ಇತರೆಶಿಸ್ತುಬದ್ಧ ಸಂಸ್ಥೆ "ವೆಂಕಟರಮಣ ಸ್ಪೋರ್ಟ್ಸ್&ಕಲ್ಚರಲ್ ಕ್ಲಬ್(ರಿ)ಗೆ ರಾಜ್ಯೋತ್ಸವ ಪ್ರಶಸ್ತಿಯ ಗರಿ

ಶಿಸ್ತುಬದ್ಧ ಸಂಸ್ಥೆ “ವೆಂಕಟರಮಣ ಸ್ಪೋರ್ಟ್ಸ್&ಕಲ್ಚರಲ್ ಕ್ಲಬ್(ರಿ)ಗೆ ರಾಜ್ಯೋತ್ಸವ ಪ್ರಶಸ್ತಿಯ ಗರಿ

-

- Advertisment -spot_img
ಕ್ರೀಡೆಯ ಜೊತೆ ಸಾಮಾಜಿಕ,ಧಾರ್ಮಿಕ ಹಾಗೂ ಶೈಕ್ಷಣಿಕ ಸೇವೆಗಳಲ್ಲಿ ಸತತವಾಗಿ ತೊಡಗಿಸಿಕೊಂಡ ಉದ್ಯಾವರ ಪಿತ್ರೋಡಿಯ ” ವೆಂಕಟರಮಣ ಸ್ಪೋರ್ಟ್ಸ್ &ಕಲ್ಚರಲ್ ಕ್ಲಬ್” ತಂಡಕ್ಕೆ ಅರ್ಹವಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ‌.ಇದೇ ಸಂದರ್ಭ ಸಂಸ್ಥೆಯ ಸಕ್ರಿಯ ಸದಸ್ಯರಾದ ಉದಯ್ ಕುಮಾರ್ ಸಂಧ್ಯಾ ದಂಪತಿಗಳ ಪುತ್ರಿ,5 ವಿಶ್ವದಾಖಲೆಗಳ‌ ಸರದಾರಿಣಿ,ಯೋಗರತ್ನ ಕುಮಾರಿ ತನುಶ್ರೀ ಪಿತ್ರೋಡಿ ಕೂಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದು ಸಂಸ್ಥೆಯ ಕೀರ್ತಿಯನ್ನು ಇನ್ನಷ್ಟು ಹೆಚ್ಚಿಸಿದೆ‌.
ರಾಜ್ಯ ಟೆನಿಸ್ ಬಾಲ್ ಕ್ರಿಕೆಟ್ ಇತಿಹಾಸದಲ್ಲಿ ಸರ್ವ ಶ್ರೇಷ್ಠ ತಂಡಗಳ ಸಾಲಿನಲ್ಲಿ ಗುರುತಿಸಿಕೊಂಡ ಉಡುಪಿ ಜಿಲ್ಲೆ ಉದ್ಯಾವರದ ತಂಡ ವೆಂಕಟರಮಣ ಸ್ಪೋರ್ಟ್ಸ್‌ & ಕಲ್ಚರಲ್ ಕ್ಲಬ್ ಪಿತ್ರೋಡಿ. ಸರಿಸುಮಾರು ಮೂರೂವರೆ ದಶಕಗಳ ಹಿಂದೆ ಪಿತ್ರೋಡಿ ಪರಿಸರದ ಶಾಲಾ ಮೈದಾನದಲ್ಲಿ ಸಂಜೆಯ ಸಮಯದಲ್ಲಿ ಕ್ರಿಕೆಟ್ ಎಂಬ ಅಚ್ಚುಮೆಚ್ಚಿನ ಆಟವನ್ನು ಬಹಳಷ್ಟು ಪ್ರೀತಿಯಿಂದ ಆಡುತ್ತಿದ್ದ ಹುಡುಗರ ತಂಡವೊಂದು ಕ್ರಿಕೆಟ್
ಎಂಬ ಸಂಭಾವಿತ ಆಟದ ಬಹುಮುಖ್ಯವಾದ ಕಲೆಯನ್ನು ಕರಗತ ಮಾಡಿಕೊಂಡ ಹುಡುಗರು ಒಂದು ಸದೃಡ ತಂಡವಾಗಿ ರೂಪುಗೊಂಡು  ಮುಂದೆ ಸ್ಥಳಿಯವಾಗಿ, ಜಿಲ್ಲೆ, ರಾಜ್ಯ ಮಟ್ಟದ ಪಂದ್ಯಾಟದ ಪ್ರಶಸ್ತಿಗೆ ಮುತ್ತಿಕ್ಕುವವರೆಗೆ ಬೆಳೆದು ನಿಂತ ತಂಡದ   ಪರಿಶ್ರಮದ ಹಾದಿಯನ್ನು ಬಹುಮುಖ್ಯವಾಗಿ ಮೆಚ್ಚಲೇಬೇಕು.
ಪಿತ್ರೋಡಿಯ ಶ್ರೀ ವೆಂಕಟರಮಣ ಭಜನಾ ಮಂದಿರದ ಪ್ರೇರಣೆಯ ಯಾದಿಯಲ್ಲಿ ವೆಂಕಟರಮಣ ಕ್ರಿಕೆಟರ್ಸ್ ಆಗಿ ನಾಮಾಂಕಿತಗೊಂಡ ತಂಡ ಕೇವಲ ತಮ್ಮ ಆಟವನ್ನು ಗೆಲುವಿಗಾಗಿ ಮೀಸಲಿಡದೇ ಆಟದಲ್ಲಿ ಬಹುಮುಖ್ಯವಾದ ಶಿಸ್ತನ್ನು ಅಳವಡಿಸಿಕೊಂಡು ಅದರ ಮೂಲಕವೇ ರಾಜ್ಯಾದ್ಯಂತ ಹೆಸರನ್ನು ಗಳಿಸಿದ್ದಲ್ಲದೇ ಗೆಲುವಿನ ನಗೆಯನ್ನು ಬಿರಿದ್ದಕ್ಕೆ ಹಲವು ಚಿನ್ನದ ಬಣ್ಣದ ಪಾರಿತೋಷಕಗಳು ಸಾಕ್ಷಿಯಾಗಿವೆ.
