Categories
ಇತರೆ

ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್(ರಿ) ನೇತೃತ್ವದಲ್ಲಿ ಉಚಿತ ಯೋಗ ಮತ್ತು ಪ್ರಾಣಾಯಾಮ‌ ತರಬೇತಿ

ಉದ್ಯಾವರ-ಶ್ರೀ ವೆಂಕಟರಮಣ ಭಜನಾ ಮಂದಿರ ರಿ.ಪಿತ್ರೋಡಿ ಇದರ ಅಂಗಸಂಸ್ಥೆ,ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಜ್ಯದ ಶಿಸ್ತುಬದ್ಧ ಸಂಸ್ಥೆ ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ (ರಿ)ನೇತೃತ್ವದಲ್ಲಿ ಪತಂಜಲಿ ಯೋಗ ಪೀಠ,ಹರಿದ್ವಾರ,
ಪತಂಜಲಿ ಯೋಗ ಸಮಿತಿ ಉಡುಪಿ ಇದರ ನುರಿತ ಯೋಗ ಶಿಕ್ಷಕರಿಂದ ಉಚಿತ ಯೋಗ ಮತ್ತು ಪ್ರಾಣಾಯಾಮ ತರಬೇತಿ ಹಮ್ಮಿಕೊಳ್ಳಲಾಗಿದೆ.
ಸೆಪ್ಟೆಂಬರ್ 15 ರಿಂದ 24 ರ ವರೆಗೆ ಈ ಕಾರ್ಯಕ್ರಮ ಪಿತ್ರೋಡಿ ಶ್ರೀ ವೆಂಕಟರಮಣ ಭಜನಾ ಮಂದಿರದಲ್ಲಿ ಬೆಳಿಗ್ಗೆ 5.30 ರಿಂದ 7 ರವರೆಗೆ ನಡೆಯಲಿದೆ.ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬಹುದು.

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

11 + 2 =