ಸ್ಪೋರ್ಟ್ಸ್ವಿಶ್ವ ದಾಖಲೆಯೊಂದಿಗೆ ಗೆಲುವಿನ ಗರಿ ಧರಿಸಿದ ವೇದಾಂತ್ ನಾಗರಕಟ್ಟೆ

ವಿಶ್ವ ದಾಖಲೆಯೊಂದಿಗೆ ಗೆಲುವಿನ ಗರಿ ಧರಿಸಿದ ವೇದಾಂತ್ ನಾಗರಕಟ್ಟೆ

-

- Advertisment -spot_img
ಗಮನಾರ್ಹ ಸಾಧನೆಯೊಂದರಲ್ಲಿ ಮುಂಬೈನ 18 ವರ್ಷದ ವೇದಾಂತ್ ನಾಗರಕಟ್ಟೆ ಅವರು 2023 ರಲ್ಲಿ ಚೆಸ್‌ನಲ್ಲಿ ಒಂದು ವರ್ಷದಲ್ಲಿ ಅತಿ ಹೆಚ್ಚು ರೇಟಿಂಗ್ ಪಾಯಿಂಟ್‌ಗಳನ್ನು ಹೆಚ್ಚಿಸುವ ಮೂಲಕ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ.
ವೇದಾಂತ್ ಅವರ ಕುಟುಂಬ ಅಂಕೋಲಾ ಮೂಲದವರಾಗಿದ್ದಾರೆ. 2023ರ ಏಪ್ರಿಲ್ ಮತ್ತು ಸೆಪ್ಟೆಂಬರ್  ನಡುವೆ 622 ಅಂಕಗಳ ಅದ್ಭುತ ಏರಿಕೆ ಸಾಧಿಸಿದ ವೇದಾಂತ್ ಈಗ ಪ್ರತಿಷ್ಠಿತ ಎಫ್‌ಎಂ ಟೈಟಲ್ ಹೊಂದಿದ್ದಾರೆ ಮತ್ತು 2320 ರ ಅಸಾಧಾರಣ ರೇಟಿಂಗ್ ಅನ್ನು ತಮ್ಮದಾಗಿಸಿಕೊಂಡಿದ್ದಾರೆ.
ವೇದಾಂತ್ ಅವರ ಅಜ್ಜ ರಮೇಶ್ ನಾಗಪ್ಪ ಶೆಟ್ಟಿ ಮತ್ತು ಅಜ್ಜಿ ರಶ್ಮಿ ಶೆಟ್ಟಿ ಮತ್ತು ತಾಯಿಯ ಕಡೆಯ ಅಜ್ಜ ರಮೇಶ್ ಅಂಕೋಲೆಕರ್ ಮತ್ತು ಪ್ರೇಮಾ ಅಂಕೋಲೆಕರ್ ಅವರು ಅಂಕೋಲಾ/ಕಾರವಾರದ ಮೂಲದವರು, ವೃತ್ತಿಪರ ಕಾರಣಗಳಿಗಾಗಿ ಮುಂಬೈಗೆ ಸ್ಥಳಾಂತರಗೊಂಡವರು.
ವೇದಾಂತ್ ಅವರ ತಂದೆ-ತಾಯಿ ರಂಜನ್ ನಾಗರಕಟ್ಟೆ ಮತ್ತು ನಾಗರತ್ನ ನಾಗರಕಟ್ಟೆ ಅವರು ಕಾರವಾರದಲ್ಲಿ ಹುಟ್ಟಿ ಮುಂಬೈನಲ್ಲಿ ಶಿಕ್ಷಣ ಪಡೆದರು ಮತ್ತು ಅಲ್ಲಿಯೇ ಉದ್ಯೋಗದಲ್ಲಿರುವವರು. ಗಮನಾರ್ಹವಾಗಿ, ವೇದಾಂತ್ ಅವರ 13 ವರ್ಷದ ಸಹೋದರಿ, ಸೈನಾ ನಾಗರಕಟ್ಟೆ ಕೂಡ ಚೆಸ್ ಆಟಗಾರ್ತಿಯಾಗಿದ್ದು, ರಾಜ್ಯ ಮತ್ತು ಜಿಲ್ಲಾ ಸ್ಪರ್ಧೆಗಳಲ್ಲಿ ಅನೇಕ ಪ್ರಶಸ್ತಿಗಳನ್ನು ಗಳಿಸಿದ್ದಾರೆ.
ಭಾರತ ಮತ್ತು ಮಹಾರಾಷ್ಟ್ರವನ್ನು ಪ್ರತಿನಿಧಿಸಿ ಮತ್ತು ಶಾಲಾ ಮತ್ತು ಕಾಲೇಜು ಹಂತಗಳಲ್ಲಿ ಹಲವಾರು ಪುರಸ್ಕಾರಗಳನ್ನು ಗಳಿಸಿದ ದಾಖಲೆಯೊಂದಿಗೆ, ವೇದಾಂತ್ ಎಫ್‌ಐಡಿಇ ಮಾಸ್ಟರ್ ಎಂಬ ಗೌರವಾನ್ವಿತ ಟೈಟಲ್ ಅನ್ನು ಹೊಂದಿದ್ದಾರೆ, ಮಾತ್ರವಲ್ಲ 2300 ಕ್ಕಿಂತ ಹೆಚ್ಚಿನ ರೇಟಿಂಗ್ ಅನ್ನು ಕೂಡ ಹೊಂದಿದ್ದಾರೆ. ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಪಂದ್ಯಾವಳಿಗಳಲ್ಲಿ ಅವರ ಸಕ್ರಿಯ ಭಾಗವಹಿಸುವಿಕೆ, ಚೆಸ್ ಕಣದಲ್ಲಿ ಅವರ ಹೆಗ್ಗಳಿಕೆಯನ್ನು ತೋರಿಸುತ್ತದೆ. ಮುಂದಿನ 12 ರಿಂದ 18 ತಿಂಗಳುಗಳಲ್ಲಿ ಗ್ರ್ಯಾಂಡ್ ಮಾಸ್ಟರ್ ಆಗುವುದು ವೇದಾಂತ್ ಅವರ ಗುರಿಯಾಗಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

fifteen − 10 =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you