ಕ್ರಿಕೆಟ್ವೆಂಕಟರಮಣ ಪಿತ್ರೋಡಿ- ವಿ‌.ಎಸ್.ಸಿ ಚಾಂಪಿಯನ್ಸ್ ಮಡಿಲಿಗೆ ಪಿ.ಪಿ.ಎಲ್-3 ಪ್ರಶಸ್ತಿ

ವೆಂಕಟರಮಣ ಪಿತ್ರೋಡಿ- ವಿ‌.ಎಸ್.ಸಿ ಚಾಂಪಿಯನ್ಸ್ ಮಡಿಲಿಗೆ ಪಿ.ಪಿ.ಎಲ್-3 ಪ್ರಶಸ್ತಿ

-

- Advertisment -spot_img
ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ
ರಾಜ್ಯದ ಶಿಸ್ತುಬದ್ಧ ಸಂಸ್ಥೆ ವೆಂಕಟರಮಣ ಸ್ಪೋರ್ಟ್ಸ್&ಕಲ್ಚರಲ್ ಕ್ಲಬ್(ರಿ) ರವಿವಾರ ಉದ್ಯಾವರ ಗ್ರಾಮ‌ ಪಂಚಾಯತ್ ಮೈದಾನದಲ್ಲಿ ಆಯೋಜಿಸಿದ್ದ ಪಿ.ಪಿ.ಎಲ್-13 ಟ್ರೋಫಿಯನ್ನು ಲೋಹಿತ್ ಕುಮಾರ್ ಪಿತ್ರೋಡಿ ಸಾರಥ್ಯದ ವಿ‌.ಎಸ್.ಸಿ.ಚಾಂಪಿಯನ್ಸ್ ಜಯಿಸಿದೆ.
ವೆಂಕಟರಮಣ ಪಿತ್ರೋಡಿ ತಂಡದ ಸದಸ್ಯರಿಂದ ಕೂಡಿದ 6 ತಂಡಗಳು ಭಾಗವಹಿಸಿದ್ದ ಈ ಪಂದ್ಯಾಕೂಟದ ಫೈನಲ್ ನಲ್ಲಿ ವಿ.ಎಸ್‌‌.ಸಿ ಸನ್ ರೈಸರ್ಸ್ ತಂಡವನ್ನು ಸೋಲಿಸುವುದರ ಮೂಲಕ ವಿ‌.ಎಸ್.ಸಿ ಚಾಂಪಿಯನ್ಸ್ ಪ್ರಶಸ್ತಿ ತನ್ನದಾಗಿಸಿಕೊಂಡಿತು.
ಬೆಸ್ಟ್ ಬ್ಯಾಟ್ಸ್‌ಮನ್ ರಾಕೇಶ್,ಸರಣಿ ಶ್ರೇಷ್ಠ ಡೆರಿನ್,ಎಮರ್ಜಿಂಗ್ ಪ್ಲೇಯರ್ ಇತೇಶ್ ಹಾಗೂ ವಿ.ಎಸ್.ಸಿ ಸನ್ ರೈಸರ್ಸ್ ಶಿಸ್ತುಬದ್ಧ ತಂಡ ಪ್ರಶಸ್ತಿ ಪಡೆದುಕೊಂಡರು.
ಬೆಳಿಗ್ಗೆ ನಡೆದ ಪಿ.ಪಿ.ಎಲ್ ನ ಉದ್ಘಾಟನಾ ಸಮಾರಂಭದಲ್ಲಿ
ವಿಶೇಷ ಚೇತನ ಚಿತ್ರಕಲಾವಿದ ಶಿರ್ವದ ಗಣೇಶ್ ಪಂಜಿಮಾರು,ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತೆ ತನುಶ್ರೀ ಪಿತ್ರೋಡಿ, ವಿ.ಎಸ್.ಸಿ ಬ್ಲಡ್ ಗ್ರೂಪ್ ನ‌ ಸದಸ್ಯರು ಹಾಗೂ ವಿವಿಧ ಕ್ಷೇತ್ರದ ಸಾಧಕರನ್ನು  ಸನ್ಮಾನಿಸಲಾಯಿತು.
