ಕ್ರಿಕೆಟ್"ವೆಂಕಟರಮಣ ಟ್ರೋಫಿ-2020" ರಾಜ್ಯಮಟ್ಟದ ಪಂದ್ಯಾವಳಿಗೆ ಅದ್ಧೂರಿಯ ಚಾಲನೆ.

“ವೆಂಕಟರಮಣ ಟ್ರೋಫಿ-2020” ರಾಜ್ಯಮಟ್ಟದ ಪಂದ್ಯಾವಳಿಗೆ ಅದ್ಧೂರಿಯ ಚಾಲನೆ.

-

- Advertisment -spot_img

“ವೆಂಕಟರಮಣ ಟ್ರೋಫಿ-2020”
ರಾಜ್ಯಮಟ್ಟದ ಪಂದ್ಯಾವಳಿಗೆ ಅದ್ಧೂರಿಯ ಚಾಲನೆ.

“ಕ್ರೀಡೆಯ ಜೊತೆಗೆ,ರಕ್ತದಾನ ಶಿಬಿರ, ಇತರ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ವೆಂಕಟರಮಣ ಸಂಸ್ಥೆ,ಸುತ್ತಮುತ್ತಲಿನ ಪರಿಸರದ ಯುವ ಪ್ರತಿಭೆಗಳಿಗೆ ಪ್ರೋತ್ಸಾಹ ವಾತಾವರಣ ಕಲ್ಪಿಸಿ ರಾಜ್ಯದ ಮಾದರಿ ತಂಡವಾಗಿ ರೂಪುಗೊಂಡಿದೆ ಎಂದು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ
ಉದ್ಯಾವರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಶ್ರೀ ವಿಜಯ್ ಕುಮಾರ್ ಉದ್ಯಾವರ ಗ್ರಾಮ ಪಂಚಾಯತ್ ಮೈದಾನದಲ್ಲಿ ವೆಂಕಟರಮಣ ಸ್ಪೋರ್ಟ್ಸ್ &ಕಲ್ಚರಲ್ ಕ್ಲಬ್(ರಿ)ವತಿಯಿಂದ ಆಯೋಜಿಸಲಾದ ಸ್ವರ್ಣ ಖಚಿತ ” ವೆಂಕಟರಮಣ ಟ್ರೋಫಿ-2020″ ನ್ನು ದೀಪ ಬೆಳಗಿಸಿ ಉದ್ಘಾಟಿಸಿ ಕಾರ್ಯಕ್ರಮವನ್ನುದ್ದೇಶಿ ಮಾತನಾಡಿದರು.

ಉದ್ಯಾವರ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷ ಶ್ರೀ ರಿಯಾಜ್ ಪಳ್ಳಿಯವರು ಮಾತನಾಡಿ ವೆಂಕಟರಮಣ ಸಂಸ್ಥೆಯ ನಿರಂತರ ಹೋರಾಟ,ಸಾಮಾಜಿಕ ಸೇವೆಗಳಿಂದ ಉದ್ಯಾವರ ಗ್ರಾಮ ಪಂಚಾಯತ್ ಅಂಗಣದಲ್ಲಿ ಕ್ರಿಕೆಟ್ ಗೆ ಸೂಕ್ತ ಜಾಗವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ ಎಂದರು.

ಈ ಸಂದರ್ಭ ಉದ್ಯಾವರ ಗ್ರಾಮ ಪಂಚಾಯತ್ ನ ಸದಸ್ಯರು ಶ್ರೀ ಜಿತೇಂದ್ರ ಶೆಟ್ಟಿ ಉದ್ಯಾವರ ಹಾಗೂ ಸ್ಪೋರ್ಟ್ಸ್‌ ಕನ್ನಡ ಸಂಚಾಲಕ ಕೋಟ ರಾಮಕೃಷ್ಣ ಆಚಾರ್ಯ ಸಂಸ್ಥೆಯ ಕಾರ್ಯ ವೈಖರಿಯನ್ನು ಪ್ರಶಂಸಿಸಿ ಪಂದ್ಯಾವಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

