11.7 C
London
Sunday, May 19, 2024
Homeಇತರೆಶಿಸ್ತುಬದ್ಧ ಸಂಸ್ಥೆ "ವೆಂಕಟರಮಣ ಸ್ಪೋರ್ಟ್ಸ್&ಕಲ್ಚರಲ್ ಕ್ಲಬ್(ರಿ)ಗೆ ರಾಜ್ಯೋತ್ಸವ ಪ್ರಶಸ್ತಿಯ ಗರಿ

ಶಿಸ್ತುಬದ್ಧ ಸಂಸ್ಥೆ “ವೆಂಕಟರಮಣ ಸ್ಪೋರ್ಟ್ಸ್&ಕಲ್ಚರಲ್ ಕ್ಲಬ್(ರಿ)ಗೆ ರಾಜ್ಯೋತ್ಸವ ಪ್ರಶಸ್ತಿಯ ಗರಿ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಕ್ರೀಡೆಯ ಜೊತೆ ಸಾಮಾಜಿಕ,ಧಾರ್ಮಿಕ ಹಾಗೂ ಶೈಕ್ಷಣಿಕ ಸೇವೆಗಳಲ್ಲಿ ಸತತವಾಗಿ ತೊಡಗಿಸಿಕೊಂಡ ಉದ್ಯಾವರ ಪಿತ್ರೋಡಿಯ ” ವೆಂಕಟರಮಣ ಸ್ಪೋರ್ಟ್ಸ್ &ಕಲ್ಚರಲ್ ಕ್ಲಬ್” ತಂಡಕ್ಕೆ ಅರ್ಹವಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ‌.ಇದೇ ಸಂದರ್ಭ ಸಂಸ್ಥೆಯ ಸಕ್ರಿಯ ಸದಸ್ಯರಾದ ಉದಯ್ ಕುಮಾರ್ ಸಂಧ್ಯಾ ದಂಪತಿಗಳ ಪುತ್ರಿ,5 ವಿಶ್ವದಾಖಲೆಗಳ‌ ಸರದಾರಿಣಿ,ಯೋಗರತ್ನ ಕುಮಾರಿ ತನುಶ್ರೀ ಪಿತ್ರೋಡಿ ಕೂಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದು ಸಂಸ್ಥೆಯ ಕೀರ್ತಿಯನ್ನು ಇನ್ನಷ್ಟು ಹೆಚ್ಚಿಸಿದೆ‌.
ರಾಜ್ಯ ಟೆನಿಸ್ ಬಾಲ್ ಕ್ರಿಕೆಟ್ ಇತಿಹಾಸದಲ್ಲಿ ಸರ್ವ ಶ್ರೇಷ್ಠ ತಂಡಗಳ ಸಾಲಿನಲ್ಲಿ ಗುರುತಿಸಿಕೊಂಡ ಉಡುಪಿ ಜಿಲ್ಲೆ ಉದ್ಯಾವರದ ತಂಡ ವೆಂಕಟರಮಣ ಸ್ಪೋರ್ಟ್ಸ್‌ & ಕಲ್ಚರಲ್ ಕ್ಲಬ್ ಪಿತ್ರೋಡಿ. ಸರಿಸುಮಾರು ಮೂರೂವರೆ ದಶಕಗಳ ಹಿಂದೆ ಪಿತ್ರೋಡಿ ಪರಿಸರದ ಶಾಲಾ ಮೈದಾನದಲ್ಲಿ ಸಂಜೆಯ ಸಮಯದಲ್ಲಿ ಕ್ರಿಕೆಟ್ ಎಂಬ ಅಚ್ಚುಮೆಚ್ಚಿನ ಆಟವನ್ನು ಬಹಳಷ್ಟು ಪ್ರೀತಿಯಿಂದ ಆಡುತ್ತಿದ್ದ ಹುಡುಗರ ತಂಡವೊಂದು ಕ್ರಿಕೆಟ್
ಎಂಬ ಸಂಭಾವಿತ ಆಟದ ಬಹುಮುಖ್ಯವಾದ ಕಲೆಯನ್ನು ಕರಗತ ಮಾಡಿಕೊಂಡ ಹುಡುಗರು ಒಂದು ಸದೃಡ ತಂಡವಾಗಿ ರೂಪುಗೊಂಡು  ಮುಂದೆ ಸ್ಥಳಿಯವಾಗಿ, ಜಿಲ್ಲೆ, ರಾಜ್ಯ ಮಟ್ಟದ ಪಂದ್ಯಾಟದ ಪ್ರಶಸ್ತಿಗೆ ಮುತ್ತಿಕ್ಕುವವರೆಗೆ ಬೆಳೆದು ನಿಂತ ತಂಡದ   ಪರಿಶ್ರಮದ ಹಾದಿಯನ್ನು ಬಹುಮುಖ್ಯವಾಗಿ ಮೆಚ್ಚಲೇಬೇಕು.
ಪಿತ್ರೋಡಿಯ ಶ್ರೀ ವೆಂಕಟರಮಣ ಭಜನಾ ಮಂದಿರದ ಪ್ರೇರಣೆಯ ಯಾದಿಯಲ್ಲಿ ವೆಂಕಟರಮಣ ಕ್ರಿಕೆಟರ್ಸ್ ಆಗಿ ನಾಮಾಂಕಿತಗೊಂಡ ತಂಡ ಕೇವಲ ತಮ್ಮ ಆಟವನ್ನು ಗೆಲುವಿಗಾಗಿ ಮೀಸಲಿಡದೇ ಆಟದಲ್ಲಿ ಬಹುಮುಖ್ಯವಾದ ಶಿಸ್ತನ್ನು ಅಳವಡಿಸಿಕೊಂಡು ಅದರ ಮೂಲಕವೇ ರಾಜ್ಯಾದ್ಯಂತ ಹೆಸರನ್ನು ಗಳಿಸಿದ್ದಲ್ಲದೇ ಗೆಲುವಿನ ನಗೆಯನ್ನು ಬಿರಿದ್ದಕ್ಕೆ ಹಲವು ಚಿನ್ನದ ಬಣ್ಣದ ಪಾರಿತೋಷಕಗಳು ಸಾಕ್ಷಿಯಾಗಿವೆ.
