Uncategorizedಭಾರತೀಯ ಸ್ತ್ರೀಯರ ಫುಟ್ಬಾಲ್ ತಂಡಕ್ಕೆ ವಲ್ಲರೀ ಪೆಜತ್ತಾಯ ರಾವ್ ಫಿಸಿಯೊ ಆಗಿ...

ಭಾರತೀಯ ಸ್ತ್ರೀಯರ ಫುಟ್ಬಾಲ್ ತಂಡಕ್ಕೆ ವಲ್ಲರೀ ಪೆಜತ್ತಾಯ ರಾವ್ ಫಿಸಿಯೊ ಆಗಿ ಆಯ್ಕೆ.

-

- Advertisment -spot_img

ಭಾರತೀಯ ಸ್ತ್ರೀಯರ ಫುಟ್ಬಾಲ್ ತಂಡಕ್ಕೆ ವಲ್ಲರೀ ಪೆಜತ್ತಾಯ ರಾವ್ ಫಿಸಿಯೊ ಆಗಿ ಆಯ್ಕೆ.

ಇಪ್ಪತ್ತರ ಒಳಗಿನ ಹರೆಯದ ಭಾರತೀಯ ಸ್ತ್ರೀಯರ ಫುಟ್ಬಾಲ್ ತಂಡವು ಏಷ್ಯಾ ಕಪ್ ಪೂರ್ವ ಸಿದ್ಧತೆಗಾಗಿ ಬೆಂಗಳೂರಿನ ತರಬೇತಿ ಶಿಬಿರದಿಂದ ಉಜ್ಬೇಕಿಸ್ತಾನಕ್ಜೆ ಪಯಣಿಸಿದ್ದು ಉಡುಪಿ ಮೂಲದ ಶ್ರೀಮತಿ ವಲ್ಲರೀ ಪೆಜತ್ತಾಯ ರಾವ್ ಫಿಸಿಯೊ ಆಗಿ ಈ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಮುಂದಿನ ವರ್ಷ 2026ರಲ್ಲಿ ಥೈಲ್ಯಾಂಡಿನಲ್ಲಿ ಜರುಗಲಿರುವ ಏಷಿಯಾ ಕಪ್ ಫುಟ್ಬಾಲ್ ಪಂದ್ಯಾವಳಿಯಲ್ಲಿ ಅರ್ಹತೆ ಗಳಿಸಲು ಭಾರತೀಯ ಸ್ತ್ರೀಯರ ತಂಡವು ಆಗಸ್ಟ್ ತಿಂಗಳಲ್ಲಿ ಮ್ಯಾನ್ಮಾರನಲ್ಲಿ ನಡೆಯಲಿರುವ ಅರ್ಹತಾ ಪಂದ್ಯದಲ್ಲಿ ಉತ್ಕೃಷ್ಟ ಪ್ರದರ್ಶನವನ್ನು ನೀಡಬೇಕಾದ ಅನಿವಾರ್ಯತೆ ಇದೆ.ಈ ಪ್ರಯುಕ್ತ ತಂಡವು ಹೆಚ್ಚಿನ ಗುಣಮಟ್ಟದ ತರಬೇತಿ, ದೈಹಿಕಕ್ಷಮತೆ,ಕೌಶಲ್ಯಹಾಗೂ ತಂತ್ರಗಾರಿಕೆ ಒಳಗೊಂಡಂತೆ ಸರ್ವಸಿದ್ಧತೆಗಾಗಿ ಉಜ್ಬೇಕಿಸ್ತಾನದ ತಾಷ್ಕೆಂಟನಲ್ಲಿ ಈಗಾಗಲೇ ಕಠಿಣ ಅಭ್ಯಾಸದಲ್ಲಿ ನಿರತವಾಗಿದೆ.