ಕೇವಲ ಕ್ರಿಕೆಟ್ ಎನ್ನುವ ಆಟಕ್ಕೆ ಸೀಮಿತ ಗೊಳಿಸದೇ ತಮ್ಮ ಕ್ರಿಕೆಟ್ ಆಟದ ಮೂಲಕ, ತಮ್ಮ ತಂಡದ ಮೂಲಕ ತನ್ನೂರ ಅಭಿವೃದ್ದಿಯ ಕನಸನ್ನು ನನಸಾಗಿಸಿದ ಹೆಮ್ಮೆ ಈ ತಂಡಕ್ಕೆ ಸಲ್ಲಲೇಬೇಕು. ತಮ್ಮೂರಿನ
ಪ್ರತಿಭಾನ್ವಿತರಿಗೆ ಪ್ರೋತ್ಸಾಹಿಸಿ , ಜನಪರವಾದ ಕಾಳಜಿಯಲ್ಲಿ ಅನವರತವಾಗಿ ಶ್ರಮಿಸಿ, ಅನಾರೋಗ್ಯದ ಸಮಸ್ಯೆಗಳಿಗೆ ಬೆಂಗಾವಲಾಗಿ ನಿಂತು ತನ್ನೂರಿನ ಅಭಿವೃದ್ದಿಯ ಕುರಿತಾಗಿ ಬೆಳಕು ಚೆಲ್ಲುವಲ್ಲಿ ಯಶಸ್ವಿ ಸಂಘಟನಾ ಶಕ್ತಿಯಾಗಿ ರೂಪುಗೊಂಡ ಬಗೆ ಹಲವು ಸಂಘ ಸಂಸ್ಥೆಗಳಿಗೆ ಮಾದರಿ ಎನಿಸಿಕೊಂಡಿವೆ.
ವೆಂಕಟರಮಣ ಸಂಸ್ಥೆ ಆಯೋಜಿಸುವ ಪ್ರತಿಯೊಂದು ಪಂದ್ಯಾವಳಿಯಲ್ಲಿ ಹೊಸತನದೊಂದಿಗೆ ಸಮಾಜಕ್ಕೊಂದು ಸಂದೇಶ ನೀಡುವ ಇವರು,ತಮ್ಮ ತಂಡದ ಸದಸ್ಯರುಗಳ ವಿಶೇಷ ಆಸಕ್ತಿಯಿಂದ ರಕ್ತದಾನ, ನೇತ್ರದಾನ,ಪರಿಸರ ಸಂರಕ್ಷಣೆ,ಮಧ್ಯಮುಕ್ತ ಸಮಾಜ,ಸಂಚಾರ ನಿಯಮ ಪಾಲನೆ,ಹೆಲ್ಮೆಟ್ ಬಳಕೆಯ ಕುರಿತು ಜನಜಾಗೃತಿ ಸಂದೇಶ,ಸಾಧಕರಿಗೆ ಸನ್ಮಾನ,ದೀಪಾವಳಿಯ ಸಂದರ್ಭ ವಿನಾಕಾರಣ ಸುಡುಮದ್ದಿಗೆ ಖರ್ಚು
ಮಾಡುವ ಬದಲು ಶ್ರೀ ಕೃಷ್ಣ ಬಾಲನಿಕೇತನದ ಮಕ್ಕಳಿಗೆ ಬಟ್ಟೆಗಳನ್ನು ನೀಡುವ ಮಾನವೀಯ ಕಾರ್ಯಗಳಲ್ಲಿ ಸದ್ದಿಲ್ಲದೇ ತೊಡಗಿಕೊಂಡು ಅದೆಷ್ಟೋ ಜೀವಗಳ ಬದುಕಿಗೆ ಭರವಸೆಯ ಆಶಾಕಿರಣವಾಗಿ ಹೊಳೆದು ಅಸಹಾಯಕರ ಬದುಕಿಗೆ ಬೆಳಕಾಗುವಂತೆ ಬೆಳೆದು ನಿಂತ ತಂಡಕ್ಕೆ ರಾಜ್ಯೋತ್ಸವ ಪ್ರಶಸ್ತಿಯ ಸಾಲಿನಲ್ಲಿ ಹೊಳೆಯುವ ಹೊನ್ನಿನ  ಗರಿಯೊಂದನ್ನು ತನ್ನದಾಗಿಸಿಕೊಂಡ ಹೆಗ್ಗಳಿಕೆಗೆ ಪಾತ್ರವಾಗಿದೆ.
ತಮ್ಮೂರಿನ ಕಾಳಜಿಯಲ್ಲಿ, ಅಭಿವೃದ್ದಿಯ ಕಾರ್ಯಗಳಲ್ಲಿ ಒಂದು ತಂಡದ ಶಿಸ್ತು ಬದ್ದತೆ ಮತ್ತಷ್ಟು ಬಲಗೊಳ್ಳುವುದರೊಂದಿಗೆ ಹಲವು ಯುವಮನಗಳಿಗೆ ಸ್ಪೂರ್ತಿಯ ಸೆಲೆಯಾಗಲಿ ಎಂಬ ದೆಸೆಯಲ್ಲಿ ಪ್ರೀತಿಪೂರ್ವಕ ಅಭಿನಂದನೆಗಳು…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