ಉದ್ಘಾಟನಾ ಕಾರ್ಯಕ್ರಮದಲ್ಲಿ ವೆಂಕಟರಮಣ ಸಂಸ್ಥೆಯ ಅಧ್ಯಕ್ಷ ಶ್ರೀ ಮಲ್ಲೇಶ್ ಬಂಗೇರ ಪಿತ್ರೋಡಿ,
ಮಾಜಿ ಅಧ್ಯಕ್ಷರಾದ ಸಂತೋಷ್ ಕುಂದರ್ ಹಾಗೂ ಸತೀಶ್ ಕುಂದರ್, ಉಪಾಧ್ಯಕ್ಷ ವಿಜಯ್ ಕೋಟ್ಯಾನ್ ಪಿತ್ರೋಡಿ, ಕೋಶಾಧಿಕಾರಿ ಪ್ರಕಾಶ್ ಶೆಟ್ಟಿ,
ತಂಡದ ನಾಯಕ, ಕಾರ್ಯದರ್ಶಿ ಪ್ರವೀಣ್ ಪಿತ್ರೋಡಿ ಹಾಗೂ ಇನ್ನಿತರ ಪದಾಧಿಕಾರಿಗಳು,ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚೆಗಷ್ಟೇ ಕೃಷ್ಣೈಕ್ಯರಾದ ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ, ಹಾಗೂ ಕಳೆದ ವರ್ಷ ವಿಧಿವಶರಾದ ಸಂಸ್ಥೆಯ ನಿರಂತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಬಾಲಕೃಷ್ಣ ಸಾಲ್ಯಾನ್,ನಿತಿನ್ ಹಾಗೂ ನಿಶಾಂತ್
ಸ್ಮರಣಾರ್ಥ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.

ಅಂಗಣದಲ್ಲಿ ವಿಜಯ್ ಕುಮಾರ್ ಉದ್ಯಾವರ ಹಾಗೂ ರಿಯಾಜ್ ಪಳ್ಳಿಯವರು ಬ್ಯಾಟಿಂಗ್ ನಡೆಸಿ ಪಂದ್ಯಾಕೂಟಕ್ಕೆ ಹಸಿರು ನಿಶಾನೆ ಸೂಚಿಸಿದರು.

ಶಿಸ್ತುಬದ್ಧ ಸಂಸ್ಥೆಯಾದ ವೆಂಕಟರಮಣ ಪಿತ್ರೋಡಿ, ಡೋಪಿಂಗ್ ಟೆಸ್ಟ್ ಅಳವಡಿಸಿದ್ದು,ಮಾದಕ ದ್ರವ್ಯ ಹಾಗೂ ಮಧ್ಯ ಮುಕ್ತ ಪಂದ್ಯಾವಳಿ ಹೆಗ್ಗಳಿಕೆಗೆ ಪಾತ್ರವಾಗಲಿದೆ.

ಇಂದು ಗ್ರಾಮೀಣ ಮಟ್ಟದ ತಂಡಗಳಿಗೆ ಅವಕಾಶ ನೀಡಲಾಗಿದ್ದು,
ಮಧ್ಯಾಹ್ನದ ವೇಳೆಗೆ
ಈಗಲ್,ನಿಷ್ಟಾ,ಎಸ್.ಎನ್.ಸಂಪಿಗೆ ನಗರ ಹಾಗೂ ಪ್ರಕೃತಿ ವಿಘ್ನೇಶ್ವರ ಫೈಟರ್ಸ್ ತಂಡ ಮೊದಲ ಸುತ್ತಿನಲ್ಲಿ ಗೆಲುವು ಸಾಧಿಸಿದರು.

ಶನಿವಾರದಂದು ಜಿಲ್ಲಾ ಮಟ್ಟ ಹಾಗೂ ರವಿವಾರದಂದು ರಾಜ್ಯ ಮಟ್ಟದ ಪ್ರತಿಷ್ಟಿತ ತಂಡಗಳು ಸೆಣಸಾಟ ನಡೆಸಲಿದೆ.

