ಕ್ರಿಕೆಟ್ವೀರಶೈವ ಲಿಂಗಾಯತ ಸಮಾಜ, ಅವಿನಹಳ್ಳಿ ಹೋಬಳಿ ವತಿಯಿಂದ ವೀರಶೈವ ಲಿಂಗಾಯತ ಟ್ರೋಫಿ–2026 ಕ್ರಿಕೆಟ್...

ವೀರಶೈವ ಲಿಂಗಾಯತ ಸಮಾಜ, ಅವಿನಹಳ್ಳಿ ಹೋಬಳಿ ವತಿಯಿಂದ ವೀರಶೈವ ಲಿಂಗಾಯತ ಟ್ರೋಫಿ–2026 ಕ್ರಿಕೆಟ್ ಟೂರ್ನಮೆಂಟ್

-

- Advertisment -spot_img

ವೀರಶೈವ ಲಿಂಗಾಯತ ಸಮಾಜ, ಅವಿನಹಳ್ಳಿ ಹೋಬಳಿ ವತಿಯಿಂದ ವೀರಶೈವ ಲಿಂಗಾಯತ ಟ್ರೋಫಿ–2026 ಕ್ರಿಕೆಟ್ ಟೂರ್ನಮೆಂಟ್

ವೀರಶೈವ ಲಿಂಗಾಯತ ಸಮಾಜ, ಅವಿನಹಳ್ಳಿ ಹೋಬಳಿ ಇವರ ಆಶ್ರಯದಲ್ಲಿ ವೀರಶೈವ ಲಿಂಗಾಯತ  ಟ್ರೋಫಿ-2026 (ಸೀಸನ್–2) ಕ್ರಿಕೆಟ್ ಟೂರ್ನಮೆಂಟ್ ಅನ್ನು  ಆಯೋಜಿಸಲಾಗಿದೆ.

ಈ ಟೂರ್ನಮೆಂಟ್ ಜನವರಿ 30, 31 ಹಾಗೂ ಫೆಬ್ರವರಿ 1, 2026 ರಂದು ಶಿವಮೊಗ್ಗ ಜಿಲ್ಲೆಯ ಶ್ರೀ ಸಿದ್ದಗಂಗಾ ಶಿವಕುಮಾರ ಸ್ವಾಮೀಜಿ ಕ್ರೀಡಾಂಗಣ, ದಣoದೂರು (ಗೆಣಸಿನಕುಣಿ–ಅವಿನಹಳ್ಳಿ) ನಲ್ಲಿ ನಡೆಯಲಿದೆ.

ಟೂರ್ನಮೆಂಟ್ನ ಉದ್ಘಾಟನಾ ಸಮಾರಂಭ ಜನವರಿ 30, 2026ರಂದು ಬೆಳಿಗ್ಗೆ 8 ಗಂಟೆಗೆ ನಡೆಯಲಿದ್ದು, ಸಮಾರೋಪ ಸಮಾರಂಭ ಫೆಬ್ರವರಿ 1, 2026ರಂದು ಸಂಜೆ 5 ಗಂಟೆಗೆ ನಡೆಯಲಿದೆ.

ಈ ಕ್ರಿಕೆಟ್ ಪಂದ್ಯಾವಳಿಯಲ್ಲಿ ವಿಜೇತ ತಂಡಕ್ಕೆ ರೂ. 30,000 ನಗದು ಬಹುಮಾನ ಮತ್ತು ಆಕರ್ಷಕ ಟ್ರೋಫಿ, ದ್ವಿತೀಯ ಸ್ಥಾನ ಪಡೆದ ತಂಡಕ್ಕೆ ರೂ. 20,000 ನಗದು ಬಹುಮಾನ ಮತ್ತು ಟ್ರೋಫಿ ನೀಡಲಾಗುವುದು.

ಈ ಕ್ರೀಡಾಕೂಟಕ್ಕೆ ವೀರಶೈವ ಧರ್ಮದ ಗಣ್ಯರು ಹಾಗೂ ಸಮಾಜದ ಮುಖಂಡರ ಆಶೀರ್ವಾದ ದೊರಕಿದ್ದು, ಸಮಾಜದ ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಈ ಪಂದ್ಯಾವಳಿ ಆಯೋಜಿಸಲಾಗಿದೆ. ಟೂರ್ನಮೆಂಟ್ ಯಶಸ್ವಿಗಾಗಿ ಸಮರ್ಪಿತ ಸಮಿತಿ ಶ್ರಮಿಸುತ್ತಿದ್ದು, ಕ್ರೀಡಾಭಿಮಾನಿಗಳಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.

ಪಂದ್ಯಾವಳಿಯನ್ನು ಸ್ಪೋರ್ಟ್ಸ್ ಕನ್ನಡ ಯೂಟ್ಯೂಬ್ ಮೂಲಕ ನೇರ ಪ್ರಸಾರ ಮಾಡಲಾಗುವುದರಿಂದ ರಾಜ್ಯದ ವಿವಿಧ ಭಾಗಗಳ ಕ್ರೀಡಾಭಿಮಾನಿಗಳು ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ.

