ಕ್ರಿಕೆಟ್ತುಮಕೂರಿನಲ್ಲಿ ವಾಸು"ಪ್ರಕಾಶ"-ಫ್ರೆಂಡ್ಸ್ ಬೆಂಗಳೂರಿಗೆ ಋತುವಿನ 4 ನೇ ಚಾಂಪಿಯನ್ಸ್ ಪಟ್ಟ

ತುಮಕೂರಿನಲ್ಲಿ ವಾಸು”ಪ್ರಕಾಶ”-ಫ್ರೆಂಡ್ಸ್ ಬೆಂಗಳೂರಿಗೆ ಋತುವಿನ 4 ನೇ ಚಾಂಪಿಯನ್ಸ್ ಪಟ್ಟ

-

- Advertisment -spot_img
ತುಮಕೂರು-ಚಕ್ರವರ್ತಿ ಗೆಳೆಯರ ಬಳಗ ತುಮಕೂರು ಇವರ ಆಶ್ರಯದಲ್ಲಿ,ತುಮಕೂರಿನ ಕ್ರೀಡಾಪಟು ಹಾಗೂ ಕ್ರೀಡಾ ಸಂಘಟಕ ಪ್ರಕಾಶ್ ಟಿ.ಸಿ ಸಾರಥ್ಯದಲ್ಲಿ,ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ರವರ ಸವಿನೆನಪಿಗಾಗಿ,ತುಮಕೂರಿನಲ್ಲಿ ಆಯೋಜಿಸಲಾದ 5 ನೇ ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟದ ರೋಚಕ ಫೈನಲ್ ನಲ್ಲಿ ಕೊನೆಯ ಎರಡು ಎಸೆತಗಳಲ್ಲಿ 7 ರನ್ ಅಗತ್ಯತೆಯ ಸಂಧರ್ಭದಲ್ಲಿ ಫ್ರೆಂಡ್ಸ್ ಬೆಂಗಳೂರಿನ‌ ಆಪತ್ಬಾಂಧವ ವಾಸು ಪ್ರಕಾಶ್ ಐದನೇ ಎಸೆತದಲ್ಲಿ ಸಿಕ್ಸರ್ ಸಿಡಿಸುವುದರ ಮೂಲಕ ಪಂದ್ಯ ಟೈ ನಲ್ಲಿ ಅಂತ್ಯಗೊಂಡಿತ್ತು.
ಸೂಪರ್ ಓವರ್ ನಲ್ಲಿ ಸಿಡಿದ ಸಾಗರ್ ಭಂಡಾರಿ ಮತ್ತು ನವೀನ್ ಎದುರಾಳಿಯ ಗೆಲುವಿನ‌ ಕನಸನ್ನು ಭಗ್ನಗೊಳಿಸಿದರು.ಈ ಮೂಲಕ ಫ್ರೆಂಡ್ಸ್ ಬೆಂಗಳೂರು 2022-23 ಋತುವಿನ 4 ನೇ ಚಾಂಪಿಯನ್ ಮತ್ತು 2 ಬಾರಿ ರನ್ನರ್ಸ್  ಗೌರವಕ್ಕೆ ಪಾತ್ರರಾದರು.
ಇದಕ್ಕೂ ಮುನ್ನ ಸೆಮಿಫೈನಲ್ ನಲ್ಲಿ ಫ್ರೆಂಡ್ಸ್ ಬೆಂಗಳೂರು-ಚಕ್ರವರ್ತಿ ತುಮಕೂರು ತಂಡವನ್ನು ಹಾಗೂ ನ್ಯಾಶ್ ಬೆಂಗಳೂರು-ಮೈಟಿ ಬೆಂಗಳೂರು ತಂಡವನ್ನು ಸೋಲಿಸಿ‌‌ ಫೈನಲ್ ಪ್ರವೇಶಿಸಿದ್ದರು.
ಚಾಂಪಿಯನ್ಸ್ ಫ್ರೆಂಡ್ಸ್ ಬೆಂಗಳೂರು 3 ಲಕ್ಷ ನಗದು ಮತ್ತು ದ್ವಿತೀಯ ಸ್ಥಾನಿ ನ್ಯಾಶ್ ಬೆಂಗಳೂರು 1.5 ಲಕ್ಷ ನಗದು ಬಹುಮಾನ ಸಹಿತ ಆಕರ್ಷಕ ಪಾರಿತೋಷಕಗಳನ್ನು ಪಡೆದುಕೊಂಡರು.
ಫೈನಲ್ ಹೀರೋ ವಾಸು ಪ್ರಕಾಶ್ ತಿಪಟೂರು ಪಂದ್ಯಶ್ರೇಷ್ಟ,ಟೂರ್ನಮೆಂಟ್ ನ ಬೆಸ್ಟ್ ಬ್ಯಾಟರ್ ಫ್ರೆಂಡ್ಸ್ ನ‌ ನವೀನ್ ರಾಕರ್ಸ್,ಬೆಸ್ಟ್ ಬೌಲರ್ ನ್ಯಾಶ್ ಪುರುಷಿ ಹಾಗೂ ಪಂದ್ಯಾಟದುದ್ದಕ್ಕೂ ಶ್ರೇಷ್ಠ ಆಲ್ರೌಂಡರ್ ಪ್ರದರ್ಶನ ನೀಡಿದ ಸಾಗರ್ ಭಂಡಾರಿ‌ ಸರಣಿ ಶ್ರೇಷ್ಠ ಗೌರವಕ್ಕೆ ಪಾತ್ರರಾದರು.
ಸಮಾರೋಪ ಸಮಾರಂಭದಲ್ಲಿ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು,
ಕ್ರೀಡಾಪಟು ಮತ್ತು ಕ್ರೀಡಾಪ್ರೋತ್ಸಾಹಕರು,
ಪ್ರಥಮ‌ಪ್ರಶಸ್ತಿ ಪ್ರಾಯೋಜಕರಾದ ಶ್ರೀಯುತ ಪಿ.ಎನ್.ಕೃಷ್ಣಮೂರ್ತಿಯವರು ಬಹುಮಾನವನ್ನು ವಿತರಿಸಿದರು.ಕುಟುಂಬ ಸಮೇತರಾಗಿ ಆಗಮಿಸಿದ್ದ ಪಿ.ಎನ್.ಕೆ ಯವರು ಬೆಳಿಗ್ಗೆ 2.30 ಗಂಟೆಯ ವರೆಗೂ ಪಂದ್ಯಾಟದ ಸವಿಯನ್ನು ಸವಿದರು.ಈ ಸಂದರ್ಭ ತುಮಕೂರು ಗ್ರಾಮಾಂತರ ಶಾಸಕರಾದ ಗೌರಿಶಂಕರ್,ಧನಿಯ ಕುಮಾರ್,ಶ್ರೀಧರ್,
ಪ್ರೊ.ಕಿರಣ್,ಚಕ್ರವರ್ತಿ ಗೆಳೆಯರ ಬಳಗದ ನಾಯಕ ಪ್ರಕಾಶ್.ಟಿ‌.ಸಿ ಮತ್ತು ತಂಡದ ಸರ್ವ ಸದಸ್ಯರು ಉಪಸ್ಥಿತರಿದ್ದರು.
ವೀಕ್ಷಕ ವಿವರಣೆಯಲ್ಲಿ ರಾಜ್ಯಮಟ್ಟದ ವೀಕ್ಷಕ ವಿವರಣೆಕಾರರಾದ ರಾಘು ಮಟಪಾಡಿ ಮತ್ತು ಕುಣಿಗಲ್ ಮಂಜು ಸಹಕರಿಸಿದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

