ಕ್ರಿಕೆಟ್ಗೆದ್ದ ಗಂಭೀರ್ ಹಠ: ದುಲೀಪ್ ಟ್ರೋಫಿಯಲ್ಲಿ ಆಡಲಿದ್ದಾರೆ ವಿರಾಟ್ ಕೊಹ್ಲಿ, ರೋಹಿತ್...

ಗೆದ್ದ ಗಂಭೀರ್ ಹಠ: ದುಲೀಪ್ ಟ್ರೋಫಿಯಲ್ಲಿ ಆಡಲಿದ್ದಾರೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ

-

- Advertisment -spot_img

ಭಾರತ ಕ್ರಿಕೆಟ್ ತಂಡದ ನೂತನ ಹೆಡ್ ಕೋಚ್ ಗೌತಮ್ ಗಂಭೀರ್ ಒಬ್ಬ ಕಟ್ಟುನಿಟ್ಟಿನ ಹೆಡ್ ಮಾಸ್ಟರ್.
ಅದು ಯಾರೇ ಆಗಿರಲಿ, ಎಷ್ಟೇ ದೊಡ್ಡ ಆಟಗಾರನಿರಲಿ. ನಿಯಮ ಎಲ್ಲರಿಗೂ ಒಂದೇ ಎನ್ನುವ ಮನೋಭಾವದವರು ಗೌತಮ್ ಗಂಭೀರ್.

ದೆಹಲಿಯ ಗೌತಮ್ ಗಂಭೀರ್ ಟೀಮ್ ಇಂಡಿಯಾ ಕೋಚ್ ಆದ ನಂತರ ಒಂದಷ್ಟು ನಿಯಮಗಳನ್ನು ರೂಪಿಸಿದ್ದಾರೆ. ಈ ಪೈಕಿ ಭಾರತ ತಂಡದ ಆಟಗಾರರಿಗೆ ಅಂತರಾಷ್ಟ್ರೀಯ ಪಂದ್ಯಗಳಿಲ್ಲದೇ ಇದ್ದಾಗ ದೇಶೀಯ ಕ್ರಿಕೆಟ್ ಆಡಬೇಕೆಂಬುದು. ಅದರ ಪರಿಣಾಮ ಎಂಬಂತೆ, ಭಾರತ ಕ್ರಿಕೆಟ್ ತಂಡದ ಇಬ್ಬರು ದೊಡ್ಡ ಸ್ಟಾರ್ ಆಟಗಾರರು ಬಹಳ ವರ್ಷಗಳ ನಂತರ ದೇಶೀಯ ಕ್ರಿಕೆಟ್’ನಲ್ಲಿ ಆಡಲು ಸಜ್ಜಾಗಿದ್ದಾರೆ. ಅವರೇ, ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ಕ್ರಿಕೆಟ್ ಜಗತ್ತಿನ ಸೂಪರ್ ಸ್ಟಾರ್ ವಿರಾಟ್ ಕೊಹ್ಲಿ.

ಟಿ20 ವಿಶ್ವಕಪ್ ವಿಜೇತ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ರನ್ ಮಷಿನ್ ಖ್ಯಾತಿಯ ವಿರಾಟ್ ಕೊಹ್ಲಿ, ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ದುಲೀಪ್ ಟ್ರೋಫಿ ಟೂರ್ನಿಯಲ್ಲಿ ಆಡವ ಸಾಧ್ಯತೆಯಿದೆ..

