ಕ್ರಿಕೆಟ್ಯುವ ಕ್ರಿಕೆಟಿಗರಿಗೆ ಜವಾಬ್ದಾರಿ ಮೂಡಿಸುವತ್ತ ವೆಂಕಟರಮಣ ಪಿತ್ರೋಡಿ ಸಂಸ್ಥೆ ವಿಶಿಷ್ಟ ಪ್ರಯತ್ನ-ಭಾಂಧವ್ಯ...

ಯುವ ಕ್ರಿಕೆಟಿಗರಿಗೆ ಜವಾಬ್ದಾರಿ ಮೂಡಿಸುವತ್ತ ವೆಂಕಟರಮಣ ಪಿತ್ರೋಡಿ ಸಂಸ್ಥೆ ವಿಶಿಷ್ಟ ಪ್ರಯತ್ನ-ಭಾಂಧವ್ಯ ಟ್ರೋಫಿ-2021

-

- Advertisment -spot_img
ಕಳೆದ ಮೂರು ದಶಕಗಳಿಂದ
ಕ್ರೀಡೆಯ ಜೊತೆ ಧಾರ್ಮಿಕ, ಸಾಮಾಜಿಕ,ಶೈಕ್ಷಣಿಕ ಸೇವೆಯಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡು ಇತ್ತೀಚೆಗಷ್ಟೇ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ ಪಡೆದ ರಾಜ್ಯದ ಶಿಸ್ತುಬದ್ಧ ಸಂಸ್ಥೆ ವೆಂಕಟರಮಣ ಸ್ಪೋರ್ಟ್ಸ್&ಕಲ್ಚರಲ್ ಕ್ಲಬ್(ರಿ)ಪಿತ್ರೋಡಿ ಪ್ರತಿ ವರ್ಷವೂ ಈ ಸಂಸ್ಥೆ ಸಂಘಟಿಸುವ ಪ್ರತಿಯೊಂದು ಕ್ರೀಡಾ ಚಟುವಟಿಕೆಗಳಲ್ಲಿ ಹೊಸತನ,ಸಮಾಜಕ್ಕೆ ಸಂದೇಶ,ಯುವ ಜನಾಂಗಕ್ಕೆ ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಗಿದೆ.
ವೆಂಕಟರಮಣ ಸಂಸ್ಥೆಯ ಜ್ಯೂನಿಯರ್ ತಂಡ ಈ ಬಾರಿ ಹಿರಿಯ ಕ್ರಿಕೆಟಿಗರ ಸಲಹೆ,ಸಹಕಾರದೊಂದಿಗೆ ಉದ್ಯಾವರ ಗ್ರಾಮೀಣ ಮಟ್ಟದ ಪ್ರತಿಭೆಗಳ ಅನಾವರಣ ಹಾಗೂ ಯುವ ಜನಾಂಗಕ್ಕೆ ಮನೆ ಜವಾಬ್ದಾರಿ ಮೂಡಿಸುವ ಸಲುವಾಗಿ ವಿಶಿಷ್ಟ ಪ್ರಯತ್ನದ ರೂಪದಲ್ಲಿ  ಜನವರಿ 16 ಮತ್ತು 17 ರಂದು ಉದ್ಯಾವರ
