ಕ್ರಿಕೆಟ್ತುಮಕೂರಿನಲ್ಲಿ ವಾಸು"ಪ್ರಕಾಶ"-ಫ್ರೆಂಡ್ಸ್ ಬೆಂಗಳೂರಿಗೆ ಋತುವಿನ 4 ನೇ ಚಾಂಪಿಯನ್ಸ್ ಪಟ್ಟ

ತುಮಕೂರಿನಲ್ಲಿ ವಾಸು”ಪ್ರಕಾಶ”-ಫ್ರೆಂಡ್ಸ್ ಬೆಂಗಳೂರಿಗೆ ಋತುವಿನ 4 ನೇ ಚಾಂಪಿಯನ್ಸ್ ಪಟ್ಟ

-

- Advertisment -spot_img
ತುಮಕೂರು-ಚಕ್ರವರ್ತಿ ಗೆಳೆಯರ ಬಳಗ ತುಮಕೂರು ಇವರ ಆಶ್ರಯದಲ್ಲಿ,ತುಮಕೂರಿನ ಕ್ರೀಡಾಪಟು ಹಾಗೂ ಕ್ರೀಡಾ ಸಂಘಟಕ ಪ್ರಕಾಶ್ ಟಿ.ಸಿ ಸಾರಥ್ಯದಲ್ಲಿ,ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ರವರ ಸವಿನೆನಪಿಗಾಗಿ,ತುಮಕೂರಿನಲ್ಲಿ ಆಯೋಜಿಸಲಾದ 5 ನೇ ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟದ ರೋಚಕ ಫೈನಲ್ ನಲ್ಲಿ ಕೊನೆಯ ಎರಡು ಎಸೆತಗಳಲ್ಲಿ 7 ರನ್ ಅಗತ್ಯತೆಯ ಸಂಧರ್ಭದಲ್ಲಿ ಫ್ರೆಂಡ್ಸ್ ಬೆಂಗಳೂರಿನ‌ ಆಪತ್ಬಾಂಧವ ವಾಸು ಪ್ರಕಾಶ್ ಐದನೇ ಎಸೆತದಲ್ಲಿ ಸಿಕ್ಸರ್ ಸಿಡಿಸುವುದರ ಮೂಲಕ ಪಂದ್ಯ ಟೈ ನಲ್ಲಿ ಅಂತ್ಯಗೊಂಡಿತ್ತು.
ಸೂಪರ್ ಓವರ್ ನಲ್ಲಿ ಸಿಡಿದ ಸಾಗರ್ ಭಂಡಾರಿ ಮತ್ತು ನವೀನ್ ಎದುರಾಳಿಯ ಗೆಲುವಿನ‌ ಕನಸನ್ನು ಭಗ್ನಗೊಳಿಸಿದರು.ಈ ಮೂಲಕ ಫ್ರೆಂಡ್ಸ್ ಬೆಂಗಳೂರು 2022-23 ಋತುವಿನ 4 ನೇ ಚಾಂಪಿಯನ್ ಮತ್ತು 2 ಬಾರಿ ರನ್ನರ್ಸ್  ಗೌರವಕ್ಕೆ ಪಾತ್ರರಾದರು.
ಇದಕ್ಕೂ ಮುನ್ನ ಸೆಮಿಫೈನಲ್ ನಲ್ಲಿ ಫ್ರೆಂಡ್ಸ್ ಬೆಂಗಳೂರು-ಚಕ್ರವರ್ತಿ ತುಮಕೂರು ತಂಡವನ್ನು ಹಾಗೂ ನ್ಯಾಶ್ ಬೆಂಗಳೂರು-ಮೈಟಿ ಬೆಂಗಳೂರು ತಂಡವನ್ನು ಸೋಲಿಸಿ‌‌ ಫೈನಲ್ ಪ್ರವೇಶಿಸಿದ್ದರು.
ಚಾಂಪಿಯನ್ಸ್ ಫ್ರೆಂಡ್ಸ್ ಬೆಂಗಳೂರು 3 ಲಕ್ಷ ನಗದು ಮತ್ತು ದ್ವಿತೀಯ ಸ್ಥಾನಿ ನ್ಯಾಶ್ ಬೆಂಗಳೂರು 1.5 ಲಕ್ಷ ನಗದು ಬಹುಮಾನ ಸಹಿತ ಆಕರ್ಷಕ ಪಾರಿತೋಷಕಗಳನ್ನು ಪಡೆದುಕೊಂಡರು.
ಫೈನಲ್ ಹೀರೋ ವಾಸು ಪ್ರಕಾಶ್ ತಿಪಟೂರು ಪಂದ್ಯಶ್ರೇಷ್ಟ,ಟೂರ್ನಮೆಂಟ್ ನ ಬೆಸ್ಟ್ ಬ್ಯಾಟರ್ ಫ್ರೆಂಡ್ಸ್ ನ‌ ನವೀನ್ ರಾಕರ್ಸ್,ಬೆಸ್ಟ್ ಬೌಲರ್ ನ್ಯಾಶ್ ಪುರುಷಿ ಹಾಗೂ ಪಂದ್ಯಾಟದುದ್ದಕ್ಕೂ ಶ್ರೇಷ್ಠ ಆಲ್ರೌಂಡರ್ ಪ್ರದರ್ಶನ ನೀಡಿದ ಸಾಗರ್ ಭಂಡಾರಿ‌ ಸರಣಿ ಶ್ರೇಷ್ಠ ಗೌರವಕ್ಕೆ ಪಾತ್ರರಾದರು.
ಸಮಾರೋಪ ಸಮಾರಂಭದಲ್ಲಿ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು,
ಕ್ರೀಡಾಪಟು ಮತ್ತು ಕ್ರೀಡಾಪ್ರೋತ್ಸಾಹಕರು,
ಪ್ರಥಮ‌ಪ್ರಶಸ್ತಿ ಪ್ರಾಯೋಜಕರಾದ ಶ್ರೀಯುತ ಪಿ.ಎನ್.ಕೃಷ್ಣಮೂರ್ತಿಯವರು ಬಹುಮಾನವನ್ನು ವಿತರಿಸಿದರು.ಕುಟುಂಬ ಸಮೇತರಾಗಿ ಆಗಮಿಸಿದ್ದ ಪಿ.ಎನ್.ಕೆ ಯವರು ಬೆಳಿಗ್ಗೆ 2.30 ಗಂಟೆಯ ವರೆಗೂ ಪಂದ್ಯಾಟದ ಸವಿಯನ್ನು ಸವಿದರು.ಈ ಸಂದರ್ಭ ತುಮಕೂರು ಗ್ರಾಮಾಂತರ ಶಾಸಕರಾದ ಗೌರಿಶಂಕರ್,ಧನಿಯ ಕುಮಾರ್,ಶ್ರೀಧರ್,
ಪ್ರೊ.ಕಿರಣ್,ಚಕ್ರವರ್ತಿ ಗೆಳೆಯರ ಬಳಗದ ನಾಯಕ ಪ್ರಕಾಶ್.ಟಿ‌.ಸಿ ಮತ್ತು ತಂಡದ ಸರ್ವ ಸದಸ್ಯರು ಉಪಸ್ಥಿತರಿದ್ದರು.
ವೀಕ್ಷಕ ವಿವರಣೆಯಲ್ಲಿ ರಾಜ್ಯಮಟ್ಟದ ವೀಕ್ಷಕ ವಿವರಣೆಕಾರರಾದ ರಾಘು ಮಟಪಾಡಿ ಮತ್ತು ಕುಣಿಗಲ್ ಮಂಜು ಸಹಕರಿಸಿದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

