ಕ್ರಿಕೆಟ್"ವೆಂಕಟರಮಣ ಟ್ರೋಫಿ-2020" ರಾಜ್ಯಮಟ್ಟದ ಪಂದ್ಯಾವಳಿಗೆ ಅದ್ಧೂರಿಯ ಚಾಲನೆ.

“ವೆಂಕಟರಮಣ ಟ್ರೋಫಿ-2020” ರಾಜ್ಯಮಟ್ಟದ ಪಂದ್ಯಾವಳಿಗೆ ಅದ್ಧೂರಿಯ ಚಾಲನೆ.

-

- Advertisment -spot_img

“ವೆಂಕಟರಮಣ ಟ್ರೋಫಿ-2020”
ರಾಜ್ಯಮಟ್ಟದ ಪಂದ್ಯಾವಳಿಗೆ ಅದ್ಧೂರಿಯ ಚಾಲನೆ.

“ಕ್ರೀಡೆಯ ಜೊತೆಗೆ,ರಕ್ತದಾನ ಶಿಬಿರ, ಇತರ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ವೆಂಕಟರಮಣ ಸಂಸ್ಥೆ,ಸುತ್ತಮುತ್ತಲಿನ ಪರಿಸರದ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ವಾತಾವರಣ ಕಲ್ಪಿಸಿ ರಾಜ್ಯದ ಮಾದರಿ ತಂಡವಾಗಿ ರೂಪುಗೊಂಡಿದೆ ಎಂದು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ
ಉದ್ಯಾವರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಶ್ರೀ ವಿಜಯ್ ಕುಮಾರ್ ಉದ್ಯಾವರ ಗ್ರಾಮ ಪಂಚಾಯತ್ ಮೈದಾನದಲ್ಲಿ ವೆಂಕಟರಮಣ ಸ್ಪೋರ್ಟ್ಸ್ &ಕಲ್ಚರಲ್ ಕ್ಲಬ್(ರಿ)ವತಿಯಿಂದ ಆಯೋಜಿಸಲಾದ ಸ್ವರ್ಣ ಖಚಿತ ” ವೆಂಕಟರಮಣ ಟ್ರೋಫಿ-2020″ ನ್ನು ದೀಪ ಬೆಳಗಿಸಿ ಉದ್ಘಾಟಿಸಿ ಕಾರ್ಯಕ್ರಮವನ್ನುದ್ದೇಶಿ ಮಾತನಾಡಿದರು.

ಉದ್ಯಾವರ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷ ಶ್ರೀ ರಿಯಾಜ್ ಪಳ್ಳಿಯವರು ಮಾತನಾಡಿ ವೆಂಕಟರಮಣ ಸಂಸ್ಥೆಯ ನಿರಂತರ ಹೋರಾಟ,ಸಾಮಾಜಿಕ ಸೇವೆಗಳಿಂದ ಉದ್ಯಾವರ ಗ್ರಾಮ ಪಂಚಾಯತ್ ಅಂಗಣದಲ್ಲಿ ಕ್ರಿಕೆಟ್ ಗೆ ಸೂಕ್ತ ಜಾಗವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ ಎಂದರು.

ಈ ಸಂದರ್ಭ ಉದ್ಯಾವರ ಗ್ರಾಮ ಪಂಚಾಯತ್ ನ ಸದಸ್ಯರು ಶ್ರೀ ಜಿತೇಂದ್ರ ಶೆಟ್ಟಿ ಉದ್ಯಾವರ ಹಾಗೂ ಸ್ಪೋರ್ಟ್ಸ್‌ ಕನ್ನಡ ಸಂಚಾಲಕ ಕೋಟ ರಾಮಕೃಷ್ಣ ಆಚಾರ್ಯ ಸಂಸ್ಥೆಯ ಕಾರ್ಯ ವೈಖರಿಯನ್ನು ಪ್ರಶಂಸಿಸಿ ಪಂದ್ಯಾವಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

