Categories
ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್

ಉದ್ಯಾವರ-ಚಾಂಪಿಯನ್ಸ್ ಪ್ರೀಮಿಯರ್‌ ಲೀಗ್-2022

ಬೋಳಾರ್ ಗುಡ್ಡೆ ಬಳಗ,ಉದ್ಯಾವರ ಇವರ ವತಿಯಿಂದ ಅರ್ಹ ಬಡ ಕುಟುಂಬಗಳಿಗೆ ಆರ್ಥಿಕ ಸಹಾಯ ಮತ್ತು ಸಾಧಕರಿಗೆ ಸನ್ಮಾನದ ಸದುದ್ದೇಶದಿಂದ,ಮಾರ್ಚ್ 26 ಮತ್ತು 27 ರಂದು,ಉದ್ಯಾವರ ಗ್ರಾಮ ಪಂಚಾಯತ್ ಮೈದಾನದಲ್ಲಿ ಗ್ರಾಮೀಣ ಮಟ್ಟದ ಲೀಗ್ ಕ್ರಿಕೆಟ್ ಪಂದ್ಯಾಕೂಟ “ಚಾಂಪಿಯನ್ಸ್ ಪ್ರೀಮಿಯರ್‌ ಲೀಗ್‌‌-2022 ಆಯೋಜಿಸಲಾಗಿದೆ.
8 ತಂಡಗಳು-120 ಆಟಗಾರರನ್ನು ಬಿಡ್ಡಿಂಗ್ ಮಾದರಿಯಲ್ಲಿ ಆಟಗಾರರ ಆಯ್ಕೆ ಪ್ರಕ್ರಿಯೆ ನಡೆಯಲಿದೆ.ಪ್ರಥಮ ಪ್ರಶಸ್ತಿ 54,333 ರೂ,ದ್ವಿತೀಯ ಪ್ರಶಸ್ತಿ 32,111 ರೂ ನಗದಿನೊಂದಿಗೆ ಆಕರ್ಷಕ ಟ್ರೋಫಿಗಳು ಒಳಗೊಂಡಿದ್ದು,ಪಂದ್ಯಾವಳಿಯ ಬೆಸ್ಟ್ ಬ್ಯಾಟ್ಸ್‌ಮನ್‌ ಕ್ರಿಕೆಟ್ ಬ್ಯಾಟ್,ಬೆಸ್ಟ್ ಬೌಲರ್ ಸ್ಪೋರ್ಟ್ಸ್ ಶೂಸ್ ಮತ್ತು ಸರಣಿಶ್ರೇಷ್ಟ ಆಟಗಾರನಿಗೆ ಎಲ್.ಇ.ಡಿ ಟಿವಿ ಬಹುಮಾನ ರೂಪದಲ್ಲಿ ನೀಡಲಾಗುತ್ತಿದೆ.
ಪಂದ್ಯಾವಳಿಯ ನೇರ ಪ್ರಸಾರ ಯೂಟ್ಯೂಬ್ ಚಾನೆಲ್ ನಲ್ಲಿ ಬಿತ್ತರಗೊಳ್ಳಲಿದೆ.ಹೆಚ್ಚಿನ ಮಾಹಿತಿಗಾಗಿ ಅಪ್ಪು-9743897628,ಸಂತು-,8861275815,ಸಬಿಲ್-7019180572,ಪ್ರಸಾದ್-9972259628 ಈ ನಂಬರ್ ಗಳನ್ನು ಸಂಪರ್ಕಿಸಬಹುದು.

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

6 + three =