ಬಾಂಗ್ಲಾದೇಶ ವಿರುದ್ಧ ಭಾರತ ಮುಂದಿನ ತಿಂಗಳು 2 ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲಿದೆ. ಅದಕ್ಕೂ ಮುನ್ನ ಟೆಸ್ಟ್ ಸರಣಿಯಲ್ಲಿ ಆಡಲಿರುವ ಆಟಗಾರರು ದುಲೀಪ್ ಟ್ರೋಫಿ ಪಂದ್ಯಗಳಲ್ಲಿ ಆಡಬೇಕೆಂದು ಕೋಚ್ ಗೌತಮ್ ಗಂಭೀರ್ ಕಟ್ಟಪ್ಪಣೆ ಮಾಡಿದ್ದಾರೆ. ಹೀಗಾಗಿ ಹಿರಿಯ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಕೂಡ ದೇಶೀಯ ಕ್ರಿಕೆಟ್’ನ ಮಹತ್ವದ ಟೂರ್ನಿಯಲ್ಲಿ ಆಡಲಿದ್ದಾರೆ ಎನ್ನಲಾಗುತ್ತಿದೆ.

ವಿರಾಟ್ ಕೊಹ್ಲಿ 2012ರ ನಂತರ ದೇಶೀಯ ಕ್ರಿಕೆಟ್’ನಲ್ಲಿ ಯಾವುದೇ ರೆಡ್ ಬಾಲ್ ಪಂದ್ಯಗಳನ್ನಾಡಿಲ್ಲ. 2012ರಲ್ಲಿ ಗಾಜಿಯಾಬಾದ್’ನಲ್ಲಿ ನಡೆದ ಉತ್ತರ ಪ್ರದೇಶ ವಿರುದ್ಧದ ರಣಜಿ ಪಂದ್ಯದಲ್ಲಿ ವಿರಾಟ್ ಕೊಹ್ಲಿ ದೆಹಲಿ ಪರ ಕಣಕ್ಕಿಳಿದಿದ್ದರು. ಪಂದ್ಯದಲ್ಲಿ ವೀರೇಂದ್ರ ಸೆಹ್ವಾಗ್ ದೆಹಲಿ ತಂಡದ ನಾಯಕತ್ವ ವಹಿಸಿದ್ದರೆ, ಸೆಹ್ವಾಗ್ ಜೊತೆ ಟೀಮ್ ಇಂಡಿಯಾದ ಹಾಲಿ ಕೋಚ್ ಗೌತಮ್ ಗಂಭೀರ್ ದೆಹಲಿ ತಂಡದ ಇನ್ನಿಂಗ್ಸ್ ಆರಂಭಿಸಿದ್ದರು.

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಜೊತೆ ಭಾರತ ಟೆಸ್ಟ್ ತಂಡದ ಆಟಗಾರರಾದ ಕನ್ನಡಿಗ ಕೆ.ಎಲ್ ರಾಹುಲ್, ಶುಭಮನ್ ಗಿಲ್, ಅಕ್ಷರ್ ಪಟೇಲ್, ಯಶಸ್ವಿ ಜೈಸ್ವಾಲ್, ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್, ಚೈನಾಮನ್ ಸ್ಪಿನ್ನರ್ ಕುಲ್ದೀಪ್ ಯಾದವ್ ಕೂಡ ದುಲೀಪ್ ಟ್ರೋಫಿ ಟೂರ್ನಿಯಲ್ಲಿ ಆಡಲಿದ್ದಾರೆ.

ದುಲೀಪ್ ಟ್ರೋಫಿ ಟೂರ್ನಿಯೊಂದಿಗೆ ಈ ಬಾರಿಯ ದೇಶೀಯ ಕ್ರಿಕೆಟ್ ಋತು ಆರಂಭವಾಗಲಿದೆ. ದುಲೀಪ್ ಟ್ರೋಫಿ ಟೂರ್ನಿಯಲ್ಲಿ ನಾಲ್ಕು ತಂಡಗಳು ಭಾಗವಹಿಸಲಿದ್ದು, ಟೂರ್ನಿ ಸೆಪ್ಟೆಂಬರ್ 5ರಂದು ಆಂಧ್ರಪ್ರದೇಶದ ಅನಂತಪುರದಲ್ಲಿ ಆರಂಭವಾಗಲಿದೆ.

