6 C
London
Wednesday, April 24, 2024
Homeಕ್ರಿಕೆಟ್"ವೆಂಕಟರಮಣ ಟ್ರೋಫಿ-2020" ರಾಜ್ಯಮಟ್ಟದ ಪಂದ್ಯಾವಳಿಗೆ ಅದ್ಧೂರಿಯ ಚಾಲನೆ.

“ವೆಂಕಟರಮಣ ಟ್ರೋಫಿ-2020” ರಾಜ್ಯಮಟ್ಟದ ಪಂದ್ಯಾವಳಿಗೆ ಅದ್ಧೂರಿಯ ಚಾಲನೆ.

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img

“ವೆಂಕಟರಮಣ ಟ್ರೋಫಿ-2020”
ರಾಜ್ಯಮಟ್ಟದ ಪಂದ್ಯಾವಳಿಗೆ ಅದ್ಧೂರಿಯ ಚಾಲನೆ.

“ಕ್ರೀಡೆಯ ಜೊತೆಗೆ,ರಕ್ತದಾನ ಶಿಬಿರ, ಇತರ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ವೆಂಕಟರಮಣ ಸಂಸ್ಥೆ,ಸುತ್ತಮುತ್ತಲಿನ ಪರಿಸರದ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ವಾತಾವರಣ ಕಲ್ಪಿಸಿ ರಾಜ್ಯದ ಮಾದರಿ ತಂಡವಾಗಿ ರೂಪುಗೊಂಡಿದೆ ಎಂದು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ
ಉದ್ಯಾವರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಶ್ರೀ ವಿಜಯ್ ಕುಮಾರ್ ಉದ್ಯಾವರ ಗ್ರಾಮ ಪಂಚಾಯತ್ ಮೈದಾನದಲ್ಲಿ ವೆಂಕಟರಮಣ ಸ್ಪೋರ್ಟ್ಸ್ &ಕಲ್ಚರಲ್ ಕ್ಲಬ್(ರಿ)ವತಿಯಿಂದ ಆಯೋಜಿಸಲಾದ ಸ್ವರ್ಣ ಖಚಿತ ” ವೆಂಕಟರಮಣ ಟ್ರೋಫಿ-2020″ ನ್ನು ದೀಪ ಬೆಳಗಿಸಿ ಉದ್ಘಾಟಿಸಿ ಕಾರ್ಯಕ್ರಮವನ್ನುದ್ದೇಶಿ ಮಾತನಾಡಿದರು.

ಉದ್ಯಾವರ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷ ಶ್ರೀ ರಿಯಾಜ್ ಪಳ್ಳಿಯವರು ಮಾತನಾಡಿ ವೆಂಕಟರಮಣ ಸಂಸ್ಥೆಯ ನಿರಂತರ ಹೋರಾಟ,ಸಾಮಾಜಿಕ ಸೇವೆಗಳಿಂದ ಉದ್ಯಾವರ ಗ್ರಾಮ ಪಂಚಾಯತ್ ಅಂಗಣದಲ್ಲಿ ಕ್ರಿಕೆಟ್ ಗೆ ಸೂಕ್ತ ಜಾಗವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ ಎಂದರು.

ಈ ಸಂದರ್ಭ ಉದ್ಯಾವರ ಗ್ರಾಮ ಪಂಚಾಯತ್ ನ ಸದಸ್ಯರು ಶ್ರೀ ಜಿತೇಂದ್ರ ಶೆಟ್ಟಿ ಉದ್ಯಾವರ ಹಾಗೂ ಸ್ಪೋರ್ಟ್ಸ್‌ ಕನ್ನಡ ಸಂಚಾಲಕ ಕೋಟ ರಾಮಕೃಷ್ಣ ಆಚಾರ್ಯ ಸಂಸ್ಥೆಯ ಕಾರ್ಯ ವೈಖರಿಯನ್ನು ಪ್ರಶಂಸಿಸಿ ಪಂದ್ಯಾವಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

