ಭರವಸೆಯ ಬೆಳಕುಬಹುಮುಖ ಪ್ರತಿಭೆ ಸುಳ್ಯದ ಅವನಿ.ಎಂ.ಎಸ್ ಇವರಿಗೆ "ಕರುನಾಡ ಸಿರಿ ರಾಷ್ಟ್ರೀಯ ಪ್ರಶಸ್ತಿ."

ಬಹುಮುಖ ಪ್ರತಿಭೆ ಸುಳ್ಯದ ಅವನಿ.ಎಂ.ಎಸ್ ಇವರಿಗೆ “ಕರುನಾಡ ಸಿರಿ ರಾಷ್ಟ್ರೀಯ ಪ್ರಶಸ್ತಿ.”

-

- Advertisment -spot_img
ಕರುನಾಡ ಸಿಂಹ ಸೇನೆ ಕರ್ನಾಟಕ
ಇದರ ವತಿಯಿಂದ ನೀಡುವ ಕರುನಾಡ ಸಿರಿ ರಾಷ್ಟ್ರೀಯ ಪ್ರಶಸ್ತಿಗೆ,ಯೋಗ,ನೃತ್ಯದಲ್ಲಿ ಅನುಪಮ ಸಾಧನೆಗೈದ ಅವನಿ‌.ಎಂ.ಎಸ್ ಸುಳ್ಯ ಪಾತ್ರರಾಗಿದ್ದಾರೆ.ಮಾರ್ಚ್ 6 ರಂದು
ಬೆಂಗಳೂರಿನ ನಯನಾ ಕಲಾಮಂದಿರದಲ್ಲಿ ಆಯೋಜಿಸಲಾಗಿದ್ದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಖ್ಯಾತ ಸಾಹಿತಿ ದೊಡ್ಡರಂಗೇಗೌಡ,ಕರುನಾಡ ಸಿಂಹ ಸೇನೆ ಕರ್ನಾಟಕ ಸ್ಥಾಪಕ ಹಾಗೂ ರಾಜ್ಯಾಧ್ಯಕ್ಷ ಕಿಶೋರ್ ಗೌಡ,ನಿವೃತ್ತ ಯೋಧರು, ಮತ್ತಿತರ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸುಳ್ಯದ ಸೈಂಟ್ ಜೋಸೆಫ್ ಶಾಲೆಯಲ್ಲಿ 2 ನೇ ತರಗತಿಯಲ್ಲಿ ಓದುತ್ತಿರುವ ಅವನಿ.ಎಂ.ಎಸ್ ಇವರು ಸುಳ್ಯದ ಶಶಿಧರ ಎಂ.ಜೆ.ಮೋಂಟಡ್ಕ ಹಾಗೂ ರೇಷ್ಮಾ.ಕೆ‌.ಎಸ್ ದಂಪತಿಗಳ ಪುತ್ರಿ.

