12.8 C
London
Monday, May 20, 2024
Homeಅಥ್ಲೆಟಿಕ್ಸ್ಉಡುಪಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆಗೆ ಡಾ. ವಿಜಯ್ ಬಲ್ಲಾಳ್ ರಿಂದ ಚಾಲನೆ

ಉಡುಪಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆಗೆ ಡಾ. ವಿಜಯ್ ಬಲ್ಲಾಳ್ ರಿಂದ ಚಾಲನೆ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img

“ಪ್ರತಿಯೊಬ್ಬರೂ ದೈಹಿಕ ಕ್ಷಮತೆ ಕಾಯ್ದುಕೊಳ್ಳಬೇಕು”.
ಉಡುಪಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆಗೆ ಡಾ. ವಿಜಯ್ ಬಲ್ಲಾಳ್ ರಿಂದ ಚಾಲನೆ.

ಉಡುಪಿ ಸ್ವಿಮ್ಮಿಂಗ್ ಕ್ಲಬ್ (ರಿ) ಉಡುಪಿ ಇವರ ವತಿಯಿಂದ ಅಜ್ಜರಕಾಡು ಜಿಲ್ಲಾ ಈಜುಕೊಳದಲ್ಲಿ ಹಮ್ಮಿಕೊಂಡಿದ್ದ ಪುರುಷ ಮತ್ತು ಮಹಿಳೆಯರ ಜಿಲ್ಲಾ ಮಟ್ಟದ ಸ್ಪರ್ಧೆಗೆ 12-01-2020 ರಂದು ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.


ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನ ಅಂಬಲಪಾಡಿಯ ಧರ್ಮದರ್ಶಿಗಳಾದ ಡಾ. ವಿಜಯ ಬಲ್ಲಾಳ್ ದೀಪಬೆಳಗಿಸಿ ಮಾತನಾಡಿ ಸೈಕ್ಲಿಂಗ್ ಮಾಡುವುದು ಮಾನವನ ಆರೋಗ್ಯಕ್ಕೆ ಪೂರಕವಾಗುವ ಜೊತೆಗೆ ಸ್ನಾಯುಗಳಿಗೆ ಶಕ್ತಿ ತುಂಬುವ ಕೆಲಸವನ್ನು ಮಾಡುತ್ತದೆ ದೈಹಿಕ ಆರೋಗ್ಯ ವೃದ್ಧಿ ಗೊಂಡರೆ ಮಾನಸಿಕ ಆರೋಗ್ಯವು ಉತ್ತಮವಾಗಿರುತ್ತದೆ ಎಂದರು. ಸ್ವಿಮ್ಮಿಂಗ್ ಕ್ಲಬ್ ನ ಅಧ್ಯಕ್ಷ ರಾಮಕೃಷ್ಣ ರಾವ್ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಶಾಸಕ ಕೆ. ರಘುಪತಿ ಭಟ್, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ್ ಬಾಬು, ಉಡುಪಿ ಸ್ವಿಮ್ಮಿಂಗ್ ಕ್ಲಬ್ ನ ಕಾರ್ಯದರ್ಶಿ ಕೃಪಾ ಪ್ರಸಿದ್ಧ, ಉಡುಪಿ ಸ್ವಿಮ್ಮಿಂಗ್ ಕ್ಲಬ್ ನ ಉಪಾಧ್ಯಕ್ಷೆ ಮಂಜುಳ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಗಿನ್ನಿಸ್ ದಾಖಲೆಯ ಈಜುಪಟು ಗೋಪಾಲ್ ಖಾರ್ವಿ ಅವರನ್ನು ಸನ್ಮಾಸಿಸಲಾಯಿತು. ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಒಟ್ಟು 92 ವಿಭಾಗಳಲ್ಲಿ ಸ್ಪರ್ಧೆಗಳು ನಡೆದಿದ್ದು ಇದರಲ್ಲಿ ಸುಮಾರು 200ಕ್ಕೂ ಅಧಿಕ ಸ್ಪರ್ಧಿಗಳು ಭಾಗವಹಿಸಿದ್ದರು. ಉಡುಪಿ ಸ್ವಿಮ್ಮಿಂಗ್ ಕ್ಲಬ್ ನ ಎಲ್ಲಾ ಸದಸ್ಯರು ಉಪಸ್ಥಿತರಿದ್ದು ಆರ್ಯಪ್ರಸಿದ್ಧ ಸ್ವಾಗತಿಸಿ, ರಾಜಶೇಖರ್ ಉಡುಪಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ವರದಿ :- ✍ರಾಜಶೇಖರ್ ಉಡುಪಿ.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

2 × 5 =