16 + 18 =

Latest news

HMC ಯುನೈಟೆಡ್ ಟ್ರೋಫಿ–2026: ಕ್ವಾರ್ಟರ್ ಫೈನಲ್ ಪಂದ್ಯಗಳ ವೇಳಾಪಟ್ಟಿ ಪ್ರಕಟ ; ಸೆಮಿಫೈನಲ್ ಹೋರಾಟಕ್ಕೂ ಸಜ್ಜು

  HMC ಯುನೈಟೆಡ್ ಟ್ರೋಫಿ–2026: ಕ್ವಾರ್ಟರ್ ಫೈನಲ್ ಪಂದ್ಯಗಳ ವೇಳಾಪಟ್ಟಿ ಪ್ರಕಟ ; ಸೆಮಿಫೈನಲ್ ಹೋರಾಟಕ್ಕೂ ಸಜ್ಜು HMC ಯುನೈಟೆಡ್ ಟ್ರೋಫಿ–2026 ಕ್ರಿಕೆಟ್ ಟೂರ್ನಿಯ ಕ್ವಾರ್ಟರ್ ಫೈನಲ್ ಪಂದ್ಯಗಳ...

CCLನಲ್ಲಿ ರಾಜೀವ್ ಹನು ಶತಕ – ತೆಲುಗು ವಾರಿಯರ್ಸ್ ವಿರುದ್ಧ ಸಾಧನೆ

CCLನಲ್ಲಿ ರಾಜೀವ್ ಹನು ಶತಕ – ತೆಲುಗು ವಾರಿಯರ್ಸ್ ವಿರುದ್ಧ ಸಾಧನೆ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL) ಟೂರ್ನಿಯ ಇತ್ತೀಚೆಗೆ ನಡೆದ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ತಂಡದ...