five × three =

Latest news

ಕೋಲ್ನಾಡ್‌ನಲ್ಲಿ LK ಕ್ರಿಕೆಟ್ ಪ್ರೀಮಿಯರ್ ಲೀಗ್ – ಸೀಸನ್ 2

ಕೋಲ್ನಾಡ್‌ನಲ್ಲಿ LK ಕ್ರಿಕೆಟ್ ಪ್ರೀಮಿಯರ್ ಲೀಗ್ – ಸೀಸನ್ 2 ಕೋಲ್ನಾಡ್ ಮೈದಾನದಲ್ಲಿ ಫೆಬ್ರವರಿ 14 ಮತ್ತು 15ರಂದು LK ಕ್ರಿಕೆಟ್ ಪ್ರೀಮಿಯರ್ ಲೀಗ್ – ಸೀಸನ್...

ಮುಂಬೈ ನೆಲದಲ್ಲಿ ಕರ್ನಾಟಕದ ಐತಿಹಾಸಿಕ ವಿಜಯ

ಮುಂಬೈ ನೆಲದಲ್ಲಿ ಕರ್ನಾಟಕದ ಐತಿಹಾಸಿಕ ವಿಜಯ ರಣಜಿ ಟ್ರೋಫಿ ಕ್ರಿಕೆಟ್ ಎಂದರೆ ಮುಂಬೈಗೆ ಪ್ರತಿಷ್ಠೆಯ ಪ್ರಶ್ನೆ. 42 ಬಾರಿ ಚಾಂಪಿಯನ್ ಆಗಿರುವ ತಂಡದ ಎದುರು ಅವರದ್ದೇ ಮೈದಾನದಲ್ಲಿ...