ಉದ್ಘಾಟನಾ ಕಾರ್ಯಕ್ರಮದಲ್ಲಿ ವೆಂಕಟರಮಣ ಸಂಸ್ಥೆಯ ಅಧ್ಯಕ್ಷ ಶ್ರೀ ಮಲ್ಲೇಶ್ ಬಂಗೇರ ಪಿತ್ರೋಡಿ,
ಮಾಜಿ ಅಧ್ಯಕ್ಷರಾದ ಸಂತೋಷ್ ಕುಂದರ್ ಹಾಗೂ ಸತೀಶ್ ಕುಂದರ್, ಉಪಾಧ್ಯಕ್ಷ ವಿಜಯ್ ಕೋಟ್ಯಾನ್ ಪಿತ್ರೋಡಿ, ಕೋಶಾಧಿಕಾರಿ ಪ್ರಕಾಶ್ ಶೆಟ್ಟಿ,
ತಂಡದ ನಾಯಕ, ಕಾರ್ಯದರ್ಶಿ ಪ್ರವೀಣ್ ಪಿತ್ರೋಡಿ ಹಾಗೂ ಇನ್ನಿತರ ಪದಾಧಿಕಾರಿಗಳು,ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚೆಗಷ್ಟೇ ಕೃಷ್ಣೈಕ್ಯರಾದ ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ, ಹಾಗೂ ಕಳೆದ ವರ್ಷ ವಿಧಿವಶರಾದ ಸಂಸ್ಥೆಯ ನಿರಂತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಬಾಲಕೃಷ್ಣ ಸಾಲ್ಯಾನ್,ನಿತಿನ್ ಹಾಗೂ ನಿಶಾಂತ್
ಸ್ಮರಣಾರ್ಥ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.

ಅಂಗಣದಲ್ಲಿ ವಿಜಯ್ ಕುಮಾರ್ ಉದ್ಯಾವರ ಹಾಗೂ ರಿಯಾಜ್ ಪಳ್ಳಿಯವರು ಬ್ಯಾಟಿಂಗ್ ನಡೆಸಿ ಪಂದ್ಯಾಕೂಟಕ್ಕೆ ಹಸಿರು ನಿಶಾನೆ ಸೂಚಿಸಿದರು.

ಶಿಸ್ತುಬದ್ಧ ಸಂಸ್ಥೆಯಾದ ವೆಂಕಟರಮಣ ಪಿತ್ರೋಡಿ, ಡೋಪಿಂಗ್ ಟೆಸ್ಟ್ ಅಳವಡಿಸಿದ್ದು,ಮಾದಕ ದ್ರವ್ಯ ಹಾಗೂ ಮಧ್ಯ ಮುಕ್ತ ಪಂದ್ಯಾವಳಿ ಹೆಗ್ಗಳಿಕೆಗೆ ಪಾತ್ರವಾಗಲಿದೆ.

ಇಂದು ಗ್ರಾಮೀಣ ಮಟ್ಟದ ತಂಡಗಳಿಗೆ ಅವಕಾಶ ನೀಡಲಾಗಿದ್ದು,
ಮಧ್ಯಾಹ್ನದ ವೇಳೆಗೆ
ಈಗಲ್,ನಿಷ್ಟಾ,ಎಸ್.ಎನ್.ಸಂಪಿಗೆ ನಗರ ಹಾಗೂ ಪ್ರಕೃತಿ ವಿಘ್ನೇಶ್ವರ ಫೈಟರ್ಸ್ ತಂಡ ಮೊದಲ ಸುತ್ತಿನಲ್ಲಿ ಗೆಲುವು ಸಾಧಿಸಿದರು.

ಶನಿವಾರದಂದು ಜಿಲ್ಲಾ ಮಟ್ಟ ಹಾಗೂ ರವಿವಾರದಂದು ರಾಜ್ಯ ಮಟ್ಟದ ಪ್ರತಿಷ್ಟಿತ ತಂಡಗಳು ಸೆಣಸಾಟ ನಡೆಸಲಿದೆ.

ವೀಕ್ಷಕ ವಿವರಣೆ ವಿಭಾಗದಲ್ಲಿ ಹಿರಿಯ ವೀಕ್ಷಕ ವಿವರಣೆಕಾರ ವಿನಯ್ ಉದ್ಯಾವರ ಜೊತೆಗೆ ಯುವ ವೀಕ್ಷಜ ವಿವರಣೆಕಾರರಾದ
ರಾಜಶೇಖರ್.ಪಿ.ಶಮರಾವೋ ಹಾಗೂ ಪ್ರತುಲ್ ಸಹಕರಿಸಿದರೆ ಹಾಗೂ ವೆಂಕಟರಮಣದ ಸಂಸ್ಥೆಯ ಸದಸ್ಯರೇ ಪ್ರಾಯೋಗಿಕವಾಗಿ ನೇರ ಪ್ರಸಾರವನ್ನು ಬಿತ್ತರಿಸುತ್ತಿದ್ದಾರೆ.


ಆರ್.ಕೆ.ಆಚಾರ್ಯ ಕೋಟ…

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

one × 1 =

Latest news

ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ: ರಾಜಕೀಯದ ಜೊತೆಗೆ ಕ್ರೀಡಾ ಕ್ಷೇತ್ರಕ್ಕೂ ಅನನ್ಯ ಕೊಡುಗೆ

  ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ: ರಾಜಕೀಯದ ಜೊತೆಗೆ ಕ್ರೀಡಾ ಕ್ಷೇತ್ರಕ್ಕೂ ಅನನ್ಯ ಕೊಡುಗೆ ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ...

