ಕ್ರಿಕೆಟ್ವೆಂಕಟರಮಣ ಪಿತ್ರೋಡಿ- ವಿ‌.ಎಸ್.ಸಿ ಚಾಂಪಿಯನ್ಸ್ ಮಡಿಲಿಗೆ ಪಿ.ಪಿ.ಎಲ್-3 ಪ್ರಶಸ್ತಿ

ವೆಂಕಟರಮಣ ಪಿತ್ರೋಡಿ- ವಿ‌.ಎಸ್.ಸಿ ಚಾಂಪಿಯನ್ಸ್ ಮಡಿಲಿಗೆ ಪಿ.ಪಿ.ಎಲ್-3 ಪ್ರಶಸ್ತಿ

-

- Advertisment -spot_img
ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ
ರಾಜ್ಯದ ಶಿಸ್ತುಬದ್ಧ ಸಂಸ್ಥೆ ವೆಂಕಟರಮಣ ಸ್ಪೋರ್ಟ್ಸ್&ಕಲ್ಚರಲ್ ಕ್ಲಬ್(ರಿ) ರವಿವಾರ ಉದ್ಯಾವರ ಗ್ರಾಮ‌ ಪಂಚಾಯತ್ ಮೈದಾನದಲ್ಲಿ ಆಯೋಜಿಸಿದ್ದ ಪಿ.ಪಿ.ಎಲ್-13 ಟ್ರೋಫಿಯನ್ನು ಲೋಹಿತ್ ಕುಮಾರ್ ಪಿತ್ರೋಡಿ ಸಾರಥ್ಯದ ವಿ‌.ಎಸ್.ಸಿ.ಚಾಂಪಿಯನ್ಸ್ ಜಯಿಸಿದೆ.
ವೆಂಕಟರಮಣ ಪಿತ್ರೋಡಿ ತಂಡದ ಸದಸ್ಯರಿಂದ ಕೂಡಿದ 6 ತಂಡಗಳು ಭಾಗವಹಿಸಿದ್ದ ಈ ಪಂದ್ಯಾಕೂಟದ ಫೈನಲ್ ನಲ್ಲಿ ವಿ.ಎಸ್‌‌.ಸಿ ಸನ್ ರೈಸರ್ಸ್ ತಂಡವನ್ನು ಸೋಲಿಸುವುದರ ಮೂಲಕ ವಿ‌.ಎಸ್.ಸಿ ಚಾಂಪಿಯನ್ಸ್ ಪ್ರಶಸ್ತಿ ತನ್ನದಾಗಿಸಿಕೊಂಡಿತು.
ಬೆಸ್ಟ್ ಬ್ಯಾಟ್ಸ್‌ಮನ್ ರಾಕೇಶ್,ಸರಣಿ ಶ್ರೇಷ್ಠ ಡೆರಿನ್,ಎಮರ್ಜಿಂಗ್ ಪ್ಲೇಯರ್ ಇತೇಶ್ ಹಾಗೂ ವಿ.ಎಸ್.ಸಿ ಸನ್ ರೈಸರ್ಸ್ ಶಿಸ್ತುಬದ್ಧ ತಂಡ ಪ್ರಶಸ್ತಿ ಪಡೆದುಕೊಂಡರು.
ಬೆಳಿಗ್ಗೆ ನಡೆದ ಪಿ.ಪಿ.ಎಲ್ ನ ಉದ್ಘಾಟನಾ ಸಮಾರಂಭದಲ್ಲಿ
ವಿಶೇಷ ಚೇತನ ಚಿತ್ರಕಲಾವಿದ ಶಿರ್ವದ ಗಣೇಶ್ ಪಂಜಿಮಾರು,ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತೆ ತನುಶ್ರೀ ಪಿತ್ರೋಡಿ, ವಿ.ಎಸ್.ಸಿ ಬ್ಲಡ್ ಗ್ರೂಪ್ ನ‌ ಸದಸ್ಯರು ಹಾಗೂ ವಿವಿಧ ಕ್ಷೇತ್ರದ ಸಾಧಕರನ್ನು  ಸನ್ಮಾನಿಸಲಾಯಿತು.
“ತನ್ನ ಸಾಧನೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ನಿಂದ ಸನ್ಮಾನ ಸ್ವೀಕರಿಸಿರುವುದು ಹೆಮ್ಮೆಯ ವಿಚಾರ”ವೆಂದು ಗಣೇಶ್ ಪಂಜಿಮಾರು ಅಭಿಪ್ರಾಯ ತಿಳಿಸಿದರು.
ಈ ಸಂದರ್ಭ ತಂಡದ ಪ್ರತಿಯೊಬ್ಬ ಸದಸ್ಯರಿಗೂ ಪ್ರಕೃತಿ ಉಳಿಸುವ ಸಲುವಾಗಿ ಗಿಡ ವಿತರಣೆ,ತಂಡದ ಎಲ್ಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ,ತಂಡದ ವತಿಯಿಂದ ನಡೆಯುವ ಆನ್ಲೈನ್ ಸ್ಪರ್ಧೆ(ಚಿತ್ರಕಲೆ,ನೃತ್ಯ, ಸಂಗೀತ) ಬಹುಮಾನ ವಿತರಣೆ,ಅಭೂತಪೂರ್ವ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ,ವಿ.ಎಸ್.ಸಿ ಬ್ಲಡ್ ಫಾರ್ ಲೈಫ್ ನ ರಕ್ತದಾನಿ ಸದಸ್ಯರಿಗೆ ಜೀವರಕ್ಷಕ ಗೌರವ ಪ್ರಶಸ್ತಿ,ಹಿರಿಯ ಸಕ್ರಿಯ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಮಧ್ಯಮುಕ್ತ ಸಮಾಜ,ರಕ್ತದಾನದ ಮಹತ್ವದ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ನವೀನ್ ಸಾಲ್ಯಾನ್,ಮಾಜಿ ಅಧ್ಯಕ್ಷರು ಗೋಪಾಲ್ ಅಮೀನ್,ಜಿತೇಂದ್ರ ಶೆಟ್ಟಿ,ಉದ್ಯಮಿ ಲೋಹಿತ್ ಕುಮಾರ್ ಪಿತ್ರೋಡಿ,ಮಾಜಿ ಸೈನಿಕರಾದ ಬಾಲಚಂದ್ರ ಪಿತ್ರೋಡಿ,ಹಿರಿಯರಾದ ಸುಂದರ್ ಕೋಟ್ಯಾನ್,ವಿಜಯ್ ಕೋಟ್ಯಾನ್,ಮಲ್ಲೇಶ್ ಕುಮಾರ್,ಉದಯ್ ಕುಮಾರ್,ಪ್ರವೀಣ್ ಪಿತ್ರೋಡಿ, ಹಾಗೂ ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು….
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

twelve − eight =

Latest news

ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ – ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ

  ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ - ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತ...

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...
- Advertisement -spot_imgspot_img

ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ

  ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ Maharaja Trophy: ಜೂನ್‌ 20 ರಿಂದ ಟೂರ್ನಿ ಆರಂಭ, ಬೆಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ಪಂದ್ಯ ಆಯೋಜನೆ ಐದನೇ ಆವೃತ್ತಿಯ...

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ಉಡುಪಿ ಜಿಲ್ಲೆಯ ಮಲ್ಪೆಯ...

Must read

- Advertisement -spot_imgspot_img

You might also likeRELATED
Recommended to you