ಗ್ರಾಮಪಂಚಾಯತ್ ಮೈದಾನದಲ್ಲಿ
ಭಾಂದವ್ಯ ಟ್ರೋಫಿ-2021 ಆಯೋಜಿಸಿದ್ದಾರೆ.
ಉದ್ಯಾವರ ಪರಿಸರದ 15 ತಂಡಗಳು ಈ ಪಂದ್ಯಾಕೂಟದಲ್ಲಿ ಭಾಗವಹಿಸುತ್ತಿದ್ದು,
ವಿಜೇತ ತಂಡಗಳಿಗೆ ನಗದು ಬಹುಮಾನದ  ಬದಲಾಗಿ ಅಕ್ಕಿಯನ್ನು ನೀಡಲಾಗುತ್ತಿದೆ.
ಪ್ರಥಮ ಸ್ಥಾನಿ ತಂಡಕ್ಕೆ 600 ಕೆ‌.ಜಿ.ಅಕ್ಕಿ( ತಂಡದ ಎಲ್ಲಾ ಆಟಗಾರರಿಗೆ ತಲಾ 50 ಕೆ.ಜಿ ಅಕ್ಕಿ),ದ್ವಿತೀಯ ಸ್ಥಾನಿ ತಂಡಕ್ಕೆ 300
ಕೆ.ಜಿ ಅಕ್ಕಿ(ತಂಡದ ಎಲ್ಲಾ ಆಟಗಾರರಿಗೆ 25 ಕೆ.ಜಿ ಅಕ್ಕಿ),ಪ್ರತಿ ಪಂದ್ಯಕ್ಕೂ ಪಂದ್ಯಶ್ರೇಷ್ಟ 5 ಕೆ‌.ಜಿ ಅಕ್ಕಿ,ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರನಿಗೆ 25 ಕೆ‌.ಜಿ ಅಕ್ಕಿಯನ್ನು ನೀಡಲಾಗುತ್ತಿದೆ.
ಬಹುತೇಕ ಯುವಕರು ಗೆದ್ದ ನಗದು ಕೈಗೆ ಸಿಕ್ಕಾಗ ದಾರಿ ತಪ್ಪುವುದನ್ನು ಮನಗಂಡ ವೆಂಕಟರಮಣ ಸಂಸ್ಥೆ ಕಳೆದ ವರ್ಷವೂ ಕೂಡ ವಿಜೇತರಿಗೆ ನಗದು ಬಹುಮಾನದ ಬದಲಾಗಿ, ಕೆ‌.ಜಿ.ಗಟ್ಟಲೆ ಅಕ್ಕಿ ಬಹುಮಾನವನ್ನು ನೀಡಿ,ಆಟಗಾರರ ಪೋಷಕರ  ಮನದಲ್ಲಿ ಸಾರ್ಥಕ್ಯ ಭಾವ ಮೂಡಿಸುವಲ್ಲಿ ಯಶಸ್ವಿಯಾಗಿತ್ತು.
ಈ ಬಾರಿಯೂ ಕೂಡ ಟನ್ ಗಟ್ಟಲೆ ಅಕ್ಕಿ ಗ್ರಾಮೀಣ ಭಾಗದ ಯುವ ಕ್ರಿಕೆಟಿಗರ ಮನೆಗಳನ್ನು ತಲುಪಲಿದೆ….
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