ಕ್ರೀಡಾ ಕ್ಷೇತ್ರಕ್ಕೆ ಶಿವನಾರಾಯಣ ಐತಾಳ್ ಕೋಟ ಕೊಡುಗೆ ಅಪಾರ-ಡಾ.ಕೃಷ್ಣಪ್ರಸಾದ್.ಕೆ

ಕ್ರೀಡಾ ಕ್ಷೇತ್ರಕ್ಕೆ ಶಿವನಾರಾಯಣ ಐತಾಳ್ ಕೋಟ ಕೊಡುಗೆ ಅಪಾರ-ಡಾ.ಕೃಷ್ಣಪ್ರಸಾದ್.ಕೆ ಶಿವ ಬಿಗ್ ಬ್ಯಾಶ್ ಲೀಗ್ ಗೆ ಅದ್ಧೂರಿಯ ಚಾಲನೆ ಕೋಟ-ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಕೋಟ ಸಾಲಿಗ್ರಾಮ...

ಬೀಜಾಯ್ಸ್ ಗ್ರೂಪ್ ಆಯೋಜನೆಯಲ್ಲಿ ಬಿಸಿಸಿ ಚಾಂಪಿಯನ್ಸ್ ಕಪ್–2025

ಬೀಜಾಯ್ಸ್ ಗ್ರೂಪ್ ಆಯೋಜನೆಯಲ್ಲಿ ಬಿಸಿಸಿ ಚಾಂಪಿಯನ್ಸ್ ಕಪ್–2025 ಶಾರ್ಜಾದಲ್ಲಿ ಕಾರ್ಪೊರೇಟ್ ಕ್ರಿಕೆಟ್‌ಗೆ ಭರ್ಜರಿ ವೇದಿಕೆ ಬೀಜಾಯ್ಸ್ ಗ್ರೂಪ್ ಆಫ್ ಕಂಪನೀಸ್‌ಗಳ ಆಯೋಜನೆಯಲ್ಲಿ ಬಿಸಿಸಿ ಚಾಂಪಿಯನ್ಸ್ ಕಪ್–2025 ಕ್ರಿಕೆಟ್ ಟೂರ್ನಮೆಂಟ್...

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್

ಭಾರತದ ‘ಬಿಗ್ ಗೇಮ್ ಪ್ಲೇಯರ್’ ಯುವರಾಜ್ ಸಿಂಗ್ ಭಾರತೀಯ ಕ್ರಿಕೆಟ್‌ನ ಅತ್ಯುತ್ತಮ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಯುವರಾಜ್ ಸಿಂಗ್, ದೊಡ್ಡ ವೇದಿಕೆಗಳಲ್ಲಿ ತಂಡಕ್ಕೆ ಜಯ ತಂದುಕೊಡುವ ಶಕ್ತಿಶಾಲಿ ಪ್ರದರ್ಶನಗಳಿಂದ...
- Advertisement -spot_imgspot_img

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು

ಹೊನಲುಬೆಳಕಿನ ರಾಜ್ಯಮಟ್ಟದ ‘K.M.S CUP ಸೀಸನ್–2’ ವಾಲಿಬಾಲ್ ಟೂರ್ನಿ ಡಿಸೆಂಬರ್ 29–30ರಂದು ಯಲಹಂಕ ತಾಲ್ಲೂಕಿನ ಕುದುರೆಗೆರೆ ಪ್ರದೇಶದಲ್ಲಿ ಕೆ.ಎಂ.ಶ್ರೀನಿವಾಸ್ ರವರ ಸ್ಮರಣಾರ್ಥ ಹಾಗೂ ಕೆ.ಎಂ. ಸುಬ್ರಮಣಿ ರವರ...

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು

ಶಿವ ಬಿಗ್ ಬ್ಯಾಷ್ 2025: ಕೋಟ ಸಾಲಿಗ್ರಾಮದಲ್ಲಿ ಡಿಸೆಂಬರ್ 13-14ರಂದು ಶಿವ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಸ್ಥೆ, ಕೋಟ ಸಾಲಿಗ್ರಾಮದ ಆಯೋಜನೆಯಲ್ಲಿ ನಡೆಯುವ ಪ್ರತಿಷ್ಠಿತ ಶಿವ ಬಿಗ್...

Must read

- Advertisement -spot_imgspot_img

You might also likeRELATED
Recommended to you