ಕ್ರಿಕೆಟ್ಪಡುಬಿದ್ರಿ P.H.Y.P.Lನ ಯುನೈಟೆಡ್ ಕಪ್-2019

ಪಡುಬಿದ್ರಿ P.H.Y.P.Lನ ಯುನೈಟೆಡ್ ಕಪ್-2019

-

- Advertisment -spot_img

ಪಡುಬಿದ್ರಿ : ಮೀರಾ ಕ್ರಿಕೆಟರ್ಸ್ ಪಡುಬಿದ್ರಿ ಇವರ ಆಶ್ರಯದಲ್ಲಿ ಪಡುಬಿದ್ರಿ ಬೋರ್ಡ್ ಶಾಲಾ ಅಂಗಣದಲ್ಲಿ P.H.Y.P.L ನ ಯುನೈಟೆಡ್ ಕಪ್-2019 ಕಳೆದ ರವಿವಾರ ನಡೆಯಿತು.

ಕರಾವಳಿ ಪರಿಸರದಲ್ಲಿ ಪ್ರಪ್ರಥಮ ಬಾರಿಗೆ ಮೂರು ಗ್ರಾಮಗಳಾದ ಪಡುಬಿದ್ರಿ,ಹೆಜಪಾಡಿ ಎರ್ಮಾಳ್ ಗ್ರಾಮದ ಸುಮಾರು 200ಕ್ಕೂ ಮಿಕ್ಕಿ ಆಟಗಾರರನ್ನು ಒಗ್ಗೂಡಿಸಿ,12 ಫ್ರಾಂಚೈಸಿಗಳ ನಡುವೆ ಪ್ರತಿಷ್ಟಿತ ಪಂದ್ಯಾಕೂಟ ಏರ್ಪಟ್ಟಿತ್ತು.

ಲೀಗ್ ಹಂತದ ರೋಮಾಂಚಕಾರಿ ಕದನದ ಬಳಿಕ ಫೈನಲ್ ನಲ್ಲಿ  ಅಮ್ಮಾ ಫ್ರೆಂಡ್ಸ್ ತಂಡ ಮೊದಲು ಬ್ಯಾಟಿಂಗ್ ನಡೆಸಿ 4 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 33 ರನ್ ಗಳಿಸಿತ್ತು.

ಪ್ರತ್ಯುತ್ತರವಾಗಿ ಸಮರ್ಥ್ ಫ್ರೆಂಡ್ಸ್ ತಂಡ 4 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು ಕೇವಲ 16 ರನ್ ಗಳಿಸಿ‌ ಸೋಲಿಗೆ ಶರಣಾಯಿತು.

ಈ ಪಂದ್ಯಾಕೂಟದಲ್ಲಿ ರಾಜ್ಯದ ಪ್ರತಿಷ್ಟಿತ ತಂಡವಾದ ಪಡುಬಿದ್ರಿ ಫ್ರೆಂಡ್ಸ್ ನ ಮಾಜಿ ಆಟಗಾರರು ಭಾಗವಹಿಸಿದ್ದರು.ಪ್ರಮುಖ ಆಟಗಾರರಾಗಿದ್ದ ಸವ್ಯಸಾಚಿ ಸುಭಾಷ್ ಕಾಮತ್ ಹಾಗೂ ಉಮೇಶ್ ಪಡುಬಿದ್ರಿ ಅಮ್ಮಾ ಫ್ರೆಂಡ್ಸ್ ತಂಡವನ್ನು ಪ್ರತಿನಿಧಿಸಿದ್ದರು.

ವಿಜಯಿ ತಂಡ 30,000 ಹಾಗೂ ಆಕರ್ಷಕ ಟ್ರೋಫಿ ಹಾಗೂ ರನ್ನರ್ಸ್ ತಂಡ 15,000 ಹಾಗೂ ಆಕರ್ಷಕ ಟ್ರೋಫಿ ಪಡೆದುಕೊಂಡಿತು‌.

ಪಂದ್ಯಾಕೂಟದ ಬೆಸ್ಟ್ ಬ್ಯಾಟ್ಸ್‌ಮನ್ ನಿತೇಶ್ ಎರ್ಮಾಳ್,ಬೆಸ್ಟ್ ಬೌಲರ್ ಸುಭಾಷ್ ಕಾಮತ್ ಪಡುಬಿದ್ರಿ,ಸರಣಿ ಶ್ರೇಷ್ಠ ಪ್ರಶಸ್ತಿ ತರುಣ್ ಅರವಿಂದ್ ಹಾಗೂ ಟೂರ್ನಿಯ ಅತ್ಯಂತ ಮೌಲ್ಯಯುತ ಆಟಗಾರ ಪ್ರಶಸ್ತಿ ವಿನೋದ್ ಪೂಜಾರಿ ಪಡೆದುಕೊಂಡರು.

