15.6 C
London
Sunday, May 19, 2024
Homeಕ್ರಿಕೆಟ್ತುಮಕೂರಿನಲ್ಲಿ ವಾಸು"ಪ್ರಕಾಶ"-ಫ್ರೆಂಡ್ಸ್ ಬೆಂಗಳೂರಿಗೆ ಋತುವಿನ 4 ನೇ ಚಾಂಪಿಯನ್ಸ್ ಪಟ್ಟ

ತುಮಕೂರಿನಲ್ಲಿ ವಾಸು”ಪ್ರಕಾಶ”-ಫ್ರೆಂಡ್ಸ್ ಬೆಂಗಳೂರಿಗೆ ಋತುವಿನ 4 ನೇ ಚಾಂಪಿಯನ್ಸ್ ಪಟ್ಟ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ತುಮಕೂರು-ಚಕ್ರವರ್ತಿ ಗೆಳೆಯರ ಬಳಗ ತುಮಕೂರು ಇವರ ಆಶ್ರಯದಲ್ಲಿ,ತುಮಕೂರಿನ ಕ್ರೀಡಾಪಟು ಹಾಗೂ ಕ್ರೀಡಾ ಸಂಘಟಕ ಪ್ರಕಾಶ್ ಟಿ.ಸಿ ಸಾರಥ್ಯದಲ್ಲಿ,ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ರವರ ಸವಿನೆನಪಿಗಾಗಿ,ತುಮಕೂರಿನಲ್ಲಿ ಆಯೋಜಿಸಲಾದ 5 ನೇ ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟದ ರೋಚಕ ಫೈನಲ್ ನಲ್ಲಿ ಕೊನೆಯ ಎರಡು ಎಸೆತಗಳಲ್ಲಿ 7 ರನ್ ಅಗತ್ಯತೆಯ ಸಂಧರ್ಭದಲ್ಲಿ ಫ್ರೆಂಡ್ಸ್ ಬೆಂಗಳೂರಿನ‌ ಆಪತ್ಬಾಂಧವ ವಾಸು ಪ್ರಕಾಶ್ ಐದನೇ ಎಸೆತದಲ್ಲಿ ಸಿಕ್ಸರ್ ಸಿಡಿಸುವುದರ ಮೂಲಕ ಪಂದ್ಯ ಟೈ ನಲ್ಲಿ ಅಂತ್ಯಗೊಂಡಿತ್ತು.
ಸೂಪರ್ ಓವರ್ ನಲ್ಲಿ ಸಿಡಿದ ಸಾಗರ್ ಭಂಡಾರಿ ಮತ್ತು ನವೀನ್ ಎದುರಾಳಿಯ ಗೆಲುವಿನ‌ ಕನಸನ್ನು ಭಗ್ನಗೊಳಿಸಿದರು.ಈ ಮೂಲಕ ಫ್ರೆಂಡ್ಸ್ ಬೆಂಗಳೂರು 2022-23 ಋತುವಿನ 4 ನೇ ಚಾಂಪಿಯನ್ ಮತ್ತು 2 ಬಾರಿ ರನ್ನರ್ಸ್  ಗೌರವಕ್ಕೆ ಪಾತ್ರರಾದರು.
ಇದಕ್ಕೂ ಮುನ್ನ ಸೆಮಿಫೈನಲ್ ನಲ್ಲಿ ಫ್ರೆಂಡ್ಸ್ ಬೆಂಗಳೂರು-ಚಕ್ರವರ್ತಿ ತುಮಕೂರು ತಂಡವನ್ನು ಹಾಗೂ ನ್ಯಾಶ್ ಬೆಂಗಳೂರು-ಮೈಟಿ ಬೆಂಗಳೂರು ತಂಡವನ್ನು ಸೋಲಿಸಿ‌‌ ಫೈನಲ್ ಪ್ರವೇಶಿಸಿದ್ದರು.
