ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ದಶಕಗಳ ಬಳಿಕ ಉಡುಪಿ ಜಿಲ್ಲೆಯಲ್ಲಿ ಮರುಕಳಿಸಲಿದೆಯೇ ಟೆನಿಸ್ಬಾಲ್ ಕ್ರಿಕೆಟ್ ಗತ ವೈಭವ!...

ದಶಕಗಳ ಬಳಿಕ ಉಡುಪಿ ಜಿಲ್ಲೆಯಲ್ಲಿ ಮರುಕಳಿಸಲಿದೆಯೇ ಟೆನಿಸ್ಬಾಲ್ ಕ್ರಿಕೆಟ್ ಗತ ವೈಭವ! T.C.A ಪ್ರಾಯೋಜಿತ ಉಡುಪಿ ತಾಲ್ಲೂಕು ಮಟ್ಟದ ಟೂರ್ನಮೆಂಟ್

-

- Advertisment -spot_img
ಟೆನಿಸ್ಬಾಲ್ ಕ್ರಿಕೆಟ್ ಶ್ರೇಯೋಭಿವೃದ್ಧಿಗಾಗಿ ಉಡುಪಿ ಜಿಲ್ಲೆಯ ಸಮಾನ ಮನಸ್ಕ ಹಿರಿಯ ಆಟಗಾರರು,
ಕ್ರೀಡಾಪ್ರೋತ್ಸಾಹಕರ ಸಮಾಗಮದಲ್ಲಿ ಇತ್ತೀಚೆಗಷ್ಟೇ ಪ್ರವರ್ಧಮಾನಕ್ಕೆ ಬಂದ ಉಡುಪಿ ಜಿಲ್ಲೆ ಟೆನಿಸ್ಬಾಲ್ ಕ್ರಿಕೆಟ್ ಅಸೋಸಿಯೇಷನ್ ಪ್ರಾಥಮಿಕ ಹಂತದ ಯೋಜನೆಯ ರೂಪದಲ್ಲಿ  7 ತಾಲೂಕುಗಳಲ್ಲಿ 7 ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾಟ ಆಯೋಜಿಸಿದೆ‌.
ಯೋಜನೆಯಂತೆ ಕಾರ್ಕಳದಲ್ಲಿ ಮೊದಲ ಕ್ರಿಕೆಟ್ ಟೂರ್ನಮೆಂಟ್ ಅತ್ಯಂತ ಶಿಸ್ತು ಹಾಗೂ ಕ್ರಮಬದ್ಧವಾಗಿ ಮುಕ್ತಾಯಗೊಂಡಿರುತ್ತದೆ‌‌‌.ಇದೀಗ ಏಕಕಾಲದಲ್ಲಿ ಬೈಂದೂರಿನಲ್ಲಿ ಹಾಗೂ ಉಡುಪಿಯಲ್ಲಿ ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿದೆ.
ಉಡುಪಿ ತಾಲೂಕು ಪಂದ್ಯಾಟಗಳು 10 ಓವರ್-90 ಗಜಗಳ ಮಾದರಿಯಲ್ಲಿ ಡಿಸೆಂಬರ್ 25 ಮತ್ತು 26 ರಂದು ಮಲ್ಪೆ ಗಾಂಧಿ ಶತಾಬ್ಧಿ ಮೈದಾನ,ಮಿಶನ್ ಕಂಪೌಂಡ್ ಮೈದಾನ ಮತ್ತು ಬೀಡಿನಗುಡ್ಡೆ ಮೈದಾನದಲ್ಲಿ ನಡೆಯಲಿದೆ.
ಅಸೋಸಿಯೇಷನ್ ಪ್ರಾರಂಭದ ಹಂತದ ನೋಂದಣಿ ಪ್ರಕ್ರಿಯೆಯಲ್ಲಿ,ಉಡುಪಿಯಲ್ಲಿ ದ್ವಿತೀಯ ಅತೀ ಹೆಚ್ಚಿನ(200) ಆಟಗಾರರು ತಮ್ಮ ಹೆಸರನ್ನು ನೋಂದಣಿ ಮಾಡಿಕೊಂಡಿದ್ದು,80,90 ರ ದಶಕದಲ್ಲಿ ಉಡುಪಿ ಜಿಲ್ಲೆಯಲ್ಲಿ ಮೆರೆದಾಡಿದ ತಂಡಗಳಾದ
ಪ್ಯಾರಡೈಸ್ ಬನ್ನಂಜೆ,ಕಲಾಕಿರಣ್ ಬೈಲೂರು,ನೇತಾಜಿ ಸ್ಪೋರ್ಟ್ಸ್ ಕ್ಲಬ್,ಸನ್ನಿ ಉಡುಪಿ,ಕೆನರಾ ಕಿನ್ನಿಮುಲ್ಕಿ,ಮಿತ್ರಮಂಡಳಿ ಕಿನ್ನಿಮುಲ್ಕಿ,ಸ್ಪಾರ್ಕ್ ಉಡುಪಿ,ಗುರು ನೇಜಾರ್,ಮಾರುತಿ ಪಡುಕರೆ,ದೊಡ್ಡಣಗುಡ್ಡೆ ಫ್ರೆಂಡ್ಸ್,ಕೆಮ್ಮಣ್ಣು ಕ್ರಿಕೆಟರ್ಸ್,ಯಂಗ್ ಸ್ಟಾರ್ ಮಲ್ಪೆ,ಕ್ಲಾಸಿಕ್ ಕಲ್ಮಾಡಿ,ಸಿಟಿ ಸ್ಪೋರ್ಟ್ಸ್ ಉಡುಪಿ ತಂಡಗಳಲ್ಲಿ
ಈ 200 ಮಂದಿ‌ ಆಟಗಾರರಿಗೆ ಅವಕಾಶ ಕಲ್ಪಿಸಲಾಗಿದೆ.
ರಾಜ್ಯಮಟ್ಟದಲ್ಲಿ ಮಿಂಚಿ ಪ್ರಸ್ತುತ ಅವಕಾಶ ಲಭಿಸದೇ ಇರುವ ಪ್ರತಿಭಾನ್ವಿತ ಆಟಗಾರರು T.C.A ಪಂದ್ಯಾಟದಲ್ಲಿ ಭಾಗವಹಿಸುತ್ತಿರುವುದು ಕುತೂಹಲವನ್ನು ಇನ್ನಷ್ಟು ಹೆಚ್ಚಿಸಿದೆ.
ಇಂದು ಸಂಜೆ ನಡೆದ ಜೆರ್ಸಿ ಅನಾವರಣ
ಕಾರ್ಯಕ್ರಮದಲ್ಲಿ ಹಿರಿಯ ಆಟಗಾರರಾದ ಶ್ರೀಧರ್ ಶೆಟ್ಟಿ ಪ್ಯಾರಡೈಸ್ ಬನ್ನಂಜೆ,ಯಾದವ್ ನಾಯಕ್ ಕೆಮ್ಮಣ್ಣು,
ಉದಯ್ ಕುಮಾರ್ ಕೆನರಾ,ಪ್ರವೀಣ್ ಕುಮಾರ್ ಬೈಲೂರು,ಡಾ.ವಿನೋದ್,ಸಚ್ಚೀಂದ್ರ ಶೆಟ್ಟಿ,ಪ್ರವೀಣ್ ಪಿತ್ರೋಡಿ,ತಂಡಗಳ ನಾಯಕರು,ಆಟಗಾರರು ಉಪಸ್ಥಿತರಿದ್ದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

eight + 1 =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you