“ತನ್ನ ಸಾಧನೆಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ನಿಂದ ಸನ್ಮಾನ ಸ್ವೀಕರಿಸಿರುವುದು ಹೆಮ್ಮೆಯ ವಿಚಾರ”ವೆಂದು ಗಣೇಶ್ ಪಂಜಿಮಾರು ಅಭಿಪ್ರಾಯ ತಿಳಿಸಿದರು.
ಈ ಸಂದರ್ಭ ತಂಡದ ಪ್ರತಿಯೊಬ್ಬ ಸದಸ್ಯರಿಗೂ ಪ್ರಕೃತಿ ಉಳಿಸುವ ಸಲುವಾಗಿ ಗಿಡ ವಿತರಣೆ,ತಂಡದ ಎಲ್ಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ,ತಂಡದ ವತಿಯಿಂದ ನಡೆಯುವ ಆನ್ಲೈನ್ ಸ್ಪರ್ಧೆ(ಚಿತ್ರಕಲೆ,ನೃತ್ಯ, ಸಂಗೀತ) ಬಹುಮಾನ ವಿತರಣೆ,ಅಭೂತಪೂರ್ವ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ,ವಿ.ಎಸ್.ಸಿ ಬ್ಲಡ್ ಫಾರ್ ಲೈಫ್ ನ ರಕ್ತದಾನಿ ಸದಸ್ಯರಿಗೆ ಜೀವರಕ್ಷಕ ಗೌರವ ಪ್ರಶಸ್ತಿ,ಹಿರಿಯ ಸಕ್ರಿಯ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಮಧ್ಯಮುಕ್ತ ಸಮಾಜ,ರಕ್ತದಾನದ ಮಹತ್ವದ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ನವೀನ್ ಸಾಲ್ಯಾನ್,ಮಾಜಿ ಅಧ್ಯಕ್ಷರು ಗೋಪಾಲ್ ಅಮೀನ್,ಜಿತೇಂದ್ರ ಶೆಟ್ಟಿ,ಉದ್ಯಮಿ ಲೋಹಿತ್ ಕುಮಾರ್ ಪಿತ್ರೋಡಿ,ಮಾಜಿ ಸೈನಿಕರಾದ ಬಾಲಚಂದ್ರ ಪಿತ್ರೋಡಿ,ಹಿರಿಯರಾದ ಸುಂದರ್ ಕೋಟ್ಯಾನ್,ವಿಜಯ್ ಕೋಟ್ಯಾನ್,ಮಲ್ಲೇಶ್ ಕುಮಾರ್,ಉದಯ್ ಕುಮಾರ್,ಪ್ರವೀಣ್ ಪಿತ್ರೋಡಿ, ಹಾಗೂ ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು….
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