ಟಿ20 ವಿಶ್ವಕಪ್‌ಗೆ ಭಾರತಕ್ಕೆ ಭರ್ಜರಿ ಆರಂಭ: ಅಮೆರಿಕ ವಿರುದ್ಧ 29 ರನ್ ಜಯ

ಟಿ20 ವಿಶ್ವಕಪ್‌ಗೆ ಭಾರತಕ್ಕೆ ಭರ್ಜರಿ ಆರಂಭ: ಅಮೆರಿಕ ವಿರುದ್ಧ 29 ರನ್ ಜಯ 2026ರ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ತನ್ನ ಗೆಲುವಿನ ಅಭಿಯಾನವನ್ನು ಭರ್ಜರಿಯಾಗಿ ಆರಂಭಿಸಿದೆ....

ಕರಾವಳಿ ಸ್ಪೋರ್ಟ್ಸ್ ಕ್ಲಬ್, ಕುಮಟಾ ಆಯೋಜನೆಯ MIDMAC ಟ್ರೋಫಿ ಸೀಸನ್–2 ಫೈನಲ್‌ನಲ್ಲಿ ಭಟ್ಕಲ್ ಫ್ರೆಂಡ್ಸ್ ಭರ್ಜರಿ ಜಯ; ನಿಹಾಲ್ XI ಮೇಲೆ 50 ರನ್‌ಗಳ ಗೆಲುವು

ಕರಾವಳಿ ಸ್ಪೋರ್ಟ್ಸ್ ಕ್ಲಬ್, ಕುಮಟಾ ಆಯೋಜನೆಯ MIDMAC ಟ್ರೋಫಿ ಸೀಸನ್–2 ಫೈನಲ್‌ನಲ್ಲಿ ಭಟ್ಕಲ್ ಫ್ರೆಂಡ್ಸ್ ಭರ್ಜರಿ ಜಯ; ನಿಹಾಲ್ XI ಮೇಲೆ 50 ರನ್‌ಗಳ ಗೆಲುವು ಕರಾವಳಿ...
- Advertisement -spot_imgspot_img

ಕರಾವಳಿ ಸ್ಪೋರ್ಟ್ಸ್ ಕ್ಲಬ್ ಕುಮಟಾ ಅರ್ಪಿಸುವ MIDMAC TROPHY SEASON-2 ಸೆಮಿಫೈನಲ್ ಪಂದ್ಯಗಳಲ್ಲಿ ಭಟ್ಕಲ್ ಫ್ರೆಂಡ್ಸ್ ಹಾಗೂ ನಿಹಾಲ್ XI ಗೆ ಜಯ

ಕರಾವಳಿ ಸ್ಪೋರ್ಟ್ಸ್ ಕ್ಲಬ್ ಕುಮಟಾ ಅರ್ಪಿಸುವ MIDMAC TROPHY SEASON-2 ಸೆಮಿಫೈನಲ್ ಪಂದ್ಯಗಳಲ್ಲಿ ಭಟ್ಕಲ್ ಫ್ರೆಂಡ್ಸ್ ಹಾಗೂ ನಿಹಾಲ್ XI ಗೆ ಜಯ (Sports Kannada Live...

ಶಿರಾಲಿಯಲ್ಲಿ ನಡೆಯಲಿದೆ ನಾಮಧಾರಿ ಪ್ರೀಮಿಯರ್ ಲೀಗ್–2026 ಕ್ರಿಕೆಟ್ ಪಂದ್ಯಾಟ

ಶಿರಾಲಿಯಲ್ಲಿ ನಡೆಯಲಿದೆ ನಾಮಧಾರಿ ಪ್ರೀಮಿಯರ್ ಲೀಗ್–2026 ಕ್ರಿಕೆಟ್ ಪಂದ್ಯಾಟ ನಾಮಧಾರಿ ಸಮುದಾಯದ ಕ್ರೀಡಾಭಿಮಾನಿಗಳಿಗೆ ವಿಶೇಷ ಉತ್ಸವವಾಗಿ ರೂಪುಗೊಂಡಿರುವ ನಾಮಧಾರಿ ಪ್ರೀಮಿಯರ್ ಲೀಗ್ – 2026 (NPL-2026) ಕ್ರಿಕೆಟ್...

Must read

- Advertisement -spot_imgspot_img

You might also likeRELATED
Recommended to you