Categories
ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್

ಉಡುಪಿ-ಸನ್ ರೈಸ್ ಹೊನ್ನಾಳ ಆಶ್ರಯದಲ್ಲಿ S.C.H ಪ್ರೀಮಿಯರ್ ಲೀಗ್-2021

ರಾಜ್ಯಮಟ್ಟಕ್ಕೆ ಹಲವಾರು ಆಟಗಾರರನ್ನು ಕೊಡುಗೆಯಾಗಿ ನೀಡಿ,ಉಡುಪಿ ಭಾಗದ ಶಿಸ್ತಿನ ತಂಡವಾಗಿ ಗುರುತಿಸಿಕೊಂಡ ಸನ್ ರೈಸ್ ಕ್ರಿಕೆಟರ್ಸ್ ಹೊನ್ನಾಳ ಇವರ ಆಶ್ರಯದಲ್ಲಿ ಡಿಸೆಂಬರ್ 10 ಶುಕ್ರವಾರದಂದು ಜಿಲ್ಲಾಮಟ್ಟದ 40 ಗಜಗಳ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಕೂಟ S.C.H ಪ್ರೀಮಿಯರ್ ಲೀಗ್-2021 ಆಯೋಜಿಸಲಾಗಿದೆ.
ಹೊನ್ನಾಳದ ಮೈದಾನದಲ್ಲಿ 8 ಐಕಾನ್ ಆಟಗಾರರನ್ನು ಒಳಗೊಂಡ,8 ಫ್ರಾಂಚೈಸಿಗಳು ಪ್ರಶಸ್ತಿಗಾಗಿ ಸೆಣಸಾಡಲಿದ್ದು ಪ್ರಥಮ‌ ಪ್ರಶಸ್ತಿ 20,002 ರೂ ಹಾಗೂ ರನ್ನರ್ ಅಪ್ ಪ್ರಶಸ್ತಿ ರೂಪದಲ್ಲಿ 15,001ರೂ ನಗದು ಸಹಿತ ಆಕರ್ಷಕ ಪಾರಿತೋಷಕಗಳನ್ನು ಪಡೆಯಲಿದ್ದಾರೆ.ವೈಯಕ್ತಿಕ ಶ್ರೇಷ್ಠ ನಿರ್ವಹಣೆಗೈದ ಆಟಗಾರರು ವಿಶೇಷ ಪ್ರಶಸ್ತಿ ಪಡೆಯಲಿದ್ದಾರೆ.
M9 ಸ್ಪೋರ್ಟ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಪಂದ್ಯಾಟದ ನೇರ ಪ್ರಸಾರ ಬಿತ್ತರಗೊಳ್ಳಲಿದೆ.

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

13 + seventeen =