ಬಾಂಗ್ಲಾದೇಶ ತಂಡ ಮುಂದಿನ ತಿಂಗಳು ಭಾರತಕ್ಕೆ ಆಗಮಿಸಲಿದ್ದು, ಆತಿಥೇಯರ ವಿರುದ್ಧ 2 ಪಂದ್ಯಗಳ ಟೆಸ್ಟ್ ಸರಣಿ ಹಾಗೂ 3 ಪಂದ್ಯಗಳ ಟಿ20 ಸರಣಿಯನ್ನಾಡಲಿದೆ.

ಭಾರತ ತಂಡದ ಆಟಗಾರರು ಅಂತರಾಷ್ಟ್ರೀಯ ಪಂದ್ಯಗಳಿಲ್ಲದಿದ್ದಾಗ ದೇಶೀಯ ಕ್ರಿಕೆಟ್’ನಲ್ಲಿ ಆಡಿಯೇ ಭಾರತ ತಂಡಕ್ಕೆ ಮರಳಬೇಕೆಂದು ಕೋಚ್ ಗೌತಮ್ ಗಂಭೀರ್ ಹೊಸ ನಿಯಮ ಮಾಡಿದ್ದಾರೆ. ಅದರಂತೆ ಬಾಂಗ್ಲಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಆಡುವ ಸಂಭಾವ್ಯ ಆಟಗಾರರು ದುಲೀಪ್ ಟ್ರೋಫಿ ಟೂರ್ನಿಯಲ್ಲಿ ಆಡಲು ಸಿದ್ಧತೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here

15 − fourteen =

Latest news

ಬಿಹಾರದ ಕನಸುಗಳಿಗೆ ಹೊಸ ರೆಕ್ಕೆ ನೀಡಿದ ವೈಭವ್ ಸೂರ್ಯವಂಶಿ

ಬಿಹಾರದ ಕನಸುಗಳಿಗೆ ಹೊಸ ರೆಕ್ಕೆ ನೀಡಿದ ವೈಭವ್ ಸೂರ್ಯವಂಶಿ ಭಾರತದಲ್ಲಿ ಕ್ರಿಕೆಟ್ ಕೇವಲ ಆಟವಲ್ಲ; ಅದು ಜನರ ಭಾವನೆ ಮತ್ತು ಗುರುತಿನ ಭಾಗವಾಗಿದೆ. ಆದರೆ ದೀರ್ಘಕಾಲದವರೆಗೆ ಬಿಹಾರ...

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026 ಮಂಗಳೂರು: ಜಿಎಸ್‌ಬಿ ಸಮುದಾಯದ ಕ್ರಿಕೆಟ್ ಪ್ರತಿಭೆಗಳಿಗೆ ವೇದಿಕೆಯಾಗಿರುವ ಪ್ರತಿಷ್ಠಿತ **ಪ್ಯಾಂಥರ್ಸ್ ಸೂಪರ್...

ಟೀಕೆಗೆ ಬ್ಯಾಟ್‌ನಲ್ಲೇ ಉತ್ತರ: ಫೈನಲ್‌ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ

ಟೀಕೆಗೆ ಬ್ಯಾಟ್‌ನಲ್ಲೇ ಉತ್ತರ: ಫೈನಲ್‌ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ ಕೇವಲ 29 ಎಸೆತಗಳಲ್ಲಿ 96 ರನ್: ವೈಭವ್ ಸೂರ್ಯವಂಶಿಯ ಸ್ಫೋಟಕ ಪ್ರತಿಭೆಗೆ ಕ್ರಿಕೆಟ್ ಲೋಕ ಫಿದಾ 15 ವರ್ಷದ...

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 2026

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 2026 ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ಮೇರಾ ಯುವ ಭಾರತ್, ಉಡುಪಿ...
- Advertisement -spot_imgspot_img

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

Must read

- Advertisement -spot_imgspot_img

You might also likeRELATED
Recommended to you