Action Replayಮನೆ ನಿರ್ವಹಣೆ ಜವಾಬ್ದಾರಿ ಮೂಡಿಸಿದ ವೆಂಕಟರಮಣ ಪಿತ್ರೋಡಿ ಮಾದರಿ ಪಂದ್ಯಾಕೂಟ

ಮನೆ ನಿರ್ವಹಣೆ ಜವಾಬ್ದಾರಿ ಮೂಡಿಸಿದ ವೆಂಕಟರಮಣ ಪಿತ್ರೋಡಿ ಮಾದರಿ ಪಂದ್ಯಾಕೂಟ

-

- Advertisment -spot_img

ಉದ್ಯಾವರ : ಸದಾ ಸಮಾಜಮುಖಿ ಕಾರ್ಯಗಳಲ್ಲಿ ನಿರತರಾಗಿರುವ ವೆಂಕಟರಮಣ ಸ್ಪೋಟ್ರ್ಸ್ & ಕಲ್ಚರಲ್ ಕ್ಲಬ್ (ರಿ) ರವಿವಾರ ಕ್ರಿಕೆಟ್ ನ ಮೂಲಕ ಯುವ ಪೀಳಿಗೆಗೆ ಜವಾಬ್ದಾರಿ ಮೂಡಿಸುವ ವಿನೂತನ ಪ್ರಯತ್ನಕ್ಕೆ ಕೈ ಹಾಕಿ ಯಶಸ್ಸು ಸಾಧಿಸಿದೆ ಎಂದು ಸ್ಪೋಟ್ರ್ಸ್ ಕನ್ನಡ ಕ್ರೀಡಾ ವೆಬ್ಸೈಟ್ ಮುಖ್ಯಸ್ಥ ಕೋಟ ರಾಮಕೃಷ್ಣ ಆಚಾರ್ ಹೇಳಿದರು.

 

ಅವರು ಭಾನುವಾರ ಉದ್ಯಾವರ ಪರಿಸರದ ಯುವ ಪ್ರತಿಭೆಗಳನ್ನು ಅನ್ವೇಷಿಸುವ ಸಲುವಾಗಿ ವೆಂಕಟರಮಣ ಮಾನ್ಸೂನ್ ಟ್ರೋಫಿ-2019 ಉದ್ಯಾವರದ ಗ್ರಾಮ ಪಂಚಾಯತ್ ಅಂಗಣದಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

22 ತಂಡಗಳು ಭಾಗವಹಿಸಿದ್ದ ಈ ಪಂದ್ಯಾಕೂಟದಲ್ಲಿ ಲೀಗ್ ಹಂತದ ಹಣಾಹಣಿಗಳ ಬಳಿಕ ಅಂತಿಮವಾಗಿ ಫೈನಲ್ ನ ಪೈಪೋಟಿಯ ಕದನದಲ್ಲಿ ವೆಂಕಟರಮಣ ಃ ತಂಡ,ಕರಾವಳಿ ಕಡೆಕಾರ್ ತಂಡವನ್ನು ಪರಾಭವಗೊಳಿಸಿ ಆಕರ್ಷಕ ಟ್ರೋಫಿ ಸಹಿತ ತಂಡದ 13 ಆಟಗಾರರು ತಲಾ 25 ಕೆ.ಜಿ ಅಕ್ಕಿ ಹಾಗೂ ರನ್ನರ್ಸ್ ಕಡೆಕಾರ್ ತಂಡದ 13 ಆಟಗಾರರು ತಲಾ 15 ಕೆ.ಜಿ ಅಕ್ಕಿಯನ್ನು ಮನೆಗೆ ಕೊಂಡೊಯ್ದರು.

ವೈಯಕ್ತಿಕ ಪ್ರಶಸ್ತಿ ವಿಜೇತರಾದ, ಫೈನಲ್ ಪಂದ್ಯದ ಪಂದ್ಯಶ್ರೇಷ್ಟ ನಿಖಿಲ್(ವಿ.ಎಸ್.ಸಿ),ಬೆಸ್ಟ್ ಬ್ಯಾಟ್ಸ್‍ಮನ್ ಯೋಗೀಶ್(ವಿ.ಎಸ್.ಸಿ), ಬೆಸ್ಟ್ ಬೌಲರ್ ಧನುಷ್ (ವಿ.ಎಸ್.ಸಿ),ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಕರಾವಳಿ ಕಡೆಕಾರ್ ನ ಪ್ರಜ್ವಲ್ ತಲಾ 15 ಕೆ.ಜಿ ಅಕ್ಕಿ,ಹಾಗೂ ಪ್ರತಿ ಪಂದ್ಯದ ಪಂದ್ಯಶ್ರೇಷ್ಟ ಆಟಗಾರರು15 ಕೆ.ಜಿ ಅಕ್ಕಿಯನ್ನು ಮನೆಗೆ ಕೊಂಡೊಯ್ದರು.

ಒಟ್ಟಾರೆ ಸುಮಾರು ಪ್ರಶಸ್ತಿಯಾಗಿ ಒಂದು ಟನ್ ಅಕ್ಕಿಯನ್ನು ವಿಜೇತರಿಗೆ ಹಸ್ತಾಂತರಿಸಲಾಯಿತು.