ತರಬೇತಿಯ ಜೊತೆಗೆ ಉಜ್ಬೇಕಿಸ್ತಾನದ ವಿರುದ್ಧ ಆಯೋಜನೆಗೊಂಡ ಎರಡು ಸೌಹಾರ್ದ ಪಂದ್ಯಾಟದಲ್ಲಿ ಭಾರತದ ಸ್ತ್ರೀಯರ ಫುಟ್ಬಾಲ್ ತಂಡವು ಮೊದಲ ಪಂದ್ಯದಲ್ಲಿ 1-1 ಅಂತರದಲ್ಲಿ ಸಮಬಲ ಸಾಧಿಸಿತು.ಎರಡನೇ ಪಂದ್ಯದಲ್ಲಿ ಬಲಿಷ್ಠ ಉಜ್ಬೇಕಿಸ್ತಾನದ ವಿರುದ್ಧ 4-1ಅಂತರದಲ್ಲಿ ರೋಚಕ ವಿಜಯವನ್ನು ದಾಖಲಿಸಿತು.

ಆಗಸ್ಟ್ ತಿಂಗಳಲ್ಲಿ 20ರ ಕೆಳಹರೆಯದ ಭಾರತೀಯ ಸ್ತ್ರೀಯರ ತಂಡವು ಇಂಡೋನೇಷಿಯಾ,ತುರ್ಕಮೆನಿಸ್ತಾನ್ ಹಾಗೂ ಮ್ಯಾನ್ಮಾರ್ ಜೊತೆ ಅಧಿಕೃತ ಪಂದ್ಯಗಳನ್ನು ಆಡಲಿದೆ ಎಂದು ಅಖಿಲ ಭಾರತ ಫುಟ್ಬಾಲ್ ಫೆಡರೇಷನ್ ತನ್ನ ವರದಿಯಲ್ಲಿ.ಪ್ರಕಟಿಸಿದೆ.

ಒಟ್ಟು 24 ಸದಸ್ಯರನ್ನು ಹೊಂದಿರುವ 20ರ ಒಳಗಿನ ಹರೆಯದ ಭಾರತೀಯ ಸ್ತ್ರೀಯರ ಫುಟ್ಬಾಲ್ ತಂಡವು ಅತ್ಯಂತ ಪ್ರತಿಭಾವಂತ ಆಟಗಾರನ್ನು ಹೊಂದಿದ್ದು ತಂಡಕ್ಕೆ ವಿಶೇಷ ಶಕ್ತಿಯಾಗಿ ಜಾಗತಿಕಮಟ್ಟದಲ್ಲಿ ಫುಟ್ಬಾಲ್ ಆಟದಲ್ಲಿ ಭಾರಿ ಪ್ರಸಿದ್ಧಿಯನ್ನು ಹೊಂದಿರುವ ಸ್ವೀಡನಿನ ಜೋಕೀಂ ಅಲೆಕ್ಸಾಂಡರ್ಸನ್ ರವರು ಮಾರ್ಗದರ್ಶನ ಹಾಗೂ ತರಬೇತಿ ನೀಡುತ್ತಿದ್ದಾರೆ. ಅಂತೆಯೇ ಉಡುಪಿ ಮೂಲದ ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿರುವ ಶ್ರೀವಾದಿರಾಜ ಹಾಗೂ ಸಹನಾ ಪೆಜತ್ತಾಯರ ಸುಪುತ್ರಿ ಮತ್ತು ಡಾ!!ವಿಶಾಕ್ ರಾವ್ ಪತ್ನಿ ಶ್ರೀಮತಿ ವಲ್ಲರಿ ಪೆಜತ್ತಾಯ ರಾವ್ ಈ ಫುಟ್ಬಾಲ್ ತಂಡದ ದೈಹಿಕಕ್ಷಮತಾ ತಜ್ಞರಾಗಿ (ಫಿಸಿಯೊ)ತಂಡದ ಜೊತೆಗಿದ್ದಾರೆ ಎನ್ನುವುದು ಕರಾವಳಿಯ ಕನ್ನಡಿಗರಿಗೆ ಅತ್ಯಂತ ಪ್ರತಿಷ್ಠೆ ಹಾಗೂ ಹೆಮ್ಮೆಯ ವಿಚಾರ.

20ರ ಕೆಳ ಹರೆಯದ ಭಾರತೀಯ ಸ್ತ್ರೀಯರ ಫುಟ್ಬಾಲ್ ತಂಡಕ್ಕೆ ಹೃತ್ಪೂರ್ವಕವಾಗಿ ಯಶಸ್ಸನ್ನು ಹಾರೈಸೋಣ.

