13.2 C
London
Monday, May 13, 2024
Homeಭರವಸೆಯ ಬೆಳಕುಉಡುಪಿ-"ಸಮಾಜಸೇವೆ ಚಿಂತನೆಯ ವಿಶ್ವಕರ್ಮ-ಹುಮ್ಯಾನಿಟಿ ಪಂದ್ಯಾಟದ ಆಯೋಜನೆ ಶ್ಲಾಘನೀಯ"-ವಾದಿರಾಜ್ ಆಚಾರ್ಯ ಏಳಿಂಜೆ

ಉಡುಪಿ-“ಸಮಾಜಸೇವೆ ಚಿಂತನೆಯ ವಿಶ್ವಕರ್ಮ-ಹುಮ್ಯಾನಿಟಿ ಪಂದ್ಯಾಟದ ಆಯೋಜನೆ ಶ್ಲಾಘನೀಯ”-ವಾದಿರಾಜ್ ಆಚಾರ್ಯ ಏಳಿಂಜೆ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ವಿಶ್ವಕರ್ಮ ಸಮಾಜದ 5 ಬಡಕುಟುಂಬಗಳಿಗೆ ನೆರವಿನ ಹಸ್ತ ನೀಡುವ ಸದುದ್ದೇಶದಿಂದ,ಸ್ಕಾರ್ಪಿಯನ್ ಏಳಿಂಜೆ ತಂಡ ಆಯೋಜಿಸಿರುವ ವಿಶ್ವಕರ್ಮ ಹುಮ್ಯಾನಿಟಿ ಕಪ್ ಪಂದ್ಯಾಟ ನಿಜಕ್ಕೂ ಶ್ಲಾಘನೀಯ,ಸಮಾಜ ಬಾಂಧವರ ಸಂಪೂರ್ಣ ಸಹಕಾರ ಈ ತಂಡದ ಮೇಲಿರಲಿ ಎಂದು ಸಿಂಡಿಕೇಟ್ ಬ್ಯಾಂಕ್ ನ ನಿವೃತ್ತ ಹಿರಿಯ ಅಧಿಕಾರಿಗಳಾದ ಶ್ರೀ.ವಾದಿರಾಜ ಆಚಾರ್ಯ ಏಳಿಂಜೆ ಹೇಳಿದರು.
ಇವರು ಮಂಗಳವಾರ ಉಡುಪಿ ಸಮ್ಮರ್ ಪಾರ್ಕ್ ಹೋಟೆಲ್ ನಲ್ಲಿ ಜರುಗಿದ ವಿಶ್ವಕರ್ಮ ಪ್ರೀಮಿಯರ್‌ ಲೀಗ್ ಪಂದ್ಯಾಟದ ಟ್ರೋಫಿ ಅನಾವರಣ ಮತ್ತು ಆಟಗಾರರ ಆಕ್ಷನ್ ಪ್ರಕ್ರಿಯೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭ ಮುಖ್ಯ ಅತಿಥಿಗಳಾಗಿ ವೆಂಕಟರಮಣ ಪಿತ್ರೋಡಿ ತಂಡದ ನಾಯಕರಾದ ಪ್ರವೀಣ್ ಪಿತ್ರೋಡಿ, ಉಡುಪಿ ಚಿನ್ನ-ಬೆಳ್ಳಿ ಕೆಲಸಗಾರರ ಸಂಘದ ಅಧ್ಯಕ್ಷರಾದ ಕಿಶೋರ್ ಆಚಾರ್,ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಉಡುಪಿ ಜಿಲ್ಲೆ ಯುವಘಟಕಾಧ್ಯಕ್ಷರು ಮತ್ತು ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ನ‌ ಪ್ರವರ್ತಕರಾದ ಕೋಟ ರಾಮಕೃಷ್ಣ ಆಚಾರ್,ಟೂರ್ನಮೆಂಟ್ ನ ಪ್ರಮುಖ ಆಯೋಜಕರಾದ ಶಿವರಾಮ ಆಚಾರ್ ಏಳಿಂಜೆ,ರಾಜ್ಯ ಮಟ್ಟದ ಹಿರಿಯ ಆಟಗಾರರಾದ ಭಾಸ್ಕರ್ ಆಚಾರ್ ಉಡುಪಿ,ಶ್ರೀಮತಿ ದಿವ್ಯಾ ಶಿವರಾಮ್ ಆಚಾರ್,ಶ್ರೀಮತಿ ಆಶಾ ಭಾಸ್ಕರ್ ಆಚಾರ್
 ಮತ್ತು 12 ಫ್ರಾಂಚೈಸಿಗಳ ಮಾಲೀಕರು ಮತ್ತು ಐಕಾನ್ ಆಟಗಾರರು ಉಪಸ್ಥಿತರಿದ್ದರು.
ಸುಮನ್ ಆಚಾರ್ ಪ್ರಾರ್ಥನೆಗೈದರೆ,ಕಾರ್ಯಕ್ರಮ ನಿರೂಪಣೆ ಮತ್ತು ಆಕ್ಷನ್ ಪ್ರಕ್ರಿಯೆಯನ್ನು ರಾಜ್ಯ ಮಟ್ಟದ ವೀಕ್ಷಕ ವಿವರಣೆಕಾರರಾದ ರಾಘವೇಂದ್ರ ಮಟಪಾಡಿ ನಡೆಸಿಕೊಟ್ಟರು.
ವಿಶ್ವಕರ್ಮ ಪ್ರೀಮಿಯರ್‌ ಲೀಗ್-ಹುಮ್ಯಾನಿಟಿ ಕಪ್ ಏಪ್ರಿಲ್ 23 ಮತ್ತು 24 ರಂದು ಕಿನ್ನಿಗೋಳಿ ಐಕಳ ಶಕ್ತಿ ಕಲ್ಯಾಣಿ ಮೈದಾನದಲ್ಲಿ ನಡೆಯಲಿದ್ದು,M9 ಸ್ಪೋರ್ಟ್ಸ್ ನಲ್ಲಿ ಪಂದ್ಯಾಟದ ನೇರ ಪ್ರಸಾರ ಬಿತ್ತರಗೊಳ್ಳಲಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

16 + two =