ಶ್ರೀ ಲಕ್ಷ್ಮೀವರತೀರ್ಥಶ್ರೀ ಲೆಜೆಂಡ್ಸ್ ಕಪ್–2026: ಕ್ರೀಡಾ ಹಬ್ಬಕ್ಕೆ ಸಜ್ಜಾದ ಶ್ರೀ ಕೃಷ್ಣ ಕ್ಷೇತ್ರ.

ಶ್ರೀ ಲಕ್ಷ್ಮೀವರತೀರ್ಥಶ್ರೀ ಲೆಜೆಂಡ್ಸ್ ಕಪ್–2026: ಕ್ರೀಡಾ ಹಬ್ಬಕ್ಕೆ ಸಜ್ಜಾದ  ಶ್ರೀ ಕೃಷ್ಣ ಕ್ಷೇತ್ರ. ಧರ್ಮ ಕ್ರೀಡೆ ಸಾಹಿತ್ಯ ಸಂಸ್ಕೃತಿಯ ಮಹಾಪೋಷಕರಾಗಿದ್ದ ಶ್ರೀಶಿರೂರುಮಠದ ಪೀಠಾಧಿಪತಿ ಕೀರ್ತಿಶೇಷ ಶ್ರೀಲಕ್ಷ್ಮೀವರತೀರ್ಥಶ್ರೀಪಾದರ ಸ್ಮರಣಾರ್ಥ...

HMC ಯುನೈಟೆಡ್ ಟ್ರೋಫಿ–2026: ಪೂಲ್ ‘ಎ’ ಪಂದ್ಯಗಳ ವೇಳಾಪಟ್ಟಿ ಪ್ರಕಟ

HMC ಯುನೈಟೆಡ್ ಟ್ರೋಫಿ–2026: ಪೂಲ್ ‘ಎ’ ಪಂದ್ಯಗಳ ವೇಳಾಪಟ್ಟಿ ಪ್ರಕಟ ಅಂತರರಾಷ್ಟ್ರೀಯ ಮಟ್ಟದ ಟೆನಿಸ್ ಬಾಲ್ ಕ್ರಿಕೆಟ್ ಮಹೋತ್ಸವವಾಗಿರುವ HMC ಯುನೈಟೆಡ್ ಟ್ರೋಫಿ–2026ಗೆ ಭರ್ಜರಿ ಚಾಲನೆ ದೊರೆತಿದ್ದು,...
- Advertisement -spot_imgspot_img

ಕಿದಿಯೂರಿನಲ್ಲಿ ಎಸ್‌ಎನ್‌ಜಿ ಪ್ರೀಮಿಯರ್ ಲೀಗ್ – ‘ಎಸ್‌ಎನ್‌ಜಿ ಟ್ರೋಫಿ 2026’ ಕ್ರಿಕೆಟ್ ಪಂದ್ಯಾವಳಿ

  ಕಿದಿಯೂರಿನಲ್ಲಿ ಎಸ್‌ಎನ್‌ಜಿ ಪ್ರೀಮಿಯರ್ ಲೀಗ್ – ‘ಎಸ್‌ಎನ್‌ಜಿ ಟ್ರೋಫಿ 2026’ ಕ್ರಿಕೆಟ್ ಪಂದ್ಯಾವಳಿ   ಕಿದಿಯೂರಿನ ಎಸ್‌ಎನ್‌ಜಿ ಸ್ಪೋರ್ಟ್ಸ್ ಕ್ಲಬ್ ತನ್ನ 12ನೇ ವಾರ್ಷಿಕೋತ್ಸವದ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿ...

HMC ಯುನೈಟೆಡ್ ಟ್ರೋಫಿ 2026-ಅಂತರರಾಷ್ಟ್ರೀಯಸಾಫ್ಟ್ ಟೆನಿಸ್ಬಾಲ್ ಕ್ರಿಕೆಟ್ ಹಬ್ಬಕ್ಕೆ ಕ್ಷಣಗಣನೆ ಪ್ರಾರಂಭ.

HMC ಯುನೈಟೆಡ್ ಟ್ರೋಫಿ 2026-ಅಂತರರಾಷ್ಟ್ರೀಯಸಾಫ್ಟ್ ಟೆನಿಸ್ಬಾಲ್ ಕ್ರಿಕೆಟ್ ಹಬ್ಬಕ್ಕೆ ಕ್ಷಣಗಣನೆ ಪ್ರಾರಂಭ. HMC ಸಂಸ್ಥೆಯ 15ನೇ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಲಾಗುತ್ತಿರುವ HMC ಯುನೈಟೆಡ್ ಟ್ರೋಫಿ 2026 ಅಂತರರಾಷ್ಟ್ರೀಯ...

Must read

- Advertisement -spot_imgspot_img

You might also likeRELATED
Recommended to you