LEAVE A REPLY

Please enter your comment!
Please enter your name here

one × five =

Latest news

ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ: ರಾಜಕೀಯದ ಜೊತೆಗೆ ಕ್ರೀಡಾ ಕ್ಷೇತ್ರಕ್ಕೂ ಅನನ್ಯ ಕೊಡುಗೆ

  ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ: ರಾಜಕೀಯದ ಜೊತೆಗೆ ಕ್ರೀಡಾ ಕ್ಷೇತ್ರಕ್ಕೂ ಅನನ್ಯ ಕೊಡುಗೆ ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ...

ಕ್ರೀಡಾ ಕ್ಷೇತ್ರಕ್ಕೆ ಶಿವನಾರಾಯಣ ಐತಾಳ್ ಕೋಟ ಕೊಡುಗೆ ಅಪಾರ-ಡಾ.ಕೃಷ್ಣಪ್ರಸಾದ್.ಕೆ

ಕ್ರೀಡಾ ಕ್ಷೇತ್ರಕ್ಕೆ ಶಿವನಾರಾಯಣ ಐತಾಳ್ ಕೋಟ ಕೊಡುಗೆ ಅಪಾರ-ಡಾ.ಕೃಷ್ಣಪ್ರಸಾದ್.ಕೆ ಶಿವ ಬಿಗ್ ಬ್ಯಾಶ್ ಲೀಗ್ ಗೆ ಅದ್ಧೂರಿಯ ಚಾಲನೆ ಕೋಟ-ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಕೋಟ ಸಾಲಿಗ್ರಾಮ...

ಬೀಜಾಯ್ಸ್ ಗ್ರೂಪ್ ಆಯೋಜನೆಯಲ್ಲಿ ಬಿಸಿಸಿ ಚಾಂಪಿಯನ್ಸ್ ಕಪ್–2025

ಬೀಜಾಯ್ಸ್ ಗ್ರೂಪ್ ಆಯೋಜನೆಯಲ್ಲಿ ಬಿಸಿಸಿ ಚಾಂಪಿಯನ್ಸ್ ಕಪ್–2025 ಶಾರ್ಜಾದಲ್ಲಿ ಕಾರ್ಪೊರೇಟ್ ಕ್ರಿಕೆಟ್‌ಗೆ ಭರ್ಜರಿ ವೇದಿಕೆ ಬೀಜಾಯ್ಸ್ ಗ್ರೂಪ್ ಆಫ್ ಕಂಪನೀಸ್‌ಗಳ ಆಯೋಜನೆಯಲ್ಲಿ ಬಿಸಿಸಿ ಚಾಂಪಿಯನ್ಸ್ ಕಪ್–2025 ಕ್ರಿಕೆಟ್ ಟೂರ್ನಮೆಂಟ್...

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್ ಭಾರತೀಯ ಕ್ರಿಕೆಟ್‌ನ ಅತ್ಯುತ್ತಮ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಯುವರಾಜ್ ಸಿಂಗ್, ದೊಡ್ಡ ವೇದಿಕೆಗಳಲ್ಲಿ ತಂಡಕ್ಕೆ ಜಯ ತಂದುಕೊಡುವ ಶಕ್ತಿಶಾಲಿ ಪ್ರದರ್ಶನಗಳಿಂದ...
- Advertisement -spot_imgspot_img

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು ಯಲಹಂಕ ತಾಲ್ಲೂಕಿನ ಕುದುರೆಗೆರೆ ಪ್ರದೇಶದಲ್ಲಿ ಕೆ.ಎಂ.ಶ್ರೀನಿವಾಸ್ ರವರ ಸ್ಮರಣಾರ್ಥ ಹಾಗೂ ಕೆ.ಎಂ. ಸುಬ್ರಮಣಿ ರವರ...

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಸ್ಥೆ, ಕೋಟ ಸಾಲಿಗ್ರಾಮದ ಆಯೋಜನೆಯಲ್ಲಿ ನಡೆಯುವ ಪ್ರತಿಷ್ಠಿತ ಶಿವ ಬಿಗ್...

Must read

- Advertisement -spot_imgspot_img

You might also likeRELATED
Recommended to you