fifteen − eight =

Latest news

ಅಕ್ಷಯ ಟಿ 20 ಕಪ್-2026 ಪಂದ್ಯಾಟಕ್ಕೆ ಅದ್ಧೂರಿ ಚಾಲನೆ

  ಅಕ್ಷಯ ಟಿ 20 ಕಪ್-2026 ಪಂದ್ಯಾಟಕ್ಕೆ ಅದ್ಧೂರಿ ಚಾಲನೆ ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ ವತಿಯಿಂದ, ಉಡುಪಿ ಕ್ರಿಕೆಟ್ ಅಸೋಸಿಯೇಷನ್ ಉಡುಪಿ ಹಾಗೂ ಸನ್‌ರೈಸ್ ಕ್ರಿಕೆಟ್ ಅಕಾಡೆಮಿ...

ಉಡುಪಿ ಜಿಲ್ಲಾಮಟ್ಟದ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಟೂರ್ನಿ – 2026

ಉಡುಪಿ ಜಿಲ್ಲಾಮಟ್ಟದ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಟೂರ್ನಿ – 2026 ಉಡುಪಿ: ಅಕ್ಷಯ ಕ್ರಿಕೆಟ್ ಅಕಾಡೆಮಿ, ಉಡುಪಿ ಮತ್ತು ಸನ್‌ರೈಸ್ ಕ್ರಿಕೆಟ್ ಅಕಾಡೆಮಿ, ರಂಗನಪಾಲ್ಕೆ ಇವರ...

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್ ಕುಂದಾಪುರ-ಇಲ್ಲಿನ ಫ್ರೆಂಡ್ಸ್ ಕೆದೂರು ಮೊತ್ತ ಮೊದಲ ಬಾರಿಗೆ ಆಯೋಜಿಸಿದ 60 ಗಜಗಳ ಮುಕ್ತ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಫ್ರೆಂಡ್ಶಿಫ್ ಟ್ರೋಫಿ-2026...

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026 ಕಂದಾಯ ಇಲಾಖೆ ಕರ್ನಾಟಕ ರಾಜ್ಯ ಗ್ರಾಮ...
- Advertisement -spot_imgspot_img

ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS ಕಪ್ 2026

ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS CUP 2026 CHIVAS ಎಫ್‌ಸಿ ವತಿಯಿಂದ ಅಂಡರ್-21 ಫ್ಲಡ್‌ಲೈಟ್ ಟರ್ಫ್ ಲೀಗ್ ಟೂರ್ನಮೆಂಟ್ “CHIVAS ಕಪ್ 2026”...

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5 ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ (ರಿ.) ಹಾಗೂ ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್...

Must read

- Advertisement -spot_imgspot_img

You might also likeRELATED
Recommended to you