ಕ್ರಿಕೆಟ್ವೆಂಕಟರಮಣ ಪಿತ್ರೋಡಿ- ವಿ‌.ಎಸ್.ಸಿ ಚಾಂಪಿಯನ್ಸ್ ಮಡಿಲಿಗೆ ಪಿ.ಪಿ.ಎಲ್-3 ಪ್ರಶಸ್ತಿ

ವೆಂಕಟರಮಣ ಪಿತ್ರೋಡಿ- ವಿ‌.ಎಸ್.ಸಿ ಚಾಂಪಿಯನ್ಸ್ ಮಡಿಲಿಗೆ ಪಿ.ಪಿ.ಎಲ್-3 ಪ್ರಶಸ್ತಿ

-

- Advertisment -spot_img
ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ
ರಾಜ್ಯದ ಶಿಸ್ತುಬದ್ಧ ಸಂಸ್ಥೆ ವೆಂಕಟರಮಣ ಸ್ಪೋರ್ಟ್ಸ್&ಕಲ್ಚರಲ್ ಕ್ಲಬ್(ರಿ) ರವಿವಾರ ಉದ್ಯಾವರ ಗ್ರಾಮ‌ ಪಂಚಾಯತ್ ಮೈದಾನದಲ್ಲಿ ಆಯೋಜಿಸಿದ್ದ ಪಿ.ಪಿ.ಎಲ್-13 ಟ್ರೋಫಿಯನ್ನು ಲೋಹಿತ್ ಕುಮಾರ್ ಪಿತ್ರೋಡಿ ಸಾರಥ್ಯದ ವಿ‌.ಎಸ್.ಸಿ.ಚಾಂಪಿಯನ್ಸ್ ಜಯಿಸಿದೆ.
ವೆಂಕಟರಮಣ ಪಿತ್ರೋಡಿ ತಂಡದ ಸದಸ್ಯರಿಂದ ಕೂಡಿದ 6 ತಂಡಗಳು ಭಾಗವಹಿಸಿದ್ದ ಈ ಪಂದ್ಯಾಕೂಟದ ಫೈನಲ್ ನಲ್ಲಿ ವಿ.ಎಸ್‌‌.ಸಿ ಸನ್ ರೈಸರ್ಸ್ ತಂಡವನ್ನು ಸೋಲಿಸುವುದರ ಮೂಲಕ ವಿ‌.ಎಸ್.ಸಿ ಚಾಂಪಿಯನ್ಸ್ ಪ್ರಶಸ್ತಿ ತನ್ನದಾಗಿಸಿಕೊಂಡಿತು.
ಬೆಸ್ಟ್ ಬ್ಯಾಟ್ಸ್‌ಮನ್ ರಾಕೇಶ್,ಸರಣಿ ಶ್ರೇಷ್ಠ ಡೆರಿನ್,ಎಮರ್ಜಿಂಗ್ ಪ್ಲೇಯರ್ ಇತೇಶ್ ಹಾಗೂ ವಿ.ಎಸ್.ಸಿ ಸನ್ ರೈಸರ್ಸ್ ಶಿಸ್ತುಬದ್ಧ ತಂಡ ಪ್ರಶಸ್ತಿ ಪಡೆದುಕೊಂಡರು.
ಬೆಳಿಗ್ಗೆ ನಡೆದ ಪಿ.ಪಿ.ಎಲ್ ನ ಉದ್ಘಾಟನಾ ಸಮಾರಂಭದಲ್ಲಿ
ವಿಶೇಷ ಚೇತನ ಚಿತ್ರಕಲಾವಿದ ಶಿರ್ವದ ಗಣೇಶ್ ಪಂಜಿಮಾರು,ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತೆ ತನುಶ್ರೀ ಪಿತ್ರೋಡಿ, ವಿ.ಎಸ್.ಸಿ ಬ್ಲಡ್ ಗ್ರೂಪ್ ನ‌ ಸದಸ್ಯರು ಹಾಗೂ ವಿವಿಧ ಕ್ಷೇತ್ರದ ಸಾಧಕರನ್ನು  ಸನ್ಮಾನಿಸಲಾಯಿತು.
“ತನ್ನ ಸಾಧನೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ನಿಂದ ಸನ್ಮಾನ ಸ್ವೀಕರಿಸಿರುವುದು ಹೆಮ್ಮೆಯ ವಿಚಾರ”ವೆಂದು ಗಣೇಶ್ ಪಂಜಿಮಾರು ಅಭಿಪ್ರಾಯ ತಿಳಿಸಿದರು.
ಈ ಸಂದರ್ಭ ತಂಡದ ಪ್ರತಿಯೊಬ್ಬ ಸದಸ್ಯರಿಗೂ ಪ್ರಕೃತಿ ಉಳಿಸುವ ಸಲುವಾಗಿ ಗಿಡ ವಿತರಣೆ,ತಂಡದ ಎಲ್ಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ,ತಂಡದ ವತಿಯಿಂದ ನಡೆಯುವ ಆನ್ಲೈನ್ ಸ್ಪರ್ಧೆ(ಚಿತ್ರಕಲೆ,ನೃತ್ಯ, ಸಂಗೀತ) ಬಹುಮಾನ ವಿತರಣೆ,ಅಭೂತಪೂರ್ವ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ,ವಿ.ಎಸ್.ಸಿ ಬ್ಲಡ್ ಫಾರ್ ಲೈಫ್ ನ ರಕ್ತದಾನಿ ಸದಸ್ಯರಿಗೆ ಜೀವರಕ್ಷಕ ಗೌರವ ಪ್ರಶಸ್ತಿ,ಹಿರಿಯ ಸಕ್ರಿಯ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಮಧ್ಯಮುಕ್ತ ಸಮಾಜ,ರಕ್ತದಾನದ ಮಹತ್ವದ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ನವೀನ್ ಸಾಲ್ಯಾನ್,ಮಾಜಿ ಅಧ್ಯಕ್ಷರು ಗೋಪಾಲ್ ಅಮೀನ್,ಜಿತೇಂದ್ರ ಶೆಟ್ಟಿ,ಉದ್ಯಮಿ ಲೋಹಿತ್ ಕುಮಾರ್ ಪಿತ್ರೋಡಿ,ಮಾಜಿ ಸೈನಿಕರಾದ ಬಾಲಚಂದ್ರ ಪಿತ್ರೋಡಿ,ಹಿರಿಯರಾದ ಸುಂದರ್ ಕೋಟ್ಯಾನ್,ವಿಜಯ್ ಕೋಟ್ಯಾನ್,ಮಲ್ಲೇಶ್ ಕುಮಾರ್,ಉದಯ್ ಕುಮಾರ್,ಪ್ರವೀಣ್ ಪಿತ್ರೋಡಿ, ಹಾಗೂ ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು….
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