ಉದ್ಘಾಟನಾ ಕಾರ್ಯಕ್ರಮದಲ್ಲಿ ವೆಂಕಟರಮಣ ಸಂಸ್ಥೆಯ ಅಧ್ಯಕ್ಷ ಶ್ರೀ ಮಲ್ಲೇಶ್ ಬಂಗೇರ ಪಿತ್ರೋಡಿ,
ಮಾಜಿ ಅಧ್ಯಕ್ಷರಾದ ಸಂತೋಷ್ ಕುಂದರ್ ಹಾಗೂ ಸತೀಶ್ ಕುಂದರ್, ಉಪಾಧ್ಯಕ್ಷ ವಿಜಯ್ ಕೋಟ್ಯಾನ್ ಪಿತ್ರೋಡಿ, ಕೋಶಾಧಿಕಾರಿ ಪ್ರಕಾಶ್ ಶೆಟ್ಟಿ,
ತಂಡದ ನಾಯಕ, ಕಾರ್ಯದರ್ಶಿ ಪ್ರವೀಣ್ ಪಿತ್ರೋಡಿ ಹಾಗೂ ಇನ್ನಿತರ ಪದಾಧಿಕಾರಿಗಳು,ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚೆಗಷ್ಟೇ ಕೃಷ್ಣೈಕ್ಯರಾದ ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ, ಹಾಗೂ ಕಳೆದ ವರ್ಷ ವಿಧಿವಶರಾದ ಸಂಸ್ಥೆಯ ನಿರಂತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಬಾಲಕೃಷ್ಣ ಸಾಲ್ಯಾನ್,ನಿತಿನ್ ಹಾಗೂ ನಿಶಾಂತ್
ಸ್ಮರಣಾರ್ಥ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.

ಅಂಗಣದಲ್ಲಿ ವಿಜಯ್ ಕುಮಾರ್ ಉದ್ಯಾವರ ಹಾಗೂ ರಿಯಾಜ್ ಪಳ್ಳಿಯವರು ಬ್ಯಾಟಿಂಗ್ ನಡೆಸಿ ಪಂದ್ಯಾಕೂಟಕ್ಕೆ ಹಸಿರು ನಿಶಾನೆ ಸೂಚಿಸಿದರು.

ಶಿಸ್ತುಬದ್ಧ ಸಂಸ್ಥೆಯಾದ ವೆಂಕಟರಮಣ ಪಿತ್ರೋಡಿ, ಡೋಪಿಂಗ್ ಟೆಸ್ಟ್ ಅಳವಡಿಸಿದ್ದು,ಮಾದಕ ದ್ರವ್ಯ ಹಾಗೂ ಮಧ್ಯ ಮುಕ್ತ ಪಂದ್ಯಾವಳಿ ಹೆಗ್ಗಳಿಕೆಗೆ ಪಾತ್ರವಾಗಲಿದೆ.

ಇಂದು ಗ್ರಾಮೀಣ ಮಟ್ಟದ ತಂಡಗಳಿಗೆ ಅವಕಾಶ ನೀಡಲಾಗಿದ್ದು,
ಮಧ್ಯಾಹ್ನದ ವೇಳೆಗೆ
ಈಗಲ್,ನಿಷ್ಟಾ,ಎಸ್.ಎನ್.ಸಂಪಿಗೆ ನಗರ ಹಾಗೂ ಪ್ರಕೃತಿ ವಿಘ್ನೇಶ್ವರ ಫೈಟರ್ಸ್ ತಂಡ ಮೊದಲ ಸುತ್ತಿನಲ್ಲಿ ಗೆಲುವು ಸಾಧಿಸಿದರು.

ಶನಿವಾರದಂದು ಜಿಲ್ಲಾ ಮಟ್ಟ ಹಾಗೂ ರವಿವಾರದಂದು ರಾಜ್ಯ ಮಟ್ಟದ ಪ್ರತಿಷ್ಟಿತ ತಂಡಗಳು ಸೆಣಸಾಟ ನಡೆಸಲಿದೆ.

ವೀಕ್ಷಕ ವಿವರಣೆ ವಿಭಾಗದಲ್ಲಿ ಹಿರಿಯ ವೀಕ್ಷಕ ವಿವರಣೆಕಾರ ವಿನಯ್ ಉದ್ಯಾವರ ಜೊತೆಗೆ ಯುವ ವೀಕ್ಷಜ ವಿವರಣೆಕಾರರಾದ
ರಾಜಶೇಖರ್.ಪಿ.ಶಮರಾವೋ ಹಾಗೂ ಪ್ರತುಲ್ ಸಹಕರಿಸಿದರೆ ಹಾಗೂ ವೆಂಕಟರಮಣದ ಸಂಸ್ಥೆಯ ಸದಸ್ಯರೇ ಪ್ರಾಯೋಗಿಕವಾಗಿ ನೇರ ಪ್ರಸಾರವನ್ನು ಬಿತ್ತರಿಸುತ್ತಿದ್ದಾರೆ.


ಆರ್.ಕೆ.ಆಚಾರ್ಯ ಕೋಟ…

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

12 − one =