ವೀಕ್ಷಕ ವಿವರಣೆ ವಿಭಾಗದಲ್ಲಿ ಹಿರಿಯ ವೀಕ್ಷಕ ವಿವರಣೆಕಾರ ವಿನಯ್ ಉದ್ಯಾವರ ಜೊತೆಗೆ ಯುವ ವೀಕ್ಷಜ ವಿವರಣೆಕಾರರಾದ
ರಾಜಶೇಖರ್.ಪಿ.ಶಮರಾವೋ ಹಾಗೂ ಪ್ರತುಲ್ ಸಹಕರಿಸಿದರೆ ಹಾಗೂ ವೆಂಕಟರಮಣದ ಸಂಸ್ಥೆಯ ಸದಸ್ಯರೇ ಪ್ರಾಯೋಗಿಕವಾಗಿ ನೇರ ಪ್ರಸಾರವನ್ನು ಬಿತ್ತರಿಸುತ್ತಿದ್ದಾರೆ.


ಆರ್.ಕೆ.ಆಚಾರ್ಯ ಕೋಟ…

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

twenty − 5 =

Latest news

Zoome Casino: Quick Spin Wins and Rapid Gameplay

Welcome to the Fast‑Paced World of Zoome CasinoWhen you log into Zoome Casino, the first thing you notice is...

BoomsBet Casino – The Pulse of High‑Intensity Slot Play

Introductie tot Short‑Burst Gaming bij BoomsBetAls je houdt van adrenaline en directe bevrediging zoekt, biedt BoomsBet Casino een speelterrein...

ಬಿಹಾರದ ಕನಸುಗಳಿಗೆ ಹೊಸ ರೆಕ್ಕೆ ನೀಡಿದ ವೈಭವ್ ಸೂರ್ಯವಂಶಿ

ಬಿಹಾರದ ಕನಸುಗಳಿಗೆ ಹೊಸ ರೆಕ್ಕೆ ನೀಡಿದ ವೈಭವ್ ಸೂರ್ಯವಂಶಿ ಭಾರತದಲ್ಲಿ ಕ್ರಿಕೆಟ್ ಕೇವಲ ಆಟವಲ್ಲ; ಅದು ಜನರ ಭಾವನೆ ಮತ್ತು ಗುರುತಿನ ಭಾಗವಾಗಿದೆ. ಆದರೆ ದೀರ್ಘಕಾಲದವರೆಗೆ ಬಿಹಾರ...

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026 ಮಂಗಳೂರು: ಜಿಎಸ್‌ಬಿ ಸಮುದಾಯದ ಕ್ರಿಕೆಟ್ ಪ್ರತಿಭೆಗಳಿಗೆ ವೇದಿಕೆಯಾಗಿರುವ ಪ್ರತಿಷ್ಠಿತ **ಪ್ಯಾಂಥರ್ಸ್ ಸೂಪರ್...
- Advertisement -spot_imgspot_img

ಟೀಕೆಗೆ ಬ್ಯಾಟ್‌ನಲ್ಲೇ ಉತ್ತರ: ಫೈನಲ್‌ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ

ಟೀಕೆಗೆ ಬ್ಯಾಟ್‌ನಲ್ಲೇ ಉತ್ತರ: ಫೈನಲ್‌ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ ಕೇವಲ 29 ಎಸೆತಗಳಲ್ಲಿ 96 ರನ್: ವೈಭವ್ ಸೂರ್ಯವಂಶಿಯ ಸ್ಫೋಟಕ ಪ್ರತಿಭೆಗೆ ಕ್ರಿಕೆಟ್ ಲೋಕ ಫಿದಾ 15 ವರ್ಷದ...

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 2026

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 2026 ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ಮೇರಾ ಯುವ ಭಾರತ್, ಉಡುಪಿ...

Must read

- Advertisement -spot_imgspot_img

You might also likeRELATED
Recommended to you