ಕ್ರಿಕೆಟ್ಮಾಜಿ ಕ್ರಿಕೆಟಿಗ ಶ್ರೀ ಕೃಷ್ಣಮಠಕ್ಕೆ ಭೇಟಿ

ಮಾಜಿ ಕ್ರಿಕೆಟಿಗ ಶ್ರೀ ಕೃಷ್ಣಮಠಕ್ಕೆ ಭೇಟಿ

-

- Advertisment -spot_img

ಮಾಜಿ ಕ್ರಿಕೆಟಿಗ ಶ್ರೀ ಕೃಷ್ಣಮಠಕ್ಕೆ ಭೇಟಿ

ಟೀಮ್‌ ಇಂಡಿಯಾ ಮಾಜಿ ಆಟಗಾರ, ಶ್ರೇಷ್ಠ ಕ್ರಿಕೆಟಿಗ, ಶ್ರೇಷ್ಠ ವಿಮರ್ಶಕ ಮತ್ತು ಕ್ರಿಕೆಟ್ ಪಂಡಿತ ವಿವಿಎಸ್ ಲಕ್ಷ್ಮಣ್ ಕುಟುಂಬ ಸಮೇತವಾಗಿ ಉಡುಪಿಯ ಕೆಲವು ಪ್ರಸಿದ್ದ ದೇವಾಲಯಗಳಿಗೆ ಭೇಟಿ ನೀಡಿದರು.

ಶೃಂಗೇರಿ, ಹೊರನಾಡು ಕ್ಷೇತ್ರಗಳ ದರ್ಶನದ ಬಳಿಕ ಬುಧವಾರ (ಡಿ. 25) ವಿವಿಎಸ್‌ ಲಕ್ಷ್ಮಣ್‌ ಹಾಗೂ ಅವರ ಪತ್ನಿ ಜಿಆರ್‌ ಶೈಲಜಾ, ಪುತ್ರ ಸರ್ವಜಿತ್‌ ಲಕ್ಷ್ಮಣ್‌ ಹಾಗೂ ಪುತ್ರಿ ಅಚಿಂತ್ಯಾ ಲಕ್ಷ್ಮಣ್‌ ಜೊತೆಗೂಡಿ ಶ್ರೀ ಕೃಷ್ಣ ಮುಖ್ಯಪ್ರಾಣನ ದರ್ಶನ ಮಾಡಿ ಆ ಬಳಿಕ ಪರ್ಯಾಯ ಪುತ್ತಿಗೆ ಮಠದವರು ನಡೆಸುವ ಕೋಟಿಗೀತಾ ಲೇಖನ ಯಜ್ಞದ ಬಗ್ಗೆ ವಿಶೇಷ ಆಸಕ್ತಿಯಿಂದ ಮಾಹಿತಿ ಪಡೆದುಕೊಂಡರು. ಪರ್ಯಾಯ ಮಠದ ವತಿಯಿಂದ ಈ ವೇಳೆ ವಿವಿಎಸ್ ಲಕ್ಷ್ಮಣ್ ಮತ್ತು ಕುಟುಂಬದವರನ್ನು ಸನ್ಮಾನಿಸಲಾಯಿತು.

ಅದಾದ ಬಳಿಕ ಅಮೃತೇಶ್ವರಿ ದೇವಸ್ಥಾನ ಕೋಟ, ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನ, ಹಟ್ಟಿಯಂಗಡಿ ಸಿದ್ದಿ ವಿನಾಯಕ ದೇವಸ್ಥಾನ, ನಂತರ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಗಳಿಗೆ ಭೇಟಿ ನೀಡಿದರು.

ಬುಧವಾರ ರಾತ್ರಿ ಅವರು ಕೊಲ್ಲೂರು ವಸತಿ ಗ್ರಹದಲ್ಲಿ ವಾಸ್ತವ್ಯ ಹೂಡಿ ಗುರುವಾರ ಬೆಳಿಗ್ಗೆ ಅಲ್ಲಿ ಮೂಕಾಂಬಿಕಾ ದೇವಿಯ ದರ್ಶನ ಮಾಡಿದರು. ಆ ಬಳಿಕ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿರುವ ಮುರುಡೇಶ್ವರ ಮತ್ತು ಗೋಕರ್ಣಕ್ಕೆ ಭೇಟಿ ನೀಡಿದರು.

LEAVE A REPLY

Please enter your comment!
Please enter your name here

eleven + seven =

Latest news

ಉಬರ್ ಚಾಲಕನಿಂದ ವಿಶ್ವಕಪ್ ಕನಸಿನವರೆಗೆ: ಜಸ್ಪ್ರೀತ್ ಸಿಂಗ್ ಕಥೆ

ಉಬರ್ ಚಾಲಕನಿಂದ ವಿಶ್ವಕಪ್ ಕನಸಿನವರೆಗೆ: ಜಸ್ಪ್ರೀತ್ ಸಿಂಗ್ ಕಥೆ ಪಂಜಾಬ್‌ನ ಸಣ್ಣ ಪಟ್ಟಣದಿಂದ ಆರಂಭವಾದ ಯುವ ಕ್ರಿಕೆಟಿಗ ಜಸ್ಪ್ರೀತ್ ಸಿಂಗ್ ಅವರ ಜೀವನಯಾನ ಇಂದು ಸಾವಿರಾರು ಯುವ...