“ಬೆಳೆಯುವ ಸಿರಿ ಮೊಳಕೆಯಲ್ಲಿ ನೋಡು ”
ಎಂಬಂತೆ ಯೋಗ,ನೃತ್ಯ,ಸಂಗೀತ,ನಟನೆ,ಚಿತ್ರ ಬಿಡಿಸಿವುದು ಹೀಗೆ ವಿವಿಧ ಕ್ಷೇತ್ರಗಳಲ್ಲಿ ಮೇಲುಗೈ ಸಾಧಿಸಿದ್ದಾಳೆ.
ಇವಳ ಸಾಧನೆಗೆ ಕೆ.ವಿ‌.ಜಿ.ಸುಳ್ಯ ಹಬ್ಬ ಪ್ರಶಸ್ತಿ,ಪ್ರಾಥಮಿಕ ಶಾಲಾ ಪ್ರತಿಭಾ ಕಾರಂಜಿ ಪ್ರಶಸ್ತಿ,ಗಾನಸಿರಿ ಪುಠಾಣಿ ಸಂಗೀತ ರತ್ನ ಪ್ರಶಸ್ತಿ,ಉತ್ತಮ ಕಲಾಕೃತಿ ಪ್ರಶಸ್ತಿ,ರಾಜ್ಯ ಮತ್ತು ಅಂತರಾಷ್ಟ್ರೀಯ ಮಟ್ಟದ ಯೋಗ ಪ್ರಶಸ್ತಿ,ಗೋಲ್ಡನ್ ಬುಕ್ ಆಫ್ ರೆಕಾರ್ಡ್-2021 ಪ್ರಶಸ್ತಿ,ಇತ್ತೀಚೆಗಷ್ಟೇ ಈಕೆಯ ಸಂಗೀತ ಹಾಗೂ ಅಭಿ‌ನಯದ ಮೂಲಕ ಮೂಡಿ ಬಂದ “ಸತ್ಯದ ನಿರೆಲ್” ಆಲ್ಬಮ್ ಬಿಡುಗಡೆಯ ವೇಳೆ “ಸ್ವರ ತರಂಗಿಣಿ” ಬಿರುದಿಗೆ ಪಾತ್ರಳಾಗಿದ್ದಾಳೆ.ಈಗಾಗಲೇ 1  ಆಲ್ಬಮ್‌ ಸಾಂಗ್ ನಲ್ಲಿ ಅಭಿನಯಿಸಿದ್ದಾರೆ, 1 ಆಲ್ಬಮ್ ಸಾಂಗ್ ನಲ್ಲಿ ಹಾಡಿ ಅಭಿನಯಿಸಿದ್ದಾರೆ, 1 ಕಿರುಚಿತ್ರದಲ್ಲಿ ನಟಿಸಿದ್ದಾಳೆ.
ಅವನಿ.ಎಂ.ಎಸ್ ಇವರು ಸುಗಮ ಸಂಗೀತವನ್ನು ರಂಗ ಮಯೂರಿ ಕಲಾ ಶಾಲೆಯಲ್ಲಿ 3 ವರುಷದಿಂದ ಅಭ್ಯಾಸ ಮಾಡುತ್ತಿದ್ದಾರೆ . ಇವರ ಸುಗಮ ಸಂಗೀತ ಗುರುಗಳು ಡಾ.ಕಿರಣ್ ಕುಮಾರ್ ಗಾನಸಿರಿ ಪುತ್ತೂರು,ಕುಮಾರಿ ಶ್ರೀ ಲಕ್ಷ್ಮೀ ಪುತ್ತೂರು, ಶಾಸ್ತ್ರೀಯ ಸಂಗೀತವನ್ನು ಮಹಾಬಲೇಶ್ವರ ಬಿರ್ಮಕಜೆ ಇವರಿಂದ ಅಭ್ಯಾಸ ಮಾಡುತ್ತಿದ್ದಾರೆ.,
ಯೋಗಾಭ್ಯಾಸವನ್ನು ಯೋಗೇನ‌ ಚಿತ್ತಸ್ಯ ಸಂಸ್ಥೆಯ ಗುರುಗಳಾದ ಸಂತೋಷ್ ಮುಂಡಕಜೆ ಸುಳ್ಯ ಇವರಿಂದ ತರಬೇತಿ ಪಡೆಯುತ್ತಿದ್ದಾರೆ ,ನೃತ್ಯ ತರಬೇತಿಯನ್ನು  ಡಿ‌.ಯುನೈಟೆಡ್ ಅಭಿ ಕುಲಾಲ್  ಇವರಿಂದ ಪಡೆಯುತ್ತಿದ್ದಾರೆ ಹಾಗೂ ಕಶ್ವಿ ಚೆಸ್ ಸ್ಕೂಲ್ ಕುಂದಾಪುರದಲ್ಲಿ ಚೆಸ್ ತರಬೇತಿ ಪಡೆಯುತ್ತಿದ್ದಾಳೆ. ಆಮಂತ್ರಣ ಮತ್ತು ಸಂಸ್ಕೃತಿ ಸಿರಿ ನಡೆಸಿದ ರಾಜ್ಯ ಮಟ್ಟದ ಸ್ಟಾರ್ ಸಿಂಗರ್ ನ ಸೆಮಿಫೈನಲಿಸ್ಟ್ ಕೂಡ ಆಗಿದ್ದಾರೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

18 + 18 =

Latest news

ಫ್ರೆಂಡ್ಸ್ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ

ಫ್ರೆಂಡ್ಸ್ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ ಟ್ರೋಫಿ ಹೆಮ್ಮಾಡಿ ಕ್ರಿಕೆಟ್ ಟೂರ್ನಿ: ಮೇ 30 ಮತ್ತು 31ರಂದು ಆಯೋಜನೆ ಯುವ...