ಸಮಾರೋಪ ಸಮಾರಂಭದಲ್ಲಿ ವಿಜೇತರನ್ನು ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.ಈ ಸಂದರ್ಭ ಪಡುಬಿದ್ರಿ ಫ್ರೆಂಡ್ಸ್ ನ ಅಧ್ಯಕ್ಷ ನವೀನ್ ಚಂದ್ರ‌.ಜೆ.ಶೆಟ್ಟಿ,ಪಡುಬಿದ್ರಿ ತಂಡದ ಕಪ್ತಾನ ಶರತ್ ಶೆಟ್ಟಿ ಪಡುಬಿದ್ರಿ, ಟಾರ್ಪಡೋಸ್ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷ ಗೌತಮ್ ಶೆಟ್ಟಿ,ಲೋಹಿತಾಕ್ಷ ಪಡುಬಿದ್ರಿ, ಪಡುಬಿದ್ರಿ ಬಿ.ಜೆ.ಪಿ ಕಾರ್ಯಕರ್ತರಾದ ಶರತ್ ಶರ್ಮಾ,ಪತ್ರಕರ್ತ ಸುರೇಶ್ ಎರ್ಮಾಳ್, ರವಿ ಸಾಲ್ಯಾನ್ ಕಲ್ಲೆಟ್ಟೆ,ಅರವಿಂದ್ ಪಡುಬಿದ್ರಿ,ಸುಕೇಶ್ ಎರ್ಮಾಳ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಕ್ರೀಡೆಯಲ್ಲಿ ಮೇರು ಸಾಧನೆಗೈದು ಇತ್ತೀಚೆಗಷ್ಟೇ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಟಾರ್ಪಡೋಸ್ ಅಧ್ಯಕ್ಷ ಶ್ರೀಯುತ ಗೌತಮ್ ಶೆಟ್ಟಿಯವರನ್ನು ಸನ್ಮಾನಿಸಲಾಯಿತು.

ಸೌಜನ್ ಪಡುಬಿದ್ರಿ,ಅಪ್ಪು ಬದಿಯಡ್ಕ ಸಾರಥ್ಯದಲ್ಲಿ ಇನ್ನಿತರ ಸ್ನೇಹಿತರ ಸಹಕಾರದೊಂದಿಗೆ ಅತ್ಯಂತ ಯಶಸ್ವಿಯಾಗಿ ನಡೆಯಿತಲ್ಲದೆ,ಪ್ರಪ್ರಥಮ ಬಾರಿಗೆ ಗ್ರಾಮೀಣ ಮಟ್ಟದ ಈ ಪಂದ್ಯಾಕೂಟದಲ್ಲಿ ಆನ್ಲೈನ್ ಸ್ಕೋರಿಂಗ್ ಅಳವಡಿಸಿ,10,000 ಮಿಕ್ಕಿ ಕ್ರೀಡಾಭಿಮಾನಿಗಳು ಈ ಪಂದ್ಯಾಕೂಟದ ವಿದ್ಯಮಾನವನ್ನು ವೀಕ್ಷಿಸಿದ್ದರು.

ಆರ್.ಕೆ‌‌.ಆಚಾರ್ಯ ಕೋಟ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

18 − eleven =

Latest news

ಅಕ್ಷಯ ಟಿ 20 ಕಪ್-2026 ಪಂದ್ಯಾಟಕ್ಕೆ ಅದ್ಧೂರಿ ಚಾಲನೆ

  ಅಕ್ಷಯ ಟಿ 20 ಕಪ್-2026 ಪಂದ್ಯಾಟಕ್ಕೆ ಅದ್ಧೂರಿ ಚಾಲನೆ ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ ವತಿಯಿಂದ, ಉಡುಪಿ ಕ್ರಿಕೆಟ್ ಅಸೋಸಿಯೇಷನ್ ಉಡುಪಿ ಹಾಗೂ ಸನ್‌ರೈಸ್ ಕ್ರಿಕೆಟ್ ಅಕಾಡೆಮಿ...

ಉಡುಪಿ ಜಿಲ್ಲಾಮಟ್ಟದ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಟೂರ್ನಿ – 2026

ಉಡುಪಿ ಜಿಲ್ಲಾಮಟ್ಟದ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಟೂರ್ನಿ – 2026 ಉಡುಪಿ: ಅಕ್ಷಯ ಕ್ರಿಕೆಟ್ ಅಕಾಡೆಮಿ, ಉಡುಪಿ ಮತ್ತು ಸನ್‌ರೈಸ್ ಕ್ರಿಕೆಟ್ ಅಕಾಡೆಮಿ, ರಂಗನಪಾಲ್ಕೆ ಇವರ...

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್ ಕುಂದಾಪುರ-ಇಲ್ಲಿನ ಫ್ರೆಂಡ್ಸ್ ಕೆದೂರು ಮೊತ್ತ ಮೊದಲ ಬಾರಿಗೆ ಆಯೋಜಿಸಿದ 60 ಗಜಗಳ ಮುಕ್ತ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಫ್ರೆಂಡ್ಶಿಫ್ ಟ್ರೋಫಿ-2026...

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026 ಕಂದಾಯ ಇಲಾಖೆ ಕರ್ನಾಟಕ ರಾಜ್ಯ ಗ್ರಾಮ...
- Advertisement -spot_imgspot_img

ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS ಕಪ್ 2026

ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS CUP 2026 CHIVAS ಎಫ್‌ಸಿ ವತಿಯಿಂದ ಅಂಡರ್-21 ಫ್ಲಡ್‌ಲೈಟ್ ಟರ್ಫ್ ಲೀಗ್ ಟೂರ್ನಮೆಂಟ್ “CHIVAS ಕಪ್ 2026”...

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5 ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ (ರಿ.) ಹಾಗೂ ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್...

Must read

- Advertisement -spot_imgspot_img

You might also likeRELATED
Recommended to you