eleven − 8 =

Latest news

ಕಲ್ಲು ಗಣಪತಿ ಟ್ರೋಫಿ 2026-27 – 16 ತಂಡಗಳ ಕ್ರಿಕೆಟ್ ಮಹಾಸಂಗ್ರಾಮ

ಕಲ್ಲು ಗಣಪತಿ ಟ್ರೋಫಿ 2026-27 – 16 ತಂಡಗಳ ಕ್ರಿಕೆಟ್ ಮಹಾಸಂಗ್ರಾಮ ಕುಂದಾಪುರದ ಪ್ರತಿಷ್ಠಿತ **ನಕ್ಷತ್ರ ಜ್ಯುವೆಲ್ಲರ್ಸ್** ಪ್ರಸ್ತುತಪಡಿಸುವ **ಕಲ್ಲು ಗಣಪತಿ ಟ್ರೋಫಿ 2026-27** ಕ್ರಿಕೆಟ್ ಟೂರ್ನಮೆಂಟ್‌ಗೆ...

ವಿಕ್ರಮ್ ಟ್ರೋಫಿ 2026 – ಉದಯೋನ್ಮುಖ ಕ್ರಿಕೆಟಿಗರಿಗೆ ಅದ್ಭುತ ವೇದಿಕೆ

ವಿಕ್ರಮ್ ಟ್ರೋಫಿ 2026 – ಉದಯೋನ್ಮುಖ ಕ್ರಿಕೆಟಿಗರಿಗೆ ಅದ್ಭುತ ವೇದಿಕೆ ಬೈಂದೂರಿನ ಪ್ರತಿಷ್ಠಿತ **ವಿಕ್ರಮ್ ಕ್ರಿಕೆಟ್ ಕ್ಲಬ್ (VCC)** ವತಿಯಿಂದ, **ಉಡುಪಿ ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್ (UDCA)**...

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...
- Advertisement -spot_imgspot_img

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...

Must read

- Advertisement -spot_imgspot_img

You might also likeRELATED
Recommended to you