ ಪಂದ್ಯಾಕೂಟದ್ದಾಗಿದೆ.
ಲೀಗ್ ಕಮ್ ನಾಕೌಟ್ ಮಾದರಿಯಲ್ಲಿ ನಡೆಯಲಿರುವ ಸಾಗರ್ ಚಾಂಪಿಯನ್ಸ್ ಟ್ರೋಫಿ ಪಂದ್ಯಾಕೂಟದ
ಪ್ರಥಮ‌ ಪ್ರಶಸ್ತಿ ವಿಜೇತ ತಂಡ 1,00,001 ನಗದು,ರನ್ನರ್ ಅಪ್,
50,005 ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆಯಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಾಗರ್ ವಿಶ್ವ-9844612725,ಸಾಗರ್ ಪ್ರವೀಣ್-9886324431,ಪ್ರಜ್ವಲ್-99019435220 ಈ ಮೊಬೈಲ್ ನಂಬರ್ ಗಳನ್ನು ಸಂಪರ್ಕಿಸಬಹುದಾಗಿದೆ.
Exit mobile version