Categories
ಸ್ಪೋರ್ಟ್ಸ್

ವೆಂಕಟರಮಣ ಪಿತ್ರೋಡಿ ಸಂಸ್ಥೆಯಿಂದ ಶ್ರೀ ಕೃಷ್ಣ ಬಾಲನಿಕೇತನದ ಮಕ್ಕಳಿಗೆ ದೀಪಾವಳಿಗೆ ಹೊಸ ಬಟ್ಟೆ ಉಡುಗೊರೆ

ಉಡುಪಿ-ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ,ರಾಜ್ಯದ ಶಿಸ್ತುಬದ್ಧ ಸಂಸ್ಥೆ ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್(ರಿ)ಪಿತ್ರೋಡಿ,
ಪ್ರತಿವರ್ಷದಂತೆ ಈ ಬಾರಿಯೂ ಕೂಡ ದೀಪಾವಳಿ ಹಬ್ಬದ ಪ್ರಯುಕ್ತ ಉಡುಪಿಯ ಕುಕ್ಕಿಕಟ್ಟೆಯ ಶ್ರೀ ಕೃಷ್ಣ ಬಾಲನಿಕೇತನ ಆಶ್ರಮದ ಮಕ್ಕಳಿಗೆ ಹೊಸ ಬಟ್ಟೆ ಉಡುಗೊರೆ ನೀಡಿ,ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಕಲ್ಪಿಸಿದರು.
ಹೊಸ ಬಟ್ಟೆ ವಿತರಿಸಿ ಮಾತನಾಡಿದ ವೆಂಕಟರಮಣ ಸಂಸ್ಥೆಯ ಅಧ್ಯಕ್ಷರಾದ ನವೀನ್ ಸಾಲ್ಯಾನ್ ರವರು “ಪ್ರತಿ ವರ್ಷ ದೀಪಾವಳಿ ಹಬ್ಬದ ಸಂದರ್ಭ ವೆಂಕಟರಮಣ ಸಂಸ್ಥೆಯ ಸದಸ್ಯರು  ಪಟಾಕಿಗೆ ಖರ್ಚು ಮಾಡುವ ಹಣವನ್ನು ಉಳಿಸಿ,ಆಶ್ರಮದ ಮಕ್ಕಳಿಗೆ ಹೊಸ ಬಟ್ಟೆ ಉಡುಗೊರೆ ನೀಡಿ ಅವರೊಂದಿಗೆ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತೇವೆ” ಎಂದರು.
ಈ ಸಂದರ್ಭ ಸಂಸ್ಥೆಯ ಉಪಾಧ್ಯಕ್ಷರಾದ ವಿಜಯ್ ಕೋಟ್ಯಾನ್,ಕಾರ್ಯದರ್ಶಿ ಪ್ರವೀಣ್ ಕುಮಾರ್,ಕೋಶಾಧಿಕಾರಿ ಲೋಕೇಶ್ ಸುವರ್ಣ,ಸಾಂಸ್ಕೃತಿಕ ಕಾರ್ಯದರ್ಶಿ ನಾಗೇಶ್ ಮೈಂದನ್,ಭಜನಾ ಮಂದಿರದ ಅಧ್ಯಕ್ಷ ಗಂಗಾಧರ ಕರ್ಕೇರ,ಮಹಿಳಾ ಮಂಡಳಿ ಅಧ್ಯಕ್ಷೆ ರಾಜೀವಿ ಉಮೇಶ್,ಜಿತೇಂದ್ರ ಶೆಟ್ಟಿ, ಸತೀಶ್ ಕುಂದರ್,ಉಮೇಶ್ ಕರ್ಕೇರ,ಪ್ರಕಾಶ್ ಶೆಟ್ಟಿ, ಕಿರಣ್,ಹರಿಶ್ಚಂದ್ರ,ಸುರೇಶ್,ಸುರಭಿ ರತನ್,ಅನ್ನುರಾಜ್ ಮೊದಲಾದವರಿದ್ದರು.

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

nineteen + 4 =