four × 3 =

Latest news

ಆರ್‌ಸಿಬಿ ಮಾಲೀಕತ್ವದ ಬದಲಾವಣೆ: ಬೆಂಗಳೂರಿನ ಉದ್ಯಮಿಗಳ ಹೊಸ ಅಧ್ಯಾಯ?

ಆರ್‌ಸಿಬಿ ಮಾಲೀಕತ್ವದ ಬದಲಾವಣೆ: ಬೆಂಗಳೂರಿನ ಉದ್ಯಮಿಗಳ ಹೊಸ ಅಧ್ಯಾಯ? ಐಪಿಎಲ್‌ನ ಅತ್ಯಂತ ಜನಪ್ರಿಯ ಮತ್ತು ವ್ಯಾಪಾರಿಕವಾಗಿ ಯಶಸ್ವಿಯಾದ ಫ್ರಾಂಚೈಸಿಗಳಲ್ಲಿ ಒಂದಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹೊಸ...

10 ಮಂದಿ ಹುಡುಗರ ಮಧ್ಯೆ ಒಬ್ಬಳು ಹೆಣ್ಣು ಹುಲಿ.. ಅವಳು ಬಂಗಾಳದ ಬಂಗಾರ..!

10 ಮಂದಿ ಹುಡುಗರ ಮಧ್ಯೆ ಒಬ್ಬಳು ಹೆಣ್ಣು ಹುಲಿ.. ಅವಳು ಬಂಗಾಳದ ಬಂಗಾರ..! ಪಶ್ಚಿಮ ಬಂಗಾಳದಲ್ಲಿ ಕ್ರಿಕೆಟ್ ಎಂದಾಕ್ಷಣ ಕಿವಿಗಪ್ಪಳಿಸುವ ಮೊದಲ ಹೆಸರು ‘ದಾದಾ’.. ಬಂಗಾಳದ ಮನೆ...

ಬ್ರಹ್ಮಾವರದ ಹೆಮ್ಮೆ – ವಿಶ್ವವಿಜೇತ ಜೆಮೀಮಾ ರೊಡ್ರಿಗಸ್ ಅವರ ಕೋಚ್ ಪ್ರಶಾಂತ್ ಶೆಟ್ಟಿ

ಬ್ರಹ್ಮಾವರದ ಹೆಮ್ಮೆ – ವಿಶ್ವವಿಜೇತ ಜೆಮೀಮಾ ರೊಡ್ರಿಗಸ್ ಅವರ ಕೋಚ್ ಪ್ರಶಾಂತ್ ಶೆಟ್ಟಿ ಇತ್ತೀಚೆಗೆ ನಡೆದ ಮಹಿಳೆಯರ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಪ್ರತಿಭಾವಂತ ಕ್ರಿಕೆಟರ್ ಜೆಮೀಮಾ...

ಲಾರೆನ್ಸ್ ಸಲ್ದಾನ: ಕೌಡೂರಿನ ಕ್ರೀಡೆ ಮತ್ತು ಕಲೆಗೆ ಹೊಸ ಉಸಿರು

  ಲಾರೆನ್ಸ್ ಸಲ್ದಾನ: ಕೌಡೂರಿನ ಕ್ರೀಡೆ ಮತ್ತು ಕಲೆಗೆ ಹೊಸ ಉಸಿರು ಇತ್ತೀಚೆಗೆ ನಡೆದ ಮಹಿಳೆಯರ ವಿಶ್ವಕಪ್ ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಭಾರತದ ಪ್ರತಿಭಾವಂತ ಬ್ಯಾಟ್ಸ್‌ವುಮನ್ ಜೆಮೀಮಾ ರೊಡ್ರಿಗಸ್ ಮಿಂಚಿ...
- Advertisement -spot_imgspot_img

ಬಂಟ್ವಾಳದಲ್ಲಿ ‘ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್–2’ ಕ್ರಿಕೆಟ್

ಬಂಟ್ವಾಳದಲ್ಲಿ ‘ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್–2’ ಕ್ರಿಕೆಟ್ “ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್ –2” ಕ್ರಿಕೆಟ್ ಟೂರ್ನಮೆಂಟ್ ಡಿಸೆಂಬರ್ 27 ಮತ್ತು 28ರಂದು ಬಂಟ್ವಾಳ ಮೈದಾನದಲ್ಲಿ ಜರುಗಲಿದೆ. ‘ಟೀಮ್ ಬ್ರದರ್ಸ್ ವತಿಯಿಂದ ಆಯೋಜಿಸಲಾದ...

ಜೈ ಭೀಮ್ ಟ್ರೋಫಿ – 2025: ಹೊಳೆನರಸೀಪುರದಲ್ಲಿ “ಫ್ರೆಂಡ್ಸ್ ಬೆಂಗಳೂರು” ತಂಡದ ವಿಜಯ ಕಿರೀಟ!

ಜೈ ಭೀಮ್ ಟ್ರೋಫಿ – 2025: ಹೊಳೆನರಸೀಪುರದಲ್ಲಿ “ಫ್ರೆಂಡ್ಸ್ ಬೆಂಗಳೂರು” ತಂಡದ ವಿಜಯ ಕಿರೀಟ! ಹೊಳೆನರಸೀಪುರದಲ್ಲಿ ನಡೆದ ಜೈ ಭೀಮ್ ಟ್ರೋಫಿ 2025 ಕ್ರಿಕೆಟ್ ಟೂರ್ನಿಯಲ್ಲಿ,...

Must read

- Advertisement -spot_imgspot_img

You might also likeRELATED
Recommended to you