ಚಾಂಪಿಯನ್ಸ್ ಫ್ರೆಂಡ್ಸ್ ಬೆಂಗಳೂರು 3 ಲಕ್ಷ ನಗದು ಮತ್ತು ದ್ವಿತೀಯ ಸ್ಥಾನಿ ನ್ಯಾಶ್ ಬೆಂಗಳೂರು 1.5 ಲಕ್ಷ ನಗದು ಬಹುಮಾನ ಸಹಿತ ಆಕರ್ಷಕ ಪಾರಿತೋಷಕಗಳನ್ನು ಪಡೆದುಕೊಂಡರು.
ಫೈನಲ್ ಹೀರೋ ವಾಸು ಪ್ರಕಾಶ್ ತಿಪಟೂರು ಪಂದ್ಯಶ್ರೇಷ್ಟ,ಟೂರ್ನಮೆಂಟ್ ನ ಬೆಸ್ಟ್ ಬ್ಯಾಟರ್ ಫ್ರೆಂಡ್ಸ್ ನ‌ ನವೀನ್ ರಾಕರ್ಸ್,ಬೆಸ್ಟ್ ಬೌಲರ್ ನ್ಯಾಶ್ ಪುರುಷಿ ಹಾಗೂ ಪಂದ್ಯಾಟದುದ್ದಕ್ಕೂ ಶ್ರೇಷ್ಠ ಆಲ್ರೌಂಡರ್ ಪ್ರದರ್ಶನ ನೀಡಿದ ಸಾಗರ್ ಭಂಡಾರಿ‌ ಸರಣಿ ಶ್ರೇಷ್ಠ ಗೌರವಕ್ಕೆ ಪಾತ್ರರಾದರು.
ಸಮಾರೋಪ ಸಮಾರಂಭದಲ್ಲಿ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು,
ಕ್ರೀಡಾಪಟು ಮತ್ತು ಕ್ರೀಡಾಪ್ರೋತ್ಸಾಹಕರು,
ಪ್ರಥಮ‌ಪ್ರಶಸ್ತಿ ಪ್ರಾಯೋಜಕರಾದ ಶ್ರೀಯುತ ಪಿ.ಎನ್.ಕೃಷ್ಣಮೂರ್ತಿಯವರು ಬಹುಮಾನವನ್ನು ವಿತರಿಸಿದರು.ಕುಟುಂಬ ಸಮೇತರಾಗಿ ಆಗಮಿಸಿದ್ದ ಪಿ.ಎನ್.ಕೆ ಯವರು ಬೆಳಿಗ್ಗೆ 2.30 ಗಂಟೆಯ ವರೆಗೂ ಪಂದ್ಯಾಟದ ಸವಿಯನ್ನು ಸವಿದರು.ಈ ಸಂದರ್ಭ ತುಮಕೂರು ಗ್ರಾಮಾಂತರ ಶಾಸಕರಾದ ಗೌರಿಶಂಕರ್,ಧನಿಯ ಕುಮಾರ್,ಶ್ರೀಧರ್,
ಪ್ರೊ.ಕಿರಣ್,ಚಕ್ರವರ್ತಿ ಗೆಳೆಯರ ಬಳಗದ ನಾಯಕ ಪ್ರಕಾಶ್.ಟಿ‌.ಸಿ ಮತ್ತು ತಂಡದ ಸರ್ವ ಸದಸ್ಯರು ಉಪಸ್ಥಿತರಿದ್ದರು.
ವೀಕ್ಷಕ ವಿವರಣೆಯಲ್ಲಿ ರಾಜ್ಯಮಟ್ಟದ ವೀಕ್ಷಕ ವಿವರಣೆಕಾರರಾದ ರಾಘು ಮಟಪಾಡಿ ಮತ್ತು ಕುಣಿಗಲ್ ಮಂಜು ಸಹಕರಿಸಿದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

twenty − 9 =