ಕೇವಲ ಕ್ರಿಕೆಟ್ ಎನ್ನುವ ಆಟಕ್ಕೆ ಸೀಮಿತ ಗೊಳಿಸದೇ ತಮ್ಮ ಕ್ರಿಕೆಟ್ ಆಟದ ಮೂಲಕ, ತಮ್ಮ ತಂಡದ ಮೂಲಕ ತನ್ನೂರ ಅಭಿವೃದ್ದಿಯ ಕನಸನ್ನು ನನಸಾಗಿಸಿದ ಹೆಮ್ಮೆ ಈ ತಂಡಕ್ಕೆ ಸಲ್ಲಲೇಬೇಕು. ತಮ್ಮೂರಿನ
ಪ್ರತಿಭಾನ್ವಿತರಿಗೆ ಪ್ರೋತ್ಸಾಹಿಸಿ , ಜನಪರವಾದ ಕಾಳಜಿಯಲ್ಲಿ ಅನವರತವಾಗಿ ಶ್ರಮಿಸಿ, ಅನಾರೋಗ್ಯದ ಸಮಸ್ಯೆಗಳಿಗೆ ಬೆಂಗಾವಲಾಗಿ ನಿಂತು ತನ್ನೂರಿನ ಅಭಿವೃದ್ದಿಯ ಕುರಿತಾಗಿ ಬೆಳಕು ಚೆಲ್ಲುವಲ್ಲಿ ಯಶಸ್ವಿ ಸಂಘಟನಾ ಶಕ್ತಿಯಾಗಿ ರೂಪುಗೊಂಡ ಬಗೆ ಹಲವು ಸಂಘ ಸಂಸ್ಥೆಗಳಿಗೆ ಮಾದರಿ ಎನಿಸಿಕೊಂಡಿವೆ.
ವೆಂಕಟರಮಣ ಸಂಸ್ಥೆ ಆಯೋಜಿಸುವ ಪ್ರತಿಯೊಂದು ಪಂದ್ಯಾವಳಿಯಲ್ಲಿ ಹೊಸತನದೊಂದಿಗೆ ಸಮಾಜಕ್ಕೊಂದು ಸಂದೇಶ ನೀಡುವ ಇವರು,ತಮ್ಮ ತಂಡದ ಸದಸ್ಯರುಗಳ ವಿಶೇಷ ಆಸಕ್ತಿಯಿಂದ ರಕ್ತದಾನ, ನೇತ್ರದಾನ,ಪರಿಸರ ಸಂರಕ್ಷಣೆ,ಮಧ್ಯಮುಕ್ತ ಸಮಾಜ,ಸಂಚಾರ ನಿಯಮ ಪಾಲನೆ,ಹೆಲ್ಮೆಟ್ ಬಳಕೆಯ ಕುರಿತು ಜನಜಾಗೃತಿ ಸಂದೇಶ,ಸಾಧಕರಿಗೆ ಸನ್ಮಾನ,ದೀಪಾವಳಿಯ ಸಂದರ್ಭ ವಿನಾಕಾರಣ ಸುಡುಮದ್ದಿಗೆ ಖರ್ಚು
ಮಾಡುವ ಬದಲು ಶ್ರೀ ಕೃಷ್ಣ ಬಾಲನಿಕೇತನದ ಮಕ್ಕಳಿಗೆ ಬಟ್ಟೆಗಳನ್ನು ನೀಡುವ ಮಾನವೀಯ ಕಾರ್ಯಗಳಲ್ಲಿ ಸದ್ದಿಲ್ಲದೇ ತೊಡಗಿಕೊಂಡು ಅದೆಷ್ಟೋ ಜೀವಗಳ ಬದುಕಿಗೆ ಭರವಸೆಯ ಆಶಾಕಿರಣವಾಗಿ ಹೊಳೆದು ಅಸಹಾಯಕರ ಬದುಕಿಗೆ ಬೆಳಕಾಗುವಂತೆ ಬೆಳೆದು ನಿಂತ ತಂಡಕ್ಕೆ ರಾಜ್ಯೋತ್ಸವ ಪ್ರಶಸ್ತಿಯ ಸಾಲಿನಲ್ಲಿ ಹೊಳೆಯುವ ಹೊನ್ನಿನ  ಗರಿಯೊಂದನ್ನು ತನ್ನದಾಗಿಸಿಕೊಂಡ ಹೆಗ್ಗಳಿಕೆಗೆ ಪಾತ್ರವಾಗಿದೆ.
ತಮ್ಮೂರಿನ ಕಾಳಜಿಯಲ್ಲಿ, ಅಭಿವೃದ್ದಿಯ ಕಾರ್ಯಗಳಲ್ಲಿ ಒಂದು ತಂಡದ ಶಿಸ್ತು ಬದ್ದತೆ ಮತ್ತಷ್ಟು ಬಲಗೊಳ್ಳುವುದರೊಂದಿಗೆ ಹಲವು ಯುವಮನಗಳಿಗೆ ಸ್ಪೂರ್ತಿಯ ಸೆಲೆಯಾಗಲಿ ಎಂಬ ದೆಸೆಯಲ್ಲಿ ಪ್ರೀತಿಪೂರ್ವಕ ಅಭಿನಂದನೆಗಳು…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

nine + 14 =