ಕಪ್ ರೆಡಿಯಾ..? ಗುಜರಾತ್ ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಬೆಂಗಳೂರು!

ಕಪ್ ರೆಡಿಯಾ..? ಗುಜರಾತ್ ಮಣಿಸಿ ಫೈನಲ್‌ಗೆ ಎಂಟ್ರಿ ಕೊಟ್ಟ ಬೆಂಗಳೂರು!   2026ರ ಐಪಿಎಲ್‌ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು 92 ರನ್‌ಗಳಿಂದ ಮಣಿಸಿದ ರಾಯಲ್...

20 ಲಕ್ಷದ ಆಟಗಾರ… ಇಂದು ಆರ್‌ಸಿಬಿಯ ಅಮೂಲ್ಯ ರತ್ನ!

20 ಲಕ್ಷದ ಆಟಗಾರ… ಇಂದು ಆರ್‌ಸಿಬಿಯ ಅಮೂಲ್ಯ ರತ್ನ! ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇತಿಹಾಸದಲ್ಲಿ ಕೆಲವು ಆಟಗಾರರು ಕೇವಲ ಕ್ರಿಕೆಟಿಗರಾಗಿ ಮಾತ್ರ ಉಳಿಯುವುದಿಲ್ಲ; ಅವರು ಭಾವನೆಗಳಾಗುತ್ತಾರೆ....

RCBvsGT: ಫೈನಲ್‌ಗೆ ಯಾರು ಮುನ್ನಡೆಯುತ್ತಾರೆ… ಪ್ಲೇ-ಆಫ್ ಸುತ್ತನ್ನು ಗೆಲ್ಲುವ ಹೆಚ್ಚಿನ ಅವಕಾಶ ಯಾರಿಗೆ ಇದೆ?

  RCBvsGT: ಫೈನಲ್‌ಗೆ ಯಾರು ಮುನ್ನಡೆಯುತ್ತಾರೆ... ಪ್ಲೇ-ಆಫ್ ಸುತ್ತನ್ನು ಗೆಲ್ಲುವ ಹೆಚ್ಚಿನ ಅವಕಾಶ ಯಾರಿಗೆ ಇದೆ? ಈ ಋತುವಿನ ಐಪಿಎಲ್‌ನ ಮೊದಲ ಅರ್ಹತಾ ಸುತ್ತಿನಲ್ಲಿ ಬೆಂಗಳೂರು ಮತ್ತು ಗುಜರಾತ್...
- Advertisement -spot_imgspot_img

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ

ಮಾಜಿ ಕರ್ನಾಟಕ ಕ್ರಿಕೆಟಿಗ ಎಸ್.ಎಲ್. ಅಕ್ಷಯ್ ಹೃದಯಾಘಾತದಿಂದ ನಿಧನ ಕರ್ನಾಟಕದ ಮಾಜಿ ಕ್ರಿಕೆಟಿಗ ಹಾಗೂ ಪ್ರತಿಭಾವಂತ ವೇಗದ ಬೌಲರ್ ಎಸ್.ಎಲ್. ಅಕ್ಷಯ್ ಅವರು ಭಾನುವಾರ ಲೀಗ್ ಪಂದ್ಯವೊಂದರ...

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್

ಜೆ ಕೆ ಪ್ರೆಸೆಂಟ್ಸ್ ಅರಸೀಕೆರೆ ಚಾಂಪಿಯನ್ಸ್ ಕಪ್ 2026 – ಕ್ರಿಕೆಟ್ ಟೂರ್ನಮೆಂಟ್ ಅರಸೀಕೆರೆಯ ಕ್ರಿಕೆಟ್ ಅಭಿಮಾನಿಗಳಿಗೆ ಭರ್ಜರಿ ಕ್ರೀಡಾ ರಸದೌತಣ ನೀಡಲು “ಅರಸೀಕೆರೆ ಚಾಂಪಿಯನ್ಸ್...

Must read

- Advertisement -spot_imgspot_img

You might also likeRELATED
Recommended to you