ಕೊಲ್ನಾಡ್ ನಲ್ಲಿ LK ಕ್ರಿಕೆಟ್ ಪ್ರೀಮಿಯರ್ ಲೀಗ್ – ಸೀಸನ್ 2

ಕೊಲ್ನಾಡ್ ನಲ್ಲಿ LK ಕ್ರಿಕೆಟ್ ಪ್ರೀಮಿಯರ್ ಲೀಗ್  2026– ಸೀಸನ್ 2 ಕೊಲ್ನಾಡ್ ಮೈದಾನದಲ್ಲಿ ಫೆಬ್ರವರಿ 14 ಮತ್ತು 15ರಂದು LK ಕ್ರಿಕೆಟ್ ಪ್ರೀಮಿಯರ್ ಲೀಗ್ –...

ಮುಂಬೈ ನೆಲದಲ್ಲಿ ಕರ್ನಾಟಕದ ಐತಿಹಾಸಿಕ ವಿಜಯ

ಮುಂಬೈ ನೆಲದಲ್ಲಿ ಕರ್ನಾಟಕದ ಐತಿಹಾಸಿಕ ವಿಜಯ ರಣಜಿ ಟ್ರೋಫಿ ಕ್ರಿಕೆಟ್ ಎಂದರೆ ಮುಂಬೈಗೆ ಪ್ರತಿಷ್ಠೆಯ ಪ್ರಶ್ನೆ. 42 ಬಾರಿ ಚಾಂಪಿಯನ್ ಆಗಿರುವ ತಂಡದ ಎದುರು ಅವರದ್ದೇ ಮೈದಾನದಲ್ಲಿ...

ಟಿ20 ವಿಶ್ವಕಪ್‌ಗೆ ಭಾರತಕ್ಕೆ ಭರ್ಜರಿ ಆರಂಭ: ಅಮೆರಿಕ ವಿರುದ್ಧ 29 ರನ್ ಜಯ

ಟಿ20 ವಿಶ್ವಕಪ್‌ಗೆ ಭಾರತಕ್ಕೆ ಭರ್ಜರಿ ಆರಂಭ: ಅಮೆರಿಕ ವಿರುದ್ಧ 29 ರನ್ ಜಯ 2026ರ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ತನ್ನ ಗೆಲುವಿನ ಅಭಿಯಾನವನ್ನು ಭರ್ಜರಿಯಾಗಿ ಆರಂಭಿಸಿದೆ....
- Advertisement -spot_imgspot_img

ಕರಾವಳಿ ಸ್ಪೋರ್ಟ್ಸ್ ಕ್ಲಬ್, ಕುಮಟಾ ಆಯೋಜನೆಯ MIDMAC ಟ್ರೋಫಿ ಸೀಸನ್–2 ಫೈನಲ್‌ನಲ್ಲಿ ಭಟ್ಕಲ್ ಫ್ರೆಂಡ್ಸ್ ಭರ್ಜರಿ ಜಯ; ನಿಹಾಲ್ XI ಮೇಲೆ 50 ರನ್‌ಗಳ ಗೆಲುವು

ಕರಾವಳಿ ಸ್ಪೋರ್ಟ್ಸ್ ಕ್ಲಬ್, ಕುಮಟಾ ಆಯೋಜನೆಯ MIDMAC ಟ್ರೋಫಿ ಸೀಸನ್–2 ಫೈನಲ್‌ನಲ್ಲಿ ಭಟ್ಕಲ್ ಫ್ರೆಂಡ್ಸ್ ಭರ್ಜರಿ ಜಯ; ನಿಹಾಲ್ XI ಮೇಲೆ 50 ರನ್‌ಗಳ ಗೆಲುವು ಕರಾವಳಿ...

ಕರಾವಳಿ ಸ್ಪೋರ್ಟ್ಸ್ ಕ್ಲಬ್ ಕುಮಟಾ ಅರ್ಪಿಸುವ MIDMAC TROPHY SEASON-2 ಸೆಮಿಫೈನಲ್ ಪಂದ್ಯಗಳಲ್ಲಿ ಭಟ್ಕಲ್ ಫ್ರೆಂಡ್ಸ್ ಹಾಗೂ ನಿಹಾಲ್ XI ಗೆ ಜಯ

ಕರಾವಳಿ ಸ್ಪೋರ್ಟ್ಸ್ ಕ್ಲಬ್ ಕುಮಟಾ ಅರ್ಪಿಸುವ MIDMAC TROPHY SEASON-2 ಸೆಮಿಫೈನಲ್ ಪಂದ್ಯಗಳಲ್ಲಿ ಭಟ್ಕಲ್ ಫ್ರೆಂಡ್ಸ್ ಹಾಗೂ ನಿಹಾಲ್ XI ಗೆ ಜಯ (Sports Kannada Live...

Must read

- Advertisement -spot_imgspot_img

You might also likeRELATED
Recommended to you