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಸ್ಪೋಟ್ರ್ಸ್ ಕನ್ನಡ ಕ್ರೀಡಾ ವೆಬ್ಸೈಟ್ ಮುಖ್ಯಸ್ಥ ಕೋಟ ರಾಮಕೃಷ್ಣ ಆಚಾರ್, ವೆಂಕಟರಮಣ ತಂಡದ ಅಧ್ಯಕ್ಷ ಮಲ್ಲೇಶ್ ಕುಮಾರ್, ಕ್ರೀಡಾ ಕಾರ್ಯದರ್ಶಿ ವಿಜಯ್ ಕೋಟ್ಯಾನ್, ಉಪಾಧ್ಯಕ್ಷ ನವೀನ್ ಸಾಲ್ಯಾನ್ ,ಗೌರವಾಧ್ಯಕ್ಷರು ಸತೀಶ್ ಕುಂದರ್, ಭಜನಾ ಮಂಡಳಿಯ ಮಾಜಿ ಅಧ್ಯಕ್ಷ ಗೋಪಾಲ್ ಅಮೀನ್, ಪ್ರಸ್ತುತ ಅಧ್ಯಕ್ಷ ವಾಸು ಸಾಲ್ಯಾನ್, ಯೋಗೀಶ್ ಪಿತ್ರೋಡಿ, ಗೌರವ ಸಲಹೆಗಾರರಾದ ಜಿತೇಂದ್ರ ಶೆಟ್ಟಿ, ತಂಡದ ನಾಯಕ ಶಿಸ್ತಿನ ಸಿಪಾಯಿ ಪ್ರವೀಣ್ ಪಿತ್ರೋಡಿ ಹಾಗೂ ಯುವ ಆಟಗಾರ ಡೆರಿನ್ ಉಪಸ್ಥಿತರಿದ್ದರು.

ವೀಕ್ಷಕ ವಿವರಣೆಕಾರರಾಗಿ ವಿನಯ್ ಉದ್ಯಾವರ ಸಹಕರಿಸಿದ್ದರು.

ಆರ್.ಕೆ.ಆಚಾರ್ಯ ಕೋಟ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

twelve + fifteen =

Latest news

ಉಡುಪಿ ಜಿಲ್ಲಾಮಟ್ಟದ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಟೂರ್ನಿ – 2026

ಉಡುಪಿ ಜಿಲ್ಲಾಮಟ್ಟದ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಟೂರ್ನಿ – 2026 ಉಡುಪಿ: ಅಕ್ಷಯ ಕ್ರಿಕೆಟ್ ಅಕಾಡೆಮಿ, ಉಡುಪಿ ಮತ್ತು ಸನ್‌ರೈಸ್ ಕ್ರಿಕೆಟ್ ಅಕಾಡೆಮಿ, ರಂಗನಪಾಲ್ಕೆ ಇವರ...

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್ ಕುಂದಾಪುರ-ಇಲ್ಲಿನ ಫ್ರೆಂಡ್ಸ್ ಕೆದೂರು ಮೊತ್ತ ಮೊದಲ ಬಾರಿಗೆ ಆಯೋಜಿಸಿದ 60 ಗಜಗಳ ಮುಕ್ತ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಫ್ರೆಂಡ್ಶಿಫ್ ಟ್ರೋಫಿ-2026...

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿ ಸಂಘ (ರಿ) ಮತ್ತು ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ಕ್ರೀಡಾಕೂಟ 2026 ಕಂದಾಯ ಇಲಾಖೆ ಕರ್ನಾಟಕ ರಾಜ್ಯ ಗ್ರಾಮ...

ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS ಕಪ್ 2026

ಮಣಿಪಾಲದಲ್ಲಿ ಅಂಡರ್-21 ಫ್ಲಡ್‌ಲೈಟ್ ಫುಟ್‌ಬಾಲ್ ಟೂರ್ನಿ – CHIVAS CUP 2026 CHIVAS ಎಫ್‌ಸಿ ವತಿಯಿಂದ ಅಂಡರ್-21 ಫ್ಲಡ್‌ಲೈಟ್ ಟರ್ಫ್ ಲೀಗ್ ಟೂರ್ನಮೆಂಟ್ “CHIVAS ಕಪ್ 2026”...
- Advertisement -spot_imgspot_img

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5

ಸುರತ್ಕಲ್‌ನಲ್ಲಿ ಮತ್ತೆ ಕ್ರಿಕೆಟ್ ಸಂಭ್ರಮ – ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್-5 ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ (ರಿ.) ಹಾಗೂ ಸುರತ್ಕಲ್ ಸ್ಪೋರ್ಟ್ಸ್ & ಕಲ್ಚರಲ್...

ಆಜ್ಮಾ ಟ್ರೋಫಿ – 2026 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಆಜ್ಮಾಟ್ರೋಫಿ – 2026 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ ಪ್ರೆಂಡ್ಸ್ ನೇಜಾರ್ ಮತ್ತು ಇಸಾಕ್ ನೇಜಾರ್ ಇವರ ನೇತೃತ್ವದಲ್ಲಿ ನಡೆಯಲಿರುವ **ಆಜ್ಮಾ ಟ್ರೋಫಿ – 2026**...

Must read

- Advertisement -spot_imgspot_img

You might also likeRELATED
Recommended to you