2 + 16 =

Latest news

ಆರ್‌ಸಿಬಿ ಮಾಲೀಕತ್ವದ ಬದಲಾವಣೆ: ಬೆಂಗಳೂರಿನ ಉದ್ಯಮಿಗಳ ಹೊಸ ಅಧ್ಯಾಯ?

ಆರ್‌ಸಿಬಿ ಮಾಲೀಕತ್ವದ ಬದಲಾವಣೆ: ಬೆಂಗಳೂರಿನ ಉದ್ಯಮಿಗಳ ಹೊಸ ಅಧ್ಯಾಯ? ಐಪಿಎಲ್‌ನ ಅತ್ಯಂತ ಜನಪ್ರಿಯ ಮತ್ತು ವ್ಯಾಪಾರಿಕವಾಗಿ ಯಶಸ್ವಿಯಾದ ಫ್ರಾಂಚೈಸಿಗಳಲ್ಲಿ ಒಂದಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹೊಸ...

10 ಮಂದಿ ಹುಡುಗರ ಮಧ್ಯೆ ಒಬ್ಬಳು ಹೆಣ್ಣು ಹುಲಿ.. ಅವಳು ಬಂಗಾಳದ ಬಂಗಾರ..!

10 ಮಂದಿ ಹುಡುಗರ ಮಧ್ಯೆ ಒಬ್ಬಳು ಹೆಣ್ಣು ಹುಲಿ.. ಅವಳು ಬಂಗಾಳದ ಬಂಗಾರ..! ಪಶ್ಚಿಮ ಬಂಗಾಳದಲ್ಲಿ ಕ್ರಿಕೆಟ್ ಎಂದಾಕ್ಷಣ ಕಿವಿಗಪ್ಪಳಿಸುವ ಮೊದಲ ಹೆಸರು ‘ದಾದಾ’.. ಬಂಗಾಳದ ಮನೆ...

ಬ್ರಹ್ಮಾವರದ ಹೆಮ್ಮೆ – ವಿಶ್ವವಿಜೇತ ಜೆಮೀಮಾ ರೊಡ್ರಿಗಸ್ ಅವರ ಕೋಚ್ ಪ್ರಶಾಂತ್ ಶೆಟ್ಟಿ

ಬ್ರಹ್ಮಾವರದ ಹೆಮ್ಮೆ – ವಿಶ್ವವಿಜೇತ ಜೆಮೀಮಾ ರೊಡ್ರಿಗಸ್ ಅವರ ಕೋಚ್ ಪ್ರಶಾಂತ್ ಶೆಟ್ಟಿ ಇತ್ತೀಚೆಗೆ ನಡೆದ ಮಹಿಳೆಯರ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಪ್ರತಿಭಾವಂತ ಕ್ರಿಕೆಟರ್ ಜೆಮೀಮಾ...

ಲಾರೆನ್ಸ್ ಸಲ್ದಾನ: ಕೌಡೂರಿನ ಕ್ರೀಡೆ ಮತ್ತು ಕಲೆಗೆ ಹೊಸ ಉಸಿರು

  ಲಾರೆನ್ಸ್ ಸಲ್ದಾನ: ಕೌಡೂರಿನ ಕ್ರೀಡೆ ಮತ್ತು ಕಲೆಗೆ ಹೊಸ ಉಸಿರು ಇತ್ತೀಚೆಗೆ ನಡೆದ ಮಹಿಳೆಯರ ವಿಶ್ವಕಪ್ ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಭಾರತದ ಪ್ರತಿಭಾವಂತ ಬ್ಯಾಟ್ಸ್‌ವುಮನ್ ಜೆಮೀಮಾ ರೊಡ್ರಿಗಸ್ ಮಿಂಚಿ...
- Advertisement -spot_imgspot_img

ಬಂಟ್ವಾಳದಲ್ಲಿ ‘ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್–2’ ಕ್ರಿಕೆಟ್

ಬಂಟ್ವಾಳದಲ್ಲಿ ‘ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್–2’ ಕ್ರಿಕೆಟ್ “ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್ –2” ಕ್ರಿಕೆಟ್ ಟೂರ್ನಮೆಂಟ್ ಡಿಸೆಂಬರ್ 27 ಮತ್ತು 28ರಂದು ಬಂಟ್ವಾಳ ಮೈದಾನದಲ್ಲಿ ಜರುಗಲಿದೆ. ‘ಟೀಮ್ ಬ್ರದರ್ಸ್ ವತಿಯಿಂದ ಆಯೋಜಿಸಲಾದ...

ಜೈ ಭೀಮ್ ಟ್ರೋಫಿ – 2025: ಹೊಳೆನರಸೀಪುರದಲ್ಲಿ “ಫ್ರೆಂಡ್ಸ್ ಬೆಂಗಳೂರು” ತಂಡದ ವಿಜಯ ಕಿರೀಟ!

ಜೈ ಭೀಮ್ ಟ್ರೋಫಿ – 2025: ಹೊಳೆನರಸೀಪುರದಲ್ಲಿ “ಫ್ರೆಂಡ್ಸ್ ಬೆಂಗಳೂರು” ತಂಡದ ವಿಜಯ ಕಿರೀಟ! ಹೊಳೆನರಸೀಪುರದಲ್ಲಿ ನಡೆದ ಜೈ ಭೀಮ್ ಟ್ರೋಫಿ 2025 ಕ್ರಿಕೆಟ್ ಟೂರ್ನಿಯಲ್ಲಿ,...

Must read

- Advertisement -spot_imgspot_img

You might also likeRELATED
Recommended to you