ಆಸಕ್ತ ತಂಡಗಳು ಹೆಚ್ಚಿನ ಮಾಹಿತಿಗಾಗಿ ಅಥವಾ ನೋಂದಣಿಗಾಗಿ

ಪ್ರದೀಪ್ ದಣoದೂರು – 84315 12561,

ಶಶಿಧರ್ ಸಾತಾಳಲು – 93791 12682,

ಪ್ರೇಮ್ ಕಠಾರಿಕೊಪ್ಪ – 89716 80311,

ಕಿರಣ್ ಕಸವೆ– 96324 53256,

ಶಶಿ ಅವಿನಹಳ್ಳಿ – 99019 54890

ಸಂಪರ್ಕಿಸುವಂತೆ ಆಯೋಜಕರು ತಿಳಿಸಿದ್ದಾರೆ.

ವೀರಶೈವ ಲಿಂಗಾಯತ ಸಮಾಜದ ಈ ಕ್ರಿಕೆಟ್ ಟೂರ್ನಮೆಂಟ್ ಕ್ರೀಡಾ ಸೌಹಾರ್ದತೆಯನ್ನು ಬೆಳೆಸುವ ಜೊತೆಗೆ ಯುವಕರಿಗೆ ಕ್ರೀಡಾ ಪ್ರೋತ್ಸಾಹ ನೀಡುವ ಮಹತ್ವದ ವೇದಿಕೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.

 

LEAVE A REPLY

Please enter your comment!
Please enter your name here

16 − eleven =

Latest news

ಫ್ರೆಂಡ್ಸ್ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ

ಫ್ರೆಂಡ್ಸ್ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ ಯುವ...

ಕಪ್ ರೆಡಿಯಾ..? ಗುಜರಾತ್ ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಬೆಂಗಳೂರು!

ಕಪ್ ರೆಡಿಯಾ..? ಗುಜರಾತ್ ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಬೆಂಗಳೂರು!   2026ರ ಐಪಿಎಲ್‌ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು 92 ರನ್‌ಗಳಿಂದ ಮಣಿಸಿದ ರಾಯಲ್...

20 ಲಕ್ಷದ ಆಟಗಾರ… ಇಂದು ಆರ್‌ಸಿಬಿಯ ಅಮೂಲ್ಯ ರತ್ನ!

20 ಲಕ್ಷದ ಆಟಗಾರ… ಇಂದು ಆರ್‌ಸಿಬಿಯ ಅಮೂಲ್ಯ ರತ್ನ! ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇತಿಹಾಸದಲ್ಲಿ ಕೆಲವು ಆಟಗಾರರು ಕೇವಲ ಕ್ರಿಕೆಟಿಗರಾಗಿ ಮಾತ್ರ ಉಳಿಯುವುದಿಲ್ಲ; ಅವರು ಭಾವನೆಗಳಾಗುತ್ತಾರೆ....

RCBvsGT: ಫೈನಲ್‌ಗೆ ಯಾರು ಮುನ್ನಡೆಯುತ್ತಾರೆ… ಪ್ಲೇ-ಆಫ್ ಸುತ್ತನ್ನು ಗೆಲ್ಲುವ ಹೆಚ್ಚಿನ ಅವಕಾಶ ಯಾರಿಗೆ ಇದೆ?

  RCBvsGT: ಫೈನಲ್‌ಗೆ ಯಾರು ಮುನ್ನಡೆಯುತ್ತಾರೆ... ಪ್ಲೇ-ಆಫ್ ಸುತ್ತನ್ನು ಗೆಲ್ಲುವ ಹೆಚ್ಚಿನ ಅವಕಾಶ ಯಾರಿಗೆ ಇದೆ? ಈ ಋತುವಿನ ಐಪಿಎಲ್‌ನ ಮೊದಲ ಅರ್ಹತಾ ಸುತ್ತಿನಲ್ಲಿ ಬೆಂಗಳೂರು ಮತ್ತು ಗುಜರಾತ್...
- Advertisement -spot_imgspot_img

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ ಕರ್ನಾಟಕದ ಮಾಜಿ ಕ್ರಿಕೆಟಿಗ ಹಾಗೂ ಪ್ರತಿಭಾವಂತ ವೇಗದ ಬೌಲರ್ ಎಸ್.ಎಲ್. ಅಕ್ಷಯ್ ಅವರು ಭಾನುವಾರ ಲೀಗ್ ಪಂದ್ಯವೊಂದರ...

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್ ಅರಸೀಕೆರೆಯ ಕ್ರಿಕೆಟ್ ಅಭಿಮಾನಿಗಳಿಗೆ ಭರ್ಜರಿ ಕ್ರೀಡಾ ರಸದೌತಣ ನೀಡಲು “ಅರಸೀಕೆರೆ ಚಾಂಪಿಯನ್ಸ್...

Must read

- Advertisement -spot_imgspot_img

You might also likeRELATED
Recommended to you